Homeಮುಖಪುಟಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

2021ರ ಜನವರಿಯಿಂದ ಇಲ್ಲಿಯವರೆಗೆ 12 ‘ಮೋರಲ್‌ ಪೊಲೀಸಿಂಗ್‌‌’ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಕಳೆದ ಭಾನುವಾರ ಸಂಜೆ ಸುರತ್ಕಲ್ ಟೋಲ್ ಗೇಟ್ ಬಳಿ ವೈದ್ಯಕೀಯ ವಿಧ್ಯಾರ್ಥಿಗಳ ಮೇಲೆ ಬಜರಂಗದಳದವರು ನಡೆಸಿದ ಅಮಾನವೀಯ ದಾಳಿಯು, ಲಾಕ್ ಡೌನ್ ತೆರವಿನ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಘಟಿಸಿದ ನಾಲ್ಕನೇ ‘ಮೋರಲ್‌ ಪೊಲೀಸಿಂಗ್‌’ ಪ್ರಕರಣವಾಗಿದೆ.

- Advertisement -
- Advertisement -

ವಾಣಿಜ್ಯ, ಶೈಕ್ಷಣಿಕ, ಬ್ಯಾಂಕಿಂಗ್, ಪ್ರವಾಸೋದ್ಯಮಗಳ ಸಮುದ್ರ ನಗರಿ ಮಂಗಳೂರು ಸಂಘಪರಿವಾರದ ಅನೈತಿಕ, ಅಸಂವಿಧಾನಿಕ ಚಟುವಟಿಕೆಗಳಿಂದ ತತ್ತರಿಸಿ ಹೋಗಿದೆ. ಇಡೀ ಜಿಲ್ಲೆಯಲ್ಲಿ ಮೋರಲ್‌ ಪೊಲೀಸಿಂಗ್‌ ಮಿತಿಮೀರಿ ಹೋಗಿದ್ದು, ಹಿಂದುತ್ವದ ಹೆಸರಲ್ಲಿ ದುಷ್ಕರ್ಮಿಗಳು ಆಟಾಟೋಪ ಮುಂದುವರಿಸಿದ್ದು, ಅಭಿವೃದ್ಧಿ ಮತ್ತು ಮಾನವೀಯತೆ ಸವಾಲಾಗಿ ನಿಂತಿದೆ.

2021ರ ಜನವರಿಯಿಂದ ಇಲ್ಲಿಯವರೆಗೆ 12 ‘ಮೋರಲ್‌ ಪೊಲೀಸಿಂಗ್‌‌’ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಕಳೆದ ಭಾನುವಾರ ಸಂಜೆ ಸುರತ್ಕಲ್ ಟೋಲ್ ಗೇಟ್ ಬಳಿ ವೈದ್ಯಕೀಯ ವಿಧ್ಯಾರ್ಥಿಗಳ ಮೇಲೆ ಬಜರಂಗದಳದವರು ನಡೆಸಿದ ಅಮಾನವೀಯ ದಾಳಿಯು, ಲಾಕ್ ಡೌನ್ ತೆರವಿನ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಘಟಿಸಿದ ನಾಲ್ಕನೇ ‘ಮೋರಲ್‌ ಪೊಲೀಸಿಂಗ್‌’ ಪ್ರಕರಣವಾಗಿದೆ.

ಭಾನುವಾರ ಮಂಗಳೂರಿನ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಮತ್ತು ಓರ್ವ ವಿದ್ಯಾರ್ಥಿನಿ ಇದ್ದ ಜೀಪನ್ನು ತಡೆದು ನಿಲ್ಲಿಸಿದ್ದ ಬಜರಂಗ ದಳದ ಜಿಲ್ಲಾ ಪ್ರಮುಖನೆನ್ನಲಾದ ಪ್ರೀತಮ್ ಶೆಟ್ಟಿ, ಸುರತ್ಕಲ್ ಬಜರಂಗದಳದ ಮುಂದಾಳು ಆರ್ಶಿತ್, ಶ್ರೀನಿವಾಸ್, ರಾಕೇಶ್, ಅಭಿಷೇಕ್ ಎಂಬವರ ತಂಡ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿದೆ.

ಇದನ್ನೂ ಓದಿರಿ: ಬಜರಂಗದಳದ ‘ಮೋರಲ್ ಪೊಲೀಸಿಂಗ್’ ಅನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕಿಗೆ ಬಹಿರಂಗ ಬೆದರಿಕೆ

