Homeಮುಖಪುಟಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

2021ರ ಜನವರಿಯಿಂದ ಇಲ್ಲಿಯವರೆಗೆ 12 ‘ಮೋರಲ್‌ ಪೊಲೀಸಿಂಗ್‌‌’ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಕಳೆದ ಭಾನುವಾರ ಸಂಜೆ ಸುರತ್ಕಲ್ ಟೋಲ್ ಗೇಟ್ ಬಳಿ ವೈದ್ಯಕೀಯ ವಿಧ್ಯಾರ್ಥಿಗಳ ಮೇಲೆ ಬಜರಂಗದಳದವರು ನಡೆಸಿದ ಅಮಾನವೀಯ ದಾಳಿಯು, ಲಾಕ್ ಡೌನ್ ತೆರವಿನ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಘಟಿಸಿದ ನಾಲ್ಕನೇ ‘ಮೋರಲ್‌ ಪೊಲೀಸಿಂಗ್‌’ ಪ್ರಕರಣವಾಗಿದೆ.

- Advertisement -
- Advertisement -

ವಾಣಿಜ್ಯ, ಶೈಕ್ಷಣಿಕ, ಬ್ಯಾಂಕಿಂಗ್, ಪ್ರವಾಸೋದ್ಯಮಗಳ ಸಮುದ್ರ ನಗರಿ ಮಂಗಳೂರು ಸಂಘಪರಿವಾರದ ಅನೈತಿಕ, ಅಸಂವಿಧಾನಿಕ ಚಟುವಟಿಕೆಗಳಿಂದ ತತ್ತರಿಸಿ ಹೋಗಿದೆ. ಇಡೀ ಜಿಲ್ಲೆಯಲ್ಲಿ ಮೋರಲ್‌ ಪೊಲೀಸಿಂಗ್‌ ಮಿತಿಮೀರಿ ಹೋಗಿದ್ದು, ಹಿಂದುತ್ವದ ಹೆಸರಲ್ಲಿ ದುಷ್ಕರ್ಮಿಗಳು ಆಟಾಟೋಪ ಮುಂದುವರಿಸಿದ್ದು, ಅಭಿವೃದ್ಧಿ ಮತ್ತು ಮಾನವೀಯತೆ ಸವಾಲಾಗಿ ನಿಂತಿದೆ.

2021ರ ಜನವರಿಯಿಂದ ಇಲ್ಲಿಯವರೆಗೆ 12 ‘ಮೋರಲ್‌ ಪೊಲೀಸಿಂಗ್‌‌’ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಕಳೆದ ಭಾನುವಾರ ಸಂಜೆ ಸುರತ್ಕಲ್ ಟೋಲ್ ಗೇಟ್ ಬಳಿ ವೈದ್ಯಕೀಯ ವಿಧ್ಯಾರ್ಥಿಗಳ ಮೇಲೆ ಬಜರಂಗದಳದವರು ನಡೆಸಿದ ಅಮಾನವೀಯ ದಾಳಿಯು, ಲಾಕ್ ಡೌನ್ ತೆರವಿನ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಘಟಿಸಿದ ನಾಲ್ಕನೇ ‘ಮೋರಲ್‌ ಪೊಲೀಸಿಂಗ್‌’ ಪ್ರಕರಣವಾಗಿದೆ.

ಭಾನುವಾರ ಮಂಗಳೂರಿನ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಮತ್ತು ಓರ್ವ ವಿದ್ಯಾರ್ಥಿನಿ ಇದ್ದ ಜೀಪನ್ನು ತಡೆದು ನಿಲ್ಲಿಸಿದ್ದ ಬಜರಂಗ ದಳದ ಜಿಲ್ಲಾ ಪ್ರಮುಖನೆನ್ನಲಾದ ಪ್ರೀತಮ್ ಶೆಟ್ಟಿ, ಸುರತ್ಕಲ್ ಬಜರಂಗದಳದ ಮುಂದಾಳು ಆರ್ಶಿತ್, ಶ್ರೀನಿವಾಸ್, ರಾಕೇಶ್, ಅಭಿಷೇಕ್ ಎಂಬವರ ತಂಡ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿದೆ.

ಇದನ್ನೂ ಓದಿರಿ: ಬಜರಂಗದಳದ ‘ಮೋರಲ್ ಪೊಲೀಸಿಂಗ್’ ಅನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕಿಗೆ ಬಹಿರಂಗ ಬೆದರಿಕೆ

