Homeಮುಖಪುಟವಿರೋಧ ಅಂದರೇನು, ವಿರೋಧ ಪಕ್ಷ ಅಂದರ ಏನು? ನಿಮಗೇನಾರ ಗೊತ್ತಾ?

ವಿರೋಧ ಅಂದರೇನು, ವಿರೋಧ ಪಕ್ಷ ಅಂದರ ಏನು? ನಿಮಗೇನಾರ ಗೊತ್ತಾ?

- Advertisement -
- Advertisement -

ನಿಮ್ಮಲ್ಲಿ ವಿರೋಧ ಪಕ್ಷದ ಪರವಾಗಿ ಇರುವವರು ಯಾರು? ಹೋಗಲಿ ವಿರೋಧ ಪಕ್ಷ ಅಂದರ ಏನು? ಹೋಗಲಿ ಆತಲಾಗ ವಿರೋಧ ಅಂದ್ರ ಏನು ?

ಈ ಗಹನವಾದ ವಿಷಯ ಇಂದಿನ ಖೋಲಿಯ ವಸ್ತು.

ರಾಜಕೀಯ ಶಾಸ್ತ್ರ ಓದೋ ಹುಡುಗರ ನಡುವ ಒಂದು ಬಹುಚರ್ಚಿತ ಮಾತು ಐತಿ : “ನಮ್ಮ ಸಂವಿಧಾನದಾಗ ಆಡಳಿತ ಪಕ್ಷ ಅನ್ನೋ ಪದ ಇಲ್ಲಾ. ಆದರ ವಿರೋಧ ಪಕ್ಷ ಅನ್ನೋ ಪದ ಐತಿ’. ಈ ಮಾತು ಯಾಕ ಹೇಳತಾರ ಅಂದ್ರ, “ಭಾರತ ಅನ್ನೋದು ಆಡಳಿತ ಪಕ್ಷ ಕೇಂದ್ರಿತ ಪ್ರಜಾಪ್ರಭುತ್ವ ಅಲ್ಲ, ಅದು ಸಮ್ಮಿಳಿತ ಪ್ರಜಾಪ್ರಭುತ್ವ, ಇದರಲ್ಲಿ ವಿರೋಧ ಪಕ್ಷಕ್ಕೆ ಭಾಳ ಪ್ರಾಮುಖ್ಯತೆ ಇದೆ’ ಅಂತ ತಿಳಿಸಲಿಕ್ಕೆ.

ಬ್ರಿಟಿಷ್ ಸರ್ಕಾರದಾಗ ವಿರೋಧ ಪಕ್ಷ ಅಂದ್ರ ಬಹಳ ಗೌರವ. ವಿರೋಧ ಪಕ್ಷದ ನಾಯಕನಿಗೆ ಛಾಯಾ ಪ್ರಧಾನಿ ಅಂತ, ಇತರ ನಾಯಕರಿಗೆ ಛಾಯಾ ಕೃಷಿ ಸಚಿವ, ಛಾಯಾ ಹಣಕಾಸು ಸಚಿವ, ಛಾಯಾ ರಕ್ಷಣಾ ಸಚಿವ, ಇತ್ಯಾದಿ ಹೆಸರುಗಳಿಂದ ಕರೀತಾರ.

ಅವರು ತಮಗೆ ವಹಿಸಿಕೊಟ್ಟ ವಿಷಯಗಳ ಬಗ್ಗೆ ಆಳವಾಗಿ ಅಧ್ಯಯನ ಮಾಡಿ ಸಂಸತ್ತಿನಲ್ಲಿ ಮಾತಾಡತಾರ. ಅಲ್ಲದೇ ಪ್ರತಿ ಬಾರಿ ಆ ಕ್ಷೇತ್ರದ ಬಗ್ಗೆ ಸರಕಾರ ಏನಾದರೂ ಹೊಸಾ ನೀತಿ ಮಾಡಿದರ, ಅಥವಾ ಬದಲಾವಣೆ ಮಾಡಿದರ, ಅದಕ್ಕ ಸಂಬಂಧ ಪಟ್ಟ ಛಾಯಾ ಸಚಿವರು ಮಾತಾಡತಾರ. ನಮ್ಮಲ್ಲಿ ಹಂಗ ಯಾರಾರರ, ಏನೇನರ ತಲಿಯೊಳಗ ಒಂದು- ಒಂದು ಮಾತಾಡೋದಿಲ್ಲ.

