Homeಮುಖಪುಟವಿರೋಧ ಅಂದರೇನು, ವಿರೋಧ ಪಕ್ಷ ಅಂದರ ಏನು? ನಿಮಗೇನಾರ ಗೊತ್ತಾ?

ವಿರೋಧ ಅಂದರೇನು, ವಿರೋಧ ಪಕ್ಷ ಅಂದರ ಏನು? ನಿಮಗೇನಾರ ಗೊತ್ತಾ?

- Advertisement -
- Advertisement -

ನಿಮ್ಮಲ್ಲಿ ವಿರೋಧ ಪಕ್ಷದ ಪರವಾಗಿ ಇರುವವರು ಯಾರು? ಹೋಗಲಿ ವಿರೋಧ ಪಕ್ಷ ಅಂದರ ಏನು? ಹೋಗಲಿ ಆತಲಾಗ ವಿರೋಧ ಅಂದ್ರ ಏನು ?

ಈ ಗಹನವಾದ ವಿಷಯ ಇಂದಿನ ಖೋಲಿಯ ವಸ್ತು.

ರಾಜಕೀಯ ಶಾಸ್ತ್ರ ಓದೋ ಹುಡುಗರ ನಡುವ ಒಂದು ಬಹುಚರ್ಚಿತ ಮಾತು ಐತಿ : “ನಮ್ಮ ಸಂವಿಧಾನದಾಗ ಆಡಳಿತ ಪಕ್ಷ ಅನ್ನೋ ಪದ ಇಲ್ಲಾ. ಆದರ ವಿರೋಧ ಪಕ್ಷ ಅನ್ನೋ ಪದ ಐತಿ’. ಈ ಮಾತು ಯಾಕ ಹೇಳತಾರ ಅಂದ್ರ, “ಭಾರತ ಅನ್ನೋದು ಆಡಳಿತ ಪಕ್ಷ ಕೇಂದ್ರಿತ ಪ್ರಜಾಪ್ರಭುತ್ವ ಅಲ್ಲ, ಅದು ಸಮ್ಮಿಳಿತ ಪ್ರಜಾಪ್ರಭುತ್ವ, ಇದರಲ್ಲಿ ವಿರೋಧ ಪಕ್ಷಕ್ಕೆ ಭಾಳ ಪ್ರಾಮುಖ್ಯತೆ ಇದೆ’ ಅಂತ ತಿಳಿಸಲಿಕ್ಕೆ.

ಬ್ರಿಟಿಷ್ ಸರ್ಕಾರದಾಗ ವಿರೋಧ ಪಕ್ಷ ಅಂದ್ರ ಬಹಳ ಗೌರವ. ವಿರೋಧ ಪಕ್ಷದ ನಾಯಕನಿಗೆ ಛಾಯಾ ಪ್ರಧಾನಿ ಅಂತ, ಇತರ ನಾಯಕರಿಗೆ ಛಾಯಾ ಕೃಷಿ ಸಚಿವ, ಛಾಯಾ ಹಣಕಾಸು ಸಚಿವ, ಛಾಯಾ ರಕ್ಷಣಾ ಸಚಿವ, ಇತ್ಯಾದಿ ಹೆಸರುಗಳಿಂದ ಕರೀತಾರ.

ಅವರು ತಮಗೆ ವಹಿಸಿಕೊಟ್ಟ ವಿಷಯಗಳ ಬಗ್ಗೆ ಆಳವಾಗಿ ಅಧ್ಯಯನ ಮಾಡಿ ಸಂಸತ್ತಿನಲ್ಲಿ ಮಾತಾಡತಾರ. ಅಲ್ಲದೇ ಪ್ರತಿ ಬಾರಿ ಆ ಕ್ಷೇತ್ರದ ಬಗ್ಗೆ ಸರಕಾರ ಏನಾದರೂ ಹೊಸಾ ನೀತಿ ಮಾಡಿದರ, ಅಥವಾ ಬದಲಾವಣೆ ಮಾಡಿದರ, ಅದಕ್ಕ ಸಂಬಂಧ ಪಟ್ಟ ಛಾಯಾ ಸಚಿವರು ಮಾತಾಡತಾರ. ನಮ್ಮಲ್ಲಿ ಹಂಗ ಯಾರಾರರ, ಏನೇನರ ತಲಿಯೊಳಗ ಒಂದು- ಒಂದು ಮಾತಾಡೋದಿಲ್ಲ.

