Homeಮುಖಪುಟಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

2021ರ ಜನವರಿಯಿಂದ ಇಲ್ಲಿಯವರೆಗೆ 12 ‘ಮೋರಲ್‌ ಪೊಲೀಸಿಂಗ್‌‌’ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಕಳೆದ ಭಾನುವಾರ ಸಂಜೆ ಸುರತ್ಕಲ್ ಟೋಲ್ ಗೇಟ್ ಬಳಿ ವೈದ್ಯಕೀಯ ವಿಧ್ಯಾರ್ಥಿಗಳ ಮೇಲೆ ಬಜರಂಗದಳದವರು ನಡೆಸಿದ ಅಮಾನವೀಯ ದಾಳಿಯು, ಲಾಕ್ ಡೌನ್ ತೆರವಿನ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಘಟಿಸಿದ ನಾಲ್ಕನೇ ‘ಮೋರಲ್‌ ಪೊಲೀಸಿಂಗ್‌’ ಪ್ರಕರಣವಾಗಿದೆ.

- Advertisement -
- Advertisement -

ವಾಣಿಜ್ಯ, ಶೈಕ್ಷಣಿಕ, ಬ್ಯಾಂಕಿಂಗ್, ಪ್ರವಾಸೋದ್ಯಮಗಳ ಸಮುದ್ರ ನಗರಿ ಮಂಗಳೂರು ಸಂಘಪರಿವಾರದ ಅನೈತಿಕ, ಅಸಂವಿಧಾನಿಕ ಚಟುವಟಿಕೆಗಳಿಂದ ತತ್ತರಿಸಿ ಹೋಗಿದೆ. ಇಡೀ ಜಿಲ್ಲೆಯಲ್ಲಿ ಮೋರಲ್‌ ಪೊಲೀಸಿಂಗ್‌ ಮಿತಿಮೀರಿ ಹೋಗಿದ್ದು, ಹಿಂದುತ್ವದ ಹೆಸರಲ್ಲಿ ದುಷ್ಕರ್ಮಿಗಳು ಆಟಾಟೋಪ ಮುಂದುವರಿಸಿದ್ದು, ಅಭಿವೃದ್ಧಿ ಮತ್ತು ಮಾನವೀಯತೆ ಸವಾಲಾಗಿ ನಿಂತಿದೆ.

2021ರ ಜನವರಿಯಿಂದ ಇಲ್ಲಿಯವರೆಗೆ 12 ‘ಮೋರಲ್‌ ಪೊಲೀಸಿಂಗ್‌‌’ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಕಳೆದ ಭಾನುವಾರ ಸಂಜೆ ಸುರತ್ಕಲ್ ಟೋಲ್ ಗೇಟ್ ಬಳಿ ವೈದ್ಯಕೀಯ ವಿಧ್ಯಾರ್ಥಿಗಳ ಮೇಲೆ ಬಜರಂಗದಳದವರು ನಡೆಸಿದ ಅಮಾನವೀಯ ದಾಳಿಯು, ಲಾಕ್ ಡೌನ್ ತೆರವಿನ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಘಟಿಸಿದ ನಾಲ್ಕನೇ ‘ಮೋರಲ್‌ ಪೊಲೀಸಿಂಗ್‌’ ಪ್ರಕರಣವಾಗಿದೆ.

ಭಾನುವಾರ ಮಂಗಳೂರಿನ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಮತ್ತು ಓರ್ವ ವಿದ್ಯಾರ್ಥಿನಿ ಇದ್ದ ಜೀಪನ್ನು ತಡೆದು ನಿಲ್ಲಿಸಿದ್ದ ಬಜರಂಗ ದಳದ ಜಿಲ್ಲಾ ಪ್ರಮುಖನೆನ್ನಲಾದ ಪ್ರೀತಮ್ ಶೆಟ್ಟಿ, ಸುರತ್ಕಲ್ ಬಜರಂಗದಳದ ಮುಂದಾಳು ಆರ್ಶಿತ್, ಶ್ರೀನಿವಾಸ್, ರಾಕೇಶ್, ಅಭಿಷೇಕ್ ಎಂಬವರ ತಂಡ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿದೆ.

ಇದನ್ನೂ ಓದಿರಿ: ಬಜರಂಗದಳದ ‘ಮೋರಲ್ ಪೊಲೀಸಿಂಗ್’ ಅನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕಿಗೆ ಬಹಿರಂಗ ಬೆದರಿಕೆ

