Homeಮುಖಪುಟವಿರೋಧ ಅಂದರೇನು, ವಿರೋಧ ಪಕ್ಷ ಅಂದರ ಏನು? ನಿಮಗೇನಾರ ಗೊತ್ತಾ?

ವಿರೋಧ ಅಂದರೇನು, ವಿರೋಧ ಪಕ್ಷ ಅಂದರ ಏನು? ನಿಮಗೇನಾರ ಗೊತ್ತಾ?

- Advertisement -
- Advertisement -

ನಿಮ್ಮಲ್ಲಿ ವಿರೋಧ ಪಕ್ಷದ ಪರವಾಗಿ ಇರುವವರು ಯಾರು? ಹೋಗಲಿ ವಿರೋಧ ಪಕ್ಷ ಅಂದರ ಏನು? ಹೋಗಲಿ ಆತಲಾಗ ವಿರೋಧ ಅಂದ್ರ ಏನು ?

ಈ ಗಹನವಾದ ವಿಷಯ ಇಂದಿನ ಖೋಲಿಯ ವಸ್ತು.

ರಾಜಕೀಯ ಶಾಸ್ತ್ರ ಓದೋ ಹುಡುಗರ ನಡುವ ಒಂದು ಬಹುಚರ್ಚಿತ ಮಾತು ಐತಿ : “ನಮ್ಮ ಸಂವಿಧಾನದಾಗ ಆಡಳಿತ ಪಕ್ಷ ಅನ್ನೋ ಪದ ಇಲ್ಲಾ. ಆದರ ವಿರೋಧ ಪಕ್ಷ ಅನ್ನೋ ಪದ ಐತಿ’. ಈ ಮಾತು ಯಾಕ ಹೇಳತಾರ ಅಂದ್ರ, “ಭಾರತ ಅನ್ನೋದು ಆಡಳಿತ ಪಕ್ಷ ಕೇಂದ್ರಿತ ಪ್ರಜಾಪ್ರಭುತ್ವ ಅಲ್ಲ, ಅದು ಸಮ್ಮಿಳಿತ ಪ್ರಜಾಪ್ರಭುತ್ವ, ಇದರಲ್ಲಿ ವಿರೋಧ ಪಕ್ಷಕ್ಕೆ ಭಾಳ ಪ್ರಾಮುಖ್ಯತೆ ಇದೆ’ ಅಂತ ತಿಳಿಸಲಿಕ್ಕೆ.

ಬ್ರಿಟಿಷ್ ಸರ್ಕಾರದಾಗ ವಿರೋಧ ಪಕ್ಷ ಅಂದ್ರ ಬಹಳ ಗೌರವ. ವಿರೋಧ ಪಕ್ಷದ ನಾಯಕನಿಗೆ ಛಾಯಾ ಪ್ರಧಾನಿ ಅಂತ, ಇತರ ನಾಯಕರಿಗೆ ಛಾಯಾ ಕೃಷಿ ಸಚಿವ, ಛಾಯಾ ಹಣಕಾಸು ಸಚಿವ, ಛಾಯಾ ರಕ್ಷಣಾ ಸಚಿವ, ಇತ್ಯಾದಿ ಹೆಸರುಗಳಿಂದ ಕರೀತಾರ.

ಅವರು ತಮಗೆ ವಹಿಸಿಕೊಟ್ಟ ವಿಷಯಗಳ ಬಗ್ಗೆ ಆಳವಾಗಿ ಅಧ್ಯಯನ ಮಾಡಿ ಸಂಸತ್ತಿನಲ್ಲಿ ಮಾತಾಡತಾರ. ಅಲ್ಲದೇ ಪ್ರತಿ ಬಾರಿ ಆ ಕ್ಷೇತ್ರದ ಬಗ್ಗೆ ಸರಕಾರ ಏನಾದರೂ ಹೊಸಾ ನೀತಿ ಮಾಡಿದರ, ಅಥವಾ ಬದಲಾವಣೆ ಮಾಡಿದರ, ಅದಕ್ಕ ಸಂಬಂಧ ಪಟ್ಟ ಛಾಯಾ ಸಚಿವರು ಮಾತಾಡತಾರ. ನಮ್ಮಲ್ಲಿ ಹಂಗ ಯಾರಾರರ, ಏನೇನರ ತಲಿಯೊಳಗ ಒಂದು- ಒಂದು ಮಾತಾಡೋದಿಲ್ಲ.

