Homeಮುಖಪುಟಹಲವು ರಾಮಾಯಣಗಳಲ್ಲಿ, ಯಾವುದು ಮೂಲ ರಾಮಾಯಣ?

ಹಲವು ರಾಮಾಯಣಗಳಲ್ಲಿ, ಯಾವುದು ಮೂಲ ರಾಮಾಯಣ?

- Advertisement -
- Advertisement -

ಕನ್ನಡದ ಪ್ರಸಿದ್ಧ ಕವಿಯಾದ ಕುಮಾರವ್ಯಾಸನು ‘ತಿಣುಕಿದನು ಫಣಿರಾಯ ರಾಮಾಯಣದ ಕತೆಗಳ ಭಾರದಲಿ’ ಎಂಬ ಮಾತನ್ನು ಹೇಳುತ್ತಾನೆ. ಅವನಿಗೆ ಕನ್ನಡ ನಾಡೂ ಸೇರಿದಂತೆ ಭಾರತದ ಹಲವು ಕಡೆಗಳಲ್ಲಿ ಪ್ರಚಲಿತದಲ್ಲಿದ್ದ ಹಲವು ರಾಮಾಯಣಗಳ ಬಗ್ಗೆ ತಿಳಿದಿತ್ತು. 10 ನೇ ಶತಮಾನದ ಕೊನೆಯಲ್ಲಿ ರಚಿತವಾದ ನಾಗಚಂದ್ರನ ‘ರಾಮಚಂದ್ರ ಚರಿತ ಪುರಾಣ’, 16 ನೇ ಶತಮಾನದ ತೊರವೆ ನರಹರಿಯ ‘ತೊರವೆ ರಾಮಾಯಣ’, 12-18ನೇ ಶತಮಾನಗಳಲ್ಲಿ ರಚಿತವಾದ ಯಕ್ಷಗಾನ ರಾಮಾಯಣಗಳು, ಮುದ್ದಣನ ರಾಮಾಶ್ವಮೇಧ, ಅದ್ಭುತ ರಾಮಾಯಣ – ಕೆಲವು ಉದಾಹರಣೆಗಳಷ್ಟೆ.

ದೇಶದಾದ್ಯಂತ ಹಲವು ಜನಪದ ರಾಮಾಯಣಗಳಿವೆ. ಈ ಜನಪದ ರಾಮಾಯಣಗಳು ರಾಮ ಕೇಂದ್ರಿತವಾಗಿರದೆ, ಬಹುಮಟ್ಟಿಗೆ ಸೀತಾ ಕೇಂದ್ರಿತವಾಗಿವೆ. ಚಿತ್ರ ಪಟ ರಾಮಾಯಣದಲ್ಲಿ ಸೀತೆಯು ಲಂಕೆಯಿಂದ ಹಿಂದೆ ಬಂದ ಆನಂತರ ರಾವಣ ಚಿತ್ರ ಬರೆಯುವ ಮಾರ್ಮಿಕ ಘಟನೆಯ ವಿವರ ಬರುತ್ತದೆ. ಈ ನಡುವೆ ಹಲವಾರು ರಾಮಾಯಣಗಳು ಒಂದು ಕಾಲದಲ್ಲಿ ಅಸ್ತಿತ್ವದಲ್ಲಿದ್ದು ಆನಂತರ ಕಾಣೆಯಾಗಿವೆ. ರಾಮಾಯಣದ ವಸ್ತುವು ಬರ್ಮಾ, ಲಾವೋಸ್‌, ಫಿಲಿಪೈನ್ಸ್‌, ನೇಪಾಲ, ಜಪಾನ್‌, ಮಂಗೋಲಿಯಾ ಇಂಡೊನೇಷಿಯಾ, ಮಲೇಷಿಯಾ, ಕಾಂಬೋಡಿಯಾ, ಶ್ರೀಲಂಕಾ ದೇಶಗಳ ಸಂಸ್ಕೃತಿಗಳನ್ನು ಆಳವಾಗಿ ಪ್ರವೇಶಿಸಿ ಮರು ಹುಟ್ಟು ಪಡೆಯುತ್ತಿವೆ.

ಇದನ್ನೂ ಓದಿ: ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ!- ಎಚ್. ಡಿ. ಕುಮಾರಸ್ವಾಮಿ ಆಕ್ರೋಶ

ಈ ಎಲ್ಲಾ ರಾಮಾಯಣಗಳಿಗೆ ಮೂಲ ಆದಿಕವಿ ವಾಲ್ಮೀಕಿಯ ರಾಮಾಯಣ ಎಂದು ಹೇಳಲಾಗಿದೆ. ವಾಲ್ಮೀಕಿಗೆ ರಾಮ ಕತೆಯನ್ನು ನಾರದ ಹೇಳಿದನೆಂಬ ನಂಬಿಕೆಯೂ ಇದೆ. ಈ ನಾರದ ಬ್ರಹ್ಮನ ಮಗನಾಗಿದ್ದು ಭಾರತೀಯ ಮಹಾಕಾವ್ಯ ಮತ್ತು ಪುರಾಣಗಳಲ್ಲಿ ಆಗಾಗ ಕಾಣಿಸಿಕೊಳ್ಳುವ ಒಂದು ಪಾತ್ರವೇ ಹೊರತು ಐತಿಹಾಸಿಕ ವ್ಯಕ್ತಿಯಲ್ಲ. ಹೀಗಾಗಿ ಈ ಕಥನವನ್ನು ಪುರಾಣ-ಕಾವ್ಯಗಳ ಭಾಗವಾಗಿ ನೋಡಬೇಕೇ ವಿನಾ ವಾಸ್ತವ ಸತ್ಯವೆಂದು ಅಲ್ಲ.

