Homeಮುಖಪುಟಹಲವು ರಾಮಾಯಣಗಳಲ್ಲಿ, ಯಾವುದು ಮೂಲ ರಾಮಾಯಣ?

ಹಲವು ರಾಮಾಯಣಗಳಲ್ಲಿ, ಯಾವುದು ಮೂಲ ರಾಮಾಯಣ?

- Advertisement -
- Advertisement -

ಕನ್ನಡದ ಪ್ರಸಿದ್ಧ ಕವಿಯಾದ ಕುಮಾರವ್ಯಾಸನು ‘ತಿಣುಕಿದನು ಫಣಿರಾಯ ರಾಮಾಯಣದ ಕತೆಗಳ ಭಾರದಲಿ’ ಎಂಬ ಮಾತನ್ನು ಹೇಳುತ್ತಾನೆ. ಅವನಿಗೆ ಕನ್ನಡ ನಾಡೂ ಸೇರಿದಂತೆ ಭಾರತದ ಹಲವು ಕಡೆಗಳಲ್ಲಿ ಪ್ರಚಲಿತದಲ್ಲಿದ್ದ ಹಲವು ರಾಮಾಯಣಗಳ ಬಗ್ಗೆ ತಿಳಿದಿತ್ತು. 10 ನೇ ಶತಮಾನದ ಕೊನೆಯಲ್ಲಿ ರಚಿತವಾದ ನಾಗಚಂದ್ರನ ‘ರಾಮಚಂದ್ರ ಚರಿತ ಪುರಾಣ’, 16 ನೇ ಶತಮಾನದ ತೊರವೆ ನರಹರಿಯ ‘ತೊರವೆ ರಾಮಾಯಣ’, 12-18ನೇ ಶತಮಾನಗಳಲ್ಲಿ ರಚಿತವಾದ ಯಕ್ಷಗಾನ ರಾಮಾಯಣಗಳು, ಮುದ್ದಣನ ರಾಮಾಶ್ವಮೇಧ, ಅದ್ಭುತ ರಾಮಾಯಣ – ಕೆಲವು ಉದಾಹರಣೆಗಳಷ್ಟೆ.

ದೇಶದಾದ್ಯಂತ ಹಲವು ಜನಪದ ರಾಮಾಯಣಗಳಿವೆ. ಈ ಜನಪದ ರಾಮಾಯಣಗಳು ರಾಮ ಕೇಂದ್ರಿತವಾಗಿರದೆ, ಬಹುಮಟ್ಟಿಗೆ ಸೀತಾ ಕೇಂದ್ರಿತವಾಗಿವೆ. ಚಿತ್ರ ಪಟ ರಾಮಾಯಣದಲ್ಲಿ ಸೀತೆಯು ಲಂಕೆಯಿಂದ ಹಿಂದೆ ಬಂದ ಆನಂತರ ರಾವಣ ಚಿತ್ರ ಬರೆಯುವ ಮಾರ್ಮಿಕ ಘಟನೆಯ ವಿವರ ಬರುತ್ತದೆ. ಈ ನಡುವೆ ಹಲವಾರು ರಾಮಾಯಣಗಳು ಒಂದು ಕಾಲದಲ್ಲಿ ಅಸ್ತಿತ್ವದಲ್ಲಿದ್ದು ಆನಂತರ ಕಾಣೆಯಾಗಿವೆ. ರಾಮಾಯಣದ ವಸ್ತುವು ಬರ್ಮಾ, ಲಾವೋಸ್‌, ಫಿಲಿಪೈನ್ಸ್‌, ನೇಪಾಲ, ಜಪಾನ್‌, ಮಂಗೋಲಿಯಾ ಇಂಡೊನೇಷಿಯಾ, ಮಲೇಷಿಯಾ, ಕಾಂಬೋಡಿಯಾ, ಶ್ರೀಲಂಕಾ ದೇಶಗಳ ಸಂಸ್ಕೃತಿಗಳನ್ನು ಆಳವಾಗಿ ಪ್ರವೇಶಿಸಿ ಮರು ಹುಟ್ಟು ಪಡೆಯುತ್ತಿವೆ.

ಇದನ್ನೂ ಓದಿ: ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ!- ಎಚ್. ಡಿ. ಕುಮಾರಸ್ವಾಮಿ ಆಕ್ರೋಶ

ಈ ಎಲ್ಲಾ ರಾಮಾಯಣಗಳಿಗೆ ಮೂಲ ಆದಿಕವಿ ವಾಲ್ಮೀಕಿಯ ರಾಮಾಯಣ ಎಂದು ಹೇಳಲಾಗಿದೆ. ವಾಲ್ಮೀಕಿಗೆ ರಾಮ ಕತೆಯನ್ನು ನಾರದ ಹೇಳಿದನೆಂಬ ನಂಬಿಕೆಯೂ ಇದೆ. ಈ ನಾರದ ಬ್ರಹ್ಮನ ಮಗನಾಗಿದ್ದು ಭಾರತೀಯ ಮಹಾಕಾವ್ಯ ಮತ್ತು ಪುರಾಣಗಳಲ್ಲಿ ಆಗಾಗ ಕಾಣಿಸಿಕೊಳ್ಳುವ ಒಂದು ಪಾತ್ರವೇ ಹೊರತು ಐತಿಹಾಸಿಕ ವ್ಯಕ್ತಿಯಲ್ಲ. ಹೀಗಾಗಿ ಈ ಕಥನವನ್ನು ಪುರಾಣ-ಕಾವ್ಯಗಳ ಭಾಗವಾಗಿ ನೋಡಬೇಕೇ ವಿನಾ ವಾಸ್ತವ ಸತ್ಯವೆಂದು ಅಲ್ಲ.

