Homeಮುಖಪುಟಪಂಜಾಬ್‌‌ನಲ್ಲಿ ದಲಿತ ಮುಖ್ಯಮಂತ್ರಿ: ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳ!

ಪಂಜಾಬ್‌‌ನಲ್ಲಿ ದಲಿತ ಮುಖ್ಯಮಂತ್ರಿ: ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳ!

2022ರಲ್ಲಿ ವಿಧಾನಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್ ಸಜ್ಜಾಗಿದೆ. ಸಿಖ್‌ ದಲಿತ ವ್ಯಕ್ತಿಯನ್ನು ಪಂಜಾಬ್‌‌ ಮುಖ್ಯಮಂತ್ರಿಯನ್ನಾಗಿ ನೇಮಿಸಿರುವಲ್ಲಿ ಈ ಎರಡು ಕಾರಣಗಳು ಮುಖ್ಯವಾಗಿವೆ.

- Advertisement -
- Advertisement -

ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಬಳಿಕ ಪಂಜಾಬ್‌ ಮುಖ್ಯಮಂತ್ರಿ ಯಾರಾಗುತ್ತಾರೆಂಬ ಕುತೂಹಲ ಎಲ್ಲರಲ್ಲೂ ಇತ್ತು. ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯುತ್ತಿರುವುದರಿಂದ ಕಾಂಗ್ರೆಸ್ ಯಾವ ಹೆಜ್ಜೆ ಇಡಬಹುದು ಎಂಬ ಕುತೂಹಲ ರಾಜಕೀಯ ಪಡಸಾಲೆಯಲ್ಲಿ ನೆಲೆಸಿತ್ತು. ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್‌ ಪಕ್ಷವು ಸಿಖ್‌ ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿಯಾಗಿ ಘೋಷಿಸಿದ್ದು, ಪಂಜಾಬ್‌ನಲ್ಲಿ ಅತಿಹೆಚ್ಚಿರುವ ದಲಿತ ಸಮುದಾಯದ ಮೊದಲ ಮುಖ್ಯಮಂತ್ರಿಯೂ ಅವರಾಗಿದ್ದಾರೆ.

ಚರಣ್‌‌ಜಿತ್‌ ಸಿಂಗ್‌ ಚನ್ನಿ ಅವರನ್ನು ಮುಖ್ಯಮಂತ್ರಿಯಾಗಿ ಮಾಡುತ್ತಿರುವುದರ ಹಿಂದೆ ರಾಜಕೀಯ ಲೆಚ್ಚಾಚಾರಗಳಿವೆ. ಜಾತಿ ಧ್ರುವೀಕರಣದ ಯೋಚನೆ ಇದೆ. ಪಂಜಾಬ್‌‌ನಲ್ಲಿ ಕಾಂಗ್ರೆಸ್ಸೇತರ ಪಕ್ಷಗಳು ಇಟ್ಟಿರುವ ಹೆಜ್ಜೆಗಳು ಇದಕ್ಕೆ ಕಾರಣವಾಗಿದೆ.

ನವಜೋತ್‌ ಸಿಂಗ್‌ ಸಿಧು ಅವರೊಂದಿಗೆ ನಿಂತು ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ವಿರುದ್ಧ ಸಮರ ಸಾರಿ, ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಕಾರಣರಾದವರಲ್ಲಿ ಚಮ್‌ಕೌರ್‌‌ ಸಾಹಿಬ್‌ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕ ಚನ್ನಿ ಕೂಡ ಒಬ್ಬರಾಗಿದ್ದಾರೆ. ಗುರುದಾಸ್‌ಪುರ ಪ್ರಾಂತ್ಯದ ದೆರಾ ಬಾಬಾ ನಾಯಕ್‌ ವಿಧಾನಸಭಾ ಕ್ಷೇತ್ರದ ಸುಖ್‌ಜಿಂದರ್‌ ಸಿಂಗ್‌ ರಾಂದ್ವಾ ಅವರು ಮುಖ್ಯಮಂತ್ರಿಯಾಗುತ್ತಾರೆ ಎನ್ನುತ್ತಿರುವಾಗಲೇ ಚನ್ನಿ ಹೆಸರು ಘೋಷಣೆಯಾಗಿದ್ದು ಅಚ್ಚರಿಯೇ ಸರಿ.

ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿ: ಚರಣಜಿತ್ ಸಿಂಗ್ ಚನ್ನಿ ಕುರಿತ ವಿವರಗಳು

ಹಾಗಿದ್ದರೆ ಚನ್ನಿ ಅವರ ಆಯ್ಕೆ ಹಿಂದಿನ ಲೆಕ್ಕಾಚಾರವೇನು?

‘ದಿ ವೈರ್‌’ ಜಾಲತಾಣದಲ್ಲಿ ಲೇಖಕ ವಿವೇಕ್‌ ಗುಪ್ತಾ ಅವರು ಹೀಗೆ ವಿವರಿಸುತ್ತಾರೆ:

1. ಮಜ್ಹಾ ಪ್ರದೇಶದ ಸುಖ್‌ಜಿಂದರ್‌ ರಾಂಧ್ವಾ ಆಯ್ಕೆಗಿಂತ ನಜಜೋತ್‌ ಸಿಧು ಅವರು ಚನ್ನಿ ಅವರ ಆಯ್ಕೆಯನ್ನು ಬಯಸಿದ್ದರು. ಮುಂದಿನ ಚುನಾವಣೆಯ ನಾಯಕತ್ವವನ್ನು ನಿಭಾಯಿಸಬೇಕಾಗಿರುವುದರಿಂದ ಮುಖ್ಯಮಂತ್ರಿ ಪಟ್ಟವನ್ನು ಸಿಧು ಬಯಸಲಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ಕುಳಿತರೆ ಚುನಾವಣೆ ಮಂಕಾಗಬಹುದು ಎಂಬುದು ಸಿಧು ಅವರ ಆಲೋಚನೆಯಾಗಿತ್ತು. ಅಂದರೆ ಸಿಧು ಮುಂದಿನ ಚುನಾವಣೆಯ ನಾಯಕತ್ವ ವಹಿಸುವುದು ಖಚಿತ. ಚುನಾವಣೆಯಲ್ಲಿ ಪಕ್ಷವನ್ನು ಸಂಘಟಿಸಿ, ಮುಂದೆ ಸಿಧು ಮಹೋನ್ನತ ಸ್ಥಾನವನ್ನು ಪಡೆಯಲಿದ್ದಾರೆ. ಸಿಧು ಉನ್ನತಿಗೆ ಚನ್ನಿ ಅವರು ತೊಡಕಾಗುವುದಿಲ್ಲ. ಪ್ರಭಾವಿ ವ್ಯಕ್ತಿಯಾದ ಸುಖ್‌ಜಿಂದರ್‌ ಆಯ್ಕೆಯಾದರೆ ಸಿಧು ಅವರ ನಾಯಕತ್ವಕ್ಕೆ ತೊಡಕಾಗುತ್ತಿತ್ತು ಎಂಬ ಲೆಕ್ಕಾಚಾರ ಇಲ್ಲಿದೆ.

2. ಚನ್ನಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿದರೆ ಪಂಜಾಬ್‌ನಲ್ಲಿ ದಲಿತ ಮತಗಳು ಚದುರಿ ಹೋಗುವುದಿಲ್ಲ ಎಂಬ ಲೆಕ್ಕಾಚಾರವಿದೆ. ರಾಜ್ಯದ ಮೂರು ಕೋಟಿ ಜನಸಂಖ್ಯೆಯಲ್ಲಿ ಮೂರನೇ ಒಂದು ಭಾಗ ದಲಿತರಿದ್ದಾರೆ. ಅತಿ ಹೆಚ್ಚು ದಲಿತರಿರುವ ರಾಜ್ಯ ಪಂಜಾಬ್‌ ಆಗಿದೆ. ರಾಜ್ಯದ ಜನಸಂಖ್ಯೆಯಲ್ಲಿ ಶೇ. 32ರಷ್ಟು ದಲಿತರಿದ್ದಾರೆ ಎಂದು 2011ರ ಜನಗಣತಿ ಹೇಳುತ್ತದೆ.

