Homeಮುಖಪುಟಪಂಜಾಬ್‌‌ನಲ್ಲಿ ದಲಿತ ಮುಖ್ಯಮಂತ್ರಿ: ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳ!

ಪಂಜಾಬ್‌‌ನಲ್ಲಿ ದಲಿತ ಮುಖ್ಯಮಂತ್ರಿ: ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳ!

2022ರಲ್ಲಿ ವಿಧಾನಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್ ಸಜ್ಜಾಗಿದೆ. ಸಿಖ್‌ ದಲಿತ ವ್ಯಕ್ತಿಯನ್ನು ಪಂಜಾಬ್‌‌ ಮುಖ್ಯಮಂತ್ರಿಯನ್ನಾಗಿ ನೇಮಿಸಿರುವಲ್ಲಿ ಈ ಎರಡು ಕಾರಣಗಳು ಮುಖ್ಯವಾಗಿವೆ.

- Advertisement -
- Advertisement -

ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಬಳಿಕ ಪಂಜಾಬ್‌ ಮುಖ್ಯಮಂತ್ರಿ ಯಾರಾಗುತ್ತಾರೆಂಬ ಕುತೂಹಲ ಎಲ್ಲರಲ್ಲೂ ಇತ್ತು. ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯುತ್ತಿರುವುದರಿಂದ ಕಾಂಗ್ರೆಸ್ ಯಾವ ಹೆಜ್ಜೆ ಇಡಬಹುದು ಎಂಬ ಕುತೂಹಲ ರಾಜಕೀಯ ಪಡಸಾಲೆಯಲ್ಲಿ ನೆಲೆಸಿತ್ತು. ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್‌ ಪಕ್ಷವು ಸಿಖ್‌ ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿಯಾಗಿ ಘೋಷಿಸಿದ್ದು, ಪಂಜಾಬ್‌ನಲ್ಲಿ ಅತಿಹೆಚ್ಚಿರುವ ದಲಿತ ಸಮುದಾಯದ ಮೊದಲ ಮುಖ್ಯಮಂತ್ರಿಯೂ ಅವರಾಗಿದ್ದಾರೆ.

ಚರಣ್‌‌ಜಿತ್‌ ಸಿಂಗ್‌ ಚನ್ನಿ ಅವರನ್ನು ಮುಖ್ಯಮಂತ್ರಿಯಾಗಿ ಮಾಡುತ್ತಿರುವುದರ ಹಿಂದೆ ರಾಜಕೀಯ ಲೆಚ್ಚಾಚಾರಗಳಿವೆ. ಜಾತಿ ಧ್ರುವೀಕರಣದ ಯೋಚನೆ ಇದೆ. ಪಂಜಾಬ್‌‌ನಲ್ಲಿ ಕಾಂಗ್ರೆಸ್ಸೇತರ ಪಕ್ಷಗಳು ಇಟ್ಟಿರುವ ಹೆಜ್ಜೆಗಳು ಇದಕ್ಕೆ ಕಾರಣವಾಗಿದೆ.

ನವಜೋತ್‌ ಸಿಂಗ್‌ ಸಿಧು ಅವರೊಂದಿಗೆ ನಿಂತು ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ವಿರುದ್ಧ ಸಮರ ಸಾರಿ, ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಕಾರಣರಾದವರಲ್ಲಿ ಚಮ್‌ಕೌರ್‌‌ ಸಾಹಿಬ್‌ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕ ಚನ್ನಿ ಕೂಡ ಒಬ್ಬರಾಗಿದ್ದಾರೆ. ಗುರುದಾಸ್‌ಪುರ ಪ್ರಾಂತ್ಯದ ದೆರಾ ಬಾಬಾ ನಾಯಕ್‌ ವಿಧಾನಸಭಾ ಕ್ಷೇತ್ರದ ಸುಖ್‌ಜಿಂದರ್‌ ಸಿಂಗ್‌ ರಾಂದ್ವಾ ಅವರು ಮುಖ್ಯಮಂತ್ರಿಯಾಗುತ್ತಾರೆ ಎನ್ನುತ್ತಿರುವಾಗಲೇ ಚನ್ನಿ ಹೆಸರು ಘೋಷಣೆಯಾಗಿದ್ದು ಅಚ್ಚರಿಯೇ ಸರಿ.

ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿ: ಚರಣಜಿತ್ ಸಿಂಗ್ ಚನ್ನಿ ಕುರಿತ ವಿವರಗಳು

ಹಾಗಿದ್ದರೆ ಚನ್ನಿ ಅವರ ಆಯ್ಕೆ ಹಿಂದಿನ ಲೆಕ್ಕಾಚಾರವೇನು?

‘ದಿ ವೈರ್‌’ ಜಾಲತಾಣದಲ್ಲಿ ಲೇಖಕ ವಿವೇಕ್‌ ಗುಪ್ತಾ ಅವರು ಹೀಗೆ ವಿವರಿಸುತ್ತಾರೆ:

1. ಮಜ್ಹಾ ಪ್ರದೇಶದ ಸುಖ್‌ಜಿಂದರ್‌ ರಾಂಧ್ವಾ ಆಯ್ಕೆಗಿಂತ ನಜಜೋತ್‌ ಸಿಧು ಅವರು ಚನ್ನಿ ಅವರ ಆಯ್ಕೆಯನ್ನು ಬಯಸಿದ್ದರು. ಮುಂದಿನ ಚುನಾವಣೆಯ ನಾಯಕತ್ವವನ್ನು ನಿಭಾಯಿಸಬೇಕಾಗಿರುವುದರಿಂದ ಮುಖ್ಯಮಂತ್ರಿ ಪಟ್ಟವನ್ನು ಸಿಧು ಬಯಸಲಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ಕುಳಿತರೆ ಚುನಾವಣೆ ಮಂಕಾಗಬಹುದು ಎಂಬುದು ಸಿಧು ಅವರ ಆಲೋಚನೆಯಾಗಿತ್ತು. ಅಂದರೆ ಸಿಧು ಮುಂದಿನ ಚುನಾವಣೆಯ ನಾಯಕತ್ವ ವಹಿಸುವುದು ಖಚಿತ. ಚುನಾವಣೆಯಲ್ಲಿ ಪಕ್ಷವನ್ನು ಸಂಘಟಿಸಿ, ಮುಂದೆ ಸಿಧು ಮಹೋನ್ನತ ಸ್ಥಾನವನ್ನು ಪಡೆಯಲಿದ್ದಾರೆ. ಸಿಧು ಉನ್ನತಿಗೆ ಚನ್ನಿ ಅವರು ತೊಡಕಾಗುವುದಿಲ್ಲ. ಪ್ರಭಾವಿ ವ್ಯಕ್ತಿಯಾದ ಸುಖ್‌ಜಿಂದರ್‌ ಆಯ್ಕೆಯಾದರೆ ಸಿಧು ಅವರ ನಾಯಕತ್ವಕ್ಕೆ ತೊಡಕಾಗುತ್ತಿತ್ತು ಎಂಬ ಲೆಕ್ಕಾಚಾರ ಇಲ್ಲಿದೆ.

2. ಚನ್ನಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿದರೆ ಪಂಜಾಬ್‌ನಲ್ಲಿ ದಲಿತ ಮತಗಳು ಚದುರಿ ಹೋಗುವುದಿಲ್ಲ ಎಂಬ ಲೆಕ್ಕಾಚಾರವಿದೆ. ರಾಜ್ಯದ ಮೂರು ಕೋಟಿ ಜನಸಂಖ್ಯೆಯಲ್ಲಿ ಮೂರನೇ ಒಂದು ಭಾಗ ದಲಿತರಿದ್ದಾರೆ. ಅತಿ ಹೆಚ್ಚು ದಲಿತರಿರುವ ರಾಜ್ಯ ಪಂಜಾಬ್‌ ಆಗಿದೆ. ರಾಜ್ಯದ ಜನಸಂಖ್ಯೆಯಲ್ಲಿ ಶೇ. 32ರಷ್ಟು ದಲಿತರಿದ್ದಾರೆ ಎಂದು 2011ರ ಜನಗಣತಿ ಹೇಳುತ್ತದೆ.