ವಾಲ್ಮೀಕಿಯ ಕುರಿತಾದ ನಂಬಿಕೆಗಲೂ ಕಾಲಾಂತರದಲ್ಲಿ ಹಲವು ರೂಪಗಳನ್ನು ಧರಿಸಿವೆ. ಮಹಾಕಾವ್ಯದ ಭವ್ಯತೆ ದಿವ್ಯತೆಗಳನ್ನು ಹೆಚ್ಚು ಮಾಡಲು ಇಂಥ ಕತೆಗಳು ಸೇರಿಕೊಳ್ಳುತ್ತವೆ.

ಭಾರತದ ವಿವಿಧ ಭಾಷೆಗಳಲ್ಲಿ ಕಂಡು ಬರುವ ಜನಪದ ರಾಮಾಯಣಗಳ ವಸ್ತು ವಾಲ್ಮೀಕಿ ರಾಮಾಯಣಕ್ಕಿಂತ ತುಂಬ ಬೇರೆಯಾಗಿವೆ. ಎಷ್ಟೋ ರಾಮಾಯಣಗಳಲ್ಲಿ ಸೀತೆಯನ್ನು ಲಕ್ಷ್ಮಣ ಗೆದ್ದು ರಾಮನಿಗೆ ಅರ್ಪಿಸುವುದಿದೆ. ವಾಲ್ಮೀಕಿ ಇಂಥ ಹಲವು ರಾಮಾಯಣಗಳನ್ನು ಕೇಳಿ ಕೊನೆಗೆ ತನ್ನದೇ ಆದ ಒಂದು ರಾಮಾಯಣ ನಿರ್ಮಿಸಿರುವ ಸಾಧ್ಯತೆಯೇ ಹೆಚ್ಚು. ಏನಿದ್ದರೂ ಇದು ಕೋಳಿ ಮತ್ತು ಮೊಟ್ಟೆಯ ಕತೆ. ಯಾವುದರಿಂದ ಯಾವುದು ಹುಟ್ಟಿತು, ಯಾವುದು ಮೂಲ ಎಂದು ಹೇಳುವುದು ಅಸಾಧ್ಯ.

ಈಚಿನ ರಾಜಕೀಯದ ಭಾಗವಾಗಿ ‘ಸಂಸ್ಕೃತದ ರಾಮಾಯಣಕ್ಕೆ ಪ್ರತಿರೋಧವಾಗಿ ದೇಶಭಾಷೆಯಲ್ಲಿ ರಾಮಾಯಣವನ್ನು ಮರುಸೃಷ್ಟಿಸುತ್ತಿದ್ದಾರೆಂಬ’ ಆರೋಪವನ್ನು ಹಲವರು ಮಾಡುತ್ತಾ, ಮೂಲಕ್ಕೆ ನಿಷ್ಟರಾಗಿರಬೇಕೆಂಬ ಮಾತನ್ನು ಹೇಳುತ್ತಿದ್ದಾರೆ. ಇದನ್ನು ಒಪ್ಪಿಕೊಂಡರೆ, ಸಂಸ್ಕೃತದಲ್ಲೂ ಹಲವು ರಾಮಾಯಣಗಳಿರುವುದಕ್ಕೆ ಹೇಗೆ ಸಾಧ್ಯವಾಯಿತು? ಎಂಬ ಪ್ರಶ್ನೆಗೆ ಉತ್ತರ ನೀಡಬೇಕಾಗುತ್ತದೆ. ಭಾಸನ ‘ಪ್ರತಿಮಾನಾಟಕ’, ಮತ್ತು ‘ಅಭಿಷೇಕ’ ನಾಟಕಗಳು ಇದಕ್ಕೊಂದು ಉತ್ತಮ ಉದಾಹರಣೆ.