ಹಂಗಾರ ನಮ್ಮ ಹಿರಿಯರೆಲ್ಲ – ಯಾರು ಯಾರು ಈ ದೇಶದ ಸ್ವಾತಂತ್ರ್ಯದ ಸಲುವಾಗಿ ಮನಿ ಬಿಟ್ಟು ಓಡಿಹೋಗಿ, ಸಾಲಿ, ನೌಕರಿ ಬಿಟ್ಟು ವರ್ಷಗಟ್ಟಲೆ ತಪ್ಪಿಸಿಕೊಂಡು ಅಡ್ಡಾಡಿದವರು- ಈ ದೇಶದ ಸರ್ಕಾರದ ಸ್ವರೂಪ ಹೆಂಗ ಇರಬೇಕು ಅಂತ ನಿರ್ಧಾರ ಮಾಡಿದಾಗ ಅವರ ತಲಿಯೊಳಗ ಏನು ಇತ್ತು?

ಅವರಿಗೆ ಈ ದೇಶ ಬಹಳ ದೊಡ್ಡದು, ಅದನ್ನ ಸರಿಯಾಗಿ ನಡಸಬೇಕು ಅಂದ್ರ ಇದು ಬಹುಜನರ ಸರಕಾರದಿಂದ ಮಾತ್ರ ಸಾಧ್ಯ ಅನ್ನೋದು ಗೊತ್ತಿತ್ತು. ಚುನಾವಣೆ ಅನ್ನೋದು ಲಕ್ ಬೈ ಛಾನ್ಸ್ ಅನ್ನೋದು ಗೊತ್ತಿತ್ತು. ಬರೇ ಒಂದು ವೋಟಿನಿಂದ ಗೆದ್ದ ಮನಿಶಾ ಜನರ ಪ್ರತಿನಿಧಿ ಆಗಿಬಿಡೋದು, ಸೋತವ ಮೂಲಿ ಒಳಗ ಕೂಡೋದು, ಅದು ತಪ್ಪು ಅಂತ ಅವರಿಗೆ ಗೊತ್ತಿತ್ತು.

ನಮ್ಮ ದೇಶದ ಮುಂದಿನ ದಾರಿ ನಿರ್ಧಾರ ಮಾಡೋವಾಗ ಎಲ್ಲಾ ಮತದಾರರ ಅಭಿಪ್ರಾಯವನ್ನೂ ಪರಿಗಣಿಸಬೇಕು, ವಿರೋಧ ಪಕ್ಷದವರೂ ಇಲ್ಲಿ ಅಮುಖ್ಯರಲ್ಲ ಅಂತ ಅವರು ಠರಾವಿಸಿದ್ದರು.

ಹೀಂಗೇ ಮುಂದುವರೆದು ಸರಕಾರ ಅಂದ್ರ ಬರೇ ಕಾಯಾಂಗ ಅಲ್ಲ. ಅದರಾಗ ಮೂರು ಅಂಗ ಆದವು. ಅವು ಎಲ್ಲವೂ ಮುಖ್ಯ ಅಂದ್ರು. ಒಂದು ಹೆಜ್ಜಿ ಮುಂದ ಹೋಗಿ ಶಾಸಕಾಂಗ ಅನ್ನೋದು ಕಾಯಾಂಗಕ್ಕಿಂತ ಮುಖ್ಯ ಅಂತ ತಿಳಿಸಿ ಹೇಳಿದರು. ಕಾಯಾಂಗ ಅನ್ನೋದು ಶಾಸಕಾಂಗದ ಕೈ ಗೊಂಬೆ, ಅದನ್ನು ಇದು ಯಾವಾಗ ಬೇಕಾದಾದರೂ ಬೀಳಿಸಬಹುದು ಅಂತ ಸಾರಿದರು.

