Homeಮುಖಪುಟವಿರೋಧ ಅಂದರೇನು, ವಿರೋಧ ಪಕ್ಷ ಅಂದರ ಏನು? ನಿಮಗೇನಾರ ಗೊತ್ತಾ?

ವಿರೋಧ ಅಂದರೇನು, ವಿರೋಧ ಪಕ್ಷ ಅಂದರ ಏನು? ನಿಮಗೇನಾರ ಗೊತ್ತಾ?

- Advertisement -
- Advertisement -

ನಿಮ್ಮಲ್ಲಿ ವಿರೋಧ ಪಕ್ಷದ ಪರವಾಗಿ ಇರುವವರು ಯಾರು? ಹೋಗಲಿ ವಿರೋಧ ಪಕ್ಷ ಅಂದರ ಏನು? ಹೋಗಲಿ ಆತಲಾಗ ವಿರೋಧ ಅಂದ್ರ ಏನು ?

ಈ ಗಹನವಾದ ವಿಷಯ ಇಂದಿನ ಖೋಲಿಯ ವಸ್ತು.

ರಾಜಕೀಯ ಶಾಸ್ತ್ರ ಓದೋ ಹುಡುಗರ ನಡುವ ಒಂದು ಬಹುಚರ್ಚಿತ ಮಾತು ಐತಿ : “ನಮ್ಮ ಸಂವಿಧಾನದಾಗ ಆಡಳಿತ ಪಕ್ಷ ಅನ್ನೋ ಪದ ಇಲ್ಲಾ. ಆದರ ವಿರೋಧ ಪಕ್ಷ ಅನ್ನೋ ಪದ ಐತಿ’. ಈ ಮಾತು ಯಾಕ ಹೇಳತಾರ ಅಂದ್ರ, “ಭಾರತ ಅನ್ನೋದು ಆಡಳಿತ ಪಕ್ಷ ಕೇಂದ್ರಿತ ಪ್ರಜಾಪ್ರಭುತ್ವ ಅಲ್ಲ, ಅದು ಸಮ್ಮಿಳಿತ ಪ್ರಜಾಪ್ರಭುತ್ವ, ಇದರಲ್ಲಿ ವಿರೋಧ ಪಕ್ಷಕ್ಕೆ ಭಾಳ ಪ್ರಾಮುಖ್ಯತೆ ಇದೆ’ ಅಂತ ತಿಳಿಸಲಿಕ್ಕೆ.

ಬ್ರಿಟಿಷ್ ಸರ್ಕಾರದಾಗ ವಿರೋಧ ಪಕ್ಷ ಅಂದ್ರ ಬಹಳ ಗೌರವ. ವಿರೋಧ ಪಕ್ಷದ ನಾಯಕನಿಗೆ ಛಾಯಾ ಪ್ರಧಾನಿ ಅಂತ, ಇತರ ನಾಯಕರಿಗೆ ಛಾಯಾ ಕೃಷಿ ಸಚಿವ, ಛಾಯಾ ಹಣಕಾಸು ಸಚಿವ, ಛಾಯಾ ರಕ್ಷಣಾ ಸಚಿವ, ಇತ್ಯಾದಿ ಹೆಸರುಗಳಿಂದ ಕರೀತಾರ.

ಅವರು ತಮಗೆ ವಹಿಸಿಕೊಟ್ಟ ವಿಷಯಗಳ ಬಗ್ಗೆ ಆಳವಾಗಿ ಅಧ್ಯಯನ ಮಾಡಿ ಸಂಸತ್ತಿನಲ್ಲಿ ಮಾತಾಡತಾರ. ಅಲ್ಲದೇ ಪ್ರತಿ ಬಾರಿ ಆ ಕ್ಷೇತ್ರದ ಬಗ್ಗೆ ಸರಕಾರ ಏನಾದರೂ ಹೊಸಾ ನೀತಿ ಮಾಡಿದರ, ಅಥವಾ ಬದಲಾವಣೆ ಮಾಡಿದರ, ಅದಕ್ಕ ಸಂಬಂಧ ಪಟ್ಟ ಛಾಯಾ ಸಚಿವರು ಮಾತಾಡತಾರ. ನಮ್ಮಲ್ಲಿ ಹಂಗ ಯಾರಾರರ, ಏನೇನರ ತಲಿಯೊಳಗ ಒಂದು- ಒಂದು ಮಾತಾಡೋದಿಲ್ಲ.

