Homeಮುಖಪುಟಹಲವು ರಾಮಾಯಣಗಳಲ್ಲಿ, ಯಾವುದು ಮೂಲ ರಾಮಾಯಣ?

ಹಲವು ರಾಮಾಯಣಗಳಲ್ಲಿ, ಯಾವುದು ಮೂಲ ರಾಮಾಯಣ?

- Advertisement -
- Advertisement -

ಕನ್ನಡದ ಪ್ರಸಿದ್ಧ ಕವಿಯಾದ ಕುಮಾರವ್ಯಾಸನು ‘ತಿಣುಕಿದನು ಫಣಿರಾಯ ರಾಮಾಯಣದ ಕತೆಗಳ ಭಾರದಲಿ’ ಎಂಬ ಮಾತನ್ನು ಹೇಳುತ್ತಾನೆ. ಅವನಿಗೆ ಕನ್ನಡ ನಾಡೂ ಸೇರಿದಂತೆ ಭಾರತದ ಹಲವು ಕಡೆಗಳಲ್ಲಿ ಪ್ರಚಲಿತದಲ್ಲಿದ್ದ ಹಲವು ರಾಮಾಯಣಗಳ ಬಗ್ಗೆ ತಿಳಿದಿತ್ತು. 10 ನೇ ಶತಮಾನದ ಕೊನೆಯಲ್ಲಿ ರಚಿತವಾದ ನಾಗಚಂದ್ರನ ‘ರಾಮಚಂದ್ರ ಚರಿತ ಪುರಾಣ’, 16 ನೇ ಶತಮಾನದ ತೊರವೆ ನರಹರಿಯ ‘ತೊರವೆ ರಾಮಾಯಣ’, 12-18ನೇ ಶತಮಾನಗಳಲ್ಲಿ ರಚಿತವಾದ ಯಕ್ಷಗಾನ ರಾಮಾಯಣಗಳು, ಮುದ್ದಣನ ರಾಮಾಶ್ವಮೇಧ, ಅದ್ಭುತ ರಾಮಾಯಣ – ಕೆಲವು ಉದಾಹರಣೆಗಳಷ್ಟೆ.

ದೇಶದಾದ್ಯಂತ ಹಲವು ಜನಪದ ರಾಮಾಯಣಗಳಿವೆ. ಈ ಜನಪದ ರಾಮಾಯಣಗಳು ರಾಮ ಕೇಂದ್ರಿತವಾಗಿರದೆ, ಬಹುಮಟ್ಟಿಗೆ ಸೀತಾ ಕೇಂದ್ರಿತವಾಗಿವೆ. ಚಿತ್ರ ಪಟ ರಾಮಾಯಣದಲ್ಲಿ ಸೀತೆಯು ಲಂಕೆಯಿಂದ ಹಿಂದೆ ಬಂದ ಆನಂತರ ರಾವಣ ಚಿತ್ರ ಬರೆಯುವ ಮಾರ್ಮಿಕ ಘಟನೆಯ ವಿವರ ಬರುತ್ತದೆ. ಈ ನಡುವೆ ಹಲವಾರು ರಾಮಾಯಣಗಳು ಒಂದು ಕಾಲದಲ್ಲಿ ಅಸ್ತಿತ್ವದಲ್ಲಿದ್ದು ಆನಂತರ ಕಾಣೆಯಾಗಿವೆ. ರಾಮಾಯಣದ ವಸ್ತುವು ಬರ್ಮಾ, ಲಾವೋಸ್‌, ಫಿಲಿಪೈನ್ಸ್‌, ನೇಪಾಲ, ಜಪಾನ್‌, ಮಂಗೋಲಿಯಾ ಇಂಡೊನೇಷಿಯಾ, ಮಲೇಷಿಯಾ, ಕಾಂಬೋಡಿಯಾ, ಶ್ರೀಲಂಕಾ ದೇಶಗಳ ಸಂಸ್ಕೃತಿಗಳನ್ನು ಆಳವಾಗಿ ಪ್ರವೇಶಿಸಿ ಮರು ಹುಟ್ಟು ಪಡೆಯುತ್ತಿವೆ.

ಇದನ್ನೂ ಓದಿ: ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ!- ಎಚ್. ಡಿ. ಕುಮಾರಸ್ವಾಮಿ ಆಕ್ರೋಶ

ಈ ಎಲ್ಲಾ ರಾಮಾಯಣಗಳಿಗೆ ಮೂಲ ಆದಿಕವಿ ವಾಲ್ಮೀಕಿಯ ರಾಮಾಯಣ ಎಂದು ಹೇಳಲಾಗಿದೆ. ವಾಲ್ಮೀಕಿಗೆ ರಾಮ ಕತೆಯನ್ನು ನಾರದ ಹೇಳಿದನೆಂಬ ನಂಬಿಕೆಯೂ ಇದೆ. ಈ ನಾರದ ಬ್ರಹ್ಮನ ಮಗನಾಗಿದ್ದು ಭಾರತೀಯ ಮಹಾಕಾವ್ಯ ಮತ್ತು ಪುರಾಣಗಳಲ್ಲಿ ಆಗಾಗ ಕಾಣಿಸಿಕೊಳ್ಳುವ ಒಂದು ಪಾತ್ರವೇ ಹೊರತು ಐತಿಹಾಸಿಕ ವ್ಯಕ್ತಿಯಲ್ಲ. ಹೀಗಾಗಿ ಈ ಕಥನವನ್ನು ಪುರಾಣ-ಕಾವ್ಯಗಳ ಭಾಗವಾಗಿ ನೋಡಬೇಕೇ ವಿನಾ ವಾಸ್ತವ ಸತ್ಯವೆಂದು ಅಲ್ಲ.

