Homeಮುಖಪುಟವಿರೋಧ ಅಂದರೇನು, ವಿರೋಧ ಪಕ್ಷ ಅಂದರ ಏನು? ನಿಮಗೇನಾರ ಗೊತ್ತಾ?

ವಿರೋಧ ಅಂದರೇನು, ವಿರೋಧ ಪಕ್ಷ ಅಂದರ ಏನು? ನಿಮಗೇನಾರ ಗೊತ್ತಾ?

- Advertisement -
- Advertisement -

ನಿಮ್ಮಲ್ಲಿ ವಿರೋಧ ಪಕ್ಷದ ಪರವಾಗಿ ಇರುವವರು ಯಾರು? ಹೋಗಲಿ ವಿರೋಧ ಪಕ್ಷ ಅಂದರ ಏನು? ಹೋಗಲಿ ಆತಲಾಗ ವಿರೋಧ ಅಂದ್ರ ಏನು ?

ಈ ಗಹನವಾದ ವಿಷಯ ಇಂದಿನ ಖೋಲಿಯ ವಸ್ತು.

ರಾಜಕೀಯ ಶಾಸ್ತ್ರ ಓದೋ ಹುಡುಗರ ನಡುವ ಒಂದು ಬಹುಚರ್ಚಿತ ಮಾತು ಐತಿ : “ನಮ್ಮ ಸಂವಿಧಾನದಾಗ ಆಡಳಿತ ಪಕ್ಷ ಅನ್ನೋ ಪದ ಇಲ್ಲಾ. ಆದರ ವಿರೋಧ ಪಕ್ಷ ಅನ್ನೋ ಪದ ಐತಿ’. ಈ ಮಾತು ಯಾಕ ಹೇಳತಾರ ಅಂದ್ರ, “ಭಾರತ ಅನ್ನೋದು ಆಡಳಿತ ಪಕ್ಷ ಕೇಂದ್ರಿತ ಪ್ರಜಾಪ್ರಭುತ್ವ ಅಲ್ಲ, ಅದು ಸಮ್ಮಿಳಿತ ಪ್ರಜಾಪ್ರಭುತ್ವ, ಇದರಲ್ಲಿ ವಿರೋಧ ಪಕ್ಷಕ್ಕೆ ಭಾಳ ಪ್ರಾಮುಖ್ಯತೆ ಇದೆ’ ಅಂತ ತಿಳಿಸಲಿಕ್ಕೆ.

ಬ್ರಿಟಿಷ್ ಸರ್ಕಾರದಾಗ ವಿರೋಧ ಪಕ್ಷ ಅಂದ್ರ ಬಹಳ ಗೌರವ. ವಿರೋಧ ಪಕ್ಷದ ನಾಯಕನಿಗೆ ಛಾಯಾ ಪ್ರಧಾನಿ ಅಂತ, ಇತರ ನಾಯಕರಿಗೆ ಛಾಯಾ ಕೃಷಿ ಸಚಿವ, ಛಾಯಾ ಹಣಕಾಸು ಸಚಿವ, ಛಾಯಾ ರಕ್ಷಣಾ ಸಚಿವ, ಇತ್ಯಾದಿ ಹೆಸರುಗಳಿಂದ ಕರೀತಾರ.

ಅವರು ತಮಗೆ ವಹಿಸಿಕೊಟ್ಟ ವಿಷಯಗಳ ಬಗ್ಗೆ ಆಳವಾಗಿ ಅಧ್ಯಯನ ಮಾಡಿ ಸಂಸತ್ತಿನಲ್ಲಿ ಮಾತಾಡತಾರ. ಅಲ್ಲದೇ ಪ್ರತಿ ಬಾರಿ ಆ ಕ್ಷೇತ್ರದ ಬಗ್ಗೆ ಸರಕಾರ ಏನಾದರೂ ಹೊಸಾ ನೀತಿ ಮಾಡಿದರ, ಅಥವಾ ಬದಲಾವಣೆ ಮಾಡಿದರ, ಅದಕ್ಕ ಸಂಬಂಧ ಪಟ್ಟ ಛಾಯಾ ಸಚಿವರು ಮಾತಾಡತಾರ. ನಮ್ಮಲ್ಲಿ ಹಂಗ ಯಾರಾರರ, ಏನೇನರ ತಲಿಯೊಳಗ ಒಂದು- ಒಂದು ಮಾತಾಡೋದಿಲ್ಲ.