ಹಂಗಾರ ನಮ್ಮ ಹಿರಿಯರೆಲ್ಲ – ಯಾರು ಯಾರು ಈ ದೇಶದ ಸ್ವಾತಂತ್ರ್ಯದ ಸಲುವಾಗಿ ಮನಿ ಬಿಟ್ಟು ಓಡಿಹೋಗಿ, ಸಾಲಿ, ನೌಕರಿ ಬಿಟ್ಟು ವರ್ಷಗಟ್ಟಲೆ ತಪ್ಪಿಸಿಕೊಂಡು ಅಡ್ಡಾಡಿದವರು- ಈ ದೇಶದ ಸರ್ಕಾರದ ಸ್ವರೂಪ ಹೆಂಗ ಇರಬೇಕು ಅಂತ ನಿರ್ಧಾರ ಮಾಡಿದಾಗ ಅವರ ತಲಿಯೊಳಗ ಏನು ಇತ್ತು?

ಅವರಿಗೆ ಈ ದೇಶ ಬಹಳ ದೊಡ್ಡದು, ಅದನ್ನ ಸರಿಯಾಗಿ ನಡಸಬೇಕು ಅಂದ್ರ ಇದು ಬಹುಜನರ ಸರಕಾರದಿಂದ ಮಾತ್ರ ಸಾಧ್ಯ ಅನ್ನೋದು ಗೊತ್ತಿತ್ತು. ಚುನಾವಣೆ ಅನ್ನೋದು ಲಕ್ ಬೈ ಛಾನ್ಸ್ ಅನ್ನೋದು ಗೊತ್ತಿತ್ತು. ಬರೇ ಒಂದು ವೋಟಿನಿಂದ ಗೆದ್ದ ಮನಿಶಾ ಜನರ ಪ್ರತಿನಿಧಿ ಆಗಿಬಿಡೋದು, ಸೋತವ ಮೂಲಿ ಒಳಗ ಕೂಡೋದು, ಅದು ತಪ್ಪು ಅಂತ ಅವರಿಗೆ ಗೊತ್ತಿತ್ತು.

ನಮ್ಮ ದೇಶದ ಮುಂದಿನ ದಾರಿ ನಿರ್ಧಾರ ಮಾಡೋವಾಗ ಎಲ್ಲಾ ಮತದಾರರ ಅಭಿಪ್ರಾಯವನ್ನೂ ಪರಿಗಣಿಸಬೇಕು, ವಿರೋಧ ಪಕ್ಷದವರೂ ಇಲ್ಲಿ ಅಮುಖ್ಯರಲ್ಲ ಅಂತ ಅವರು ಠರಾವಿಸಿದ್ದರು.

ಹೀಂಗೇ ಮುಂದುವರೆದು ಸರಕಾರ ಅಂದ್ರ ಬರೇ ಕಾಯಾಂಗ ಅಲ್ಲ. ಅದರಾಗ ಮೂರು ಅಂಗ ಆದವು. ಅವು ಎಲ್ಲವೂ ಮುಖ್ಯ ಅಂದ್ರು. ಒಂದು ಹೆಜ್ಜಿ ಮುಂದ ಹೋಗಿ ಶಾಸಕಾಂಗ ಅನ್ನೋದು ಕಾಯಾಂಗಕ್ಕಿಂತ ಮುಖ್ಯ ಅಂತ ತಿಳಿಸಿ ಹೇಳಿದರು. ಕಾಯಾಂಗ ಅನ್ನೋದು ಶಾಸಕಾಂಗದ ಕೈ ಗೊಂಬೆ, ಅದನ್ನು ಇದು ಯಾವಾಗ ಬೇಕಾದಾದರೂ ಬೀಳಿಸಬಹುದು ಅಂತ ಸಾರಿದರು.

