Homeಮುಖಪುಟಹಲವು ರಾಮಾಯಣಗಳಲ್ಲಿ, ಯಾವುದು ಮೂಲ ರಾಮಾಯಣ?

ಹಲವು ರಾಮಾಯಣಗಳಲ್ಲಿ, ಯಾವುದು ಮೂಲ ರಾಮಾಯಣ?

- Advertisement -
- Advertisement -

ಕನ್ನಡದ ಪ್ರಸಿದ್ಧ ಕವಿಯಾದ ಕುಮಾರವ್ಯಾಸನು ‘ತಿಣುಕಿದನು ಫಣಿರಾಯ ರಾಮಾಯಣದ ಕತೆಗಳ ಭಾರದಲಿ’ ಎಂಬ ಮಾತನ್ನು ಹೇಳುತ್ತಾನೆ. ಅವನಿಗೆ ಕನ್ನಡ ನಾಡೂ ಸೇರಿದಂತೆ ಭಾರತದ ಹಲವು ಕಡೆಗಳಲ್ಲಿ ಪ್ರಚಲಿತದಲ್ಲಿದ್ದ ಹಲವು ರಾಮಾಯಣಗಳ ಬಗ್ಗೆ ತಿಳಿದಿತ್ತು. 10 ನೇ ಶತಮಾನದ ಕೊನೆಯಲ್ಲಿ ರಚಿತವಾದ ನಾಗಚಂದ್ರನ ‘ರಾಮಚಂದ್ರ ಚರಿತ ಪುರಾಣ’, 16 ನೇ ಶತಮಾನದ ತೊರವೆ ನರಹರಿಯ ‘ತೊರವೆ ರಾಮಾಯಣ’, 12-18ನೇ ಶತಮಾನಗಳಲ್ಲಿ ರಚಿತವಾದ ಯಕ್ಷಗಾನ ರಾಮಾಯಣಗಳು, ಮುದ್ದಣನ ರಾಮಾಶ್ವಮೇಧ, ಅದ್ಭುತ ರಾಮಾಯಣ – ಕೆಲವು ಉದಾಹರಣೆಗಳಷ್ಟೆ.

ದೇಶದಾದ್ಯಂತ ಹಲವು ಜನಪದ ರಾಮಾಯಣಗಳಿವೆ. ಈ ಜನಪದ ರಾಮಾಯಣಗಳು ರಾಮ ಕೇಂದ್ರಿತವಾಗಿರದೆ, ಬಹುಮಟ್ಟಿಗೆ ಸೀತಾ ಕೇಂದ್ರಿತವಾಗಿವೆ. ಚಿತ್ರ ಪಟ ರಾಮಾಯಣದಲ್ಲಿ ಸೀತೆಯು ಲಂಕೆಯಿಂದ ಹಿಂದೆ ಬಂದ ಆನಂತರ ರಾವಣ ಚಿತ್ರ ಬರೆಯುವ ಮಾರ್ಮಿಕ ಘಟನೆಯ ವಿವರ ಬರುತ್ತದೆ. ಈ ನಡುವೆ ಹಲವಾರು ರಾಮಾಯಣಗಳು ಒಂದು ಕಾಲದಲ್ಲಿ ಅಸ್ತಿತ್ವದಲ್ಲಿದ್ದು ಆನಂತರ ಕಾಣೆಯಾಗಿವೆ. ರಾಮಾಯಣದ ವಸ್ತುವು ಬರ್ಮಾ, ಲಾವೋಸ್‌, ಫಿಲಿಪೈನ್ಸ್‌, ನೇಪಾಲ, ಜಪಾನ್‌, ಮಂಗೋಲಿಯಾ ಇಂಡೊನೇಷಿಯಾ, ಮಲೇಷಿಯಾ, ಕಾಂಬೋಡಿಯಾ, ಶ್ರೀಲಂಕಾ ದೇಶಗಳ ಸಂಸ್ಕೃತಿಗಳನ್ನು ಆಳವಾಗಿ ಪ್ರವೇಶಿಸಿ ಮರು ಹುಟ್ಟು ಪಡೆಯುತ್ತಿವೆ.

ಇದನ್ನೂ ಓದಿ: ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ!- ಎಚ್. ಡಿ. ಕುಮಾರಸ್ವಾಮಿ ಆಕ್ರೋಶ

ಈ ಎಲ್ಲಾ ರಾಮಾಯಣಗಳಿಗೆ ಮೂಲ ಆದಿಕವಿ ವಾಲ್ಮೀಕಿಯ ರಾಮಾಯಣ ಎಂದು ಹೇಳಲಾಗಿದೆ. ವಾಲ್ಮೀಕಿಗೆ ರಾಮ ಕತೆಯನ್ನು ನಾರದ ಹೇಳಿದನೆಂಬ ನಂಬಿಕೆಯೂ ಇದೆ. ಈ ನಾರದ ಬ್ರಹ್ಮನ ಮಗನಾಗಿದ್ದು ಭಾರತೀಯ ಮಹಾಕಾವ್ಯ ಮತ್ತು ಪುರಾಣಗಳಲ್ಲಿ ಆಗಾಗ ಕಾಣಿಸಿಕೊಳ್ಳುವ ಒಂದು ಪಾತ್ರವೇ ಹೊರತು ಐತಿಹಾಸಿಕ ವ್ಯಕ್ತಿಯಲ್ಲ. ಹೀಗಾಗಿ ಈ ಕಥನವನ್ನು ಪುರಾಣ-ಕಾವ್ಯಗಳ ಭಾಗವಾಗಿ ನೋಡಬೇಕೇ ವಿನಾ ವಾಸ್ತವ ಸತ್ಯವೆಂದು ಅಲ್ಲ.

