Homeಮುಖಪುಟಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

2021ರ ಜನವರಿಯಿಂದ ಇಲ್ಲಿಯವರೆಗೆ 12 ‘ಮೋರಲ್‌ ಪೊಲೀಸಿಂಗ್‌‌’ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಕಳೆದ ಭಾನುವಾರ ಸಂಜೆ ಸುರತ್ಕಲ್ ಟೋಲ್ ಗೇಟ್ ಬಳಿ ವೈದ್ಯಕೀಯ ವಿಧ್ಯಾರ್ಥಿಗಳ ಮೇಲೆ ಬಜರಂಗದಳದವರು ನಡೆಸಿದ ಅಮಾನವೀಯ ದಾಳಿಯು, ಲಾಕ್ ಡೌನ್ ತೆರವಿನ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಘಟಿಸಿದ ನಾಲ್ಕನೇ ‘ಮೋರಲ್‌ ಪೊಲೀಸಿಂಗ್‌’ ಪ್ರಕರಣವಾಗಿದೆ.

- Advertisement -
- Advertisement -

ವಾಣಿಜ್ಯ, ಶೈಕ್ಷಣಿಕ, ಬ್ಯಾಂಕಿಂಗ್, ಪ್ರವಾಸೋದ್ಯಮಗಳ ಸಮುದ್ರ ನಗರಿ ಮಂಗಳೂರು ಸಂಘಪರಿವಾರದ ಅನೈತಿಕ, ಅಸಂವಿಧಾನಿಕ ಚಟುವಟಿಕೆಗಳಿಂದ ತತ್ತರಿಸಿ ಹೋಗಿದೆ. ಇಡೀ ಜಿಲ್ಲೆಯಲ್ಲಿ ಮೋರಲ್‌ ಪೊಲೀಸಿಂಗ್‌ ಮಿತಿಮೀರಿ ಹೋಗಿದ್ದು, ಹಿಂದುತ್ವದ ಹೆಸರಲ್ಲಿ ದುಷ್ಕರ್ಮಿಗಳು ಆಟಾಟೋಪ ಮುಂದುವರಿಸಿದ್ದು, ಅಭಿವೃದ್ಧಿ ಮತ್ತು ಮಾನವೀಯತೆ ಸವಾಲಾಗಿ ನಿಂತಿದೆ.

2021ರ ಜನವರಿಯಿಂದ ಇಲ್ಲಿಯವರೆಗೆ 12 ‘ಮೋರಲ್‌ ಪೊಲೀಸಿಂಗ್‌‌’ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಕಳೆದ ಭಾನುವಾರ ಸಂಜೆ ಸುರತ್ಕಲ್ ಟೋಲ್ ಗೇಟ್ ಬಳಿ ವೈದ್ಯಕೀಯ ವಿಧ್ಯಾರ್ಥಿಗಳ ಮೇಲೆ ಬಜರಂಗದಳದವರು ನಡೆಸಿದ ಅಮಾನವೀಯ ದಾಳಿಯು, ಲಾಕ್ ಡೌನ್ ತೆರವಿನ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಘಟಿಸಿದ ನಾಲ್ಕನೇ ‘ಮೋರಲ್‌ ಪೊಲೀಸಿಂಗ್‌’ ಪ್ರಕರಣವಾಗಿದೆ.

ಭಾನುವಾರ ಮಂಗಳೂರಿನ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಮತ್ತು ಓರ್ವ ವಿದ್ಯಾರ್ಥಿನಿ ಇದ್ದ ಜೀಪನ್ನು ತಡೆದು ನಿಲ್ಲಿಸಿದ್ದ ಬಜರಂಗ ದಳದ ಜಿಲ್ಲಾ ಪ್ರಮುಖನೆನ್ನಲಾದ ಪ್ರೀತಮ್ ಶೆಟ್ಟಿ, ಸುರತ್ಕಲ್ ಬಜರಂಗದಳದ ಮುಂದಾಳು ಆರ್ಶಿತ್, ಶ್ರೀನಿವಾಸ್, ರಾಕೇಶ್, ಅಭಿಷೇಕ್ ಎಂಬವರ ತಂಡ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿದೆ.

ಇದನ್ನೂ ಓದಿರಿ: ಬಜರಂಗದಳದ ‘ಮೋರಲ್ ಪೊಲೀಸಿಂಗ್’ ಅನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕಿಗೆ ಬಹಿರಂಗ ಬೆದರಿಕೆ