ಈ ಪ್ರಕರಣದಲ್ಲಿ ಐವರು ಹಲ್ಲೆಕೋರರನ್ನು ಬಂಧಿಸಲಾಗಿದೆ. ಪೊಲೀಸ್ ಇನ್‌ಸ್ಪೆಕ್ಟರ್‌‌ ಒಬ್ಬರ ಕಣ್ಣೆದುರೆ ದಾಂಧಲೆಯಾಗಿದ್ದರೂ ಆ ಪೊಲೀಸ್ ಅಧಿಕಾರಿ ಹಲ್ಲೆ ತಡೆದಿದ್ದರೂ ಆರೋಪಿಗಳನ್ನು ಬಂಧಿಸಲು ಮೀನಮೇ಼ಷ ಎಣಿಸಿದ್ದರು. ಭಜರಂಗ ದಳದವರು ತಾವು ಸುರತ್ಕಲ್ ಟೋಲ್ ಗೇಟ್‌ನಲ್ಲಿ ಮಾಡಿದ್ದ ‘ಧರ್ಮ ರಕ್ಷಣೆ’ ಹೆಸರಿನ ದುಷ್ಕೃತ್ಯವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಾಗ ವೈರಲ್ ಆಯಿತು. ಆಗ ಅನಿವಾರ್ಯವಾಗಿ ಆರೋಪಿಗಳನ್ನು ದಸ್ತಗಿರಿ ಮಾಡಲಾಯಿತು. ಅಂದರೆ ಆರೋಪಿಗಳು ಕಣ್ಣೆದುರಿದ್ದರೂ ಸೋಮವಾರ ಸಂಜೆಯ ವರೆಗೆ ಬಂಧನವಾಗಿರಲಿಲ್ಲ. ಆಳುವ ಬಿಜೆಪಿಯ ಬೆಂಬಲಿತ ಸಂಘಟನೆಗೆ ಆರೋಪಿಗಳು ಸೇರಿದ್ದರಿಂದ ಪೊಲೀಸರು ಕೈಕಟ್ಟಿ ಕೂತಿದ್ದರು ಎಂಬುದು ಬಹಿರಂಗ ರಹಸ್ಯ! ಸ್ವಯಂ ಪ್ರೇರಣೆಯಿಂದ ಕೇಸು ದಾಖಲಿಸಬೇಕಿದ್ದ ಸುರತ್ಕಲ್ ಪೊಲೀಸರು ಹಲ್ಲೆಗೀಡಾದ ವಿದ್ಯಾರ್ಥಿಯಿಂದ ದೂರು ಪಡೆದ ನಂತರವೇ ಬಂಧನದ ಪ್ರಹಸನ ಮಾಡಿದ್ದಾರೆ ಎಂದು ‘ಮೋರಲ್‌ ಪೊಲಿಸಿಂಗ್‌’ನ ಆತಂಕಗಳನ್ನು ಎದುರಿಸುತ್ತಿರುವ ಮಂಗಳೂರಿನ ಜನರು ಹೇಳುತ್ತಾರೆ.

ಸೆಪ್ಟೆಂಬರ್‌ನಲ್ಲಿ ಪುತ್ತೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್‌ನಲ್ಲಿ ಸ್ಥಳೀಯ ಮುಸ್ಲಿಮ್ ಹುಡುಗ ಮತ್ತು ಬೆಂಗಳೂರು ಮೂಲದ ಇಬ್ಬರು ಮಹಿಳೆಯರು ಮಾತನಾಡಿದರೆಂಬ ಕಾರಣಕ್ಕೆ ಸಂಘ ಪರಿವಾರದ ಸಂಘಟನೆಯವರು ರಂಪಾಟ ಎಬ್ಬಿಸಿ ಹಲ್ಲೆ ಮಾಡಿದ್ದರು. ಇದರ ಬೆನ್ನಿಗೆ ಬಂಟ್ವಾಳದಲ್ಲಿ ಆರು ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳ ಮೇಲೆ ಐವರು ಭಜರಂಗದಳದವರು ದಾಳಿ ನಡೆಸಿದ್ದರು. ಕಾರಿಂಜ ದೇವಾಲಯಕ್ಕೆ ಮುಸ್ಲಿಮ್ ಗೆಳೆಯರೊಂದಿಗೆ ಹಿಂದೂ ಹುಡುಗರು ಹೋಗಿದ್ದೇ ಅಪರಾಧವಾಗಿತ್ತು. ಈ ಘಟನೆಯಲ್ಲಿ ಮೂವರನ್ನು ಬಂಧಿಸಲಾಗಿದೆ.

ಹಿಂದುತ್ವದ ಹೆಸರಲ್ಲಿ ನಡೆಯುತ್ತಿರುವ ಅತಿರೇಕದ ಘಟನೆಗಳ ಸೂತ್ರಧಾರರು ಕ್ರಿಮಿನಲ್ ಆರೋಪ ಹೊತ್ತವರೆಂಬುದು ಗಮನಾರ್ಹ ಸಂಗತಿಯಾಗಿದೆ. ಈ ಭಯ ಹುಟ್ಟಿಸುವ ಸರಣಿ ಪ್ರಕರಣಗಳು ದಕ್ಷಿಣ ಕನ್ನಡದ ಸಾಮಾಜಿಕ ಬದುಕು, ವಾಣಿಜ್ಯ ವಹಿವಾಟು ಮತ್ತು ಪ್ರವಸೋದ್ಯಮಕ್ಕೆ ಗಂಡಾಂತರಕಾರಿಯಾಗಿವೆ. ಹೊರಗಿನ ಉದ್ಯಮಿಗಳು, ಪ್ರವಾಸಿಗರು ಜಿಲ್ಲೆಗೆ ಬರಲು ಹತ್ತು ಬಾರಿ ಯೋಚಿಸಬೇಕಾದ ಸ್ಥಿತಿ ಎದುರಾಗಿದೆ. ಮೋರಲ್‌ ಪೋಲಿಸಿಂಗ್‌ ಅಂತರ್ ರಾಜ್ಯ ಮತ್ತು ಅಂತರ್ ರಾಷ್ಟ್ರೀಯ ಹೂಡಿಕೆದಾರರನ್ನು ಹಿಮ್ಮೆಟ್ಟಿಸುತ್ತಿವೆ. ಈ ಅಸಂವಿಧಾನಿಕ ಘಟನೆಗಳಿಗೆ ಕಡಿವಾಣಹಾಕಬೇಕಿದ್ದ ಜಿಲ್ಲಾಡಳಿತ ಮತ್ತು ಪೊಲೀಸ್ ವ್ಯವಸ್ಥೆಯ ವೈಫಲ್ಯ ಎದ್ದು ಕಾಣುತ್ತಿದೆ.

– ಶುದ್ದೋಧನ


ಇದನ್ನೂ ಓದಿರಿ: ಮಂಗಳೂರಿನಲ್ಲಿ ಮತ್ತೆ ‘ಮಾರಲ್ ಪೊಲೀಸಿಂಗ್’ – ಬಜರಂಗದಳ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...