ವಾಲ್ಮೀಕಿಯ ಕುರಿತಾದ ನಂಬಿಕೆಗಲೂ ಕಾಲಾಂತರದಲ್ಲಿ ಹಲವು ರೂಪಗಳನ್ನು ಧರಿಸಿವೆ. ಮಹಾಕಾವ್ಯದ ಭವ್ಯತೆ ದಿವ್ಯತೆಗಳನ್ನು ಹೆಚ್ಚು ಮಾಡಲು ಇಂಥ ಕತೆಗಳು ಸೇರಿಕೊಳ್ಳುತ್ತವೆ.

ಭಾರತದ ವಿವಿಧ ಭಾಷೆಗಳಲ್ಲಿ ಕಂಡು ಬರುವ ಜನಪದ ರಾಮಾಯಣಗಳ ವಸ್ತು ವಾಲ್ಮೀಕಿ ರಾಮಾಯಣಕ್ಕಿಂತ ತುಂಬ ಬೇರೆಯಾಗಿವೆ. ಎಷ್ಟೋ ರಾಮಾಯಣಗಳಲ್ಲಿ ಸೀತೆಯನ್ನು ಲಕ್ಷ್ಮಣ ಗೆದ್ದು ರಾಮನಿಗೆ ಅರ್ಪಿಸುವುದಿದೆ. ವಾಲ್ಮೀಕಿ ಇಂಥ ಹಲವು ರಾಮಾಯಣಗಳನ್ನು ಕೇಳಿ ಕೊನೆಗೆ ತನ್ನದೇ ಆದ ಒಂದು ರಾಮಾಯಣ ನಿರ್ಮಿಸಿರುವ ಸಾಧ್ಯತೆಯೇ ಹೆಚ್ಚು. ಏನಿದ್ದರೂ ಇದು ಕೋಳಿ ಮತ್ತು ಮೊಟ್ಟೆಯ ಕತೆ. ಯಾವುದರಿಂದ ಯಾವುದು ಹುಟ್ಟಿತು, ಯಾವುದು ಮೂಲ ಎಂದು ಹೇಳುವುದು ಅಸಾಧ್ಯ.

ಈಚಿನ ರಾಜಕೀಯದ ಭಾಗವಾಗಿ ‘ಸಂಸ್ಕೃತದ ರಾಮಾಯಣಕ್ಕೆ ಪ್ರತಿರೋಧವಾಗಿ ದೇಶಭಾಷೆಯಲ್ಲಿ ರಾಮಾಯಣವನ್ನು ಮರುಸೃಷ್ಟಿಸುತ್ತಿದ್ದಾರೆಂಬ’ ಆರೋಪವನ್ನು ಹಲವರು ಮಾಡುತ್ತಾ, ಮೂಲಕ್ಕೆ ನಿಷ್ಟರಾಗಿರಬೇಕೆಂಬ ಮಾತನ್ನು ಹೇಳುತ್ತಿದ್ದಾರೆ. ಇದನ್ನು ಒಪ್ಪಿಕೊಂಡರೆ, ಸಂಸ್ಕೃತದಲ್ಲೂ ಹಲವು ರಾಮಾಯಣಗಳಿರುವುದಕ್ಕೆ ಹೇಗೆ ಸಾಧ್ಯವಾಯಿತು? ಎಂಬ ಪ್ರಶ್ನೆಗೆ ಉತ್ತರ ನೀಡಬೇಕಾಗುತ್ತದೆ. ಭಾಸನ ‘ಪ್ರತಿಮಾನಾಟಕ’, ಮತ್ತು ‘ಅಭಿಷೇಕ’ ನಾಟಕಗಳು ಇದಕ್ಕೊಂದು ಉತ್ತಮ ಉದಾಹರಣೆ.

