Homeಮುಖಪುಟಪಂಜಾಬ್‌‌ನಲ್ಲಿ ದಲಿತ ಮುಖ್ಯಮಂತ್ರಿ: ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳ!

ಪಂಜಾಬ್‌‌ನಲ್ಲಿ ದಲಿತ ಮುಖ್ಯಮಂತ್ರಿ: ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳ!

2022ರಲ್ಲಿ ವಿಧಾನಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್ ಸಜ್ಜಾಗಿದೆ. ಸಿಖ್‌ ದಲಿತ ವ್ಯಕ್ತಿಯನ್ನು ಪಂಜಾಬ್‌‌ ಮುಖ್ಯಮಂತ್ರಿಯನ್ನಾಗಿ ನೇಮಿಸಿರುವಲ್ಲಿ ಈ ಎರಡು ಕಾರಣಗಳು ಮುಖ್ಯವಾಗಿವೆ.

- Advertisement -
- Advertisement -

ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಬಳಿಕ ಪಂಜಾಬ್‌ ಮುಖ್ಯಮಂತ್ರಿ ಯಾರಾಗುತ್ತಾರೆಂಬ ಕುತೂಹಲ ಎಲ್ಲರಲ್ಲೂ ಇತ್ತು. ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯುತ್ತಿರುವುದರಿಂದ ಕಾಂಗ್ರೆಸ್ ಯಾವ ಹೆಜ್ಜೆ ಇಡಬಹುದು ಎಂಬ ಕುತೂಹಲ ರಾಜಕೀಯ ಪಡಸಾಲೆಯಲ್ಲಿ ನೆಲೆಸಿತ್ತು. ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್‌ ಪಕ್ಷವು ಸಿಖ್‌ ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿಯಾಗಿ ಘೋಷಿಸಿದ್ದು, ಪಂಜಾಬ್‌ನಲ್ಲಿ ಅತಿಹೆಚ್ಚಿರುವ ದಲಿತ ಸಮುದಾಯದ ಮೊದಲ ಮುಖ್ಯಮಂತ್ರಿಯೂ ಅವರಾಗಿದ್ದಾರೆ.

ಚರಣ್‌‌ಜಿತ್‌ ಸಿಂಗ್‌ ಚನ್ನಿ ಅವರನ್ನು ಮುಖ್ಯಮಂತ್ರಿಯಾಗಿ ಮಾಡುತ್ತಿರುವುದರ ಹಿಂದೆ ರಾಜಕೀಯ ಲೆಚ್ಚಾಚಾರಗಳಿವೆ. ಜಾತಿ ಧ್ರುವೀಕರಣದ ಯೋಚನೆ ಇದೆ. ಪಂಜಾಬ್‌‌ನಲ್ಲಿ ಕಾಂಗ್ರೆಸ್ಸೇತರ ಪಕ್ಷಗಳು ಇಟ್ಟಿರುವ ಹೆಜ್ಜೆಗಳು ಇದಕ್ಕೆ ಕಾರಣವಾಗಿದೆ.

ನವಜೋತ್‌ ಸಿಂಗ್‌ ಸಿಧು ಅವರೊಂದಿಗೆ ನಿಂತು ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ವಿರುದ್ಧ ಸಮರ ಸಾರಿ, ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಕಾರಣರಾದವರಲ್ಲಿ ಚಮ್‌ಕೌರ್‌‌ ಸಾಹಿಬ್‌ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕ ಚನ್ನಿ ಕೂಡ ಒಬ್ಬರಾಗಿದ್ದಾರೆ. ಗುರುದಾಸ್‌ಪುರ ಪ್ರಾಂತ್ಯದ ದೆರಾ ಬಾಬಾ ನಾಯಕ್‌ ವಿಧಾನಸಭಾ ಕ್ಷೇತ್ರದ ಸುಖ್‌ಜಿಂದರ್‌ ಸಿಂಗ್‌ ರಾಂದ್ವಾ ಅವರು ಮುಖ್ಯಮಂತ್ರಿಯಾಗುತ್ತಾರೆ ಎನ್ನುತ್ತಿರುವಾಗಲೇ ಚನ್ನಿ ಹೆಸರು ಘೋಷಣೆಯಾಗಿದ್ದು ಅಚ್ಚರಿಯೇ ಸರಿ.

ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿ: ಚರಣಜಿತ್ ಸಿಂಗ್ ಚನ್ನಿ ಕುರಿತ ವಿವರಗಳು

ಹಾಗಿದ್ದರೆ ಚನ್ನಿ ಅವರ ಆಯ್ಕೆ ಹಿಂದಿನ ಲೆಕ್ಕಾಚಾರವೇನು?

‘ದಿ ವೈರ್‌’ ಜಾಲತಾಣದಲ್ಲಿ ಲೇಖಕ ವಿವೇಕ್‌ ಗುಪ್ತಾ ಅವರು ಹೀಗೆ ವಿವರಿಸುತ್ತಾರೆ:

1. ಮಜ್ಹಾ ಪ್ರದೇಶದ ಸುಖ್‌ಜಿಂದರ್‌ ರಾಂಧ್ವಾ ಆಯ್ಕೆಗಿಂತ ನಜಜೋತ್‌ ಸಿಧು ಅವರು ಚನ್ನಿ ಅವರ ಆಯ್ಕೆಯನ್ನು ಬಯಸಿದ್ದರು. ಮುಂದಿನ ಚುನಾವಣೆಯ ನಾಯಕತ್ವವನ್ನು ನಿಭಾಯಿಸಬೇಕಾಗಿರುವುದರಿಂದ ಮುಖ್ಯಮಂತ್ರಿ ಪಟ್ಟವನ್ನು ಸಿಧು ಬಯಸಲಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ಕುಳಿತರೆ ಚುನಾವಣೆ ಮಂಕಾಗಬಹುದು ಎಂಬುದು ಸಿಧು ಅವರ ಆಲೋಚನೆಯಾಗಿತ್ತು. ಅಂದರೆ ಸಿಧು ಮುಂದಿನ ಚುನಾವಣೆಯ ನಾಯಕತ್ವ ವಹಿಸುವುದು ಖಚಿತ. ಚುನಾವಣೆಯಲ್ಲಿ ಪಕ್ಷವನ್ನು ಸಂಘಟಿಸಿ, ಮುಂದೆ ಸಿಧು ಮಹೋನ್ನತ ಸ್ಥಾನವನ್ನು ಪಡೆಯಲಿದ್ದಾರೆ. ಸಿಧು ಉನ್ನತಿಗೆ ಚನ್ನಿ ಅವರು ತೊಡಕಾಗುವುದಿಲ್ಲ. ಪ್ರಭಾವಿ ವ್ಯಕ್ತಿಯಾದ ಸುಖ್‌ಜಿಂದರ್‌ ಆಯ್ಕೆಯಾದರೆ ಸಿಧು ಅವರ ನಾಯಕತ್ವಕ್ಕೆ ತೊಡಕಾಗುತ್ತಿತ್ತು ಎಂಬ ಲೆಕ್ಕಾಚಾರ ಇಲ್ಲಿದೆ.

2. ಚನ್ನಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿದರೆ ಪಂಜಾಬ್‌ನಲ್ಲಿ ದಲಿತ ಮತಗಳು ಚದುರಿ ಹೋಗುವುದಿಲ್ಲ ಎಂಬ ಲೆಕ್ಕಾಚಾರವಿದೆ. ರಾಜ್ಯದ ಮೂರು ಕೋಟಿ ಜನಸಂಖ್ಯೆಯಲ್ಲಿ ಮೂರನೇ ಒಂದು ಭಾಗ ದಲಿತರಿದ್ದಾರೆ. ಅತಿ ಹೆಚ್ಚು ದಲಿತರಿರುವ ರಾಜ್ಯ ಪಂಜಾಬ್‌ ಆಗಿದೆ. ರಾಜ್ಯದ ಜನಸಂಖ್ಯೆಯಲ್ಲಿ ಶೇ. 32ರಷ್ಟು ದಲಿತರಿದ್ದಾರೆ ಎಂದು 2011ರ ಜನಗಣತಿ ಹೇಳುತ್ತದೆ.