ಈ ಪ್ರಕರಣದಲ್ಲಿ ಐವರು ಹಲ್ಲೆಕೋರರನ್ನು ಬಂಧಿಸಲಾಗಿದೆ. ಪೊಲೀಸ್ ಇನ್‌ಸ್ಪೆಕ್ಟರ್‌‌ ಒಬ್ಬರ ಕಣ್ಣೆದುರೆ ದಾಂಧಲೆಯಾಗಿದ್ದರೂ ಆ ಪೊಲೀಸ್ ಅಧಿಕಾರಿ ಹಲ್ಲೆ ತಡೆದಿದ್ದರೂ ಆರೋಪಿಗಳನ್ನು ಬಂಧಿಸಲು ಮೀನಮೇ಼ಷ ಎಣಿಸಿದ್ದರು. ಭಜರಂಗ ದಳದವರು ತಾವು ಸುರತ್ಕಲ್ ಟೋಲ್ ಗೇಟ್‌ನಲ್ಲಿ ಮಾಡಿದ್ದ ‘ಧರ್ಮ ರಕ್ಷಣೆ’ ಹೆಸರಿನ ದುಷ್ಕೃತ್ಯವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಾಗ ವೈರಲ್ ಆಯಿತು. ಆಗ ಅನಿವಾರ್ಯವಾಗಿ ಆರೋಪಿಗಳನ್ನು ದಸ್ತಗಿರಿ ಮಾಡಲಾಯಿತು. ಅಂದರೆ ಆರೋಪಿಗಳು ಕಣ್ಣೆದುರಿದ್ದರೂ ಸೋಮವಾರ ಸಂಜೆಯ ವರೆಗೆ ಬಂಧನವಾಗಿರಲಿಲ್ಲ. ಆಳುವ ಬಿಜೆಪಿಯ ಬೆಂಬಲಿತ ಸಂಘಟನೆಗೆ ಆರೋಪಿಗಳು ಸೇರಿದ್ದರಿಂದ ಪೊಲೀಸರು ಕೈಕಟ್ಟಿ ಕೂತಿದ್ದರು ಎಂಬುದು ಬಹಿರಂಗ ರಹಸ್ಯ! ಸ್ವಯಂ ಪ್ರೇರಣೆಯಿಂದ ಕೇಸು ದಾಖಲಿಸಬೇಕಿದ್ದ ಸುರತ್ಕಲ್ ಪೊಲೀಸರು ಹಲ್ಲೆಗೀಡಾದ ವಿದ್ಯಾರ್ಥಿಯಿಂದ ದೂರು ಪಡೆದ ನಂತರವೇ ಬಂಧನದ ಪ್ರಹಸನ ಮಾಡಿದ್ದಾರೆ ಎಂದು ‘ಮೋರಲ್‌ ಪೊಲಿಸಿಂಗ್‌’ನ ಆತಂಕಗಳನ್ನು ಎದುರಿಸುತ್ತಿರುವ ಮಂಗಳೂರಿನ ಜನರು ಹೇಳುತ್ತಾರೆ.

ಸೆಪ್ಟೆಂಬರ್‌ನಲ್ಲಿ ಪುತ್ತೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್‌ನಲ್ಲಿ ಸ್ಥಳೀಯ ಮುಸ್ಲಿಮ್ ಹುಡುಗ ಮತ್ತು ಬೆಂಗಳೂರು ಮೂಲದ ಇಬ್ಬರು ಮಹಿಳೆಯರು ಮಾತನಾಡಿದರೆಂಬ ಕಾರಣಕ್ಕೆ ಸಂಘ ಪರಿವಾರದ ಸಂಘಟನೆಯವರು ರಂಪಾಟ ಎಬ್ಬಿಸಿ ಹಲ್ಲೆ ಮಾಡಿದ್ದರು. ಇದರ ಬೆನ್ನಿಗೆ ಬಂಟ್ವಾಳದಲ್ಲಿ ಆರು ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳ ಮೇಲೆ ಐವರು ಭಜರಂಗದಳದವರು ದಾಳಿ ನಡೆಸಿದ್ದರು. ಕಾರಿಂಜ ದೇವಾಲಯಕ್ಕೆ ಮುಸ್ಲಿಮ್ ಗೆಳೆಯರೊಂದಿಗೆ ಹಿಂದೂ ಹುಡುಗರು ಹೋಗಿದ್ದೇ ಅಪರಾಧವಾಗಿತ್ತು. ಈ ಘಟನೆಯಲ್ಲಿ ಮೂವರನ್ನು ಬಂಧಿಸಲಾಗಿದೆ.

ಹಿಂದುತ್ವದ ಹೆಸರಲ್ಲಿ ನಡೆಯುತ್ತಿರುವ ಅತಿರೇಕದ ಘಟನೆಗಳ ಸೂತ್ರಧಾರರು ಕ್ರಿಮಿನಲ್ ಆರೋಪ ಹೊತ್ತವರೆಂಬುದು ಗಮನಾರ್ಹ ಸಂಗತಿಯಾಗಿದೆ. ಈ ಭಯ ಹುಟ್ಟಿಸುವ ಸರಣಿ ಪ್ರಕರಣಗಳು ದಕ್ಷಿಣ ಕನ್ನಡದ ಸಾಮಾಜಿಕ ಬದುಕು, ವಾಣಿಜ್ಯ ವಹಿವಾಟು ಮತ್ತು ಪ್ರವಸೋದ್ಯಮಕ್ಕೆ ಗಂಡಾಂತರಕಾರಿಯಾಗಿವೆ. ಹೊರಗಿನ ಉದ್ಯಮಿಗಳು, ಪ್ರವಾಸಿಗರು ಜಿಲ್ಲೆಗೆ ಬರಲು ಹತ್ತು ಬಾರಿ ಯೋಚಿಸಬೇಕಾದ ಸ್ಥಿತಿ ಎದುರಾಗಿದೆ. ಮೋರಲ್‌ ಪೋಲಿಸಿಂಗ್‌ ಅಂತರ್ ರಾಜ್ಯ ಮತ್ತು ಅಂತರ್ ರಾಷ್ಟ್ರೀಯ ಹೂಡಿಕೆದಾರರನ್ನು ಹಿಮ್ಮೆಟ್ಟಿಸುತ್ತಿವೆ. ಈ ಅಸಂವಿಧಾನಿಕ ಘಟನೆಗಳಿಗೆ ಕಡಿವಾಣಹಾಕಬೇಕಿದ್ದ ಜಿಲ್ಲಾಡಳಿತ ಮತ್ತು ಪೊಲೀಸ್ ವ್ಯವಸ್ಥೆಯ ವೈಫಲ್ಯ ಎದ್ದು ಕಾಣುತ್ತಿದೆ.

– ಶುದ್ದೋಧನ


ಇದನ್ನೂ ಓದಿರಿ: ಮಂಗಳೂರಿನಲ್ಲಿ ಮತ್ತೆ ‘ಮಾರಲ್ ಪೊಲೀಸಿಂಗ್’ – ಬಜರಂಗದಳ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...