Homeಮುಖಪುಟಹಲವು ರಾಮಾಯಣಗಳಲ್ಲಿ, ಯಾವುದು ಮೂಲ ರಾಮಾಯಣ?

ಹಲವು ರಾಮಾಯಣಗಳಲ್ಲಿ, ಯಾವುದು ಮೂಲ ರಾಮಾಯಣ?

- Advertisement -
- Advertisement -

ಕನ್ನಡದ ಪ್ರಸಿದ್ಧ ಕವಿಯಾದ ಕುಮಾರವ್ಯಾಸನು ‘ತಿಣುಕಿದನು ಫಣಿರಾಯ ರಾಮಾಯಣದ ಕತೆಗಳ ಭಾರದಲಿ’ ಎಂಬ ಮಾತನ್ನು ಹೇಳುತ್ತಾನೆ. ಅವನಿಗೆ ಕನ್ನಡ ನಾಡೂ ಸೇರಿದಂತೆ ಭಾರತದ ಹಲವು ಕಡೆಗಳಲ್ಲಿ ಪ್ರಚಲಿತದಲ್ಲಿದ್ದ ಹಲವು ರಾಮಾಯಣಗಳ ಬಗ್ಗೆ ತಿಳಿದಿತ್ತು. 10 ನೇ ಶತಮಾನದ ಕೊನೆಯಲ್ಲಿ ರಚಿತವಾದ ನಾಗಚಂದ್ರನ ‘ರಾಮಚಂದ್ರ ಚರಿತ ಪುರಾಣ’, 16 ನೇ ಶತಮಾನದ ತೊರವೆ ನರಹರಿಯ ‘ತೊರವೆ ರಾಮಾಯಣ’, 12-18ನೇ ಶತಮಾನಗಳಲ್ಲಿ ರಚಿತವಾದ ಯಕ್ಷಗಾನ ರಾಮಾಯಣಗಳು, ಮುದ್ದಣನ ರಾಮಾಶ್ವಮೇಧ, ಅದ್ಭುತ ರಾಮಾಯಣ – ಕೆಲವು ಉದಾಹರಣೆಗಳಷ್ಟೆ.

ದೇಶದಾದ್ಯಂತ ಹಲವು ಜನಪದ ರಾಮಾಯಣಗಳಿವೆ. ಈ ಜನಪದ ರಾಮಾಯಣಗಳು ರಾಮ ಕೇಂದ್ರಿತವಾಗಿರದೆ, ಬಹುಮಟ್ಟಿಗೆ ಸೀತಾ ಕೇಂದ್ರಿತವಾಗಿವೆ. ಚಿತ್ರ ಪಟ ರಾಮಾಯಣದಲ್ಲಿ ಸೀತೆಯು ಲಂಕೆಯಿಂದ ಹಿಂದೆ ಬಂದ ಆನಂತರ ರಾವಣ ಚಿತ್ರ ಬರೆಯುವ ಮಾರ್ಮಿಕ ಘಟನೆಯ ವಿವರ ಬರುತ್ತದೆ. ಈ ನಡುವೆ ಹಲವಾರು ರಾಮಾಯಣಗಳು ಒಂದು ಕಾಲದಲ್ಲಿ ಅಸ್ತಿತ್ವದಲ್ಲಿದ್ದು ಆನಂತರ ಕಾಣೆಯಾಗಿವೆ. ರಾಮಾಯಣದ ವಸ್ತುವು ಬರ್ಮಾ, ಲಾವೋಸ್‌, ಫಿಲಿಪೈನ್ಸ್‌, ನೇಪಾಲ, ಜಪಾನ್‌, ಮಂಗೋಲಿಯಾ ಇಂಡೊನೇಷಿಯಾ, ಮಲೇಷಿಯಾ, ಕಾಂಬೋಡಿಯಾ, ಶ್ರೀಲಂಕಾ ದೇಶಗಳ ಸಂಸ್ಕೃತಿಗಳನ್ನು ಆಳವಾಗಿ ಪ್ರವೇಶಿಸಿ ಮರು ಹುಟ್ಟು ಪಡೆಯುತ್ತಿವೆ.

ಇದನ್ನೂ ಓದಿ: ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ!- ಎಚ್. ಡಿ. ಕುಮಾರಸ್ವಾಮಿ ಆಕ್ರೋಶ

ಈ ಎಲ್ಲಾ ರಾಮಾಯಣಗಳಿಗೆ ಮೂಲ ಆದಿಕವಿ ವಾಲ್ಮೀಕಿಯ ರಾಮಾಯಣ ಎಂದು ಹೇಳಲಾಗಿದೆ. ವಾಲ್ಮೀಕಿಗೆ ರಾಮ ಕತೆಯನ್ನು ನಾರದ ಹೇಳಿದನೆಂಬ ನಂಬಿಕೆಯೂ ಇದೆ. ಈ ನಾರದ ಬ್ರಹ್ಮನ ಮಗನಾಗಿದ್ದು ಭಾರತೀಯ ಮಹಾಕಾವ್ಯ ಮತ್ತು ಪುರಾಣಗಳಲ್ಲಿ ಆಗಾಗ ಕಾಣಿಸಿಕೊಳ್ಳುವ ಒಂದು ಪಾತ್ರವೇ ಹೊರತು ಐತಿಹಾಸಿಕ ವ್ಯಕ್ತಿಯಲ್ಲ. ಹೀಗಾಗಿ ಈ ಕಥನವನ್ನು ಪುರಾಣ-ಕಾವ್ಯಗಳ ಭಾಗವಾಗಿ ನೋಡಬೇಕೇ ವಿನಾ ವಾಸ್ತವ ಸತ್ಯವೆಂದು ಅಲ್ಲ.

