Homeಮುಖಪುಟಪಂಜಾಬ್‌‌ನಲ್ಲಿ ದಲಿತ ಮುಖ್ಯಮಂತ್ರಿ: ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳ!

ಪಂಜಾಬ್‌‌ನಲ್ಲಿ ದಲಿತ ಮುಖ್ಯಮಂತ್ರಿ: ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳ!

2022ರಲ್ಲಿ ವಿಧಾನಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್ ಸಜ್ಜಾಗಿದೆ. ಸಿಖ್‌ ದಲಿತ ವ್ಯಕ್ತಿಯನ್ನು ಪಂಜಾಬ್‌‌ ಮುಖ್ಯಮಂತ್ರಿಯನ್ನಾಗಿ ನೇಮಿಸಿರುವಲ್ಲಿ ಈ ಎರಡು ಕಾರಣಗಳು ಮುಖ್ಯವಾಗಿವೆ.

- Advertisement -
- Advertisement -

ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಬಳಿಕ ಪಂಜಾಬ್‌ ಮುಖ್ಯಮಂತ್ರಿ ಯಾರಾಗುತ್ತಾರೆಂಬ ಕುತೂಹಲ ಎಲ್ಲರಲ್ಲೂ ಇತ್ತು. ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯುತ್ತಿರುವುದರಿಂದ ಕಾಂಗ್ರೆಸ್ ಯಾವ ಹೆಜ್ಜೆ ಇಡಬಹುದು ಎಂಬ ಕುತೂಹಲ ರಾಜಕೀಯ ಪಡಸಾಲೆಯಲ್ಲಿ ನೆಲೆಸಿತ್ತು. ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್‌ ಪಕ್ಷವು ಸಿಖ್‌ ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿಯಾಗಿ ಘೋಷಿಸಿದ್ದು, ಪಂಜಾಬ್‌ನಲ್ಲಿ ಅತಿಹೆಚ್ಚಿರುವ ದಲಿತ ಸಮುದಾಯದ ಮೊದಲ ಮುಖ್ಯಮಂತ್ರಿಯೂ ಅವರಾಗಿದ್ದಾರೆ.

ಚರಣ್‌‌ಜಿತ್‌ ಸಿಂಗ್‌ ಚನ್ನಿ ಅವರನ್ನು ಮುಖ್ಯಮಂತ್ರಿಯಾಗಿ ಮಾಡುತ್ತಿರುವುದರ ಹಿಂದೆ ರಾಜಕೀಯ ಲೆಚ್ಚಾಚಾರಗಳಿವೆ. ಜಾತಿ ಧ್ರುವೀಕರಣದ ಯೋಚನೆ ಇದೆ. ಪಂಜಾಬ್‌‌ನಲ್ಲಿ ಕಾಂಗ್ರೆಸ್ಸೇತರ ಪಕ್ಷಗಳು ಇಟ್ಟಿರುವ ಹೆಜ್ಜೆಗಳು ಇದಕ್ಕೆ ಕಾರಣವಾಗಿದೆ.

ನವಜೋತ್‌ ಸಿಂಗ್‌ ಸಿಧು ಅವರೊಂದಿಗೆ ನಿಂತು ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ವಿರುದ್ಧ ಸಮರ ಸಾರಿ, ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಕಾರಣರಾದವರಲ್ಲಿ ಚಮ್‌ಕೌರ್‌‌ ಸಾಹಿಬ್‌ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕ ಚನ್ನಿ ಕೂಡ ಒಬ್ಬರಾಗಿದ್ದಾರೆ. ಗುರುದಾಸ್‌ಪುರ ಪ್ರಾಂತ್ಯದ ದೆರಾ ಬಾಬಾ ನಾಯಕ್‌ ವಿಧಾನಸಭಾ ಕ್ಷೇತ್ರದ ಸುಖ್‌ಜಿಂದರ್‌ ಸಿಂಗ್‌ ರಾಂದ್ವಾ ಅವರು ಮುಖ್ಯಮಂತ್ರಿಯಾಗುತ್ತಾರೆ ಎನ್ನುತ್ತಿರುವಾಗಲೇ ಚನ್ನಿ ಹೆಸರು ಘೋಷಣೆಯಾಗಿದ್ದು ಅಚ್ಚರಿಯೇ ಸರಿ.

ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿ: ಚರಣಜಿತ್ ಸಿಂಗ್ ಚನ್ನಿ ಕುರಿತ ವಿವರಗಳು

ಹಾಗಿದ್ದರೆ ಚನ್ನಿ ಅವರ ಆಯ್ಕೆ ಹಿಂದಿನ ಲೆಕ್ಕಾಚಾರವೇನು?

‘ದಿ ವೈರ್‌’ ಜಾಲತಾಣದಲ್ಲಿ ಲೇಖಕ ವಿವೇಕ್‌ ಗುಪ್ತಾ ಅವರು ಹೀಗೆ ವಿವರಿಸುತ್ತಾರೆ:

1. ಮಜ್ಹಾ ಪ್ರದೇಶದ ಸುಖ್‌ಜಿಂದರ್‌ ರಾಂಧ್ವಾ ಆಯ್ಕೆಗಿಂತ ನಜಜೋತ್‌ ಸಿಧು ಅವರು ಚನ್ನಿ ಅವರ ಆಯ್ಕೆಯನ್ನು ಬಯಸಿದ್ದರು. ಮುಂದಿನ ಚುನಾವಣೆಯ ನಾಯಕತ್ವವನ್ನು ನಿಭಾಯಿಸಬೇಕಾಗಿರುವುದರಿಂದ ಮುಖ್ಯಮಂತ್ರಿ ಪಟ್ಟವನ್ನು ಸಿಧು ಬಯಸಲಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ಕುಳಿತರೆ ಚುನಾವಣೆ ಮಂಕಾಗಬಹುದು ಎಂಬುದು ಸಿಧು ಅವರ ಆಲೋಚನೆಯಾಗಿತ್ತು. ಅಂದರೆ ಸಿಧು ಮುಂದಿನ ಚುನಾವಣೆಯ ನಾಯಕತ್ವ ವಹಿಸುವುದು ಖಚಿತ. ಚುನಾವಣೆಯಲ್ಲಿ ಪಕ್ಷವನ್ನು ಸಂಘಟಿಸಿ, ಮುಂದೆ ಸಿಧು ಮಹೋನ್ನತ ಸ್ಥಾನವನ್ನು ಪಡೆಯಲಿದ್ದಾರೆ. ಸಿಧು ಉನ್ನತಿಗೆ ಚನ್ನಿ ಅವರು ತೊಡಕಾಗುವುದಿಲ್ಲ. ಪ್ರಭಾವಿ ವ್ಯಕ್ತಿಯಾದ ಸುಖ್‌ಜಿಂದರ್‌ ಆಯ್ಕೆಯಾದರೆ ಸಿಧು ಅವರ ನಾಯಕತ್ವಕ್ಕೆ ತೊಡಕಾಗುತ್ತಿತ್ತು ಎಂಬ ಲೆಕ್ಕಾಚಾರ ಇಲ್ಲಿದೆ.

2. ಚನ್ನಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿದರೆ ಪಂಜಾಬ್‌ನಲ್ಲಿ ದಲಿತ ಮತಗಳು ಚದುರಿ ಹೋಗುವುದಿಲ್ಲ ಎಂಬ ಲೆಕ್ಕಾಚಾರವಿದೆ. ರಾಜ್ಯದ ಮೂರು ಕೋಟಿ ಜನಸಂಖ್ಯೆಯಲ್ಲಿ ಮೂರನೇ ಒಂದು ಭಾಗ ದಲಿತರಿದ್ದಾರೆ. ಅತಿ ಹೆಚ್ಚು ದಲಿತರಿರುವ ರಾಜ್ಯ ಪಂಜಾಬ್‌ ಆಗಿದೆ. ರಾಜ್ಯದ ಜನಸಂಖ್ಯೆಯಲ್ಲಿ ಶೇ. 32ರಷ್ಟು ದಲಿತರಿದ್ದಾರೆ ಎಂದು 2011ರ ಜನಗಣತಿ ಹೇಳುತ್ತದೆ.