ಹಂಗಾರ ನಮ್ಮ ಹಿರಿಯರೆಲ್ಲ – ಯಾರು ಯಾರು ಈ ದೇಶದ ಸ್ವಾತಂತ್ರ್ಯದ ಸಲುವಾಗಿ ಮನಿ ಬಿಟ್ಟು ಓಡಿಹೋಗಿ, ಸಾಲಿ, ನೌಕರಿ ಬಿಟ್ಟು ವರ್ಷಗಟ್ಟಲೆ ತಪ್ಪಿಸಿಕೊಂಡು ಅಡ್ಡಾಡಿದವರು- ಈ ದೇಶದ ಸರ್ಕಾರದ ಸ್ವರೂಪ ಹೆಂಗ ಇರಬೇಕು ಅಂತ ನಿರ್ಧಾರ ಮಾಡಿದಾಗ ಅವರ ತಲಿಯೊಳಗ ಏನು ಇತ್ತು?

ಅವರಿಗೆ ಈ ದೇಶ ಬಹಳ ದೊಡ್ಡದು, ಅದನ್ನ ಸರಿಯಾಗಿ ನಡಸಬೇಕು ಅಂದ್ರ ಇದು ಬಹುಜನರ ಸರಕಾರದಿಂದ ಮಾತ್ರ ಸಾಧ್ಯ ಅನ್ನೋದು ಗೊತ್ತಿತ್ತು. ಚುನಾವಣೆ ಅನ್ನೋದು ಲಕ್ ಬೈ ಛಾನ್ಸ್ ಅನ್ನೋದು ಗೊತ್ತಿತ್ತು. ಬರೇ ಒಂದು ವೋಟಿನಿಂದ ಗೆದ್ದ ಮನಿಶಾ ಜನರ ಪ್ರತಿನಿಧಿ ಆಗಿಬಿಡೋದು, ಸೋತವ ಮೂಲಿ ಒಳಗ ಕೂಡೋದು, ಅದು ತಪ್ಪು ಅಂತ ಅವರಿಗೆ ಗೊತ್ತಿತ್ತು.

ನಮ್ಮ ದೇಶದ ಮುಂದಿನ ದಾರಿ ನಿರ್ಧಾರ ಮಾಡೋವಾಗ ಎಲ್ಲಾ ಮತದಾರರ ಅಭಿಪ್ರಾಯವನ್ನೂ ಪರಿಗಣಿಸಬೇಕು, ವಿರೋಧ ಪಕ್ಷದವರೂ ಇಲ್ಲಿ ಅಮುಖ್ಯರಲ್ಲ ಅಂತ ಅವರು ಠರಾವಿಸಿದ್ದರು.

ಹೀಂಗೇ ಮುಂದುವರೆದು ಸರಕಾರ ಅಂದ್ರ ಬರೇ ಕಾಯಾಂಗ ಅಲ್ಲ. ಅದರಾಗ ಮೂರು ಅಂಗ ಆದವು. ಅವು ಎಲ್ಲವೂ ಮುಖ್ಯ ಅಂದ್ರು. ಒಂದು ಹೆಜ್ಜಿ ಮುಂದ ಹೋಗಿ ಶಾಸಕಾಂಗ ಅನ್ನೋದು ಕಾಯಾಂಗಕ್ಕಿಂತ ಮುಖ್ಯ ಅಂತ ತಿಳಿಸಿ ಹೇಳಿದರು. ಕಾಯಾಂಗ ಅನ್ನೋದು ಶಾಸಕಾಂಗದ ಕೈ ಗೊಂಬೆ, ಅದನ್ನು ಇದು ಯಾವಾಗ ಬೇಕಾದಾದರೂ ಬೀಳಿಸಬಹುದು ಅಂತ ಸಾರಿದರು.