ವಾಲ್ಮೀಕಿಯ ಕುರಿತಾದ ನಂಬಿಕೆಗಲೂ ಕಾಲಾಂತರದಲ್ಲಿ ಹಲವು ರೂಪಗಳನ್ನು ಧರಿಸಿವೆ. ಮಹಾಕಾವ್ಯದ ಭವ್ಯತೆ ದಿವ್ಯತೆಗಳನ್ನು ಹೆಚ್ಚು ಮಾಡಲು ಇಂಥ ಕತೆಗಳು ಸೇರಿಕೊಳ್ಳುತ್ತವೆ.

ಭಾರತದ ವಿವಿಧ ಭಾಷೆಗಳಲ್ಲಿ ಕಂಡು ಬರುವ ಜನಪದ ರಾಮಾಯಣಗಳ ವಸ್ತು ವಾಲ್ಮೀಕಿ ರಾಮಾಯಣಕ್ಕಿಂತ ತುಂಬ ಬೇರೆಯಾಗಿವೆ. ಎಷ್ಟೋ ರಾಮಾಯಣಗಳಲ್ಲಿ ಸೀತೆಯನ್ನು ಲಕ್ಷ್ಮಣ ಗೆದ್ದು ರಾಮನಿಗೆ ಅರ್ಪಿಸುವುದಿದೆ. ವಾಲ್ಮೀಕಿ ಇಂಥ ಹಲವು ರಾಮಾಯಣಗಳನ್ನು ಕೇಳಿ ಕೊನೆಗೆ ತನ್ನದೇ ಆದ ಒಂದು ರಾಮಾಯಣ ನಿರ್ಮಿಸಿರುವ ಸಾಧ್ಯತೆಯೇ ಹೆಚ್ಚು. ಏನಿದ್ದರೂ ಇದು ಕೋಳಿ ಮತ್ತು ಮೊಟ್ಟೆಯ ಕತೆ. ಯಾವುದರಿಂದ ಯಾವುದು ಹುಟ್ಟಿತು, ಯಾವುದು ಮೂಲ ಎಂದು ಹೇಳುವುದು ಅಸಾಧ್ಯ.

ಈಚಿನ ರಾಜಕೀಯದ ಭಾಗವಾಗಿ ‘ಸಂಸ್ಕೃತದ ರಾಮಾಯಣಕ್ಕೆ ಪ್ರತಿರೋಧವಾಗಿ ದೇಶಭಾಷೆಯಲ್ಲಿ ರಾಮಾಯಣವನ್ನು ಮರುಸೃಷ್ಟಿಸುತ್ತಿದ್ದಾರೆಂಬ’ ಆರೋಪವನ್ನು ಹಲವರು ಮಾಡುತ್ತಾ, ಮೂಲಕ್ಕೆ ನಿಷ್ಟರಾಗಿರಬೇಕೆಂಬ ಮಾತನ್ನು ಹೇಳುತ್ತಿದ್ದಾರೆ. ಇದನ್ನು ಒಪ್ಪಿಕೊಂಡರೆ, ಸಂಸ್ಕೃತದಲ್ಲೂ ಹಲವು ರಾಮಾಯಣಗಳಿರುವುದಕ್ಕೆ ಹೇಗೆ ಸಾಧ್ಯವಾಯಿತು? ಎಂಬ ಪ್ರಶ್ನೆಗೆ ಉತ್ತರ ನೀಡಬೇಕಾಗುತ್ತದೆ. ಭಾಸನ ‘ಪ್ರತಿಮಾನಾಟಕ’, ಮತ್ತು ‘ಅಭಿಷೇಕ’ ನಾಟಕಗಳು ಇದಕ್ಕೊಂದು ಉತ್ತಮ ಉದಾಹರಣೆ.

