Homeಎಕಾನಮಿಸಿಎಎ ಮತ್ತು ಎನ್‌ಆರ್‌ಸಿ ಜಾರಿಯಿಂದಾಗುವ ಆರ್ಥಿಕ ನಷ್ಟವೆಷ್ಟು?

ಸಿಎಎ ಮತ್ತು ಎನ್‌ಆರ್‌ಸಿ ಜಾರಿಯಿಂದಾಗುವ ಆರ್ಥಿಕ ನಷ್ಟವೆಷ್ಟು?

- Advertisement -
- Advertisement -

ಪೌರತ್ವ ಕಾಯ್ದೆ ಮತ್ತು ಎನ್‌ಆರ್‌ಸಿ ಈ ದೇಶದ ಸಂವಿಧಾನದ ಮೂಲ ಆಶಯಗಳಾದ ಸಹಭಾಗಿತ್ವ, ಸಹೋದರತ್ವ, ಧರ್ಮನಿರಪೇಕ್ಷತೆ, ಜಾತ್ಯತೀತತೆಗಳಿಗೆ ವಿರುದ್ಧವಾಗಿರುವುದು ಬಹುತೇಕರಿಗೆ ಅರ್ಥವಾಗಿದೆ. ಇದು ಸಮಾಜವನ್ನು ಧರ್ಮದ ಆಧಾರದ ಮೇಲೆ ಒಡೆದು ಒಂದಿಡೀ ಸಮುದಾಯವನ್ನು ಮುಖ್ಯವಾಹಿನಿಯಿಂದ ಹೊರಗಿಡುವಂಥ ಅಮಾನವೀಯ ಕೆಲಸವಾಗಿದೆ. ಈ ದೇಶ ಸರ್ವಜನಾಂಗದ ಶಾಂತಿಯ ತೋಟ ಎಂಬ ಹಿರಿಮೆಗೇ ಮಸಿಬಳಿಯುವಂತಹುದೂ ಆಗಿದೆ.

ಇದನ್ನ ಮನಗಂಡೇ ದೇಶದಾದ್ಯಂತ ಜಾತಿಧರ್ಮಗಳನ್ನು ಮೀರಿ ನಾಗರಿಕರು ಅದರಲ್ಲೂ ವಿದ್ಯಾರ್ಥಿಗಳು ಮತ್ತು ಮಹಿಳೆಯರು ಮುಂದೆ ನಿಂತು ಶಾಂತಿಯುತ ಪ್ರತಿಭಟನಾ ಹೋರಾಟಗಳನ್ನು ನಡೆಸುತ್ತಿದ್ದಾರೆ. ಇಂಥಾ ಒಕ್ಕೊರಲ ಪ್ರತಿಭಟನೆಯಿಂದಾಗಿ ಕೆಲವು ರಾಜ್ಯ ಸರ್ಕಾರಗಳು ಸಿಎಎ ಮತ್ತು ಎನ್‌ಆರ್‌ಸಿಯನ್ನು ತಮ್ಮ ರಾಜ್ಯಗಳಲ್ಲಿ ಮಾಡುವುದಿಲ್ಲ ಎಂದೂ ಹೇಳಿವೆ.

ಈ ಪೌರತ್ವ ಕಾಯ್ದೆಯು ಸಮಾಜವನ್ನು ಧರ್ಮದ ಆಧಾರದ ಮೇಲೆ ಒಡೆಯುವುದಷ್ಟೇ ಅಲ್ಲದೆ ದೇಶದ ಆರ್ಥಿಕತೆಯ ಮೇಲೆಯೂ ತಾಳಲಾರದಷ್ಟು ಆಘಾತ ಉಂಟುಮಾಡಲಿದೆ.

ಈ ಕಾಯ್ದೆಯ ಅನುಷ್ಟಾನದಿಂದ ದೇಶದ ಮೇಲೆ ಉಂಟಾಗುವ ಅರ್ಥಿಕ ಪರಿಣಾಮಗಳೇನು ಎಂದು ಸಂಕ್ಷಿಪ್ತವಾಗಿ ನೋಡುವ ಪ್ರಯತ್ನ ಮಾಡೋಣ.

