Homeಮುಖಪುಟಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

2021ರ ಜನವರಿಯಿಂದ ಇಲ್ಲಿಯವರೆಗೆ 12 ‘ಮೋರಲ್‌ ಪೊಲೀಸಿಂಗ್‌‌’ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಕಳೆದ ಭಾನುವಾರ ಸಂಜೆ ಸುರತ್ಕಲ್ ಟೋಲ್ ಗೇಟ್ ಬಳಿ ವೈದ್ಯಕೀಯ ವಿಧ್ಯಾರ್ಥಿಗಳ ಮೇಲೆ ಬಜರಂಗದಳದವರು ನಡೆಸಿದ ಅಮಾನವೀಯ ದಾಳಿಯು, ಲಾಕ್ ಡೌನ್ ತೆರವಿನ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಘಟಿಸಿದ ನಾಲ್ಕನೇ ‘ಮೋರಲ್‌ ಪೊಲೀಸಿಂಗ್‌’ ಪ್ರಕರಣವಾಗಿದೆ.

- Advertisement -
- Advertisement -

ವಾಣಿಜ್ಯ, ಶೈಕ್ಷಣಿಕ, ಬ್ಯಾಂಕಿಂಗ್, ಪ್ರವಾಸೋದ್ಯಮಗಳ ಸಮುದ್ರ ನಗರಿ ಮಂಗಳೂರು ಸಂಘಪರಿವಾರದ ಅನೈತಿಕ, ಅಸಂವಿಧಾನಿಕ ಚಟುವಟಿಕೆಗಳಿಂದ ತತ್ತರಿಸಿ ಹೋಗಿದೆ. ಇಡೀ ಜಿಲ್ಲೆಯಲ್ಲಿ ಮೋರಲ್‌ ಪೊಲೀಸಿಂಗ್‌ ಮಿತಿಮೀರಿ ಹೋಗಿದ್ದು, ಹಿಂದುತ್ವದ ಹೆಸರಲ್ಲಿ ದುಷ್ಕರ್ಮಿಗಳು ಆಟಾಟೋಪ ಮುಂದುವರಿಸಿದ್ದು, ಅಭಿವೃದ್ಧಿ ಮತ್ತು ಮಾನವೀಯತೆ ಸವಾಲಾಗಿ ನಿಂತಿದೆ.

2021ರ ಜನವರಿಯಿಂದ ಇಲ್ಲಿಯವರೆಗೆ 12 ‘ಮೋರಲ್‌ ಪೊಲೀಸಿಂಗ್‌‌’ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಕಳೆದ ಭಾನುವಾರ ಸಂಜೆ ಸುರತ್ಕಲ್ ಟೋಲ್ ಗೇಟ್ ಬಳಿ ವೈದ್ಯಕೀಯ ವಿಧ್ಯಾರ್ಥಿಗಳ ಮೇಲೆ ಬಜರಂಗದಳದವರು ನಡೆಸಿದ ಅಮಾನವೀಯ ದಾಳಿಯು, ಲಾಕ್ ಡೌನ್ ತೆರವಿನ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಘಟಿಸಿದ ನಾಲ್ಕನೇ ‘ಮೋರಲ್‌ ಪೊಲೀಸಿಂಗ್‌’ ಪ್ರಕರಣವಾಗಿದೆ.

ಭಾನುವಾರ ಮಂಗಳೂರಿನ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಮತ್ತು ಓರ್ವ ವಿದ್ಯಾರ್ಥಿನಿ ಇದ್ದ ಜೀಪನ್ನು ತಡೆದು ನಿಲ್ಲಿಸಿದ್ದ ಬಜರಂಗ ದಳದ ಜಿಲ್ಲಾ ಪ್ರಮುಖನೆನ್ನಲಾದ ಪ್ರೀತಮ್ ಶೆಟ್ಟಿ, ಸುರತ್ಕಲ್ ಬಜರಂಗದಳದ ಮುಂದಾಳು ಆರ್ಶಿತ್, ಶ್ರೀನಿವಾಸ್, ರಾಕೇಶ್, ಅಭಿಷೇಕ್ ಎಂಬವರ ತಂಡ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿದೆ.

ಇದನ್ನೂ ಓದಿರಿ: ಬಜರಂಗದಳದ ‘ಮೋರಲ್ ಪೊಲೀಸಿಂಗ್’ ಅನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕಿಗೆ ಬಹಿರಂಗ ಬೆದರಿಕೆ