ಇದನ್ನೂ ಓದಿ: ‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್‌; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ

ಆಧ್ಯಾತ್ಮ ನಾಮಾಯಣ, ವಶಿಷ್ಟ ರಾಮಾಯಣ, ಆನಂದ ರಾಮಾಯಣ, ಅಗಸ್ತ್ಯ ರಾಮಾಯಣ, ಅದ್ಭುತ ರಾಮಾಯಣ, ಉತ್ತರ ರಾಮಚರಿತ – ಹೀಗೆ ಹಲವು ರಾಮಾಯಣಗಳ ಪರಂರೆ ಸಂಸ್ಕೃತಕ್ಕೇ ಇದೆ. ಅದೇ ರೀತಿಯಲ್ಲಿ ಭಾರತೀಯ ಭಾಷೆಗಳು ಕಂಬನ್‌ ರಾಮಾಯಣ, ತುಲಸೀ ರಾಮಾಯಣ ಮೊದಲಾದುವುಗಳನ್ನು ಸೃಷ್ಟಿಸಿಕೊಂಡಿವೆ. ಈ ನಿಟ್ಟಿನಲ್ಲಿ ಕನ್ನಡದಲ್ಲಿ ಬಂದ ಮಹತ್ಕೃತಿ ಕುವೆಂಪು ಅವರ ‘ಶ್ರೀರಾಮಾಯಣ ದರ್ಶನಂ’. 20 ನೇ ಶತಮಾನಕ್ಕೆ ರಾಮಾಯಣ ಮುಖಾ ಮುಖಿಯಾದಾಗ ಹುಟ್ಟಿಕೊಂಡ ಮಹಾಕಾವ್ಯವದು.

ಈ ಬಹುಪಠ್ಯಗಳು ಮೂಲತಃ ಭಾರತದ ವೈವಿಧ್ಯತೆಗಳಿಗೊಂದು ರೂಪಕ. ವ್ಯಾಸರು ಬರೆದ ಮಹಾಭಾರತದ ಸಾವಿರಾರು ಪಠ್ಯಗಳನ್ನು ಪ್ರಖ್ಯಾತ ಸಂಸ್ಕೃತ ವಿದ್ವಾಂಸರಾಗಿದ್ದ ಶ್ರೀ ವಿಷ್ಣು ಎಸ್. ಸೂಕ್ತಂಕರ್ ಸಂಗ್ರಹಿಸಿ, ಅದರಿಂದ ಒಂದು ಪಠ್ಯವನ್ನು ಪರಿಷ್ಕರಿಸಿ ಪೂನಾದಿಂದ ಪ್ರಕಟಿಸಿದರು. ಹಾಗೆ ಪ್ರಕಟಿಸುವಾಗ ಅವರು ಬರೆದ ಬಹಳ ಮಹತ್ವದ ವಾಕ್ಯವೊಂದು ಇಂತಿದೆ- “ವ್ಯಾಸರು ಬರೆದ ಮೂಲ ಪಠ್ಯ ಹೇಗಿದ್ದಿರಬಹುದೆಂದು ಸಾಧಿಸುವುದು ಸಾಧ್ಯವಿಲ್ಲದ ಕೆಲಸ. ಈಗ ನಾವು ಸಿದ್ಧಪಡಿಸಿದ್ದು ಮಹಾಭಾರತದ ಇನ್ನೊಂದು ಪಠ್ಯ ಅಷ್ಟೆ”. ಈ ಮಾತು ರಾಮಾಯಣಕ್ಕೂ ಅನ್ವಯವಾಗುತ್ತದೆ.

ಗಮನಿಸಬೇಕಾದ ವಿಷಯವೆಂದರೆ, ನಮ್ಮ ದೇಶದಲ್ಲಿ ವಿವಿಧ ಸಮುದಾಯಗಳು ಕಾವ್ಯವನ್ನು ತಮಗೆ ಬೇಕಾದಂತೆ ಮತ್ತೆ ಮತ್ತೆ ಬರೆದುಕೊಳ್ಳುತ್ತವೆ ಅಥವಾ ಹೇಳಿಕೊಳ್ಳುತ್ತವೆ ಎಂಬುದನ್ನು ನಾವೀಗ ಮರೆತುಬಿಟ್ಟಿರುವುದು. ತನ್ನ ಕಾಲದ, ಸಮುದಾಯದ, ಪ್ರದೇಶದ ಮತ್ತು ನಿರೂಪಕನ ಅಗತ್ಯಗಳಿಗೆ ಅನುಗುಣವಾಗಿ ಕಾವ್ಯಗಳನ್ನು ಮತ್ತೆ ಮತ್ತೆ ಬರೆಯಲಾಗುತ್ತದೆ. ಆಕಾಶದಲ್ಲಿರುವ ನಕ್ಷತ್ರಗಳ ಹಾಗೆ. ಅವುಗಳನ್ನು ನಾವು ಎಣಿಸಲಾರೆವು, ಅವುಗಳಿಗೆ ವ್ಯಾಕರಣವನ್ನೂ ಬರೆಯಲಾರೆವು, ಆದರೆ ಅವು ಆಗಸದ ಒಟ್ಟಂದವನ್ನು ಹೆಚ್ಚಿಸಿವೆ.

ಕುವೆಂಪು ಮತ್ತು ಅವರು ಬರೆದ ರಾಮಾಯಣದ ಬಗ್ಗೆ ಈಗ ನಡೆಯುತ್ತಿರುವ ಚರ್ಚೆಗಳು ಮತ್ತು ಆರೋಪಗಳು ರಾಜಕೀಯ ಪ್ರೇರಿತವಾದುವು. ಅವುಗಳನ್ನು ರಾಜಕೀಯವಾಗಿಯೇ ಎದುರಿಸಬೇಕು ಅಷ್ಟೆ.

ಇದನ್ನೂ ಓದಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...