ವಾಲ್ಮೀಕಿಯ ಕುರಿತಾದ ನಂಬಿಕೆಗಲೂ ಕಾಲಾಂತರದಲ್ಲಿ ಹಲವು ರೂಪಗಳನ್ನು ಧರಿಸಿವೆ. ಮಹಾಕಾವ್ಯದ ಭವ್ಯತೆ ದಿವ್ಯತೆಗಳನ್ನು ಹೆಚ್ಚು ಮಾಡಲು ಇಂಥ ಕತೆಗಳು ಸೇರಿಕೊಳ್ಳುತ್ತವೆ.

ಭಾರತದ ವಿವಿಧ ಭಾಷೆಗಳಲ್ಲಿ ಕಂಡು ಬರುವ ಜನಪದ ರಾಮಾಯಣಗಳ ವಸ್ತು ವಾಲ್ಮೀಕಿ ರಾಮಾಯಣಕ್ಕಿಂತ ತುಂಬ ಬೇರೆಯಾಗಿವೆ. ಎಷ್ಟೋ ರಾಮಾಯಣಗಳಲ್ಲಿ ಸೀತೆಯನ್ನು ಲಕ್ಷ್ಮಣ ಗೆದ್ದು ರಾಮನಿಗೆ ಅರ್ಪಿಸುವುದಿದೆ. ವಾಲ್ಮೀಕಿ ಇಂಥ ಹಲವು ರಾಮಾಯಣಗಳನ್ನು ಕೇಳಿ ಕೊನೆಗೆ ತನ್ನದೇ ಆದ ಒಂದು ರಾಮಾಯಣ ನಿರ್ಮಿಸಿರುವ ಸಾಧ್ಯತೆಯೇ ಹೆಚ್ಚು. ಏನಿದ್ದರೂ ಇದು ಕೋಳಿ ಮತ್ತು ಮೊಟ್ಟೆಯ ಕತೆ. ಯಾವುದರಿಂದ ಯಾವುದು ಹುಟ್ಟಿತು, ಯಾವುದು ಮೂಲ ಎಂದು ಹೇಳುವುದು ಅಸಾಧ್ಯ.

ಈಚಿನ ರಾಜಕೀಯದ ಭಾಗವಾಗಿ ‘ಸಂಸ್ಕೃತದ ರಾಮಾಯಣಕ್ಕೆ ಪ್ರತಿರೋಧವಾಗಿ ದೇಶಭಾಷೆಯಲ್ಲಿ ರಾಮಾಯಣವನ್ನು ಮರುಸೃಷ್ಟಿಸುತ್ತಿದ್ದಾರೆಂಬ’ ಆರೋಪವನ್ನು ಹಲವರು ಮಾಡುತ್ತಾ, ಮೂಲಕ್ಕೆ ನಿಷ್ಟರಾಗಿರಬೇಕೆಂಬ ಮಾತನ್ನು ಹೇಳುತ್ತಿದ್ದಾರೆ. ಇದನ್ನು ಒಪ್ಪಿಕೊಂಡರೆ, ಸಂಸ್ಕೃತದಲ್ಲೂ ಹಲವು ರಾಮಾಯಣಗಳಿರುವುದಕ್ಕೆ ಹೇಗೆ ಸಾಧ್ಯವಾಯಿತು? ಎಂಬ ಪ್ರಶ್ನೆಗೆ ಉತ್ತರ ನೀಡಬೇಕಾಗುತ್ತದೆ. ಭಾಸನ ‘ಪ್ರತಿಮಾನಾಟಕ’, ಮತ್ತು ‘ಅಭಿಷೇಕ’ ನಾಟಕಗಳು ಇದಕ್ಕೊಂದು ಉತ್ತಮ ಉದಾಹರಣೆ.

