Homeಮುಖಪುಟಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

2021ರ ಜನವರಿಯಿಂದ ಇಲ್ಲಿಯವರೆಗೆ 12 ‘ಮೋರಲ್‌ ಪೊಲೀಸಿಂಗ್‌‌’ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಕಳೆದ ಭಾನುವಾರ ಸಂಜೆ ಸುರತ್ಕಲ್ ಟೋಲ್ ಗೇಟ್ ಬಳಿ ವೈದ್ಯಕೀಯ ವಿಧ್ಯಾರ್ಥಿಗಳ ಮೇಲೆ ಬಜರಂಗದಳದವರು ನಡೆಸಿದ ಅಮಾನವೀಯ ದಾಳಿಯು, ಲಾಕ್ ಡೌನ್ ತೆರವಿನ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಘಟಿಸಿದ ನಾಲ್ಕನೇ ‘ಮೋರಲ್‌ ಪೊಲೀಸಿಂಗ್‌’ ಪ್ರಕರಣವಾಗಿದೆ.

- Advertisement -
- Advertisement -

ವಾಣಿಜ್ಯ, ಶೈಕ್ಷಣಿಕ, ಬ್ಯಾಂಕಿಂಗ್, ಪ್ರವಾಸೋದ್ಯಮಗಳ ಸಮುದ್ರ ನಗರಿ ಮಂಗಳೂರು ಸಂಘಪರಿವಾರದ ಅನೈತಿಕ, ಅಸಂವಿಧಾನಿಕ ಚಟುವಟಿಕೆಗಳಿಂದ ತತ್ತರಿಸಿ ಹೋಗಿದೆ. ಇಡೀ ಜಿಲ್ಲೆಯಲ್ಲಿ ಮೋರಲ್‌ ಪೊಲೀಸಿಂಗ್‌ ಮಿತಿಮೀರಿ ಹೋಗಿದ್ದು, ಹಿಂದುತ್ವದ ಹೆಸರಲ್ಲಿ ದುಷ್ಕರ್ಮಿಗಳು ಆಟಾಟೋಪ ಮುಂದುವರಿಸಿದ್ದು, ಅಭಿವೃದ್ಧಿ ಮತ್ತು ಮಾನವೀಯತೆ ಸವಾಲಾಗಿ ನಿಂತಿದೆ.

2021ರ ಜನವರಿಯಿಂದ ಇಲ್ಲಿಯವರೆಗೆ 12 ‘ಮೋರಲ್‌ ಪೊಲೀಸಿಂಗ್‌‌’ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಕಳೆದ ಭಾನುವಾರ ಸಂಜೆ ಸುರತ್ಕಲ್ ಟೋಲ್ ಗೇಟ್ ಬಳಿ ವೈದ್ಯಕೀಯ ವಿಧ್ಯಾರ್ಥಿಗಳ ಮೇಲೆ ಬಜರಂಗದಳದವರು ನಡೆಸಿದ ಅಮಾನವೀಯ ದಾಳಿಯು, ಲಾಕ್ ಡೌನ್ ತೆರವಿನ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಘಟಿಸಿದ ನಾಲ್ಕನೇ ‘ಮೋರಲ್‌ ಪೊಲೀಸಿಂಗ್‌’ ಪ್ರಕರಣವಾಗಿದೆ.

ಭಾನುವಾರ ಮಂಗಳೂರಿನ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಮತ್ತು ಓರ್ವ ವಿದ್ಯಾರ್ಥಿನಿ ಇದ್ದ ಜೀಪನ್ನು ತಡೆದು ನಿಲ್ಲಿಸಿದ್ದ ಬಜರಂಗ ದಳದ ಜಿಲ್ಲಾ ಪ್ರಮುಖನೆನ್ನಲಾದ ಪ್ರೀತಮ್ ಶೆಟ್ಟಿ, ಸುರತ್ಕಲ್ ಬಜರಂಗದಳದ ಮುಂದಾಳು ಆರ್ಶಿತ್, ಶ್ರೀನಿವಾಸ್, ರಾಕೇಶ್, ಅಭಿಷೇಕ್ ಎಂಬವರ ತಂಡ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿದೆ.

ಇದನ್ನೂ ಓದಿರಿ: ಬಜರಂಗದಳದ ‘ಮೋರಲ್ ಪೊಲೀಸಿಂಗ್’ ಅನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕಿಗೆ ಬಹಿರಂಗ ಬೆದರಿಕೆ