ವಾಲ್ಮೀಕಿಯ ಕುರಿತಾದ ನಂಬಿಕೆಗಲೂ ಕಾಲಾಂತರದಲ್ಲಿ ಹಲವು ರೂಪಗಳನ್ನು ಧರಿಸಿವೆ. ಮಹಾಕಾವ್ಯದ ಭವ್ಯತೆ ದಿವ್ಯತೆಗಳನ್ನು ಹೆಚ್ಚು ಮಾಡಲು ಇಂಥ ಕತೆಗಳು ಸೇರಿಕೊಳ್ಳುತ್ತವೆ.

ಭಾರತದ ವಿವಿಧ ಭಾಷೆಗಳಲ್ಲಿ ಕಂಡು ಬರುವ ಜನಪದ ರಾಮಾಯಣಗಳ ವಸ್ತು ವಾಲ್ಮೀಕಿ ರಾಮಾಯಣಕ್ಕಿಂತ ತುಂಬ ಬೇರೆಯಾಗಿವೆ. ಎಷ್ಟೋ ರಾಮಾಯಣಗಳಲ್ಲಿ ಸೀತೆಯನ್ನು ಲಕ್ಷ್ಮಣ ಗೆದ್ದು ರಾಮನಿಗೆ ಅರ್ಪಿಸುವುದಿದೆ. ವಾಲ್ಮೀಕಿ ಇಂಥ ಹಲವು ರಾಮಾಯಣಗಳನ್ನು ಕೇಳಿ ಕೊನೆಗೆ ತನ್ನದೇ ಆದ ಒಂದು ರಾಮಾಯಣ ನಿರ್ಮಿಸಿರುವ ಸಾಧ್ಯತೆಯೇ ಹೆಚ್ಚು. ಏನಿದ್ದರೂ ಇದು ಕೋಳಿ ಮತ್ತು ಮೊಟ್ಟೆಯ ಕತೆ. ಯಾವುದರಿಂದ ಯಾವುದು ಹುಟ್ಟಿತು, ಯಾವುದು ಮೂಲ ಎಂದು ಹೇಳುವುದು ಅಸಾಧ್ಯ.

ಈಚಿನ ರಾಜಕೀಯದ ಭಾಗವಾಗಿ ‘ಸಂಸ್ಕೃತದ ರಾಮಾಯಣಕ್ಕೆ ಪ್ರತಿರೋಧವಾಗಿ ದೇಶಭಾಷೆಯಲ್ಲಿ ರಾಮಾಯಣವನ್ನು ಮರುಸೃಷ್ಟಿಸುತ್ತಿದ್ದಾರೆಂಬ’ ಆರೋಪವನ್ನು ಹಲವರು ಮಾಡುತ್ತಾ, ಮೂಲಕ್ಕೆ ನಿಷ್ಟರಾಗಿರಬೇಕೆಂಬ ಮಾತನ್ನು ಹೇಳುತ್ತಿದ್ದಾರೆ. ಇದನ್ನು ಒಪ್ಪಿಕೊಂಡರೆ, ಸಂಸ್ಕೃತದಲ್ಲೂ ಹಲವು ರಾಮಾಯಣಗಳಿರುವುದಕ್ಕೆ ಹೇಗೆ ಸಾಧ್ಯವಾಯಿತು? ಎಂಬ ಪ್ರಶ್ನೆಗೆ ಉತ್ತರ ನೀಡಬೇಕಾಗುತ್ತದೆ. ಭಾಸನ ‘ಪ್ರತಿಮಾನಾಟಕ’, ಮತ್ತು ‘ಅಭಿಷೇಕ’ ನಾಟಕಗಳು ಇದಕ್ಕೊಂದು ಉತ್ತಮ ಉದಾಹರಣೆ.