ಇದನ್ನೂ ಓದಿ: ‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್‌; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ

ಆಧ್ಯಾತ್ಮ ನಾಮಾಯಣ, ವಶಿಷ್ಟ ರಾಮಾಯಣ, ಆನಂದ ರಾಮಾಯಣ, ಅಗಸ್ತ್ಯ ರಾಮಾಯಣ, ಅದ್ಭುತ ರಾಮಾಯಣ, ಉತ್ತರ ರಾಮಚರಿತ – ಹೀಗೆ ಹಲವು ರಾಮಾಯಣಗಳ ಪರಂರೆ ಸಂಸ್ಕೃತಕ್ಕೇ ಇದೆ. ಅದೇ ರೀತಿಯಲ್ಲಿ ಭಾರತೀಯ ಭಾಷೆಗಳು ಕಂಬನ್‌ ರಾಮಾಯಣ, ತುಲಸೀ ರಾಮಾಯಣ ಮೊದಲಾದುವುಗಳನ್ನು ಸೃಷ್ಟಿಸಿಕೊಂಡಿವೆ. ಈ ನಿಟ್ಟಿನಲ್ಲಿ ಕನ್ನಡದಲ್ಲಿ ಬಂದ ಮಹತ್ಕೃತಿ ಕುವೆಂಪು ಅವರ ‘ಶ್ರೀರಾಮಾಯಣ ದರ್ಶನಂ’. 20 ನೇ ಶತಮಾನಕ್ಕೆ ರಾಮಾಯಣ ಮುಖಾ ಮುಖಿಯಾದಾಗ ಹುಟ್ಟಿಕೊಂಡ ಮಹಾಕಾವ್ಯವದು.

ಈ ಬಹುಪಠ್ಯಗಳು ಮೂಲತಃ ಭಾರತದ ವೈವಿಧ್ಯತೆಗಳಿಗೊಂದು ರೂಪಕ. ವ್ಯಾಸರು ಬರೆದ ಮಹಾಭಾರತದ ಸಾವಿರಾರು ಪಠ್ಯಗಳನ್ನು ಪ್ರಖ್ಯಾತ ಸಂಸ್ಕೃತ ವಿದ್ವಾಂಸರಾಗಿದ್ದ ಶ್ರೀ ವಿಷ್ಣು ಎಸ್. ಸೂಕ್ತಂಕರ್ ಸಂಗ್ರಹಿಸಿ, ಅದರಿಂದ ಒಂದು ಪಠ್ಯವನ್ನು ಪರಿಷ್ಕರಿಸಿ ಪೂನಾದಿಂದ ಪ್ರಕಟಿಸಿದರು. ಹಾಗೆ ಪ್ರಕಟಿಸುವಾಗ ಅವರು ಬರೆದ ಬಹಳ ಮಹತ್ವದ ವಾಕ್ಯವೊಂದು ಇಂತಿದೆ- “ವ್ಯಾಸರು ಬರೆದ ಮೂಲ ಪಠ್ಯ ಹೇಗಿದ್ದಿರಬಹುದೆಂದು ಸಾಧಿಸುವುದು ಸಾಧ್ಯವಿಲ್ಲದ ಕೆಲಸ. ಈಗ ನಾವು ಸಿದ್ಧಪಡಿಸಿದ್ದು ಮಹಾಭಾರತದ ಇನ್ನೊಂದು ಪಠ್ಯ ಅಷ್ಟೆ”. ಈ ಮಾತು ರಾಮಾಯಣಕ್ಕೂ ಅನ್ವಯವಾಗುತ್ತದೆ.

ಗಮನಿಸಬೇಕಾದ ವಿಷಯವೆಂದರೆ, ನಮ್ಮ ದೇಶದಲ್ಲಿ ವಿವಿಧ ಸಮುದಾಯಗಳು ಕಾವ್ಯವನ್ನು ತಮಗೆ ಬೇಕಾದಂತೆ ಮತ್ತೆ ಮತ್ತೆ ಬರೆದುಕೊಳ್ಳುತ್ತವೆ ಅಥವಾ ಹೇಳಿಕೊಳ್ಳುತ್ತವೆ ಎಂಬುದನ್ನು ನಾವೀಗ ಮರೆತುಬಿಟ್ಟಿರುವುದು. ತನ್ನ ಕಾಲದ, ಸಮುದಾಯದ, ಪ್ರದೇಶದ ಮತ್ತು ನಿರೂಪಕನ ಅಗತ್ಯಗಳಿಗೆ ಅನುಗುಣವಾಗಿ ಕಾವ್ಯಗಳನ್ನು ಮತ್ತೆ ಮತ್ತೆ ಬರೆಯಲಾಗುತ್ತದೆ. ಆಕಾಶದಲ್ಲಿರುವ ನಕ್ಷತ್ರಗಳ ಹಾಗೆ. ಅವುಗಳನ್ನು ನಾವು ಎಣಿಸಲಾರೆವು, ಅವುಗಳಿಗೆ ವ್ಯಾಕರಣವನ್ನೂ ಬರೆಯಲಾರೆವು, ಆದರೆ ಅವು ಆಗಸದ ಒಟ್ಟಂದವನ್ನು ಹೆಚ್ಚಿಸಿವೆ.

ಕುವೆಂಪು ಮತ್ತು ಅವರು ಬರೆದ ರಾಮಾಯಣದ ಬಗ್ಗೆ ಈಗ ನಡೆಯುತ್ತಿರುವ ಚರ್ಚೆಗಳು ಮತ್ತು ಆರೋಪಗಳು ರಾಜಕೀಯ ಪ್ರೇರಿತವಾದುವು. ಅವುಗಳನ್ನು ರಾಜಕೀಯವಾಗಿಯೇ ಎದುರಿಸಬೇಕು ಅಷ್ಟೆ.

ಇದನ್ನೂ ಓದಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...