Homeಮುಖಪುಟಹಲವು ರಾಮಾಯಣಗಳಲ್ಲಿ, ಯಾವುದು ಮೂಲ ರಾಮಾಯಣ?

ಹಲವು ರಾಮಾಯಣಗಳಲ್ಲಿ, ಯಾವುದು ಮೂಲ ರಾಮಾಯಣ?

- Advertisement -
- Advertisement -

ಕನ್ನಡದ ಪ್ರಸಿದ್ಧ ಕವಿಯಾದ ಕುಮಾರವ್ಯಾಸನು ‘ತಿಣುಕಿದನು ಫಣಿರಾಯ ರಾಮಾಯಣದ ಕತೆಗಳ ಭಾರದಲಿ’ ಎಂಬ ಮಾತನ್ನು ಹೇಳುತ್ತಾನೆ. ಅವನಿಗೆ ಕನ್ನಡ ನಾಡೂ ಸೇರಿದಂತೆ ಭಾರತದ ಹಲವು ಕಡೆಗಳಲ್ಲಿ ಪ್ರಚಲಿತದಲ್ಲಿದ್ದ ಹಲವು ರಾಮಾಯಣಗಳ ಬಗ್ಗೆ ತಿಳಿದಿತ್ತು. 10 ನೇ ಶತಮಾನದ ಕೊನೆಯಲ್ಲಿ ರಚಿತವಾದ ನಾಗಚಂದ್ರನ ‘ರಾಮಚಂದ್ರ ಚರಿತ ಪುರಾಣ’, 16 ನೇ ಶತಮಾನದ ತೊರವೆ ನರಹರಿಯ ‘ತೊರವೆ ರಾಮಾಯಣ’, 12-18ನೇ ಶತಮಾನಗಳಲ್ಲಿ ರಚಿತವಾದ ಯಕ್ಷಗಾನ ರಾಮಾಯಣಗಳು, ಮುದ್ದಣನ ರಾಮಾಶ್ವಮೇಧ, ಅದ್ಭುತ ರಾಮಾಯಣ – ಕೆಲವು ಉದಾಹರಣೆಗಳಷ್ಟೆ.

ದೇಶದಾದ್ಯಂತ ಹಲವು ಜನಪದ ರಾಮಾಯಣಗಳಿವೆ. ಈ ಜನಪದ ರಾಮಾಯಣಗಳು ರಾಮ ಕೇಂದ್ರಿತವಾಗಿರದೆ, ಬಹುಮಟ್ಟಿಗೆ ಸೀತಾ ಕೇಂದ್ರಿತವಾಗಿವೆ. ಚಿತ್ರ ಪಟ ರಾಮಾಯಣದಲ್ಲಿ ಸೀತೆಯು ಲಂಕೆಯಿಂದ ಹಿಂದೆ ಬಂದ ಆನಂತರ ರಾವಣ ಚಿತ್ರ ಬರೆಯುವ ಮಾರ್ಮಿಕ ಘಟನೆಯ ವಿವರ ಬರುತ್ತದೆ. ಈ ನಡುವೆ ಹಲವಾರು ರಾಮಾಯಣಗಳು ಒಂದು ಕಾಲದಲ್ಲಿ ಅಸ್ತಿತ್ವದಲ್ಲಿದ್ದು ಆನಂತರ ಕಾಣೆಯಾಗಿವೆ. ರಾಮಾಯಣದ ವಸ್ತುವು ಬರ್ಮಾ, ಲಾವೋಸ್‌, ಫಿಲಿಪೈನ್ಸ್‌, ನೇಪಾಲ, ಜಪಾನ್‌, ಮಂಗೋಲಿಯಾ ಇಂಡೊನೇಷಿಯಾ, ಮಲೇಷಿಯಾ, ಕಾಂಬೋಡಿಯಾ, ಶ್ರೀಲಂಕಾ ದೇಶಗಳ ಸಂಸ್ಕೃತಿಗಳನ್ನು ಆಳವಾಗಿ ಪ್ರವೇಶಿಸಿ ಮರು ಹುಟ್ಟು ಪಡೆಯುತ್ತಿವೆ.

ಇದನ್ನೂ ಓದಿ: ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ!- ಎಚ್. ಡಿ. ಕುಮಾರಸ್ವಾಮಿ ಆಕ್ರೋಶ

ಈ ಎಲ್ಲಾ ರಾಮಾಯಣಗಳಿಗೆ ಮೂಲ ಆದಿಕವಿ ವಾಲ್ಮೀಕಿಯ ರಾಮಾಯಣ ಎಂದು ಹೇಳಲಾಗಿದೆ. ವಾಲ್ಮೀಕಿಗೆ ರಾಮ ಕತೆಯನ್ನು ನಾರದ ಹೇಳಿದನೆಂಬ ನಂಬಿಕೆಯೂ ಇದೆ. ಈ ನಾರದ ಬ್ರಹ್ಮನ ಮಗನಾಗಿದ್ದು ಭಾರತೀಯ ಮಹಾಕಾವ್ಯ ಮತ್ತು ಪುರಾಣಗಳಲ್ಲಿ ಆಗಾಗ ಕಾಣಿಸಿಕೊಳ್ಳುವ ಒಂದು ಪಾತ್ರವೇ ಹೊರತು ಐತಿಹಾಸಿಕ ವ್ಯಕ್ತಿಯಲ್ಲ. ಹೀಗಾಗಿ ಈ ಕಥನವನ್ನು ಪುರಾಣ-ಕಾವ್ಯಗಳ ಭಾಗವಾಗಿ ನೋಡಬೇಕೇ ವಿನಾ ವಾಸ್ತವ ಸತ್ಯವೆಂದು ಅಲ್ಲ.