ಹಂಗಾರ ನಮ್ಮ ಹಿರಿಯರೆಲ್ಲ – ಯಾರು ಯಾರು ಈ ದೇಶದ ಸ್ವಾತಂತ್ರ್ಯದ ಸಲುವಾಗಿ ಮನಿ ಬಿಟ್ಟು ಓಡಿಹೋಗಿ, ಸಾಲಿ, ನೌಕರಿ ಬಿಟ್ಟು ವರ್ಷಗಟ್ಟಲೆ ತಪ್ಪಿಸಿಕೊಂಡು ಅಡ್ಡಾಡಿದವರು- ಈ ದೇಶದ ಸರ್ಕಾರದ ಸ್ವರೂಪ ಹೆಂಗ ಇರಬೇಕು ಅಂತ ನಿರ್ಧಾರ ಮಾಡಿದಾಗ ಅವರ ತಲಿಯೊಳಗ ಏನು ಇತ್ತು?

ಅವರಿಗೆ ಈ ದೇಶ ಬಹಳ ದೊಡ್ಡದು, ಅದನ್ನ ಸರಿಯಾಗಿ ನಡಸಬೇಕು ಅಂದ್ರ ಇದು ಬಹುಜನರ ಸರಕಾರದಿಂದ ಮಾತ್ರ ಸಾಧ್ಯ ಅನ್ನೋದು ಗೊತ್ತಿತ್ತು. ಚುನಾವಣೆ ಅನ್ನೋದು ಲಕ್ ಬೈ ಛಾನ್ಸ್ ಅನ್ನೋದು ಗೊತ್ತಿತ್ತು. ಬರೇ ಒಂದು ವೋಟಿನಿಂದ ಗೆದ್ದ ಮನಿಶಾ ಜನರ ಪ್ರತಿನಿಧಿ ಆಗಿಬಿಡೋದು, ಸೋತವ ಮೂಲಿ ಒಳಗ ಕೂಡೋದು, ಅದು ತಪ್ಪು ಅಂತ ಅವರಿಗೆ ಗೊತ್ತಿತ್ತು.

ನಮ್ಮ ದೇಶದ ಮುಂದಿನ ದಾರಿ ನಿರ್ಧಾರ ಮಾಡೋವಾಗ ಎಲ್ಲಾ ಮತದಾರರ ಅಭಿಪ್ರಾಯವನ್ನೂ ಪರಿಗಣಿಸಬೇಕು, ವಿರೋಧ ಪಕ್ಷದವರೂ ಇಲ್ಲಿ ಅಮುಖ್ಯರಲ್ಲ ಅಂತ ಅವರು ಠರಾವಿಸಿದ್ದರು.

ಹೀಂಗೇ ಮುಂದುವರೆದು ಸರಕಾರ ಅಂದ್ರ ಬರೇ ಕಾಯಾಂಗ ಅಲ್ಲ. ಅದರಾಗ ಮೂರು ಅಂಗ ಆದವು. ಅವು ಎಲ್ಲವೂ ಮುಖ್ಯ ಅಂದ್ರು. ಒಂದು ಹೆಜ್ಜಿ ಮುಂದ ಹೋಗಿ ಶಾಸಕಾಂಗ ಅನ್ನೋದು ಕಾಯಾಂಗಕ್ಕಿಂತ ಮುಖ್ಯ ಅಂತ ತಿಳಿಸಿ ಹೇಳಿದರು. ಕಾಯಾಂಗ ಅನ್ನೋದು ಶಾಸಕಾಂಗದ ಕೈ ಗೊಂಬೆ, ಅದನ್ನು ಇದು ಯಾವಾಗ ಬೇಕಾದಾದರೂ ಬೀಳಿಸಬಹುದು ಅಂತ ಸಾರಿದರು.