ಜಾಟ್‌ ಸಮುದಾಯದ ಪ್ರಾಬಲ್ಯವಿರುವ ಶಿರೋಮಣಿ ಅಕಾಲಿ ದಳ ಪಕ್ಷವು, ದಲಿತರೊಂದಿಗೆ ಗುರುತಿಸಿಕೊಂಡಿರುವ ಬಹುಜನ ಸಮಾಜ ಪಾರ್ಟಿ (ಬಿಎಸ್‌‌ಪಿ) ಜೊತೆ ಪಂಜಾಬ್‌ನಲ್ಲಿ ಮೈತ್ರಿ ಮಾಡಿಕೊಂಡಿರುವುದರಿಂದ ಪಂಜಾಬ್‌‌ನಲ್ಲಿ ದಲಿತ ರಾಜಕಾರಣವು ಗಮನ ಸೆಳೆದಿದೆ. ಸರ್ಕಾರವನ್ನು ರಚಿಸಬೇಕಾದರೆ ದಲಿತರ ಮತಗಳು ಅಗತ್ಯ. ಹೀಗಾಗಿ ಚನ್ನಿ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸಲಾಗಿದೆ.

“ಪಂಜಾಬ್‌ ಕಾಂಗ್ರೆಸ್ ಮುಖ್ಯಸ್ಥನಾಗಿ ಜಾಟ್‌ ಸಿಖ್‌ (ಸಿಧು), ಮುಖ್ಯಮಂತ್ರಿಯಾಗಿ ಸಿಖ್‌ ದಲಿತ ವ್ಯಕ್ತಿ ಎಂಬ ರಾಜಕೀಯ ತಂತ್ರವನ್ನು ರೂಪಿಸಿ 2022ರ ಚುನಾವಣೆಯನ್ನು ಎದುರಿಸುವುದು ಕಾಂಗ್ರೆಸ್‌ನ ನಡೆಯಾಗಿದೆ” ಎಂದು ರಾಜಕೀಯ ವಿಶ್ಲೇಷಕ ಹರ್‌ಜೇಶ್ವರ್‌ ಪಾಲ್‌ ಸಿಂಗ್‌ ಹೇಳುತ್ತಾರೆ.

ರಾಜಕೀಯ ವಿಶ್ಲೇಷಕ ಖಾಲಿದ್ ಮೊಹಮ್ಮದ್ ಅವರ ಪ್ರಕಾರ, ಚನ್ನಿಯವರ ನೇಮಕಾತಿಯು ಕೇವಲ ಸಿಧು ಅವರ ಆಜ್ಞೆಯ ಮೇರೆಗೆ ಮಾಡಿದ ಒಂದು ಮಧ್ಯಂತರ ವ್ಯವಸ್ಥೆಯಾಗಿದೆ.

Photo Courtesy: The Tribune (ಪೋಟೋ: ಚರಣ್‌ಜಿತ್‌ ಸಿಂಗ್‌‌ ಚನ್ನಿ)

“ಮುಖ್ಯಮಂತ್ರಿ ಆಯ್ಕೆಯಲ್ಲಿ ಸಿಧು ಅವರು ಗಾಂಧಿ ಕುಟುಂಬದ ಮೇಲೆ ಪ್ರಭಾವ ಬೀರಿದ್ದಾರೆ. ಚುನಾವಣೆ ಮುಂದಾಳತ್ವ ವಹಿಸಬೇಕಾದರೆ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ತನಗಿಂತ ಪ್ರಭಾವಿಯಾಗಿರಬಾರದು ಎಂಬ ಸಿಧು ಅವರ ಲೆಕ್ಕಾಚಾರದ ಮೇರೆಗೆ ಮುಖ್ಯಮಂತ್ರಿಯರನ್ನು ನೇಮಿಸಲಾಗಿದೆ. ಸಿಧು ಅವರು ಪಕ್ಷವನ್ನು ಮುನ್ನಡೆಸಲಿದ್ದಾರೆ, ಜೊತೆಗೆ ಅಮರಿಂದರ್‌ ಸಿಂಗ್‌ ಅವರ ನಾಯಕತ್ವದಲ್ಲಿ ತೆಗೆದುಕೊಳ್ಳಲು ಸಾಧ್ಯವಾಗದಿದ್ದ ನಿರ್ಧಾರಗಳ ಮೇಲೂ ಈಗ ಸರ್ಕಾರದಲ್ಲಿ ಸಿಧು ಪ್ರಭಾವ ಬೀರಲಿದ್ದಾರೆ” ಎನ್ನುತ್ತಾರೆ ಖಾಲಿದ್‌ ಮೊಹಮ್ಮದ್‌. ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರೂ ಚನ್ನಿ ಅವರ ಆಯ್ಕೆಯನ್ನು ಸ್ವಾಗತಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿ: ಚರಣಜಿತ್ ಸಿಂಗ್ ಚನ್ನಿ ಕುರಿತ ವಿವರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....