ಇದನ್ನೂ ಓದಿ: ‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್‌; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ

ಆಧ್ಯಾತ್ಮ ನಾಮಾಯಣ, ವಶಿಷ್ಟ ರಾಮಾಯಣ, ಆನಂದ ರಾಮಾಯಣ, ಅಗಸ್ತ್ಯ ರಾಮಾಯಣ, ಅದ್ಭುತ ರಾಮಾಯಣ, ಉತ್ತರ ರಾಮಚರಿತ – ಹೀಗೆ ಹಲವು ರಾಮಾಯಣಗಳ ಪರಂರೆ ಸಂಸ್ಕೃತಕ್ಕೇ ಇದೆ. ಅದೇ ರೀತಿಯಲ್ಲಿ ಭಾರತೀಯ ಭಾಷೆಗಳು ಕಂಬನ್‌ ರಾಮಾಯಣ, ತುಲಸೀ ರಾಮಾಯಣ ಮೊದಲಾದುವುಗಳನ್ನು ಸೃಷ್ಟಿಸಿಕೊಂಡಿವೆ. ಈ ನಿಟ್ಟಿನಲ್ಲಿ ಕನ್ನಡದಲ್ಲಿ ಬಂದ ಮಹತ್ಕೃತಿ ಕುವೆಂಪು ಅವರ ‘ಶ್ರೀರಾಮಾಯಣ ದರ್ಶನಂ’. 20 ನೇ ಶತಮಾನಕ್ಕೆ ರಾಮಾಯಣ ಮುಖಾ ಮುಖಿಯಾದಾಗ ಹುಟ್ಟಿಕೊಂಡ ಮಹಾಕಾವ್ಯವದು.

ಈ ಬಹುಪಠ್ಯಗಳು ಮೂಲತಃ ಭಾರತದ ವೈವಿಧ್ಯತೆಗಳಿಗೊಂದು ರೂಪಕ. ವ್ಯಾಸರು ಬರೆದ ಮಹಾಭಾರತದ ಸಾವಿರಾರು ಪಠ್ಯಗಳನ್ನು ಪ್ರಖ್ಯಾತ ಸಂಸ್ಕೃತ ವಿದ್ವಾಂಸರಾಗಿದ್ದ ಶ್ರೀ ವಿಷ್ಣು ಎಸ್. ಸೂಕ್ತಂಕರ್ ಸಂಗ್ರಹಿಸಿ, ಅದರಿಂದ ಒಂದು ಪಠ್ಯವನ್ನು ಪರಿಷ್ಕರಿಸಿ ಪೂನಾದಿಂದ ಪ್ರಕಟಿಸಿದರು. ಹಾಗೆ ಪ್ರಕಟಿಸುವಾಗ ಅವರು ಬರೆದ ಬಹಳ ಮಹತ್ವದ ವಾಕ್ಯವೊಂದು ಇಂತಿದೆ- “ವ್ಯಾಸರು ಬರೆದ ಮೂಲ ಪಠ್ಯ ಹೇಗಿದ್ದಿರಬಹುದೆಂದು ಸಾಧಿಸುವುದು ಸಾಧ್ಯವಿಲ್ಲದ ಕೆಲಸ. ಈಗ ನಾವು ಸಿದ್ಧಪಡಿಸಿದ್ದು ಮಹಾಭಾರತದ ಇನ್ನೊಂದು ಪಠ್ಯ ಅಷ್ಟೆ”. ಈ ಮಾತು ರಾಮಾಯಣಕ್ಕೂ ಅನ್ವಯವಾಗುತ್ತದೆ.

ಗಮನಿಸಬೇಕಾದ ವಿಷಯವೆಂದರೆ, ನಮ್ಮ ದೇಶದಲ್ಲಿ ವಿವಿಧ ಸಮುದಾಯಗಳು ಕಾವ್ಯವನ್ನು ತಮಗೆ ಬೇಕಾದಂತೆ ಮತ್ತೆ ಮತ್ತೆ ಬರೆದುಕೊಳ್ಳುತ್ತವೆ ಅಥವಾ ಹೇಳಿಕೊಳ್ಳುತ್ತವೆ ಎಂಬುದನ್ನು ನಾವೀಗ ಮರೆತುಬಿಟ್ಟಿರುವುದು. ತನ್ನ ಕಾಲದ, ಸಮುದಾಯದ, ಪ್ರದೇಶದ ಮತ್ತು ನಿರೂಪಕನ ಅಗತ್ಯಗಳಿಗೆ ಅನುಗುಣವಾಗಿ ಕಾವ್ಯಗಳನ್ನು ಮತ್ತೆ ಮತ್ತೆ ಬರೆಯಲಾಗುತ್ತದೆ. ಆಕಾಶದಲ್ಲಿರುವ ನಕ್ಷತ್ರಗಳ ಹಾಗೆ. ಅವುಗಳನ್ನು ನಾವು ಎಣಿಸಲಾರೆವು, ಅವುಗಳಿಗೆ ವ್ಯಾಕರಣವನ್ನೂ ಬರೆಯಲಾರೆವು, ಆದರೆ ಅವು ಆಗಸದ ಒಟ್ಟಂದವನ್ನು ಹೆಚ್ಚಿಸಿವೆ.

ಕುವೆಂಪು ಮತ್ತು ಅವರು ಬರೆದ ರಾಮಾಯಣದ ಬಗ್ಗೆ ಈಗ ನಡೆಯುತ್ತಿರುವ ಚರ್ಚೆಗಳು ಮತ್ತು ಆರೋಪಗಳು ರಾಜಕೀಯ ಪ್ರೇರಿತವಾದುವು. ಅವುಗಳನ್ನು ರಾಜಕೀಯವಾಗಿಯೇ ಎದುರಿಸಬೇಕು ಅಷ್ಟೆ.

ಇದನ್ನೂ ಓದಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...