ಸಂವಿಧಾನದ ಪ್ರಕಾರ ವಿರೋಧ ಪಕ್ಷದ ಕೆಲಸ ಏನು ಅಂದರೆ ೧. ಸರ್ಕಾರದ ನೀತಿ- ನಿಯಮಗಳ ಸರಿ- ತಪ್ಪುಗಳ ವಿಮರ್ಶೆ ಮಾಡೋದು, ೨. ಯೋಜನೆ ಜಾರಿ ಬಗ್ಗೆ ತಮ್ಮ ಅಭಿಪ್ರಾಯ ತಿಳಸೋದು, ೩. ಸದನದೊಳಗ ಜನರ ದನಿ ಆಗೋದು ೪. ತೆರಿಗೆ ಹಣದ ಸರಿಯಾದ ಬಳಕೆ ಅಗೇದೋ ಇಲ್ಲೋ ನೋಡೋದು, ಮತ್ತು ಆಳುವವರು ಶಾಸಕರ ವಿಶ್ವಾಸ ಕಳೆದುಕೊಂಡರ ಅವರನ್ನ ತಕ್ಷಣಕ್ಕೆ ಮನಿಗೆ ಕಳಸೋದು, ಹೊಸಾ ನಾಯಕನ್ನ ಆಯ್ಕೆ ಮಾಡೋದು.

ಸರಕಾರ ಅನ್ನುವುದು, ಅದು ಯಾರದೇ ಇರಲಿ, ಅದನ್ನ, ಅದರ ಸರಿ- ತಪ್ಪುಗಳನ್ನ, ಅದರ ಜನಪರ ಹಾಗೂ ಜನ ವಿರೋಧಿ ನೀತಿ, ಅಥವಾ ಕಾರ್ಯಕ್ರಮಗಳ ಜಾರಿಗಳ ಬಗ್ಗೆ ಮಾತಾಡುವುದು ವಿರೋಧ ಪಕ್ಷದ ಮೂಲಭೂತ ಹಕ್ಕು. ಬಾಹುಳ್ಯದ ಪ್ರಜಾಪ್ರಭುತ್ವದಲ್ಲಿ ಇದು ಅವರ ಪವಿತ್ರ ಹಕ್ಕು. ಅದನ್ನು ಮಾಡದಿದ್ದರೆ ಅವರು ತಪ್ಪು ಮಾಡಿದಂಗೆ. ಅವರು ಜನರಿಗೆ ನೀಡಿದ ಜವಾಬುದಾರಿಯನ್ನು ತಪ್ಪಿಸಿಕೊಂಡಂತೆ.

ಇದನ್ನೆಲ್ಲಾ ಯಾಕ ಹೇಳಬೇಕಾತು ಅಂದ್ರ ಮೊನ್ನೆ ನಮ್ಮ ಗೃಹ ಸಚಿವ ಅಮಿತ್ ಷಾ ಅವರು ಆಡಳಿತ ಪಕ್ಷದ ಬಗ್ಗೆ ಮಾತಾಡೋ ವಿರೋಧ ಪಕ್ಷದವರು ಮೊದಲು ತಾವು ಏನು ಮಾಡಿದಾರ ಅನ್ನೋದು ತೋರಿಸಕೊಡಬೇಕು ಅಂತ ಫರಮಾನು ಕೊಟ್ಟಾರ.

ಅಂತವರಿಗೆ ಒಂಚೂರು ಬ್ರಿಟನ್‌ನ ಗಾರ್ಡಿಯನ ಪತ್ರಿಕೆಯ ಬಗ್ಗೆ ಹೇಳಬೇಕು. ಅವರು ಪ್ರತಿ ಚುನಾವಣೆಯ ನಂತರ ಈ ಪಕ್ಷ ಬಹುಮತ ಪಡೆದು ಆಳುವ ಪಕ್ಷವಾಗಿದೆ. ಆ ಪಕ್ಷ ವಿರೋಧ ಪಕ್ಷವಾಗಿ ಜನರ ಪಕ್ಷವಾಗಿದೆ ಅಂತ ಘೋಷಿಸುವ ಪರಂಪರೆ ಹೊಂದಿದೆ. ತನ್ನನ್ನು ತಾನು ಸರ್ವಕಾಲಿಕ ವಿರೋಧ ಪಕ್ಷ ಅಂತ ಹೇಳಿಕೊಂಡಿದೆ.

ಇದು ಸದನದ ಎಡಗಡೆ, ಬಲಗಡೆ ಕೂಡುವ ಎಲ್ಲರಿಗೂ ತಿಳಿಯಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...