ಸಂವಿಧಾನದ ಪ್ರಕಾರ ವಿರೋಧ ಪಕ್ಷದ ಕೆಲಸ ಏನು ಅಂದರೆ ೧. ಸರ್ಕಾರದ ನೀತಿ- ನಿಯಮಗಳ ಸರಿ- ತಪ್ಪುಗಳ ವಿಮರ್ಶೆ ಮಾಡೋದು, ೨. ಯೋಜನೆ ಜಾರಿ ಬಗ್ಗೆ ತಮ್ಮ ಅಭಿಪ್ರಾಯ ತಿಳಸೋದು, ೩. ಸದನದೊಳಗ ಜನರ ದನಿ ಆಗೋದು ೪. ತೆರಿಗೆ ಹಣದ ಸರಿಯಾದ ಬಳಕೆ ಅಗೇದೋ ಇಲ್ಲೋ ನೋಡೋದು, ಮತ್ತು ಆಳುವವರು ಶಾಸಕರ ವಿಶ್ವಾಸ ಕಳೆದುಕೊಂಡರ ಅವರನ್ನ ತಕ್ಷಣಕ್ಕೆ ಮನಿಗೆ ಕಳಸೋದು, ಹೊಸಾ ನಾಯಕನ್ನ ಆಯ್ಕೆ ಮಾಡೋದು.

ಸರಕಾರ ಅನ್ನುವುದು, ಅದು ಯಾರದೇ ಇರಲಿ, ಅದನ್ನ, ಅದರ ಸರಿ- ತಪ್ಪುಗಳನ್ನ, ಅದರ ಜನಪರ ಹಾಗೂ ಜನ ವಿರೋಧಿ ನೀತಿ, ಅಥವಾ ಕಾರ್ಯಕ್ರಮಗಳ ಜಾರಿಗಳ ಬಗ್ಗೆ ಮಾತಾಡುವುದು ವಿರೋಧ ಪಕ್ಷದ ಮೂಲಭೂತ ಹಕ್ಕು. ಬಾಹುಳ್ಯದ ಪ್ರಜಾಪ್ರಭುತ್ವದಲ್ಲಿ ಇದು ಅವರ ಪವಿತ್ರ ಹಕ್ಕು. ಅದನ್ನು ಮಾಡದಿದ್ದರೆ ಅವರು ತಪ್ಪು ಮಾಡಿದಂಗೆ. ಅವರು ಜನರಿಗೆ ನೀಡಿದ ಜವಾಬುದಾರಿಯನ್ನು ತಪ್ಪಿಸಿಕೊಂಡಂತೆ.

ಇದನ್ನೆಲ್ಲಾ ಯಾಕ ಹೇಳಬೇಕಾತು ಅಂದ್ರ ಮೊನ್ನೆ ನಮ್ಮ ಗೃಹ ಸಚಿವ ಅಮಿತ್ ಷಾ ಅವರು ಆಡಳಿತ ಪಕ್ಷದ ಬಗ್ಗೆ ಮಾತಾಡೋ ವಿರೋಧ ಪಕ್ಷದವರು ಮೊದಲು ತಾವು ಏನು ಮಾಡಿದಾರ ಅನ್ನೋದು ತೋರಿಸಕೊಡಬೇಕು ಅಂತ ಫರಮಾನು ಕೊಟ್ಟಾರ.

ಅಂತವರಿಗೆ ಒಂಚೂರು ಬ್ರಿಟನ್‌ನ ಗಾರ್ಡಿಯನ ಪತ್ರಿಕೆಯ ಬಗ್ಗೆ ಹೇಳಬೇಕು. ಅವರು ಪ್ರತಿ ಚುನಾವಣೆಯ ನಂತರ ಈ ಪಕ್ಷ ಬಹುಮತ ಪಡೆದು ಆಳುವ ಪಕ್ಷವಾಗಿದೆ. ಆ ಪಕ್ಷ ವಿರೋಧ ಪಕ್ಷವಾಗಿ ಜನರ ಪಕ್ಷವಾಗಿದೆ ಅಂತ ಘೋಷಿಸುವ ಪರಂಪರೆ ಹೊಂದಿದೆ. ತನ್ನನ್ನು ತಾನು ಸರ್ವಕಾಲಿಕ ವಿರೋಧ ಪಕ್ಷ ಅಂತ ಹೇಳಿಕೊಂಡಿದೆ.

ಇದು ಸದನದ ಎಡಗಡೆ, ಬಲಗಡೆ ಕೂಡುವ ಎಲ್ಲರಿಗೂ ತಿಳಿಯಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...