ಇದನ್ನೂ ಓದಿ: ‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್‌; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ

ಆಧ್ಯಾತ್ಮ ನಾಮಾಯಣ, ವಶಿಷ್ಟ ರಾಮಾಯಣ, ಆನಂದ ರಾಮಾಯಣ, ಅಗಸ್ತ್ಯ ರಾಮಾಯಣ, ಅದ್ಭುತ ರಾಮಾಯಣ, ಉತ್ತರ ರಾಮಚರಿತ – ಹೀಗೆ ಹಲವು ರಾಮಾಯಣಗಳ ಪರಂರೆ ಸಂಸ್ಕೃತಕ್ಕೇ ಇದೆ. ಅದೇ ರೀತಿಯಲ್ಲಿ ಭಾರತೀಯ ಭಾಷೆಗಳು ಕಂಬನ್‌ ರಾಮಾಯಣ, ತುಲಸೀ ರಾಮಾಯಣ ಮೊದಲಾದುವುಗಳನ್ನು ಸೃಷ್ಟಿಸಿಕೊಂಡಿವೆ. ಈ ನಿಟ್ಟಿನಲ್ಲಿ ಕನ್ನಡದಲ್ಲಿ ಬಂದ ಮಹತ್ಕೃತಿ ಕುವೆಂಪು ಅವರ ‘ಶ್ರೀರಾಮಾಯಣ ದರ್ಶನಂ’. 20 ನೇ ಶತಮಾನಕ್ಕೆ ರಾಮಾಯಣ ಮುಖಾ ಮುಖಿಯಾದಾಗ ಹುಟ್ಟಿಕೊಂಡ ಮಹಾಕಾವ್ಯವದು.

ಈ ಬಹುಪಠ್ಯಗಳು ಮೂಲತಃ ಭಾರತದ ವೈವಿಧ್ಯತೆಗಳಿಗೊಂದು ರೂಪಕ. ವ್ಯಾಸರು ಬರೆದ ಮಹಾಭಾರತದ ಸಾವಿರಾರು ಪಠ್ಯಗಳನ್ನು ಪ್ರಖ್ಯಾತ ಸಂಸ್ಕೃತ ವಿದ್ವಾಂಸರಾಗಿದ್ದ ಶ್ರೀ ವಿಷ್ಣು ಎಸ್. ಸೂಕ್ತಂಕರ್ ಸಂಗ್ರಹಿಸಿ, ಅದರಿಂದ ಒಂದು ಪಠ್ಯವನ್ನು ಪರಿಷ್ಕರಿಸಿ ಪೂನಾದಿಂದ ಪ್ರಕಟಿಸಿದರು. ಹಾಗೆ ಪ್ರಕಟಿಸುವಾಗ ಅವರು ಬರೆದ ಬಹಳ ಮಹತ್ವದ ವಾಕ್ಯವೊಂದು ಇಂತಿದೆ- “ವ್ಯಾಸರು ಬರೆದ ಮೂಲ ಪಠ್ಯ ಹೇಗಿದ್ದಿರಬಹುದೆಂದು ಸಾಧಿಸುವುದು ಸಾಧ್ಯವಿಲ್ಲದ ಕೆಲಸ. ಈಗ ನಾವು ಸಿದ್ಧಪಡಿಸಿದ್ದು ಮಹಾಭಾರತದ ಇನ್ನೊಂದು ಪಠ್ಯ ಅಷ್ಟೆ”. ಈ ಮಾತು ರಾಮಾಯಣಕ್ಕೂ ಅನ್ವಯವಾಗುತ್ತದೆ.

ಗಮನಿಸಬೇಕಾದ ವಿಷಯವೆಂದರೆ, ನಮ್ಮ ದೇಶದಲ್ಲಿ ವಿವಿಧ ಸಮುದಾಯಗಳು ಕಾವ್ಯವನ್ನು ತಮಗೆ ಬೇಕಾದಂತೆ ಮತ್ತೆ ಮತ್ತೆ ಬರೆದುಕೊಳ್ಳುತ್ತವೆ ಅಥವಾ ಹೇಳಿಕೊಳ್ಳುತ್ತವೆ ಎಂಬುದನ್ನು ನಾವೀಗ ಮರೆತುಬಿಟ್ಟಿರುವುದು. ತನ್ನ ಕಾಲದ, ಸಮುದಾಯದ, ಪ್ರದೇಶದ ಮತ್ತು ನಿರೂಪಕನ ಅಗತ್ಯಗಳಿಗೆ ಅನುಗುಣವಾಗಿ ಕಾವ್ಯಗಳನ್ನು ಮತ್ತೆ ಮತ್ತೆ ಬರೆಯಲಾಗುತ್ತದೆ. ಆಕಾಶದಲ್ಲಿರುವ ನಕ್ಷತ್ರಗಳ ಹಾಗೆ. ಅವುಗಳನ್ನು ನಾವು ಎಣಿಸಲಾರೆವು, ಅವುಗಳಿಗೆ ವ್ಯಾಕರಣವನ್ನೂ ಬರೆಯಲಾರೆವು, ಆದರೆ ಅವು ಆಗಸದ ಒಟ್ಟಂದವನ್ನು ಹೆಚ್ಚಿಸಿವೆ.

ಕುವೆಂಪು ಮತ್ತು ಅವರು ಬರೆದ ರಾಮಾಯಣದ ಬಗ್ಗೆ ಈಗ ನಡೆಯುತ್ತಿರುವ ಚರ್ಚೆಗಳು ಮತ್ತು ಆರೋಪಗಳು ರಾಜಕೀಯ ಪ್ರೇರಿತವಾದುವು. ಅವುಗಳನ್ನು ರಾಜಕೀಯವಾಗಿಯೇ ಎದುರಿಸಬೇಕು ಅಷ್ಟೆ.

ಇದನ್ನೂ ಓದಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...