ಸಂವಿಧಾನದ ಪ್ರಕಾರ ವಿರೋಧ ಪಕ್ಷದ ಕೆಲಸ ಏನು ಅಂದರೆ ೧. ಸರ್ಕಾರದ ನೀತಿ- ನಿಯಮಗಳ ಸರಿ- ತಪ್ಪುಗಳ ವಿಮರ್ಶೆ ಮಾಡೋದು, ೨. ಯೋಜನೆ ಜಾರಿ ಬಗ್ಗೆ ತಮ್ಮ ಅಭಿಪ್ರಾಯ ತಿಳಸೋದು, ೩. ಸದನದೊಳಗ ಜನರ ದನಿ ಆಗೋದು ೪. ತೆರಿಗೆ ಹಣದ ಸರಿಯಾದ ಬಳಕೆ ಅಗೇದೋ ಇಲ್ಲೋ ನೋಡೋದು, ಮತ್ತು ಆಳುವವರು ಶಾಸಕರ ವಿಶ್ವಾಸ ಕಳೆದುಕೊಂಡರ ಅವರನ್ನ ತಕ್ಷಣಕ್ಕೆ ಮನಿಗೆ ಕಳಸೋದು, ಹೊಸಾ ನಾಯಕನ್ನ ಆಯ್ಕೆ ಮಾಡೋದು.

ಸರಕಾರ ಅನ್ನುವುದು, ಅದು ಯಾರದೇ ಇರಲಿ, ಅದನ್ನ, ಅದರ ಸರಿ- ತಪ್ಪುಗಳನ್ನ, ಅದರ ಜನಪರ ಹಾಗೂ ಜನ ವಿರೋಧಿ ನೀತಿ, ಅಥವಾ ಕಾರ್ಯಕ್ರಮಗಳ ಜಾರಿಗಳ ಬಗ್ಗೆ ಮಾತಾಡುವುದು ವಿರೋಧ ಪಕ್ಷದ ಮೂಲಭೂತ ಹಕ್ಕು. ಬಾಹುಳ್ಯದ ಪ್ರಜಾಪ್ರಭುತ್ವದಲ್ಲಿ ಇದು ಅವರ ಪವಿತ್ರ ಹಕ್ಕು. ಅದನ್ನು ಮಾಡದಿದ್ದರೆ ಅವರು ತಪ್ಪು ಮಾಡಿದಂಗೆ. ಅವರು ಜನರಿಗೆ ನೀಡಿದ ಜವಾಬುದಾರಿಯನ್ನು ತಪ್ಪಿಸಿಕೊಂಡಂತೆ.

ಇದನ್ನೆಲ್ಲಾ ಯಾಕ ಹೇಳಬೇಕಾತು ಅಂದ್ರ ಮೊನ್ನೆ ನಮ್ಮ ಗೃಹ ಸಚಿವ ಅಮಿತ್ ಷಾ ಅವರು ಆಡಳಿತ ಪಕ್ಷದ ಬಗ್ಗೆ ಮಾತಾಡೋ ವಿರೋಧ ಪಕ್ಷದವರು ಮೊದಲು ತಾವು ಏನು ಮಾಡಿದಾರ ಅನ್ನೋದು ತೋರಿಸಕೊಡಬೇಕು ಅಂತ ಫರಮಾನು ಕೊಟ್ಟಾರ.

ಅಂತವರಿಗೆ ಒಂಚೂರು ಬ್ರಿಟನ್‌ನ ಗಾರ್ಡಿಯನ ಪತ್ರಿಕೆಯ ಬಗ್ಗೆ ಹೇಳಬೇಕು. ಅವರು ಪ್ರತಿ ಚುನಾವಣೆಯ ನಂತರ ಈ ಪಕ್ಷ ಬಹುಮತ ಪಡೆದು ಆಳುವ ಪಕ್ಷವಾಗಿದೆ. ಆ ಪಕ್ಷ ವಿರೋಧ ಪಕ್ಷವಾಗಿ ಜನರ ಪಕ್ಷವಾಗಿದೆ ಅಂತ ಘೋಷಿಸುವ ಪರಂಪರೆ ಹೊಂದಿದೆ. ತನ್ನನ್ನು ತಾನು ಸರ್ವಕಾಲಿಕ ವಿರೋಧ ಪಕ್ಷ ಅಂತ ಹೇಳಿಕೊಂಡಿದೆ.

ಇದು ಸದನದ ಎಡಗಡೆ, ಬಲಗಡೆ ಕೂಡುವ ಎಲ್ಲರಿಗೂ ತಿಳಿಯಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...