ಹಂಗಾರ ನಮ್ಮ ಹಿರಿಯರೆಲ್ಲ – ಯಾರು ಯಾರು ಈ ದೇಶದ ಸ್ವಾತಂತ್ರ್ಯದ ಸಲುವಾಗಿ ಮನಿ ಬಿಟ್ಟು ಓಡಿಹೋಗಿ, ಸಾಲಿ, ನೌಕರಿ ಬಿಟ್ಟು ವರ್ಷಗಟ್ಟಲೆ ತಪ್ಪಿಸಿಕೊಂಡು ಅಡ್ಡಾಡಿದವರು- ಈ ದೇಶದ ಸರ್ಕಾರದ ಸ್ವರೂಪ ಹೆಂಗ ಇರಬೇಕು ಅಂತ ನಿರ್ಧಾರ ಮಾಡಿದಾಗ ಅವರ ತಲಿಯೊಳಗ ಏನು ಇತ್ತು?

ಅವರಿಗೆ ಈ ದೇಶ ಬಹಳ ದೊಡ್ಡದು, ಅದನ್ನ ಸರಿಯಾಗಿ ನಡಸಬೇಕು ಅಂದ್ರ ಇದು ಬಹುಜನರ ಸರಕಾರದಿಂದ ಮಾತ್ರ ಸಾಧ್ಯ ಅನ್ನೋದು ಗೊತ್ತಿತ್ತು. ಚುನಾವಣೆ ಅನ್ನೋದು ಲಕ್ ಬೈ ಛಾನ್ಸ್ ಅನ್ನೋದು ಗೊತ್ತಿತ್ತು. ಬರೇ ಒಂದು ವೋಟಿನಿಂದ ಗೆದ್ದ ಮನಿಶಾ ಜನರ ಪ್ರತಿನಿಧಿ ಆಗಿಬಿಡೋದು, ಸೋತವ ಮೂಲಿ ಒಳಗ ಕೂಡೋದು, ಅದು ತಪ್ಪು ಅಂತ ಅವರಿಗೆ ಗೊತ್ತಿತ್ತು.

ನಮ್ಮ ದೇಶದ ಮುಂದಿನ ದಾರಿ ನಿರ್ಧಾರ ಮಾಡೋವಾಗ ಎಲ್ಲಾ ಮತದಾರರ ಅಭಿಪ್ರಾಯವನ್ನೂ ಪರಿಗಣಿಸಬೇಕು, ವಿರೋಧ ಪಕ್ಷದವರೂ ಇಲ್ಲಿ ಅಮುಖ್ಯರಲ್ಲ ಅಂತ ಅವರು ಠರಾವಿಸಿದ್ದರು.

ಹೀಂಗೇ ಮುಂದುವರೆದು ಸರಕಾರ ಅಂದ್ರ ಬರೇ ಕಾಯಾಂಗ ಅಲ್ಲ. ಅದರಾಗ ಮೂರು ಅಂಗ ಆದವು. ಅವು ಎಲ್ಲವೂ ಮುಖ್ಯ ಅಂದ್ರು. ಒಂದು ಹೆಜ್ಜಿ ಮುಂದ ಹೋಗಿ ಶಾಸಕಾಂಗ ಅನ್ನೋದು ಕಾಯಾಂಗಕ್ಕಿಂತ ಮುಖ್ಯ ಅಂತ ತಿಳಿಸಿ ಹೇಳಿದರು. ಕಾಯಾಂಗ ಅನ್ನೋದು ಶಾಸಕಾಂಗದ ಕೈ ಗೊಂಬೆ, ಅದನ್ನು ಇದು ಯಾವಾಗ ಬೇಕಾದಾದರೂ ಬೀಳಿಸಬಹುದು ಅಂತ ಸಾರಿದರು.