ಜಾಟ್‌ ಸಮುದಾಯದ ಪ್ರಾಬಲ್ಯವಿರುವ ಶಿರೋಮಣಿ ಅಕಾಲಿ ದಳ ಪಕ್ಷವು, ದಲಿತರೊಂದಿಗೆ ಗುರುತಿಸಿಕೊಂಡಿರುವ ಬಹುಜನ ಸಮಾಜ ಪಾರ್ಟಿ (ಬಿಎಸ್‌‌ಪಿ) ಜೊತೆ ಪಂಜಾಬ್‌ನಲ್ಲಿ ಮೈತ್ರಿ ಮಾಡಿಕೊಂಡಿರುವುದರಿಂದ ಪಂಜಾಬ್‌‌ನಲ್ಲಿ ದಲಿತ ರಾಜಕಾರಣವು ಗಮನ ಸೆಳೆದಿದೆ. ಸರ್ಕಾರವನ್ನು ರಚಿಸಬೇಕಾದರೆ ದಲಿತರ ಮತಗಳು ಅಗತ್ಯ. ಹೀಗಾಗಿ ಚನ್ನಿ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸಲಾಗಿದೆ.

“ಪಂಜಾಬ್‌ ಕಾಂಗ್ರೆಸ್ ಮುಖ್ಯಸ್ಥನಾಗಿ ಜಾಟ್‌ ಸಿಖ್‌ (ಸಿಧು), ಮುಖ್ಯಮಂತ್ರಿಯಾಗಿ ಸಿಖ್‌ ದಲಿತ ವ್ಯಕ್ತಿ ಎಂಬ ರಾಜಕೀಯ ತಂತ್ರವನ್ನು ರೂಪಿಸಿ 2022ರ ಚುನಾವಣೆಯನ್ನು ಎದುರಿಸುವುದು ಕಾಂಗ್ರೆಸ್‌ನ ನಡೆಯಾಗಿದೆ” ಎಂದು ರಾಜಕೀಯ ವಿಶ್ಲೇಷಕ ಹರ್‌ಜೇಶ್ವರ್‌ ಪಾಲ್‌ ಸಿಂಗ್‌ ಹೇಳುತ್ತಾರೆ.

ರಾಜಕೀಯ ವಿಶ್ಲೇಷಕ ಖಾಲಿದ್ ಮೊಹಮ್ಮದ್ ಅವರ ಪ್ರಕಾರ, ಚನ್ನಿಯವರ ನೇಮಕಾತಿಯು ಕೇವಲ ಸಿಧು ಅವರ ಆಜ್ಞೆಯ ಮೇರೆಗೆ ಮಾಡಿದ ಒಂದು ಮಧ್ಯಂತರ ವ್ಯವಸ್ಥೆಯಾಗಿದೆ.

Photo Courtesy: The Tribune (ಪೋಟೋ: ಚರಣ್‌ಜಿತ್‌ ಸಿಂಗ್‌‌ ಚನ್ನಿ)

“ಮುಖ್ಯಮಂತ್ರಿ ಆಯ್ಕೆಯಲ್ಲಿ ಸಿಧು ಅವರು ಗಾಂಧಿ ಕುಟುಂಬದ ಮೇಲೆ ಪ್ರಭಾವ ಬೀರಿದ್ದಾರೆ. ಚುನಾವಣೆ ಮುಂದಾಳತ್ವ ವಹಿಸಬೇಕಾದರೆ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ತನಗಿಂತ ಪ್ರಭಾವಿಯಾಗಿರಬಾರದು ಎಂಬ ಸಿಧು ಅವರ ಲೆಕ್ಕಾಚಾರದ ಮೇರೆಗೆ ಮುಖ್ಯಮಂತ್ರಿಯರನ್ನು ನೇಮಿಸಲಾಗಿದೆ. ಸಿಧು ಅವರು ಪಕ್ಷವನ್ನು ಮುನ್ನಡೆಸಲಿದ್ದಾರೆ, ಜೊತೆಗೆ ಅಮರಿಂದರ್‌ ಸಿಂಗ್‌ ಅವರ ನಾಯಕತ್ವದಲ್ಲಿ ತೆಗೆದುಕೊಳ್ಳಲು ಸಾಧ್ಯವಾಗದಿದ್ದ ನಿರ್ಧಾರಗಳ ಮೇಲೂ ಈಗ ಸರ್ಕಾರದಲ್ಲಿ ಸಿಧು ಪ್ರಭಾವ ಬೀರಲಿದ್ದಾರೆ” ಎನ್ನುತ್ತಾರೆ ಖಾಲಿದ್‌ ಮೊಹಮ್ಮದ್‌. ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರೂ ಚನ್ನಿ ಅವರ ಆಯ್ಕೆಯನ್ನು ಸ್ವಾಗತಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿ: ಚರಣಜಿತ್ ಸಿಂಗ್ ಚನ್ನಿ ಕುರಿತ ವಿವರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...