ಇದನ್ನೂ ಓದಿ: ‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್‌; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ

ಆಧ್ಯಾತ್ಮ ನಾಮಾಯಣ, ವಶಿಷ್ಟ ರಾಮಾಯಣ, ಆನಂದ ರಾಮಾಯಣ, ಅಗಸ್ತ್ಯ ರಾಮಾಯಣ, ಅದ್ಭುತ ರಾಮಾಯಣ, ಉತ್ತರ ರಾಮಚರಿತ – ಹೀಗೆ ಹಲವು ರಾಮಾಯಣಗಳ ಪರಂರೆ ಸಂಸ್ಕೃತಕ್ಕೇ ಇದೆ. ಅದೇ ರೀತಿಯಲ್ಲಿ ಭಾರತೀಯ ಭಾಷೆಗಳು ಕಂಬನ್‌ ರಾಮಾಯಣ, ತುಲಸೀ ರಾಮಾಯಣ ಮೊದಲಾದುವುಗಳನ್ನು ಸೃಷ್ಟಿಸಿಕೊಂಡಿವೆ. ಈ ನಿಟ್ಟಿನಲ್ಲಿ ಕನ್ನಡದಲ್ಲಿ ಬಂದ ಮಹತ್ಕೃತಿ ಕುವೆಂಪು ಅವರ ‘ಶ್ರೀರಾಮಾಯಣ ದರ್ಶನಂ’. 20 ನೇ ಶತಮಾನಕ್ಕೆ ರಾಮಾಯಣ ಮುಖಾ ಮುಖಿಯಾದಾಗ ಹುಟ್ಟಿಕೊಂಡ ಮಹಾಕಾವ್ಯವದು.

ಈ ಬಹುಪಠ್ಯಗಳು ಮೂಲತಃ ಭಾರತದ ವೈವಿಧ್ಯತೆಗಳಿಗೊಂದು ರೂಪಕ. ವ್ಯಾಸರು ಬರೆದ ಮಹಾಭಾರತದ ಸಾವಿರಾರು ಪಠ್ಯಗಳನ್ನು ಪ್ರಖ್ಯಾತ ಸಂಸ್ಕೃತ ವಿದ್ವಾಂಸರಾಗಿದ್ದ ಶ್ರೀ ವಿಷ್ಣು ಎಸ್. ಸೂಕ್ತಂಕರ್ ಸಂಗ್ರಹಿಸಿ, ಅದರಿಂದ ಒಂದು ಪಠ್ಯವನ್ನು ಪರಿಷ್ಕರಿಸಿ ಪೂನಾದಿಂದ ಪ್ರಕಟಿಸಿದರು. ಹಾಗೆ ಪ್ರಕಟಿಸುವಾಗ ಅವರು ಬರೆದ ಬಹಳ ಮಹತ್ವದ ವಾಕ್ಯವೊಂದು ಇಂತಿದೆ- “ವ್ಯಾಸರು ಬರೆದ ಮೂಲ ಪಠ್ಯ ಹೇಗಿದ್ದಿರಬಹುದೆಂದು ಸಾಧಿಸುವುದು ಸಾಧ್ಯವಿಲ್ಲದ ಕೆಲಸ. ಈಗ ನಾವು ಸಿದ್ಧಪಡಿಸಿದ್ದು ಮಹಾಭಾರತದ ಇನ್ನೊಂದು ಪಠ್ಯ ಅಷ್ಟೆ”. ಈ ಮಾತು ರಾಮಾಯಣಕ್ಕೂ ಅನ್ವಯವಾಗುತ್ತದೆ.

ಗಮನಿಸಬೇಕಾದ ವಿಷಯವೆಂದರೆ, ನಮ್ಮ ದೇಶದಲ್ಲಿ ವಿವಿಧ ಸಮುದಾಯಗಳು ಕಾವ್ಯವನ್ನು ತಮಗೆ ಬೇಕಾದಂತೆ ಮತ್ತೆ ಮತ್ತೆ ಬರೆದುಕೊಳ್ಳುತ್ತವೆ ಅಥವಾ ಹೇಳಿಕೊಳ್ಳುತ್ತವೆ ಎಂಬುದನ್ನು ನಾವೀಗ ಮರೆತುಬಿಟ್ಟಿರುವುದು. ತನ್ನ ಕಾಲದ, ಸಮುದಾಯದ, ಪ್ರದೇಶದ ಮತ್ತು ನಿರೂಪಕನ ಅಗತ್ಯಗಳಿಗೆ ಅನುಗುಣವಾಗಿ ಕಾವ್ಯಗಳನ್ನು ಮತ್ತೆ ಮತ್ತೆ ಬರೆಯಲಾಗುತ್ತದೆ. ಆಕಾಶದಲ್ಲಿರುವ ನಕ್ಷತ್ರಗಳ ಹಾಗೆ. ಅವುಗಳನ್ನು ನಾವು ಎಣಿಸಲಾರೆವು, ಅವುಗಳಿಗೆ ವ್ಯಾಕರಣವನ್ನೂ ಬರೆಯಲಾರೆವು, ಆದರೆ ಅವು ಆಗಸದ ಒಟ್ಟಂದವನ್ನು ಹೆಚ್ಚಿಸಿವೆ.

ಕುವೆಂಪು ಮತ್ತು ಅವರು ಬರೆದ ರಾಮಾಯಣದ ಬಗ್ಗೆ ಈಗ ನಡೆಯುತ್ತಿರುವ ಚರ್ಚೆಗಳು ಮತ್ತು ಆರೋಪಗಳು ರಾಜಕೀಯ ಪ್ರೇರಿತವಾದುವು. ಅವುಗಳನ್ನು ರಾಜಕೀಯವಾಗಿಯೇ ಎದುರಿಸಬೇಕು ಅಷ್ಟೆ.

ಇದನ್ನೂ ಓದಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...