Homeಮುಖಪುಟಪಂಜಾಬ್‌‌ನಲ್ಲಿ ದಲಿತ ಮುಖ್ಯಮಂತ್ರಿ: ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳ!

ಪಂಜಾಬ್‌‌ನಲ್ಲಿ ದಲಿತ ಮುಖ್ಯಮಂತ್ರಿ: ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳ!

2022ರಲ್ಲಿ ವಿಧಾನಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್ ಸಜ್ಜಾಗಿದೆ. ಸಿಖ್‌ ದಲಿತ ವ್ಯಕ್ತಿಯನ್ನು ಪಂಜಾಬ್‌‌ ಮುಖ್ಯಮಂತ್ರಿಯನ್ನಾಗಿ ನೇಮಿಸಿರುವಲ್ಲಿ ಈ ಎರಡು ಕಾರಣಗಳು ಮುಖ್ಯವಾಗಿವೆ.

- Advertisement -
- Advertisement -

ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಬಳಿಕ ಪಂಜಾಬ್‌ ಮುಖ್ಯಮಂತ್ರಿ ಯಾರಾಗುತ್ತಾರೆಂಬ ಕುತೂಹಲ ಎಲ್ಲರಲ್ಲೂ ಇತ್ತು. ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯುತ್ತಿರುವುದರಿಂದ ಕಾಂಗ್ರೆಸ್ ಯಾವ ಹೆಜ್ಜೆ ಇಡಬಹುದು ಎಂಬ ಕುತೂಹಲ ರಾಜಕೀಯ ಪಡಸಾಲೆಯಲ್ಲಿ ನೆಲೆಸಿತ್ತು. ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್‌ ಪಕ್ಷವು ಸಿಖ್‌ ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿಯಾಗಿ ಘೋಷಿಸಿದ್ದು, ಪಂಜಾಬ್‌ನಲ್ಲಿ ಅತಿಹೆಚ್ಚಿರುವ ದಲಿತ ಸಮುದಾಯದ ಮೊದಲ ಮುಖ್ಯಮಂತ್ರಿಯೂ ಅವರಾಗಿದ್ದಾರೆ.

ಚರಣ್‌‌ಜಿತ್‌ ಸಿಂಗ್‌ ಚನ್ನಿ ಅವರನ್ನು ಮುಖ್ಯಮಂತ್ರಿಯಾಗಿ ಮಾಡುತ್ತಿರುವುದರ ಹಿಂದೆ ರಾಜಕೀಯ ಲೆಚ್ಚಾಚಾರಗಳಿವೆ. ಜಾತಿ ಧ್ರುವೀಕರಣದ ಯೋಚನೆ ಇದೆ. ಪಂಜಾಬ್‌‌ನಲ್ಲಿ ಕಾಂಗ್ರೆಸ್ಸೇತರ ಪಕ್ಷಗಳು ಇಟ್ಟಿರುವ ಹೆಜ್ಜೆಗಳು ಇದಕ್ಕೆ ಕಾರಣವಾಗಿದೆ.

ನವಜೋತ್‌ ಸಿಂಗ್‌ ಸಿಧು ಅವರೊಂದಿಗೆ ನಿಂತು ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ವಿರುದ್ಧ ಸಮರ ಸಾರಿ, ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಕಾರಣರಾದವರಲ್ಲಿ ಚಮ್‌ಕೌರ್‌‌ ಸಾಹಿಬ್‌ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕ ಚನ್ನಿ ಕೂಡ ಒಬ್ಬರಾಗಿದ್ದಾರೆ. ಗುರುದಾಸ್‌ಪುರ ಪ್ರಾಂತ್ಯದ ದೆರಾ ಬಾಬಾ ನಾಯಕ್‌ ವಿಧಾನಸಭಾ ಕ್ಷೇತ್ರದ ಸುಖ್‌ಜಿಂದರ್‌ ಸಿಂಗ್‌ ರಾಂದ್ವಾ ಅವರು ಮುಖ್ಯಮಂತ್ರಿಯಾಗುತ್ತಾರೆ ಎನ್ನುತ್ತಿರುವಾಗಲೇ ಚನ್ನಿ ಹೆಸರು ಘೋಷಣೆಯಾಗಿದ್ದು ಅಚ್ಚರಿಯೇ ಸರಿ.

ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿ: ಚರಣಜಿತ್ ಸಿಂಗ್ ಚನ್ನಿ ಕುರಿತ ವಿವರಗಳು

ಹಾಗಿದ್ದರೆ ಚನ್ನಿ ಅವರ ಆಯ್ಕೆ ಹಿಂದಿನ ಲೆಕ್ಕಾಚಾರವೇನು?

‘ದಿ ವೈರ್‌’ ಜಾಲತಾಣದಲ್ಲಿ ಲೇಖಕ ವಿವೇಕ್‌ ಗುಪ್ತಾ ಅವರು ಹೀಗೆ ವಿವರಿಸುತ್ತಾರೆ:

1. ಮಜ್ಹಾ ಪ್ರದೇಶದ ಸುಖ್‌ಜಿಂದರ್‌ ರಾಂಧ್ವಾ ಆಯ್ಕೆಗಿಂತ ನಜಜೋತ್‌ ಸಿಧು ಅವರು ಚನ್ನಿ ಅವರ ಆಯ್ಕೆಯನ್ನು ಬಯಸಿದ್ದರು. ಮುಂದಿನ ಚುನಾವಣೆಯ ನಾಯಕತ್ವವನ್ನು ನಿಭಾಯಿಸಬೇಕಾಗಿರುವುದರಿಂದ ಮುಖ್ಯಮಂತ್ರಿ ಪಟ್ಟವನ್ನು ಸಿಧು ಬಯಸಲಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ಕುಳಿತರೆ ಚುನಾವಣೆ ಮಂಕಾಗಬಹುದು ಎಂಬುದು ಸಿಧು ಅವರ ಆಲೋಚನೆಯಾಗಿತ್ತು. ಅಂದರೆ ಸಿಧು ಮುಂದಿನ ಚುನಾವಣೆಯ ನಾಯಕತ್ವ ವಹಿಸುವುದು ಖಚಿತ. ಚುನಾವಣೆಯಲ್ಲಿ ಪಕ್ಷವನ್ನು ಸಂಘಟಿಸಿ, ಮುಂದೆ ಸಿಧು ಮಹೋನ್ನತ ಸ್ಥಾನವನ್ನು ಪಡೆಯಲಿದ್ದಾರೆ. ಸಿಧು ಉನ್ನತಿಗೆ ಚನ್ನಿ ಅವರು ತೊಡಕಾಗುವುದಿಲ್ಲ. ಪ್ರಭಾವಿ ವ್ಯಕ್ತಿಯಾದ ಸುಖ್‌ಜಿಂದರ್‌ ಆಯ್ಕೆಯಾದರೆ ಸಿಧು ಅವರ ನಾಯಕತ್ವಕ್ಕೆ ತೊಡಕಾಗುತ್ತಿತ್ತು ಎಂಬ ಲೆಕ್ಕಾಚಾರ ಇಲ್ಲಿದೆ.

2. ಚನ್ನಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿದರೆ ಪಂಜಾಬ್‌ನಲ್ಲಿ ದಲಿತ ಮತಗಳು ಚದುರಿ ಹೋಗುವುದಿಲ್ಲ ಎಂಬ ಲೆಕ್ಕಾಚಾರವಿದೆ. ರಾಜ್ಯದ ಮೂರು ಕೋಟಿ ಜನಸಂಖ್ಯೆಯಲ್ಲಿ ಮೂರನೇ ಒಂದು ಭಾಗ ದಲಿತರಿದ್ದಾರೆ. ಅತಿ ಹೆಚ್ಚು ದಲಿತರಿರುವ ರಾಜ್ಯ ಪಂಜಾಬ್‌ ಆಗಿದೆ. ರಾಜ್ಯದ ಜನಸಂಖ್ಯೆಯಲ್ಲಿ ಶೇ. 32ರಷ್ಟು ದಲಿತರಿದ್ದಾರೆ ಎಂದು 2011ರ ಜನಗಣತಿ ಹೇಳುತ್ತದೆ.