ಸಂವಿಧಾನದ ಪ್ರಕಾರ ವಿರೋಧ ಪಕ್ಷದ ಕೆಲಸ ಏನು ಅಂದರೆ ೧. ಸರ್ಕಾರದ ನೀತಿ- ನಿಯಮಗಳ ಸರಿ- ತಪ್ಪುಗಳ ವಿಮರ್ಶೆ ಮಾಡೋದು, ೨. ಯೋಜನೆ ಜಾರಿ ಬಗ್ಗೆ ತಮ್ಮ ಅಭಿಪ್ರಾಯ ತಿಳಸೋದು, ೩. ಸದನದೊಳಗ ಜನರ ದನಿ ಆಗೋದು ೪. ತೆರಿಗೆ ಹಣದ ಸರಿಯಾದ ಬಳಕೆ ಅಗೇದೋ ಇಲ್ಲೋ ನೋಡೋದು, ಮತ್ತು ಆಳುವವರು ಶಾಸಕರ ವಿಶ್ವಾಸ ಕಳೆದುಕೊಂಡರ ಅವರನ್ನ ತಕ್ಷಣಕ್ಕೆ ಮನಿಗೆ ಕಳಸೋದು, ಹೊಸಾ ನಾಯಕನ್ನ ಆಯ್ಕೆ ಮಾಡೋದು.

ಸರಕಾರ ಅನ್ನುವುದು, ಅದು ಯಾರದೇ ಇರಲಿ, ಅದನ್ನ, ಅದರ ಸರಿ- ತಪ್ಪುಗಳನ್ನ, ಅದರ ಜನಪರ ಹಾಗೂ ಜನ ವಿರೋಧಿ ನೀತಿ, ಅಥವಾ ಕಾರ್ಯಕ್ರಮಗಳ ಜಾರಿಗಳ ಬಗ್ಗೆ ಮಾತಾಡುವುದು ವಿರೋಧ ಪಕ್ಷದ ಮೂಲಭೂತ ಹಕ್ಕು. ಬಾಹುಳ್ಯದ ಪ್ರಜಾಪ್ರಭುತ್ವದಲ್ಲಿ ಇದು ಅವರ ಪವಿತ್ರ ಹಕ್ಕು. ಅದನ್ನು ಮಾಡದಿದ್ದರೆ ಅವರು ತಪ್ಪು ಮಾಡಿದಂಗೆ. ಅವರು ಜನರಿಗೆ ನೀಡಿದ ಜವಾಬುದಾರಿಯನ್ನು ತಪ್ಪಿಸಿಕೊಂಡಂತೆ.

ಇದನ್ನೆಲ್ಲಾ ಯಾಕ ಹೇಳಬೇಕಾತು ಅಂದ್ರ ಮೊನ್ನೆ ನಮ್ಮ ಗೃಹ ಸಚಿವ ಅಮಿತ್ ಷಾ ಅವರು ಆಡಳಿತ ಪಕ್ಷದ ಬಗ್ಗೆ ಮಾತಾಡೋ ವಿರೋಧ ಪಕ್ಷದವರು ಮೊದಲು ತಾವು ಏನು ಮಾಡಿದಾರ ಅನ್ನೋದು ತೋರಿಸಕೊಡಬೇಕು ಅಂತ ಫರಮಾನು ಕೊಟ್ಟಾರ.

ಅಂತವರಿಗೆ ಒಂಚೂರು ಬ್ರಿಟನ್‌ನ ಗಾರ್ಡಿಯನ ಪತ್ರಿಕೆಯ ಬಗ್ಗೆ ಹೇಳಬೇಕು. ಅವರು ಪ್ರತಿ ಚುನಾವಣೆಯ ನಂತರ ಈ ಪಕ್ಷ ಬಹುಮತ ಪಡೆದು ಆಳುವ ಪಕ್ಷವಾಗಿದೆ. ಆ ಪಕ್ಷ ವಿರೋಧ ಪಕ್ಷವಾಗಿ ಜನರ ಪಕ್ಷವಾಗಿದೆ ಅಂತ ಘೋಷಿಸುವ ಪರಂಪರೆ ಹೊಂದಿದೆ. ತನ್ನನ್ನು ತಾನು ಸರ್ವಕಾಲಿಕ ವಿರೋಧ ಪಕ್ಷ ಅಂತ ಹೇಳಿಕೊಂಡಿದೆ.

ಇದು ಸದನದ ಎಡಗಡೆ, ಬಲಗಡೆ ಕೂಡುವ ಎಲ್ಲರಿಗೂ ತಿಳಿಯಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...