ಜಾಟ್‌ ಸಮುದಾಯದ ಪ್ರಾಬಲ್ಯವಿರುವ ಶಿರೋಮಣಿ ಅಕಾಲಿ ದಳ ಪಕ್ಷವು, ದಲಿತರೊಂದಿಗೆ ಗುರುತಿಸಿಕೊಂಡಿರುವ ಬಹುಜನ ಸಮಾಜ ಪಾರ್ಟಿ (ಬಿಎಸ್‌‌ಪಿ) ಜೊತೆ ಪಂಜಾಬ್‌ನಲ್ಲಿ ಮೈತ್ರಿ ಮಾಡಿಕೊಂಡಿರುವುದರಿಂದ ಪಂಜಾಬ್‌‌ನಲ್ಲಿ ದಲಿತ ರಾಜಕಾರಣವು ಗಮನ ಸೆಳೆದಿದೆ. ಸರ್ಕಾರವನ್ನು ರಚಿಸಬೇಕಾದರೆ ದಲಿತರ ಮತಗಳು ಅಗತ್ಯ. ಹೀಗಾಗಿ ಚನ್ನಿ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸಲಾಗಿದೆ.

“ಪಂಜಾಬ್‌ ಕಾಂಗ್ರೆಸ್ ಮುಖ್ಯಸ್ಥನಾಗಿ ಜಾಟ್‌ ಸಿಖ್‌ (ಸಿಧು), ಮುಖ್ಯಮಂತ್ರಿಯಾಗಿ ಸಿಖ್‌ ದಲಿತ ವ್ಯಕ್ತಿ ಎಂಬ ರಾಜಕೀಯ ತಂತ್ರವನ್ನು ರೂಪಿಸಿ 2022ರ ಚುನಾವಣೆಯನ್ನು ಎದುರಿಸುವುದು ಕಾಂಗ್ರೆಸ್‌ನ ನಡೆಯಾಗಿದೆ” ಎಂದು ರಾಜಕೀಯ ವಿಶ್ಲೇಷಕ ಹರ್‌ಜೇಶ್ವರ್‌ ಪಾಲ್‌ ಸಿಂಗ್‌ ಹೇಳುತ್ತಾರೆ.

ರಾಜಕೀಯ ವಿಶ್ಲೇಷಕ ಖಾಲಿದ್ ಮೊಹಮ್ಮದ್ ಅವರ ಪ್ರಕಾರ, ಚನ್ನಿಯವರ ನೇಮಕಾತಿಯು ಕೇವಲ ಸಿಧು ಅವರ ಆಜ್ಞೆಯ ಮೇರೆಗೆ ಮಾಡಿದ ಒಂದು ಮಧ್ಯಂತರ ವ್ಯವಸ್ಥೆಯಾಗಿದೆ.

Photo Courtesy: The Tribune (ಪೋಟೋ: ಚರಣ್‌ಜಿತ್‌ ಸಿಂಗ್‌‌ ಚನ್ನಿ)

“ಮುಖ್ಯಮಂತ್ರಿ ಆಯ್ಕೆಯಲ್ಲಿ ಸಿಧು ಅವರು ಗಾಂಧಿ ಕುಟುಂಬದ ಮೇಲೆ ಪ್ರಭಾವ ಬೀರಿದ್ದಾರೆ. ಚುನಾವಣೆ ಮುಂದಾಳತ್ವ ವಹಿಸಬೇಕಾದರೆ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ತನಗಿಂತ ಪ್ರಭಾವಿಯಾಗಿರಬಾರದು ಎಂಬ ಸಿಧು ಅವರ ಲೆಕ್ಕಾಚಾರದ ಮೇರೆಗೆ ಮುಖ್ಯಮಂತ್ರಿಯರನ್ನು ನೇಮಿಸಲಾಗಿದೆ. ಸಿಧು ಅವರು ಪಕ್ಷವನ್ನು ಮುನ್ನಡೆಸಲಿದ್ದಾರೆ, ಜೊತೆಗೆ ಅಮರಿಂದರ್‌ ಸಿಂಗ್‌ ಅವರ ನಾಯಕತ್ವದಲ್ಲಿ ತೆಗೆದುಕೊಳ್ಳಲು ಸಾಧ್ಯವಾಗದಿದ್ದ ನಿರ್ಧಾರಗಳ ಮೇಲೂ ಈಗ ಸರ್ಕಾರದಲ್ಲಿ ಸಿಧು ಪ್ರಭಾವ ಬೀರಲಿದ್ದಾರೆ” ಎನ್ನುತ್ತಾರೆ ಖಾಲಿದ್‌ ಮೊಹಮ್ಮದ್‌. ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರೂ ಚನ್ನಿ ಅವರ ಆಯ್ಕೆಯನ್ನು ಸ್ವಾಗತಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿ: ಚರಣಜಿತ್ ಸಿಂಗ್ ಚನ್ನಿ ಕುರಿತ ವಿವರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...