ಕಡೆಯ ಆರು ವರ್ಷಗಳಲ್ಲಿ ಅಸ್ಸಾಮ್ ರಾಜ್ಯದಲ್ಲಿ ನಡೆದ ಎನ್‌ಆರ್‌ಸಿ ಪ್ರಕ್ರಿಯೆಗೆ ಖರ್ಚಾದ ಹಣ ಹತ್ತಿರತ್ತಿರ 1500 ಕೋಟಿ ರೂಪಾಯಿಗಳು. ಜೊತೆಗೆ ಈ ಕೆಲಸಕ್ಕೆ ಬಳಸಿಕೊಂಡ ಸರ್ಕಾರೀ ಉದ್ಯೋಗಿಗಳ ಸಂಖ್ಯೆ ಐವತ್ತೈದು ಸಾವಿರ. ಅಸ್ಸಾಮ್ ಜನಸಂಖ್ಯೆ ಮೂರೂವರೆ ಕೋಟಿ. ಆ ಲೆಕ್ಕದಲ್ಲಿ ಇಡೀ ದೇಶದಲ್ಲಿ ಎನ್‌ಆರ್‌ಸಿ ಮಾಡಲು ಖರ್ಚಾಗುವ ಹಣ ಕನಿಷ್ಟ ಅರವತ್ತುಸಾವಿರ ಕೋಟಿ ರೂಪಾಯಿಗಳು. ಜೊತೆಗೆ ಬೇರೆ ಕೆಲಸಗಳನ್ನು ಬಿಟ್ಟು ಸಾವಿರಾರು ಉದ್ಯೋಗಿಗಳು ಎನ್‌ಆರ್‌ಸಿ ಕೆಲಸಕ್ಕೆ ಬಳಕೆಯಾದರೆ ತಗಲುವ ಪರೋಕ್ಷ ಖರ್ಚು ಇನ್ನೂ ಹಲವು ಸಾವಿರ ಕೋಟಿಗಳು.

ದೇಶವನ್ನು ಆರ್ಥಿಕ ಹಿಂಜರಿಕೆಯಿಂದ ಮೇಲೆತ್ತುವ ಮುಖ್ಯ ಕ್ರಮವಾದ ಗ್ರಾಮೀಣ ಉದ್ಯೋಗ ಖಾತ್ರಿಗೆ ಹೆಚ್ಚುವರಿಯಾಗಿ ಹತ್ತು ಸಾವಿರ ಕೋಟಿ ಕೊಡಲು ಸರ್ಕಾರದ ಬಳಿ ಹಣವಿಲ್ಲ.

ಕರ್ನಾಟಕದ ಪ್ರವಾಹ ಪೀಡಿತರಿಗೆ ಕೊಡಬೇಕಾದಷ್ಟರಲ್ಲಿ ಕನಿಷ್ಟ ಶೇಕಡಾ ಹತ್ತರಷ್ಟು ಕೊಡಲೂ ಸರ್ಕಾರದ ಬಳಿ ದುಡ್ಡಿಲ್ಲ. ಅಂತಹುದರಲ್ಲಿ ಇಷ್ಟೊಂದು ದೊಡ್ಡ ಮೊತ್ತ (ಒಟ್ಟು ಕನಿಷ್ಟ ಒಂದು ಲಕ್ಷಕೋಟಿ ) ಸರ್ಕಾರದ ಹತ್ತಿರ ಎಲ್ಲಿದೆ?

ಸರ್ಕಾರ ಸಾಲ ಮಾಡಿಯೇ ಈ ಖರ್ಚನ್ನು ಹೊಂದಿಸಬೇಕಾಗುವುದರಿಂದ ನಮ್ಮೆಲ್ಲರ ತಲೆಯ ಮೇಲೆ ಮತ್ತಷ್ಟು ಸಾಲದ ಹೊರೆ ಬೀಳಲಿದೆ ಮತ್ತು ಅದರಿಂದ ದೇಶ ಇನ್ನಷ್ಟು ಆರ್ಥಿಕವಾಗಿ ಹಿಂದೆ ಬೀಳಲಿದೆ.