ಸಂವಿಧಾನದ ಪ್ರಕಾರ ವಿರೋಧ ಪಕ್ಷದ ಕೆಲಸ ಏನು ಅಂದರೆ ೧. ಸರ್ಕಾರದ ನೀತಿ- ನಿಯಮಗಳ ಸರಿ- ತಪ್ಪುಗಳ ವಿಮರ್ಶೆ ಮಾಡೋದು, ೨. ಯೋಜನೆ ಜಾರಿ ಬಗ್ಗೆ ತಮ್ಮ ಅಭಿಪ್ರಾಯ ತಿಳಸೋದು, ೩. ಸದನದೊಳಗ ಜನರ ದನಿ ಆಗೋದು ೪. ತೆರಿಗೆ ಹಣದ ಸರಿಯಾದ ಬಳಕೆ ಅಗೇದೋ ಇಲ್ಲೋ ನೋಡೋದು, ಮತ್ತು ಆಳುವವರು ಶಾಸಕರ ವಿಶ್ವಾಸ ಕಳೆದುಕೊಂಡರ ಅವರನ್ನ ತಕ್ಷಣಕ್ಕೆ ಮನಿಗೆ ಕಳಸೋದು, ಹೊಸಾ ನಾಯಕನ್ನ ಆಯ್ಕೆ ಮಾಡೋದು.

ಸರಕಾರ ಅನ್ನುವುದು, ಅದು ಯಾರದೇ ಇರಲಿ, ಅದನ್ನ, ಅದರ ಸರಿ- ತಪ್ಪುಗಳನ್ನ, ಅದರ ಜನಪರ ಹಾಗೂ ಜನ ವಿರೋಧಿ ನೀತಿ, ಅಥವಾ ಕಾರ್ಯಕ್ರಮಗಳ ಜಾರಿಗಳ ಬಗ್ಗೆ ಮಾತಾಡುವುದು ವಿರೋಧ ಪಕ್ಷದ ಮೂಲಭೂತ ಹಕ್ಕು. ಬಾಹುಳ್ಯದ ಪ್ರಜಾಪ್ರಭುತ್ವದಲ್ಲಿ ಇದು ಅವರ ಪವಿತ್ರ ಹಕ್ಕು. ಅದನ್ನು ಮಾಡದಿದ್ದರೆ ಅವರು ತಪ್ಪು ಮಾಡಿದಂಗೆ. ಅವರು ಜನರಿಗೆ ನೀಡಿದ ಜವಾಬುದಾರಿಯನ್ನು ತಪ್ಪಿಸಿಕೊಂಡಂತೆ.

ಇದನ್ನೆಲ್ಲಾ ಯಾಕ ಹೇಳಬೇಕಾತು ಅಂದ್ರ ಮೊನ್ನೆ ನಮ್ಮ ಗೃಹ ಸಚಿವ ಅಮಿತ್ ಷಾ ಅವರು ಆಡಳಿತ ಪಕ್ಷದ ಬಗ್ಗೆ ಮಾತಾಡೋ ವಿರೋಧ ಪಕ್ಷದವರು ಮೊದಲು ತಾವು ಏನು ಮಾಡಿದಾರ ಅನ್ನೋದು ತೋರಿಸಕೊಡಬೇಕು ಅಂತ ಫರಮಾನು ಕೊಟ್ಟಾರ.

ಅಂತವರಿಗೆ ಒಂಚೂರು ಬ್ರಿಟನ್‌ನ ಗಾರ್ಡಿಯನ ಪತ್ರಿಕೆಯ ಬಗ್ಗೆ ಹೇಳಬೇಕು. ಅವರು ಪ್ರತಿ ಚುನಾವಣೆಯ ನಂತರ ಈ ಪಕ್ಷ ಬಹುಮತ ಪಡೆದು ಆಳುವ ಪಕ್ಷವಾಗಿದೆ. ಆ ಪಕ್ಷ ವಿರೋಧ ಪಕ್ಷವಾಗಿ ಜನರ ಪಕ್ಷವಾಗಿದೆ ಅಂತ ಘೋಷಿಸುವ ಪರಂಪರೆ ಹೊಂದಿದೆ. ತನ್ನನ್ನು ತಾನು ಸರ್ವಕಾಲಿಕ ವಿರೋಧ ಪಕ್ಷ ಅಂತ ಹೇಳಿಕೊಂಡಿದೆ.

ಇದು ಸದನದ ಎಡಗಡೆ, ಬಲಗಡೆ ಕೂಡುವ ಎಲ್ಲರಿಗೂ ತಿಳಿಯಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...