Homeಮುಖಪುಟಪೊಲೀಸ್‌ ಎನ್‌ಕೌಂಟರ್‌ ಅನ್ನು ಪ್ರಶ್ನಿಸುತ್ತಿರುವ ಹತರಾದ ಆರೋಪಿಗಳ ಕುಟುಂಬಗಳು...

ಪೊಲೀಸ್‌ ಎನ್‌ಕೌಂಟರ್‌ ಅನ್ನು ಪ್ರಶ್ನಿಸುತ್ತಿರುವ ಹತರಾದ ಆರೋಪಿಗಳ ಕುಟುಂಬಗಳು…

- Advertisement -
- Advertisement -

ತೆಲಂಗಾಣ ಪಶುವೈದ್ಯೆ ಮೇಲಿನ ಅತ್ಯಾಚಾರ ಆರೋಪಿಗಳನ್ನು ಎನ್‌ಕೌಂಟರ್‌ ಮಾಡಿದ್ದಕ್ಕೆ ಪೊಲೀಸರನ್ನು ಬಹಳಷ್ಟು ಜನ ಶ್ಲಾಘಿಸುತ್ತಿದ್ದರೆ ಇತ್ತ ಹತರಾದ ಆರೋಪಿಗಳ ಕುಟುಂಬದವರು ಪೊಲೀಸರ ಕ್ರಮವನ್ನು ತೀವ್ರವಾಗಿ ವಿರೋಧಿಸುತ್ತಿದ್ದಾರೆ.

ಕೊಲ್ಲಲ್ಪಟ್ಟ ನಾಲ್ವರಲ್ಲಿ ಒಬ್ಬರಾದ ಚಿಂತಕುಂಟ ಚೆನ್ನಕೇಶವಲು ಅವರ ಪತ್ನಿ ಹದಿನೇಳು ವರ್ಷದ ರೇಣುಕಾ  “ನನ್ನನ್ನು ಅದೇ ಸ್ಥಳಕ್ಕೆ ಕರೆದುಕೊಂಡು ಹೋಗಿ ನನ್ನನ್ನೂ ಕೊಲ್ಲಿ. ಅವನು ಇಲ್ಲದೆ ನಾನು ಬದುಕಲು ಸಾಧ್ಯವಿಲ್ಲ. ನಾನು ಸಾಯಲು ಬಯಸುತ್ತೇನೆ” ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ.

ನಾರಾಯಣಪೇಟೆ ಜಿಲ್ಲೆಯ ಮಕ್ತಾಲ್ ಬ್ಲಾಕ್‌ನ ಗುಡಿಗಂಡ್ಲಾ ಗ್ರಾಮದ ಚೆನ್ನಕೇಶವಲು (20) ಮದುವೆಯಾದ ನಾಲ್ವರು ಆರೋಪಿಗಳಲ್ಲಿ ಒಬ್ಬನಾಗಿದ್ದಾನೆ. ಎನ್‌ಕೌಂಟರ್‌ನಲ್ಲಿ ಅವರ ಸಾವಿನ ಬಗ್ಗೆ ತಿಳಿದ ನಂತರ ಅವರ ಕುಟುಂಬವು ಆಘಾತದ ಸ್ಥಿತಿಯಲ್ಲಿತ್ತು.

ಪೊಲೀಸರು ನನ್ನ ಪತಿಯನ್ನು ಕರೆದುಕೊಂಡು ಹೋಗಿದ್ದು, ವಿಚಾರಣೆ ನಡೆಸಿದ ನಂತರ ವಾಪಸ್ ಕರೆತರುವುದಾಗಿ ಭರವಸೆ ನೀಡಿದ್ದರು. “ಆದರೆ ಈಗ ಅವರು ಅವನನ್ನು ನಿರ್ದಯವಾಗಿ ಕೊಂದಿದ್ದಾರೆ. ನನ್ನ ಗಂಡನನ್ನು ಹಿಂತಿರುಗಿಸಲು ನಾನು ಬಯಸುತ್ತೇನೆ ಅಥವಾ ಪೊಲೀಸರು ನನ್ನನ್ನು ಅದೇ ಸ್ಥಳದಲ್ಲಿ ಕೊಲ್ಲಬೇಕು. ಆತನಿಲ್ಲದೆ ನಾನು ಬದುಕಲು ಸಾಧ್ಯವಿಲ್ಲ ”ಎಂದು ಅವರು ಗ್ರಾಮದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಚೆನ್ನಕೇಶವಲು ಅವರನ್ನು ಮದುವೆಯಾಗಿ ಒಂದು ವರ್ಷವೂ ಆಗಿಲ್ಲ. “ಈಗ, ಪೊಲೀಸರು ನನ್ನ ಗಂಡನನ್ನು ನನ್ನಿಂದ ಇಲ್ಲವಾಗಿಸಿದ್ದಾರೆ” ಎಂದು ಗರ್ಭಧಾರಣೆಯ ಆರಂಭಿಕ ತಿಂಗಳುಗಳಲ್ಲಿರುವ ರೇಣುಕಾ ವಿಷಾದಿಸಿದ್ದಾರೆ.