ವಾಲ್ಮೀಕಿಯ ಕುರಿತಾದ ನಂಬಿಕೆಗಲೂ ಕಾಲಾಂತರದಲ್ಲಿ ಹಲವು ರೂಪಗಳನ್ನು ಧರಿಸಿವೆ. ಮಹಾಕಾವ್ಯದ ಭವ್ಯತೆ ದಿವ್ಯತೆಗಳನ್ನು ಹೆಚ್ಚು ಮಾಡಲು ಇಂಥ ಕತೆಗಳು ಸೇರಿಕೊಳ್ಳುತ್ತವೆ.

ಭಾರತದ ವಿವಿಧ ಭಾಷೆಗಳಲ್ಲಿ ಕಂಡು ಬರುವ ಜನಪದ ರಾಮಾಯಣಗಳ ವಸ್ತು ವಾಲ್ಮೀಕಿ ರಾಮಾಯಣಕ್ಕಿಂತ ತುಂಬ ಬೇರೆಯಾಗಿವೆ. ಎಷ್ಟೋ ರಾಮಾಯಣಗಳಲ್ಲಿ ಸೀತೆಯನ್ನು ಲಕ್ಷ್ಮಣ ಗೆದ್ದು ರಾಮನಿಗೆ ಅರ್ಪಿಸುವುದಿದೆ. ವಾಲ್ಮೀಕಿ ಇಂಥ ಹಲವು ರಾಮಾಯಣಗಳನ್ನು ಕೇಳಿ ಕೊನೆಗೆ ತನ್ನದೇ ಆದ ಒಂದು ರಾಮಾಯಣ ನಿರ್ಮಿಸಿರುವ ಸಾಧ್ಯತೆಯೇ ಹೆಚ್ಚು. ಏನಿದ್ದರೂ ಇದು ಕೋಳಿ ಮತ್ತು ಮೊಟ್ಟೆಯ ಕತೆ. ಯಾವುದರಿಂದ ಯಾವುದು ಹುಟ್ಟಿತು, ಯಾವುದು ಮೂಲ ಎಂದು ಹೇಳುವುದು ಅಸಾಧ್ಯ.

ಈಚಿನ ರಾಜಕೀಯದ ಭಾಗವಾಗಿ ‘ಸಂಸ್ಕೃತದ ರಾಮಾಯಣಕ್ಕೆ ಪ್ರತಿರೋಧವಾಗಿ ದೇಶಭಾಷೆಯಲ್ಲಿ ರಾಮಾಯಣವನ್ನು ಮರುಸೃಷ್ಟಿಸುತ್ತಿದ್ದಾರೆಂಬ’ ಆರೋಪವನ್ನು ಹಲವರು ಮಾಡುತ್ತಾ, ಮೂಲಕ್ಕೆ ನಿಷ್ಟರಾಗಿರಬೇಕೆಂಬ ಮಾತನ್ನು ಹೇಳುತ್ತಿದ್ದಾರೆ. ಇದನ್ನು ಒಪ್ಪಿಕೊಂಡರೆ, ಸಂಸ್ಕೃತದಲ್ಲೂ ಹಲವು ರಾಮಾಯಣಗಳಿರುವುದಕ್ಕೆ ಹೇಗೆ ಸಾಧ್ಯವಾಯಿತು? ಎಂಬ ಪ್ರಶ್ನೆಗೆ ಉತ್ತರ ನೀಡಬೇಕಾಗುತ್ತದೆ. ಭಾಸನ ‘ಪ್ರತಿಮಾನಾಟಕ’, ಮತ್ತು ‘ಅಭಿಷೇಕ’ ನಾಟಕಗಳು ಇದಕ್ಕೊಂದು ಉತ್ತಮ ಉದಾಹರಣೆ.