ಜಾಟ್‌ ಸಮುದಾಯದ ಪ್ರಾಬಲ್ಯವಿರುವ ಶಿರೋಮಣಿ ಅಕಾಲಿ ದಳ ಪಕ್ಷವು, ದಲಿತರೊಂದಿಗೆ ಗುರುತಿಸಿಕೊಂಡಿರುವ ಬಹುಜನ ಸಮಾಜ ಪಾರ್ಟಿ (ಬಿಎಸ್‌‌ಪಿ) ಜೊತೆ ಪಂಜಾಬ್‌ನಲ್ಲಿ ಮೈತ್ರಿ ಮಾಡಿಕೊಂಡಿರುವುದರಿಂದ ಪಂಜಾಬ್‌‌ನಲ್ಲಿ ದಲಿತ ರಾಜಕಾರಣವು ಗಮನ ಸೆಳೆದಿದೆ. ಸರ್ಕಾರವನ್ನು ರಚಿಸಬೇಕಾದರೆ ದಲಿತರ ಮತಗಳು ಅಗತ್ಯ. ಹೀಗಾಗಿ ಚನ್ನಿ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸಲಾಗಿದೆ.

“ಪಂಜಾಬ್‌ ಕಾಂಗ್ರೆಸ್ ಮುಖ್ಯಸ್ಥನಾಗಿ ಜಾಟ್‌ ಸಿಖ್‌ (ಸಿಧು), ಮುಖ್ಯಮಂತ್ರಿಯಾಗಿ ಸಿಖ್‌ ದಲಿತ ವ್ಯಕ್ತಿ ಎಂಬ ರಾಜಕೀಯ ತಂತ್ರವನ್ನು ರೂಪಿಸಿ 2022ರ ಚುನಾವಣೆಯನ್ನು ಎದುರಿಸುವುದು ಕಾಂಗ್ರೆಸ್‌ನ ನಡೆಯಾಗಿದೆ” ಎಂದು ರಾಜಕೀಯ ವಿಶ್ಲೇಷಕ ಹರ್‌ಜೇಶ್ವರ್‌ ಪಾಲ್‌ ಸಿಂಗ್‌ ಹೇಳುತ್ತಾರೆ.

ರಾಜಕೀಯ ವಿಶ್ಲೇಷಕ ಖಾಲಿದ್ ಮೊಹಮ್ಮದ್ ಅವರ ಪ್ರಕಾರ, ಚನ್ನಿಯವರ ನೇಮಕಾತಿಯು ಕೇವಲ ಸಿಧು ಅವರ ಆಜ್ಞೆಯ ಮೇರೆಗೆ ಮಾಡಿದ ಒಂದು ಮಧ್ಯಂತರ ವ್ಯವಸ್ಥೆಯಾಗಿದೆ.

Photo Courtesy: The Tribune (ಪೋಟೋ: ಚರಣ್‌ಜಿತ್‌ ಸಿಂಗ್‌‌ ಚನ್ನಿ)

“ಮುಖ್ಯಮಂತ್ರಿ ಆಯ್ಕೆಯಲ್ಲಿ ಸಿಧು ಅವರು ಗಾಂಧಿ ಕುಟುಂಬದ ಮೇಲೆ ಪ್ರಭಾವ ಬೀರಿದ್ದಾರೆ. ಚುನಾವಣೆ ಮುಂದಾಳತ್ವ ವಹಿಸಬೇಕಾದರೆ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ತನಗಿಂತ ಪ್ರಭಾವಿಯಾಗಿರಬಾರದು ಎಂಬ ಸಿಧು ಅವರ ಲೆಕ್ಕಾಚಾರದ ಮೇರೆಗೆ ಮುಖ್ಯಮಂತ್ರಿಯರನ್ನು ನೇಮಿಸಲಾಗಿದೆ. ಸಿಧು ಅವರು ಪಕ್ಷವನ್ನು ಮುನ್ನಡೆಸಲಿದ್ದಾರೆ, ಜೊತೆಗೆ ಅಮರಿಂದರ್‌ ಸಿಂಗ್‌ ಅವರ ನಾಯಕತ್ವದಲ್ಲಿ ತೆಗೆದುಕೊಳ್ಳಲು ಸಾಧ್ಯವಾಗದಿದ್ದ ನಿರ್ಧಾರಗಳ ಮೇಲೂ ಈಗ ಸರ್ಕಾರದಲ್ಲಿ ಸಿಧು ಪ್ರಭಾವ ಬೀರಲಿದ್ದಾರೆ” ಎನ್ನುತ್ತಾರೆ ಖಾಲಿದ್‌ ಮೊಹಮ್ಮದ್‌. ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರೂ ಚನ್ನಿ ಅವರ ಆಯ್ಕೆಯನ್ನು ಸ್ವಾಗತಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿ: ಚರಣಜಿತ್ ಸಿಂಗ್ ಚನ್ನಿ ಕುರಿತ ವಿವರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...