ಈ ಪ್ರಕರಣದಲ್ಲಿ ಐವರು ಹಲ್ಲೆಕೋರರನ್ನು ಬಂಧಿಸಲಾಗಿದೆ. ಪೊಲೀಸ್ ಇನ್‌ಸ್ಪೆಕ್ಟರ್‌‌ ಒಬ್ಬರ ಕಣ್ಣೆದುರೆ ದಾಂಧಲೆಯಾಗಿದ್ದರೂ ಆ ಪೊಲೀಸ್ ಅಧಿಕಾರಿ ಹಲ್ಲೆ ತಡೆದಿದ್ದರೂ ಆರೋಪಿಗಳನ್ನು ಬಂಧಿಸಲು ಮೀನಮೇ಼ಷ ಎಣಿಸಿದ್ದರು. ಭಜರಂಗ ದಳದವರು ತಾವು ಸುರತ್ಕಲ್ ಟೋಲ್ ಗೇಟ್‌ನಲ್ಲಿ ಮಾಡಿದ್ದ ‘ಧರ್ಮ ರಕ್ಷಣೆ’ ಹೆಸರಿನ ದುಷ್ಕೃತ್ಯವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಾಗ ವೈರಲ್ ಆಯಿತು. ಆಗ ಅನಿವಾರ್ಯವಾಗಿ ಆರೋಪಿಗಳನ್ನು ದಸ್ತಗಿರಿ ಮಾಡಲಾಯಿತು. ಅಂದರೆ ಆರೋಪಿಗಳು ಕಣ್ಣೆದುರಿದ್ದರೂ ಸೋಮವಾರ ಸಂಜೆಯ ವರೆಗೆ ಬಂಧನವಾಗಿರಲಿಲ್ಲ. ಆಳುವ ಬಿಜೆಪಿಯ ಬೆಂಬಲಿತ ಸಂಘಟನೆಗೆ ಆರೋಪಿಗಳು ಸೇರಿದ್ದರಿಂದ ಪೊಲೀಸರು ಕೈಕಟ್ಟಿ ಕೂತಿದ್ದರು ಎಂಬುದು ಬಹಿರಂಗ ರಹಸ್ಯ! ಸ್ವಯಂ ಪ್ರೇರಣೆಯಿಂದ ಕೇಸು ದಾಖಲಿಸಬೇಕಿದ್ದ ಸುರತ್ಕಲ್ ಪೊಲೀಸರು ಹಲ್ಲೆಗೀಡಾದ ವಿದ್ಯಾರ್ಥಿಯಿಂದ ದೂರು ಪಡೆದ ನಂತರವೇ ಬಂಧನದ ಪ್ರಹಸನ ಮಾಡಿದ್ದಾರೆ ಎಂದು ‘ಮೋರಲ್‌ ಪೊಲಿಸಿಂಗ್‌’ನ ಆತಂಕಗಳನ್ನು ಎದುರಿಸುತ್ತಿರುವ ಮಂಗಳೂರಿನ ಜನರು ಹೇಳುತ್ತಾರೆ.

ಸೆಪ್ಟೆಂಬರ್‌ನಲ್ಲಿ ಪುತ್ತೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್‌ನಲ್ಲಿ ಸ್ಥಳೀಯ ಮುಸ್ಲಿಮ್ ಹುಡುಗ ಮತ್ತು ಬೆಂಗಳೂರು ಮೂಲದ ಇಬ್ಬರು ಮಹಿಳೆಯರು ಮಾತನಾಡಿದರೆಂಬ ಕಾರಣಕ್ಕೆ ಸಂಘ ಪರಿವಾರದ ಸಂಘಟನೆಯವರು ರಂಪಾಟ ಎಬ್ಬಿಸಿ ಹಲ್ಲೆ ಮಾಡಿದ್ದರು. ಇದರ ಬೆನ್ನಿಗೆ ಬಂಟ್ವಾಳದಲ್ಲಿ ಆರು ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳ ಮೇಲೆ ಐವರು ಭಜರಂಗದಳದವರು ದಾಳಿ ನಡೆಸಿದ್ದರು. ಕಾರಿಂಜ ದೇವಾಲಯಕ್ಕೆ ಮುಸ್ಲಿಮ್ ಗೆಳೆಯರೊಂದಿಗೆ ಹಿಂದೂ ಹುಡುಗರು ಹೋಗಿದ್ದೇ ಅಪರಾಧವಾಗಿತ್ತು. ಈ ಘಟನೆಯಲ್ಲಿ ಮೂವರನ್ನು ಬಂಧಿಸಲಾಗಿದೆ.

ಹಿಂದುತ್ವದ ಹೆಸರಲ್ಲಿ ನಡೆಯುತ್ತಿರುವ ಅತಿರೇಕದ ಘಟನೆಗಳ ಸೂತ್ರಧಾರರು ಕ್ರಿಮಿನಲ್ ಆರೋಪ ಹೊತ್ತವರೆಂಬುದು ಗಮನಾರ್ಹ ಸಂಗತಿಯಾಗಿದೆ. ಈ ಭಯ ಹುಟ್ಟಿಸುವ ಸರಣಿ ಪ್ರಕರಣಗಳು ದಕ್ಷಿಣ ಕನ್ನಡದ ಸಾಮಾಜಿಕ ಬದುಕು, ವಾಣಿಜ್ಯ ವಹಿವಾಟು ಮತ್ತು ಪ್ರವಸೋದ್ಯಮಕ್ಕೆ ಗಂಡಾಂತರಕಾರಿಯಾಗಿವೆ. ಹೊರಗಿನ ಉದ್ಯಮಿಗಳು, ಪ್ರವಾಸಿಗರು ಜಿಲ್ಲೆಗೆ ಬರಲು ಹತ್ತು ಬಾರಿ ಯೋಚಿಸಬೇಕಾದ ಸ್ಥಿತಿ ಎದುರಾಗಿದೆ. ಮೋರಲ್‌ ಪೋಲಿಸಿಂಗ್‌ ಅಂತರ್ ರಾಜ್ಯ ಮತ್ತು ಅಂತರ್ ರಾಷ್ಟ್ರೀಯ ಹೂಡಿಕೆದಾರರನ್ನು ಹಿಮ್ಮೆಟ್ಟಿಸುತ್ತಿವೆ. ಈ ಅಸಂವಿಧಾನಿಕ ಘಟನೆಗಳಿಗೆ ಕಡಿವಾಣಹಾಕಬೇಕಿದ್ದ ಜಿಲ್ಲಾಡಳಿತ ಮತ್ತು ಪೊಲೀಸ್ ವ್ಯವಸ್ಥೆಯ ವೈಫಲ್ಯ ಎದ್ದು ಕಾಣುತ್ತಿದೆ.

– ಶುದ್ದೋಧನ


ಇದನ್ನೂ ಓದಿರಿ: ಮಂಗಳೂರಿನಲ್ಲಿ ಮತ್ತೆ ‘ಮಾರಲ್ ಪೊಲೀಸಿಂಗ್’ – ಬಜರಂಗದಳ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...