ಇದನ್ನೂ ಓದಿ: ‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್‌; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ

ಆಧ್ಯಾತ್ಮ ನಾಮಾಯಣ, ವಶಿಷ್ಟ ರಾಮಾಯಣ, ಆನಂದ ರಾಮಾಯಣ, ಅಗಸ್ತ್ಯ ರಾಮಾಯಣ, ಅದ್ಭುತ ರಾಮಾಯಣ, ಉತ್ತರ ರಾಮಚರಿತ – ಹೀಗೆ ಹಲವು ರಾಮಾಯಣಗಳ ಪರಂರೆ ಸಂಸ್ಕೃತಕ್ಕೇ ಇದೆ. ಅದೇ ರೀತಿಯಲ್ಲಿ ಭಾರತೀಯ ಭಾಷೆಗಳು ಕಂಬನ್‌ ರಾಮಾಯಣ, ತುಲಸೀ ರಾಮಾಯಣ ಮೊದಲಾದುವುಗಳನ್ನು ಸೃಷ್ಟಿಸಿಕೊಂಡಿವೆ. ಈ ನಿಟ್ಟಿನಲ್ಲಿ ಕನ್ನಡದಲ್ಲಿ ಬಂದ ಮಹತ್ಕೃತಿ ಕುವೆಂಪು ಅವರ ‘ಶ್ರೀರಾಮಾಯಣ ದರ್ಶನಂ’. 20 ನೇ ಶತಮಾನಕ್ಕೆ ರಾಮಾಯಣ ಮುಖಾ ಮುಖಿಯಾದಾಗ ಹುಟ್ಟಿಕೊಂಡ ಮಹಾಕಾವ್ಯವದು.

ಈ ಬಹುಪಠ್ಯಗಳು ಮೂಲತಃ ಭಾರತದ ವೈವಿಧ್ಯತೆಗಳಿಗೊಂದು ರೂಪಕ. ವ್ಯಾಸರು ಬರೆದ ಮಹಾಭಾರತದ ಸಾವಿರಾರು ಪಠ್ಯಗಳನ್ನು ಪ್ರಖ್ಯಾತ ಸಂಸ್ಕೃತ ವಿದ್ವಾಂಸರಾಗಿದ್ದ ಶ್ರೀ ವಿಷ್ಣು ಎಸ್. ಸೂಕ್ತಂಕರ್ ಸಂಗ್ರಹಿಸಿ, ಅದರಿಂದ ಒಂದು ಪಠ್ಯವನ್ನು ಪರಿಷ್ಕರಿಸಿ ಪೂನಾದಿಂದ ಪ್ರಕಟಿಸಿದರು. ಹಾಗೆ ಪ್ರಕಟಿಸುವಾಗ ಅವರು ಬರೆದ ಬಹಳ ಮಹತ್ವದ ವಾಕ್ಯವೊಂದು ಇಂತಿದೆ- “ವ್ಯಾಸರು ಬರೆದ ಮೂಲ ಪಠ್ಯ ಹೇಗಿದ್ದಿರಬಹುದೆಂದು ಸಾಧಿಸುವುದು ಸಾಧ್ಯವಿಲ್ಲದ ಕೆಲಸ. ಈಗ ನಾವು ಸಿದ್ಧಪಡಿಸಿದ್ದು ಮಹಾಭಾರತದ ಇನ್ನೊಂದು ಪಠ್ಯ ಅಷ್ಟೆ”. ಈ ಮಾತು ರಾಮಾಯಣಕ್ಕೂ ಅನ್ವಯವಾಗುತ್ತದೆ.

ಗಮನಿಸಬೇಕಾದ ವಿಷಯವೆಂದರೆ, ನಮ್ಮ ದೇಶದಲ್ಲಿ ವಿವಿಧ ಸಮುದಾಯಗಳು ಕಾವ್ಯವನ್ನು ತಮಗೆ ಬೇಕಾದಂತೆ ಮತ್ತೆ ಮತ್ತೆ ಬರೆದುಕೊಳ್ಳುತ್ತವೆ ಅಥವಾ ಹೇಳಿಕೊಳ್ಳುತ್ತವೆ ಎಂಬುದನ್ನು ನಾವೀಗ ಮರೆತುಬಿಟ್ಟಿರುವುದು. ತನ್ನ ಕಾಲದ, ಸಮುದಾಯದ, ಪ್ರದೇಶದ ಮತ್ತು ನಿರೂಪಕನ ಅಗತ್ಯಗಳಿಗೆ ಅನುಗುಣವಾಗಿ ಕಾವ್ಯಗಳನ್ನು ಮತ್ತೆ ಮತ್ತೆ ಬರೆಯಲಾಗುತ್ತದೆ. ಆಕಾಶದಲ್ಲಿರುವ ನಕ್ಷತ್ರಗಳ ಹಾಗೆ. ಅವುಗಳನ್ನು ನಾವು ಎಣಿಸಲಾರೆವು, ಅವುಗಳಿಗೆ ವ್ಯಾಕರಣವನ್ನೂ ಬರೆಯಲಾರೆವು, ಆದರೆ ಅವು ಆಗಸದ ಒಟ್ಟಂದವನ್ನು ಹೆಚ್ಚಿಸಿವೆ.

ಕುವೆಂಪು ಮತ್ತು ಅವರು ಬರೆದ ರಾಮಾಯಣದ ಬಗ್ಗೆ ಈಗ ನಡೆಯುತ್ತಿರುವ ಚರ್ಚೆಗಳು ಮತ್ತು ಆರೋಪಗಳು ರಾಜಕೀಯ ಪ್ರೇರಿತವಾದುವು. ಅವುಗಳನ್ನು ರಾಜಕೀಯವಾಗಿಯೇ ಎದುರಿಸಬೇಕು ಅಷ್ಟೆ.

ಇದನ್ನೂ ಓದಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...