ಇನ್ನು, ಬೇರೆ ದೇಶದಿಂದ ಬಂದಿರುವ ಮುಸ್ಲಿಮರಿಗೆ ಸಿಎಎ ಅಡಿಯಲ್ಲಿ ಪೌರತ್ವ ನೀಡಲಾಗುವುದಿಲ್ಲ (ಸಿಎಎ ಪ್ರಕಾರ ಹಿಂದು,ಕ್ರೈಸ್ತ, ಜೈನ, ಪಾರ್ಸಿ ಮತ್ತು ಬೌದ್ಧರಿಗೆ ಮಾತ್ರ ಪೌರತ್ವ ನೀಡಲಾಗುತ್ತದೆ). ಪೌರತ್ವವಿಲ್ಲದ ಮುಸ್ಲಿಮರನ್ನು ಬೇರೆ ಯಾವುದೇ ದೇಶಕ್ಕೆ ಕಳಿಸಲಾಗುವುದೂ ಇಲ್ಲ. ಏಕೆಂದರೆ, ಆಗಿರುವವರ ಬಳಿ ಅವರು ಬೇರೆ ದೇಶದ ಪ್ರಜೆಗಳೆಂದು ಸಾಬೀತುಪಡಿಸುವ ದಾಖಲೆಗಳೂ ಇರುವುದಿಲ್ಲ. ಆಗ, ಅಂತವರನ್ನು ಸರ್ಕಾರದ ಪ್ರಕಾರ ಡಿಟೆನ್ಷನ್ ಸೆಂಟರುಗಳಲ್ಲಿ (Detention centre) ಇಡಲಾಗುತ್ತದೆ.

ಸುಮ್ಮನೆ ಒಂದು ಅಂದಾಜಿಗೆ ಆ ರೀತಿ ಪೌರತ್ವ ಇಲ್ಲದ ಇಪ್ಪತ್ತು ಲಕ್ಷ ಮುಸ್ಲಿಮರು ಸಿಗುತ್ತಾರೆಂದುಕೊಳ್ಳೋಣ (ಬಿಜೆಪಿ ಐಟಿ ಸೆಲ್ ಈ ಸಂಖ್ಯೆ ಎರಡು ಮೂರು ಕೋಟಿಯಷ್ಟಿದೆ ಎಂದು ಪ್ರಚಾರ ಮಾಡ್ತಿದೆ). ಈ ಇಪ್ಪತ್ತು ಲಕ್ಷ ಜನರನ್ನ ಡಿಟೆನ್ಷನ್ ಸೆಂಟರುಗಳಲ್ಲಿಟ್ಟು ನೋಡಿಕೊಳ್ಳುವುದಕ್ಕೆ ವರ್ಷಕ್ಕೆ ಕನಿಷ್ಟ ಹತ್ತು ಸಾವಿರ ಕೋಟಿಗಳಷ್ಟು ಖರ್ಚಾಗಲಿದೆ. ಒಂದು ಸೆಂಟರಿನಲ್ಲಿ ಅಂದಾಜು ಮೂರು ಸಾವಿರ ಜನ, ಊಟ, ಬಟ್ಟೆ, ಮಕ್ಕಳ ಸ್ಕೂಲು ಮತ್ತು ಉಸ್ತುವಾರಿ ಸಿಬ್ಬಂದಿಗಳ ವೆಚ್ಚ ಎಲ್ಲ ಸೇರಿದರೆ ವರ್ಷಕ್ಕೆ ಹತ್ತು ಸಾವಿರ ಕೋಟಿ ದಾಟಲಿದೆ. ಅಸ್ಸಾಮಿನಲ್ಲಿ ಪ್ರತಿ ಸೆಂಟರನ್ನು ಕಟ್ಟಲು ಐವತ್ತು ಕೋಟಿ ವ್ಯಯಿಸಲಾಗಿದೆ. ಆ ಲೆಕ್ಕದಲ್ಲಿ ಐನೂರು ಸೆಂಟರುಗಳನ್ನು ಕಟ್ಟಲು ಇಪ್ಪತ್ತೈದು ಸಾವಿರ ಕೋಟಿ ಒಟ್ಟಿಗೇ ಖರ್ಚಾಗಲಿದೆ.