ಈ ಪ್ರಕರಣದಲ್ಲಿ ಐವರು ಹಲ್ಲೆಕೋರರನ್ನು ಬಂಧಿಸಲಾಗಿದೆ. ಪೊಲೀಸ್ ಇನ್‌ಸ್ಪೆಕ್ಟರ್‌‌ ಒಬ್ಬರ ಕಣ್ಣೆದುರೆ ದಾಂಧಲೆಯಾಗಿದ್ದರೂ ಆ ಪೊಲೀಸ್ ಅಧಿಕಾರಿ ಹಲ್ಲೆ ತಡೆದಿದ್ದರೂ ಆರೋಪಿಗಳನ್ನು ಬಂಧಿಸಲು ಮೀನಮೇ಼ಷ ಎಣಿಸಿದ್ದರು. ಭಜರಂಗ ದಳದವರು ತಾವು ಸುರತ್ಕಲ್ ಟೋಲ್ ಗೇಟ್‌ನಲ್ಲಿ ಮಾಡಿದ್ದ ‘ಧರ್ಮ ರಕ್ಷಣೆ’ ಹೆಸರಿನ ದುಷ್ಕೃತ್ಯವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಾಗ ವೈರಲ್ ಆಯಿತು. ಆಗ ಅನಿವಾರ್ಯವಾಗಿ ಆರೋಪಿಗಳನ್ನು ದಸ್ತಗಿರಿ ಮಾಡಲಾಯಿತು. ಅಂದರೆ ಆರೋಪಿಗಳು ಕಣ್ಣೆದುರಿದ್ದರೂ ಸೋಮವಾರ ಸಂಜೆಯ ವರೆಗೆ ಬಂಧನವಾಗಿರಲಿಲ್ಲ. ಆಳುವ ಬಿಜೆಪಿಯ ಬೆಂಬಲಿತ ಸಂಘಟನೆಗೆ ಆರೋಪಿಗಳು ಸೇರಿದ್ದರಿಂದ ಪೊಲೀಸರು ಕೈಕಟ್ಟಿ ಕೂತಿದ್ದರು ಎಂಬುದು ಬಹಿರಂಗ ರಹಸ್ಯ! ಸ್ವಯಂ ಪ್ರೇರಣೆಯಿಂದ ಕೇಸು ದಾಖಲಿಸಬೇಕಿದ್ದ ಸುರತ್ಕಲ್ ಪೊಲೀಸರು ಹಲ್ಲೆಗೀಡಾದ ವಿದ್ಯಾರ್ಥಿಯಿಂದ ದೂರು ಪಡೆದ ನಂತರವೇ ಬಂಧನದ ಪ್ರಹಸನ ಮಾಡಿದ್ದಾರೆ ಎಂದು ‘ಮೋರಲ್‌ ಪೊಲಿಸಿಂಗ್‌’ನ ಆತಂಕಗಳನ್ನು ಎದುರಿಸುತ್ತಿರುವ ಮಂಗಳೂರಿನ ಜನರು ಹೇಳುತ್ತಾರೆ.

ಸೆಪ್ಟೆಂಬರ್‌ನಲ್ಲಿ ಪುತ್ತೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್‌ನಲ್ಲಿ ಸ್ಥಳೀಯ ಮುಸ್ಲಿಮ್ ಹುಡುಗ ಮತ್ತು ಬೆಂಗಳೂರು ಮೂಲದ ಇಬ್ಬರು ಮಹಿಳೆಯರು ಮಾತನಾಡಿದರೆಂಬ ಕಾರಣಕ್ಕೆ ಸಂಘ ಪರಿವಾರದ ಸಂಘಟನೆಯವರು ರಂಪಾಟ ಎಬ್ಬಿಸಿ ಹಲ್ಲೆ ಮಾಡಿದ್ದರು. ಇದರ ಬೆನ್ನಿಗೆ ಬಂಟ್ವಾಳದಲ್ಲಿ ಆರು ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳ ಮೇಲೆ ಐವರು ಭಜರಂಗದಳದವರು ದಾಳಿ ನಡೆಸಿದ್ದರು. ಕಾರಿಂಜ ದೇವಾಲಯಕ್ಕೆ ಮುಸ್ಲಿಮ್ ಗೆಳೆಯರೊಂದಿಗೆ ಹಿಂದೂ ಹುಡುಗರು ಹೋಗಿದ್ದೇ ಅಪರಾಧವಾಗಿತ್ತು. ಈ ಘಟನೆಯಲ್ಲಿ ಮೂವರನ್ನು ಬಂಧಿಸಲಾಗಿದೆ.

ಹಿಂದುತ್ವದ ಹೆಸರಲ್ಲಿ ನಡೆಯುತ್ತಿರುವ ಅತಿರೇಕದ ಘಟನೆಗಳ ಸೂತ್ರಧಾರರು ಕ್ರಿಮಿನಲ್ ಆರೋಪ ಹೊತ್ತವರೆಂಬುದು ಗಮನಾರ್ಹ ಸಂಗತಿಯಾಗಿದೆ. ಈ ಭಯ ಹುಟ್ಟಿಸುವ ಸರಣಿ ಪ್ರಕರಣಗಳು ದಕ್ಷಿಣ ಕನ್ನಡದ ಸಾಮಾಜಿಕ ಬದುಕು, ವಾಣಿಜ್ಯ ವಹಿವಾಟು ಮತ್ತು ಪ್ರವಸೋದ್ಯಮಕ್ಕೆ ಗಂಡಾಂತರಕಾರಿಯಾಗಿವೆ. ಹೊರಗಿನ ಉದ್ಯಮಿಗಳು, ಪ್ರವಾಸಿಗರು ಜಿಲ್ಲೆಗೆ ಬರಲು ಹತ್ತು ಬಾರಿ ಯೋಚಿಸಬೇಕಾದ ಸ್ಥಿತಿ ಎದುರಾಗಿದೆ. ಮೋರಲ್‌ ಪೋಲಿಸಿಂಗ್‌ ಅಂತರ್ ರಾಜ್ಯ ಮತ್ತು ಅಂತರ್ ರಾಷ್ಟ್ರೀಯ ಹೂಡಿಕೆದಾರರನ್ನು ಹಿಮ್ಮೆಟ್ಟಿಸುತ್ತಿವೆ. ಈ ಅಸಂವಿಧಾನಿಕ ಘಟನೆಗಳಿಗೆ ಕಡಿವಾಣಹಾಕಬೇಕಿದ್ದ ಜಿಲ್ಲಾಡಳಿತ ಮತ್ತು ಪೊಲೀಸ್ ವ್ಯವಸ್ಥೆಯ ವೈಫಲ್ಯ ಎದ್ದು ಕಾಣುತ್ತಿದೆ.

– ಶುದ್ದೋಧನ


ಇದನ್ನೂ ಓದಿರಿ: ಮಂಗಳೂರಿನಲ್ಲಿ ಮತ್ತೆ ‘ಮಾರಲ್ ಪೊಲೀಸಿಂಗ್’ – ಬಜರಂಗದಳ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...