ಜಾಟ್‌ ಸಮುದಾಯದ ಪ್ರಾಬಲ್ಯವಿರುವ ಶಿರೋಮಣಿ ಅಕಾಲಿ ದಳ ಪಕ್ಷವು, ದಲಿತರೊಂದಿಗೆ ಗುರುತಿಸಿಕೊಂಡಿರುವ ಬಹುಜನ ಸಮಾಜ ಪಾರ್ಟಿ (ಬಿಎಸ್‌‌ಪಿ) ಜೊತೆ ಪಂಜಾಬ್‌ನಲ್ಲಿ ಮೈತ್ರಿ ಮಾಡಿಕೊಂಡಿರುವುದರಿಂದ ಪಂಜಾಬ್‌‌ನಲ್ಲಿ ದಲಿತ ರಾಜಕಾರಣವು ಗಮನ ಸೆಳೆದಿದೆ. ಸರ್ಕಾರವನ್ನು ರಚಿಸಬೇಕಾದರೆ ದಲಿತರ ಮತಗಳು ಅಗತ್ಯ. ಹೀಗಾಗಿ ಚನ್ನಿ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸಲಾಗಿದೆ.

“ಪಂಜಾಬ್‌ ಕಾಂಗ್ರೆಸ್ ಮುಖ್ಯಸ್ಥನಾಗಿ ಜಾಟ್‌ ಸಿಖ್‌ (ಸಿಧು), ಮುಖ್ಯಮಂತ್ರಿಯಾಗಿ ಸಿಖ್‌ ದಲಿತ ವ್ಯಕ್ತಿ ಎಂಬ ರಾಜಕೀಯ ತಂತ್ರವನ್ನು ರೂಪಿಸಿ 2022ರ ಚುನಾವಣೆಯನ್ನು ಎದುರಿಸುವುದು ಕಾಂಗ್ರೆಸ್‌ನ ನಡೆಯಾಗಿದೆ” ಎಂದು ರಾಜಕೀಯ ವಿಶ್ಲೇಷಕ ಹರ್‌ಜೇಶ್ವರ್‌ ಪಾಲ್‌ ಸಿಂಗ್‌ ಹೇಳುತ್ತಾರೆ.

ರಾಜಕೀಯ ವಿಶ್ಲೇಷಕ ಖಾಲಿದ್ ಮೊಹಮ್ಮದ್ ಅವರ ಪ್ರಕಾರ, ಚನ್ನಿಯವರ ನೇಮಕಾತಿಯು ಕೇವಲ ಸಿಧು ಅವರ ಆಜ್ಞೆಯ ಮೇರೆಗೆ ಮಾಡಿದ ಒಂದು ಮಧ್ಯಂತರ ವ್ಯವಸ್ಥೆಯಾಗಿದೆ.

Photo Courtesy: The Tribune (ಪೋಟೋ: ಚರಣ್‌ಜಿತ್‌ ಸಿಂಗ್‌‌ ಚನ್ನಿ)

“ಮುಖ್ಯಮಂತ್ರಿ ಆಯ್ಕೆಯಲ್ಲಿ ಸಿಧು ಅವರು ಗಾಂಧಿ ಕುಟುಂಬದ ಮೇಲೆ ಪ್ರಭಾವ ಬೀರಿದ್ದಾರೆ. ಚುನಾವಣೆ ಮುಂದಾಳತ್ವ ವಹಿಸಬೇಕಾದರೆ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ತನಗಿಂತ ಪ್ರಭಾವಿಯಾಗಿರಬಾರದು ಎಂಬ ಸಿಧು ಅವರ ಲೆಕ್ಕಾಚಾರದ ಮೇರೆಗೆ ಮುಖ್ಯಮಂತ್ರಿಯರನ್ನು ನೇಮಿಸಲಾಗಿದೆ. ಸಿಧು ಅವರು ಪಕ್ಷವನ್ನು ಮುನ್ನಡೆಸಲಿದ್ದಾರೆ, ಜೊತೆಗೆ ಅಮರಿಂದರ್‌ ಸಿಂಗ್‌ ಅವರ ನಾಯಕತ್ವದಲ್ಲಿ ತೆಗೆದುಕೊಳ್ಳಲು ಸಾಧ್ಯವಾಗದಿದ್ದ ನಿರ್ಧಾರಗಳ ಮೇಲೂ ಈಗ ಸರ್ಕಾರದಲ್ಲಿ ಸಿಧು ಪ್ರಭಾವ ಬೀರಲಿದ್ದಾರೆ” ಎನ್ನುತ್ತಾರೆ ಖಾಲಿದ್‌ ಮೊಹಮ್ಮದ್‌. ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರೂ ಚನ್ನಿ ಅವರ ಆಯ್ಕೆಯನ್ನು ಸ್ವಾಗತಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿ: ಚರಣಜಿತ್ ಸಿಂಗ್ ಚನ್ನಿ ಕುರಿತ ವಿವರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...