ಇಲ್ಲಿ ಅಂದಾಜಿಸಿರುವ ಇಪ್ಪತ್ತು ಲಕ್ಷ ಜನ ಬದುಕಲು ಇವತ್ತು ಒಂದಲ್ಲ ಒಂದು ಕೆಲಸ ಮಾಡಿ (ಮೆಕ್ಯಾನಿಕ್, ಸೆಕ್ಯೂರಿಟಿ, ಸಣ್ಣ ಅಂಗಡಿ ಇತ್ಯಾದಿ) ಸಂಪಾದನೆ ಮಾಡುತ್ತಾ ದೇಶದ ಜಿಡಿಪಿಗೆ ತಮ್ಮ ಕಾಣಿಕೆಯನ್ನು ನೀಡುತ್ತಿದ್ದಾರೆ.

ದೇಶದ ತಲಾದಾಯ ಇವತ್ತು ತಿಂಗಳಿಗೆ ಹತ್ತು ಸಾವಿರದ ಐನೂರು ರೂಪಾಯಿಗಳು. ಈ ಲೆಕ್ಕದಲ್ಲಿ ಇಪ್ಪತ್ತು ಲಕ್ಷ ಜನರಿಂದ ಪ್ರತಿವರ್ಷ ಜಿಡಿಪಿಗೆ ಸಿಗುವ ಕೊಡುಗೆ ಹತ್ತಿರತ್ತಿರ ಇಪ್ಪತ್ತೈದು ಸಾವಿರ ಕೋಟಿ ರೂಪಾಯಿಗಳು.

ಅಂದರೆ, ಅಷ್ಟು ಜನರನ್ನು ನೋಡಿಕೊಳ್ಳುವ ಮತ್ತು ನಿಂತುಹೋಗುವ ಸಂಪಾದನೆ ಈ ಎರಡರಿಂದ ಭಾರತಕ್ಕೆ ವಾರ್ಷಿಕವಾಗಿ ಆಗುವ ಒಟ್ಟು ಆರ್ಥಿಕ ನಷ್ಟ ಕನಿಷ್ಟ ಮೂವತ್ತೈದರಿಂದ ನಲವತ್ತು ಸಾವಿರ ಕೋಟಿ ರೂಪಾಯಿಗಳು.

ಅದಲ್ಲದೆ, ಮೇಲೆ ಹೇಳಿದಂತೆ ಈಗ ತಕ್ಷಣಕ್ಕೆ ಆಗುವ ನಷ್ಟ ಕನಿಷ್ಟ ಒಂದು ಲಕ್ಷ ಕೋಟಿ ರೂಪಾಯಿಗಳು.

ಇಷ್ಟರ ಜೊತೆಗೆ, ದೇಶದೊಳಗೆ ಸಿಎಎ ಕಾರಣಕ್ಕಾಗಿ ಅಶಾಂತಿಯ ವಾತಾವರಣವಿರುವಾಗ ಯಾವುದೇ ದೇಶ ಭಾರತದಲ್ಲಿ ಬಂಡವಾಳ ಹೂಡಲು ಮುಂಬರುವುದಿಲ್ಲ.

ಈಗಾಗಲೇ ಈಶಾನ್ಯ ರಾಜ್ಯಗಳಲ್ಲಿ ಹನ್ನೆರಡು ಸಾವಿರ ಕೋಟಿ ಹೂಡಬೇಕಾಗಿದ್ದ ಜಪಾನ್ ತನ್ನ ನಿರ್ಧಾರವನ್ನು ತಾತ್ಕಾಲಿಕವಾಗಿ ಮುಂದೂಡಿದೆ. ಇದಲ್ಲದೆ, ದೇಶದ ಕೋಟ್ಯಂತರ ಮಂದಿ ತಮ್ಮ ಪೌರತ್ವ ಸಾಬೀತಿಗೆ ಅಲೆದಾಡುತ್ತ ಕಳೆಯುವುದರಿಂದ ಅವರ ಉತ್ಪಾದನಾ ಮಟ್ಟ ಕುಸಿದು ಅದೂ ಕೂಡ ಆರ್ಥಿಕತೆಗೆ ಮತ್ತೊಂದು ಭಾರೀ ಹೊಡೆತ ಕೊಡಲಿದೆ.