ಈ ಪ್ರಕರಣದಲ್ಲಿ ಐವರು ಹಲ್ಲೆಕೋರರನ್ನು ಬಂಧಿಸಲಾಗಿದೆ. ಪೊಲೀಸ್ ಇನ್‌ಸ್ಪೆಕ್ಟರ್‌‌ ಒಬ್ಬರ ಕಣ್ಣೆದುರೆ ದಾಂಧಲೆಯಾಗಿದ್ದರೂ ಆ ಪೊಲೀಸ್ ಅಧಿಕಾರಿ ಹಲ್ಲೆ ತಡೆದಿದ್ದರೂ ಆರೋಪಿಗಳನ್ನು ಬಂಧಿಸಲು ಮೀನಮೇ಼ಷ ಎಣಿಸಿದ್ದರು. ಭಜರಂಗ ದಳದವರು ತಾವು ಸುರತ್ಕಲ್ ಟೋಲ್ ಗೇಟ್‌ನಲ್ಲಿ ಮಾಡಿದ್ದ ‘ಧರ್ಮ ರಕ್ಷಣೆ’ ಹೆಸರಿನ ದುಷ್ಕೃತ್ಯವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಾಗ ವೈರಲ್ ಆಯಿತು. ಆಗ ಅನಿವಾರ್ಯವಾಗಿ ಆರೋಪಿಗಳನ್ನು ದಸ್ತಗಿರಿ ಮಾಡಲಾಯಿತು. ಅಂದರೆ ಆರೋಪಿಗಳು ಕಣ್ಣೆದುರಿದ್ದರೂ ಸೋಮವಾರ ಸಂಜೆಯ ವರೆಗೆ ಬಂಧನವಾಗಿರಲಿಲ್ಲ. ಆಳುವ ಬಿಜೆಪಿಯ ಬೆಂಬಲಿತ ಸಂಘಟನೆಗೆ ಆರೋಪಿಗಳು ಸೇರಿದ್ದರಿಂದ ಪೊಲೀಸರು ಕೈಕಟ್ಟಿ ಕೂತಿದ್ದರು ಎಂಬುದು ಬಹಿರಂಗ ರಹಸ್ಯ! ಸ್ವಯಂ ಪ್ರೇರಣೆಯಿಂದ ಕೇಸು ದಾಖಲಿಸಬೇಕಿದ್ದ ಸುರತ್ಕಲ್ ಪೊಲೀಸರು ಹಲ್ಲೆಗೀಡಾದ ವಿದ್ಯಾರ್ಥಿಯಿಂದ ದೂರು ಪಡೆದ ನಂತರವೇ ಬಂಧನದ ಪ್ರಹಸನ ಮಾಡಿದ್ದಾರೆ ಎಂದು ‘ಮೋರಲ್‌ ಪೊಲಿಸಿಂಗ್‌’ನ ಆತಂಕಗಳನ್ನು ಎದುರಿಸುತ್ತಿರುವ ಮಂಗಳೂರಿನ ಜನರು ಹೇಳುತ್ತಾರೆ.

ಸೆಪ್ಟೆಂಬರ್‌ನಲ್ಲಿ ಪುತ್ತೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್‌ನಲ್ಲಿ ಸ್ಥಳೀಯ ಮುಸ್ಲಿಮ್ ಹುಡುಗ ಮತ್ತು ಬೆಂಗಳೂರು ಮೂಲದ ಇಬ್ಬರು ಮಹಿಳೆಯರು ಮಾತನಾಡಿದರೆಂಬ ಕಾರಣಕ್ಕೆ ಸಂಘ ಪರಿವಾರದ ಸಂಘಟನೆಯವರು ರಂಪಾಟ ಎಬ್ಬಿಸಿ ಹಲ್ಲೆ ಮಾಡಿದ್ದರು. ಇದರ ಬೆನ್ನಿಗೆ ಬಂಟ್ವಾಳದಲ್ಲಿ ಆರು ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳ ಮೇಲೆ ಐವರು ಭಜರಂಗದಳದವರು ದಾಳಿ ನಡೆಸಿದ್ದರು. ಕಾರಿಂಜ ದೇವಾಲಯಕ್ಕೆ ಮುಸ್ಲಿಮ್ ಗೆಳೆಯರೊಂದಿಗೆ ಹಿಂದೂ ಹುಡುಗರು ಹೋಗಿದ್ದೇ ಅಪರಾಧವಾಗಿತ್ತು. ಈ ಘಟನೆಯಲ್ಲಿ ಮೂವರನ್ನು ಬಂಧಿಸಲಾಗಿದೆ.

ಹಿಂದುತ್ವದ ಹೆಸರಲ್ಲಿ ನಡೆಯುತ್ತಿರುವ ಅತಿರೇಕದ ಘಟನೆಗಳ ಸೂತ್ರಧಾರರು ಕ್ರಿಮಿನಲ್ ಆರೋಪ ಹೊತ್ತವರೆಂಬುದು ಗಮನಾರ್ಹ ಸಂಗತಿಯಾಗಿದೆ. ಈ ಭಯ ಹುಟ್ಟಿಸುವ ಸರಣಿ ಪ್ರಕರಣಗಳು ದಕ್ಷಿಣ ಕನ್ನಡದ ಸಾಮಾಜಿಕ ಬದುಕು, ವಾಣಿಜ್ಯ ವಹಿವಾಟು ಮತ್ತು ಪ್ರವಸೋದ್ಯಮಕ್ಕೆ ಗಂಡಾಂತರಕಾರಿಯಾಗಿವೆ. ಹೊರಗಿನ ಉದ್ಯಮಿಗಳು, ಪ್ರವಾಸಿಗರು ಜಿಲ್ಲೆಗೆ ಬರಲು ಹತ್ತು ಬಾರಿ ಯೋಚಿಸಬೇಕಾದ ಸ್ಥಿತಿ ಎದುರಾಗಿದೆ. ಮೋರಲ್‌ ಪೋಲಿಸಿಂಗ್‌ ಅಂತರ್ ರಾಜ್ಯ ಮತ್ತು ಅಂತರ್ ರಾಷ್ಟ್ರೀಯ ಹೂಡಿಕೆದಾರರನ್ನು ಹಿಮ್ಮೆಟ್ಟಿಸುತ್ತಿವೆ. ಈ ಅಸಂವಿಧಾನಿಕ ಘಟನೆಗಳಿಗೆ ಕಡಿವಾಣಹಾಕಬೇಕಿದ್ದ ಜಿಲ್ಲಾಡಳಿತ ಮತ್ತು ಪೊಲೀಸ್ ವ್ಯವಸ್ಥೆಯ ವೈಫಲ್ಯ ಎದ್ದು ಕಾಣುತ್ತಿದೆ.

– ಶುದ್ದೋಧನ


ಇದನ್ನೂ ಓದಿರಿ: ಮಂಗಳೂರಿನಲ್ಲಿ ಮತ್ತೆ ‘ಮಾರಲ್ ಪೊಲೀಸಿಂಗ್’ – ಬಜರಂಗದಳ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...