ಈ ಪ್ರಕರಣದಲ್ಲಿ ಐವರು ಹಲ್ಲೆಕೋರರನ್ನು ಬಂಧಿಸಲಾಗಿದೆ. ಪೊಲೀಸ್ ಇನ್‌ಸ್ಪೆಕ್ಟರ್‌‌ ಒಬ್ಬರ ಕಣ್ಣೆದುರೆ ದಾಂಧಲೆಯಾಗಿದ್ದರೂ ಆ ಪೊಲೀಸ್ ಅಧಿಕಾರಿ ಹಲ್ಲೆ ತಡೆದಿದ್ದರೂ ಆರೋಪಿಗಳನ್ನು ಬಂಧಿಸಲು ಮೀನಮೇ಼ಷ ಎಣಿಸಿದ್ದರು. ಭಜರಂಗ ದಳದವರು ತಾವು ಸುರತ್ಕಲ್ ಟೋಲ್ ಗೇಟ್‌ನಲ್ಲಿ ಮಾಡಿದ್ದ ‘ಧರ್ಮ ರಕ್ಷಣೆ’ ಹೆಸರಿನ ದುಷ್ಕೃತ್ಯವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಾಗ ವೈರಲ್ ಆಯಿತು. ಆಗ ಅನಿವಾರ್ಯವಾಗಿ ಆರೋಪಿಗಳನ್ನು ದಸ್ತಗಿರಿ ಮಾಡಲಾಯಿತು. ಅಂದರೆ ಆರೋಪಿಗಳು ಕಣ್ಣೆದುರಿದ್ದರೂ ಸೋಮವಾರ ಸಂಜೆಯ ವರೆಗೆ ಬಂಧನವಾಗಿರಲಿಲ್ಲ. ಆಳುವ ಬಿಜೆಪಿಯ ಬೆಂಬಲಿತ ಸಂಘಟನೆಗೆ ಆರೋಪಿಗಳು ಸೇರಿದ್ದರಿಂದ ಪೊಲೀಸರು ಕೈಕಟ್ಟಿ ಕೂತಿದ್ದರು ಎಂಬುದು ಬಹಿರಂಗ ರಹಸ್ಯ! ಸ್ವಯಂ ಪ್ರೇರಣೆಯಿಂದ ಕೇಸು ದಾಖಲಿಸಬೇಕಿದ್ದ ಸುರತ್ಕಲ್ ಪೊಲೀಸರು ಹಲ್ಲೆಗೀಡಾದ ವಿದ್ಯಾರ್ಥಿಯಿಂದ ದೂರು ಪಡೆದ ನಂತರವೇ ಬಂಧನದ ಪ್ರಹಸನ ಮಾಡಿದ್ದಾರೆ ಎಂದು ‘ಮೋರಲ್‌ ಪೊಲಿಸಿಂಗ್‌’ನ ಆತಂಕಗಳನ್ನು ಎದುರಿಸುತ್ತಿರುವ ಮಂಗಳೂರಿನ ಜನರು ಹೇಳುತ್ತಾರೆ.

ಸೆಪ್ಟೆಂಬರ್‌ನಲ್ಲಿ ಪುತ್ತೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್‌ನಲ್ಲಿ ಸ್ಥಳೀಯ ಮುಸ್ಲಿಮ್ ಹುಡುಗ ಮತ್ತು ಬೆಂಗಳೂರು ಮೂಲದ ಇಬ್ಬರು ಮಹಿಳೆಯರು ಮಾತನಾಡಿದರೆಂಬ ಕಾರಣಕ್ಕೆ ಸಂಘ ಪರಿವಾರದ ಸಂಘಟನೆಯವರು ರಂಪಾಟ ಎಬ್ಬಿಸಿ ಹಲ್ಲೆ ಮಾಡಿದ್ದರು. ಇದರ ಬೆನ್ನಿಗೆ ಬಂಟ್ವಾಳದಲ್ಲಿ ಆರು ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳ ಮೇಲೆ ಐವರು ಭಜರಂಗದಳದವರು ದಾಳಿ ನಡೆಸಿದ್ದರು. ಕಾರಿಂಜ ದೇವಾಲಯಕ್ಕೆ ಮುಸ್ಲಿಮ್ ಗೆಳೆಯರೊಂದಿಗೆ ಹಿಂದೂ ಹುಡುಗರು ಹೋಗಿದ್ದೇ ಅಪರಾಧವಾಗಿತ್ತು. ಈ ಘಟನೆಯಲ್ಲಿ ಮೂವರನ್ನು ಬಂಧಿಸಲಾಗಿದೆ.

ಹಿಂದುತ್ವದ ಹೆಸರಲ್ಲಿ ನಡೆಯುತ್ತಿರುವ ಅತಿರೇಕದ ಘಟನೆಗಳ ಸೂತ್ರಧಾರರು ಕ್ರಿಮಿನಲ್ ಆರೋಪ ಹೊತ್ತವರೆಂಬುದು ಗಮನಾರ್ಹ ಸಂಗತಿಯಾಗಿದೆ. ಈ ಭಯ ಹುಟ್ಟಿಸುವ ಸರಣಿ ಪ್ರಕರಣಗಳು ದಕ್ಷಿಣ ಕನ್ನಡದ ಸಾಮಾಜಿಕ ಬದುಕು, ವಾಣಿಜ್ಯ ವಹಿವಾಟು ಮತ್ತು ಪ್ರವಸೋದ್ಯಮಕ್ಕೆ ಗಂಡಾಂತರಕಾರಿಯಾಗಿವೆ. ಹೊರಗಿನ ಉದ್ಯಮಿಗಳು, ಪ್ರವಾಸಿಗರು ಜಿಲ್ಲೆಗೆ ಬರಲು ಹತ್ತು ಬಾರಿ ಯೋಚಿಸಬೇಕಾದ ಸ್ಥಿತಿ ಎದುರಾಗಿದೆ. ಮೋರಲ್‌ ಪೋಲಿಸಿಂಗ್‌ ಅಂತರ್ ರಾಜ್ಯ ಮತ್ತು ಅಂತರ್ ರಾಷ್ಟ್ರೀಯ ಹೂಡಿಕೆದಾರರನ್ನು ಹಿಮ್ಮೆಟ್ಟಿಸುತ್ತಿವೆ. ಈ ಅಸಂವಿಧಾನಿಕ ಘಟನೆಗಳಿಗೆ ಕಡಿವಾಣಹಾಕಬೇಕಿದ್ದ ಜಿಲ್ಲಾಡಳಿತ ಮತ್ತು ಪೊಲೀಸ್ ವ್ಯವಸ್ಥೆಯ ವೈಫಲ್ಯ ಎದ್ದು ಕಾಣುತ್ತಿದೆ.

– ಶುದ್ದೋಧನ


ಇದನ್ನೂ ಓದಿರಿ: ಮಂಗಳೂರಿನಲ್ಲಿ ಮತ್ತೆ ‘ಮಾರಲ್ ಪೊಲೀಸಿಂಗ್’ – ಬಜರಂಗದಳ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...