ತಾನೇ ಕೈಯಾರೆ ಮಾಡಿಕೊಂಡ (ನೋಟುಬಂದಿ ಮತ್ತು ಜಿಎಸ್ಟಿ) ತಪ್ಪುಗಳಿಂದಾಗಿ ಆರ್ಥಿಕ ದುಸ್ಥಿತಿಯಲ್ಲಿರುವ ಸರ್ಕಾರ ಸಿಎಎ ಮತ್ತು ಎನ್‌ಆರ್‌ಸಿಯಿಂದುಂಟಾಗುವ ಆರ್ಥಿಕ ಹೊರೆ ತಾಳಿಕೊಳ್ಳುವ ಸ್ಥಿತಿಯಲ್ಲಂತು ಇಲ್ಲವೇ ಇಲ್ಲ.

ಒಟ್ಟಿನಲ್ಲಿ, ಈ ಸಿಎಎ ಮತ್ತು ಎನ್‌ಆರ್‌ಸಿ ದೇಶವನ್ನು ಧರ್ಮಾಧಾರಿತವಾಗಿ ಒಡೆದು ಸಮಾಜದೊಳಗಿನ ಸಾಮರಸ್ಯವನ್ನು ಹಾಳುಮಾಡುವುದರ ಜೊತೆಗೆ ಆರ್ಥಿಕವಾಗಿಯೂ ಕೂಡ ದೇಶವನ್ನು ಕೆಳತಳ್ಳಲಿದೆ.

ಒಟ್ಟಾರೆ, ಇದು ದೇಶವನ್ನು ನೈತಿಕವಾಗಿ ಮತ್ತು ಆರ್ಥಿಕವಾಗಿ ಪ್ರಪಾತಕ್ಕೆ ಬೀಳಿಸಲಿದೆ. ( ಜನಶಕ್ತಿಯಿಂದ ತಡೆಯದೇ ಹೋದರೆ)

ಹಾಗಾದರೆ, ಈ ಸರ್ಕಾರ ಯಾವ ಕಾರಣಕ್ಕಾಗಿ ಈ ಸಿಎಎ ಮತ್ತು ಎನ್‌ಆರ್‌ಸಿ ಮಾಡುತ್ತಿದೆ?

ಒಂದು, ಇದರ ಎಲ್ಲ ಪರಿಣಾಮಗಳ ಅಂದಾಜಿಲ್ಲದೆ ತಮ್ಮ ಹಿಂದುತ್ವ ಕಾರ್ಯಸೂಚಿಯ ಭಾಗವಾಗಿ ಇದನ್ನು ಮಾಡುತ್ತಿರಬಹುದು.

ಎರಡು, ಪರಿಣಾಮಗಳ ಅರಿವಿದ್ದು ಅದರಲ್ಲೂ ಆರ್ಥಿಕ ದುಷ್ಪರಿಣಾಮದ ಅರಿವಿದ್ದು ಕೇವಲ ರಾಜಕೀಯ ಲಾಭದ ಕಾರಣಕ್ಕೆ ಇದನ್ನು ಮಾಡುವಂತೆ ತೋರಿಸಿಕೊಳ್ಳುವ ಪ್ರಯತ್ನ ಮಾಡುತ್ತಿರಬಹುದು. ಅಂದರೆ, ಚುನಾವಣೆ ಹತ್ತಿರ ಬಂದಂತೆ ಐದಾರು ಸಾವಿರ ಜನರನ್ನು ಮಾತ್ರ ಡಿಟೆನ್ಷನ್ ಸೆಂಟರುಗಳಲ್ಲಿಟ್ಟು ಅದನ್ನೇ ಕೋಟಿ ಜನ ಎಂಬಂತೆ ಸೋಷಿಯಲ್ ಮೀಡಿಯ ಮೂಲಕ ನಂಬಿಸಿ ಹಿಂದೂಗಳ ಓಟು ಪಡೆಯುವ ಹುನ್ನಾರವೂ ಇರಬಹುದು.

ಯಾವ ಕಾರಣಕ್ಕೇ ಮಾಡುತ್ತಿದ್ದರೂ ಇದನ್ನು ಇಡೀ ದೇಶ ಈಗ ಮಾಡುತ್ತಿರುವಂತೆ ಒಗ್ಗಟ್ಟಿನಿಂದ ಶಾಂತಿಯುತವಾಗಿ ಎದುರಿಸಿ ದೇಶವನ್ನು ನೈತಿಕ ಮತ್ತು ಆರ್ಥಿಕ ಅಧಃಪತನದಿಂದ ಉಳಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...