ರೇಣುಕಾ ತನ್ನ ಪತಿ ಮೃದು ಮತ್ತು ಶಾಂತ ವ್ಯಕ್ತಿ ಎಂದು ಹೇಳಿದರು. “ಆದರೆ ಅವನು ಇತರರೊಂದಿಗೆ ಸಿಕ್ಕಿಬಿದ್ದಿ, ಆರೋಪಿಯಾಗಿದ್ದನು. ಅವನು ನಿಜವಾಗಿಯೂ ಅಪರಾಧ ಮಾಡಿದ್ದರೆ, ನ್ಯಾಯಾಲಯಗಳು ತೀರ್ಮಾನಿಸಿ ಅವನಿಗೆ ಮರಣದಂಡನೆ ವಿಧಿಸಲಿ. ನಾನು ಸಹ ಅತ್ಯಾಚಾರಕ್ಕೊಳಗಾದ ಮತ್ತು ಕೊಲ್ಲಲ್ಪಟ್ಟ ಪಶುವೈದ್ಯೆಯಂತೆಯೇ ಹೆಣ್ಣಲ್ಲವೇ?” ಎಂದು ಪ್ರಶ್ನಿಸಿದ್ದಾಳೆ.

ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ ಅದೇ ಹಳ್ಳಿಯ ಮತ್ತೊಬ್ಬ ಆರೋಪಿ ಜೊಲ್ಲು ಶಿವನ ತಂದೆ ಜೊಲ್ಲು ರಾಜಪ್ಪ, ತನ್ನ ಮಗನನ್ನು ಕೊಂದಿದ್ದಕ್ಕಾಗಿ ಪೊಲೀಸರಲ್ಲಿ ದೂಷಿಸುವುದಿಲ್ಲ ಎಂದಿದ್ದಾರೆ. “ನನ್ನ ಮಗ ಘೋರ ಅಪರಾಧ ಮಾಡಿದ್ದಾನೆಂದು ಇಡೀ ಜಗತ್ತು ಹೇಳುತ್ತಿದೆ. ನಾಲ್ವರಲ್ಲಿ ಒಬ್ಬರು ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಕೊಂದಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ. ಈಗ, ನನ್ನ ಮಗನಿಗೆ ಶಿಕ್ಷೆ ಸಿಕ್ಕಿತು, ”ಎಂದು ಅವರು ಹೇಳಿದ್ದಾರೆ.

ಆದಾಗ್ಯೂ, ಇದುವರೆಗೂ ಎಲ್ಲಾ ಅತ್ಯಾಚಾರಿಗಳು ಮತ್ತು ಕೊಲೆಗಡುಗರಿಕೆ ಪೊಲೀಸರು ಇದೇ ರೀತಿಯ ಶಿಕ್ಷೆಯನ್ನು ನೀಡಿದ್ದಾರೆಯೇ ಎಂದು ತಿಳಿಯಲು ರಾಜಪ್ಪ ಪ್ರಶ್ನಿಸಿದ್ದಾರೆ. “ನನ್ನ ಮಗ ಮಾಡಿದ ಅಪರಾಧಕ್ಕಾಗಿ ಆತನಿಗೆ ಪೊಲೀಸರು ಕೊಲ್ಲಲು ಸಾಧ್ಯವಾದರೆ, ಪೊಲೀಸರು ಇತರ ಅತ್ಯಾಚಾರಿಗಳಿಗೂ ಇದೇ ರೀತಿಯ ಶಿಕ್ಷೆಯನ್ನು ವಿಧಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಜೊಲ್ಲು ನವೀನ್ ಅವರ ತಂದೆ ಯೆಲ್ಲಪ್ಪ ಇದನ್ನು ಪೊಲೀಸರು ದ್ವೇಷದ ಹತ್ಯೆ ಎಂದು ಬಣ್ಣಿಸಿದ್ದಾರೆ. “ಇದುವರೆಗೂ ನನ್ನ ಮಗನನ್ನು ಭೇಟಿಯಾಗಲು ಮತ್ತು ಅವನೊಂದಿಗೆ ಮಾತನಾಡಲು ಪೊಲೀಸರು ನಮಗೆ ಅವಕಾಶ ನೀಡಲಿಲ್ಲ. ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ಅವನು ಮತ್ತು ಇತರರು ತಪ್ಪಿತಸ್ಥರೆಂದು ಸಾಬೀತುಪಡಿಸಲು ಅವರಿಗೆ ಸಾಕಷ್ಟು ಸಮಯವಿತ್ತು. ಕಾನೂನು ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಮೊದಲೇ ಅವರು ಯಾಕೆ ಅವರನ್ನು ಶಿಕ್ಷಿಸಿದರು? ”ಎಂದು ಅವರು ಕೇಳಿದ್ದಾರೆ.

ಪ್ರಧಾನ ಆರೋಪಿ ಮೊಹಮ್ಮದ್ ಆರಿಫ್ ಅವರ ತಾಯಿ ಜಕ್ಕುಲಾರೆ ಗ್ರಾಮದ ಪುತ್ರನ ಸಾವಿನ ಸುದ್ದಿ ಕೇಳಿ ಕುಸಿದು ಸುದ್ದಿಗಾರರೊಂದಿಗೆ ಮಾತನಾಡಲು ನಿರಾಕರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...