Homeಕರ್ನಾಟಕಪರಿಶಿಷ್ಟರ ಹೆಸರಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದರೆ ಶಿಕ್ಷೆ ಏನು?

ಪರಿಶಿಷ್ಟರ ಹೆಸರಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದರೆ ಶಿಕ್ಷೆ ಏನು?

ರಾಜ್ಯ ಸರ್ಕಾರದ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಅವರ ಮೇಲೂ ನಕಲಿ ಜಾತಿ ಪ್ರಮಾಣ ಪತ್ರದ ಆರೋಪವಿದೆ.

- Advertisement -
- Advertisement -

ಮಾಜಿ ಸಚಿವ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ಪುತ್ರಿ ಎಂ.ಆರ್‌.ಚೇತನ ಅವರು ಬೇಡ ಜಂಗಮ ಹೆಸರಿನಲ್ಲಿ ಪರಿಶಿಷ್ಟ ಜಾತಿಯ ಪ್ರಮಾಣಪತ್ರವನ್ನು ಪಡೆದುಕೊಂಡಿರುವ ಆರೋಪ ಕೇಳಿಬಂದಿದೆ.

ಎಂ.ಪಿ.ರೇಣುಕಾಚಾರ್ಯ ಲಿಂಗಾಯತರು. ದಾವಣಗೆರೆ ಜಿಲ್ಲೆ ಹೊನ್ನಾಳಿಯ ಕುಂದೂರು ಶಾಲೆಯಲ್ಲಿ ಅವರು ಓದುತ್ತಿದ್ದಾಗ ಪಡೆದಿರುವ ಶಾಲಾ ದಾಖಲೆಗಳಲ್ಲೂ ಜಾತಿ ಕಲಂನಲ್ಲಿ ‘ಲಿಂಗಾಯತ’ ಎಂದು ಸ್ಪಷ್ಟವಾಗಿ ಉಲ್ಲೇಖವಾಗಿದೆ. ಆದರೆ ಅವರ ಪುತ್ರಿ ಎಂ.ಆರ್‌.ಚೇತನ ಬೇಡ ಜಂಗಮ ಜಾತಿ ಎಂದು ಪರಿಶಿಷ್ಟ ಜಾತಿಯ ಪ್ರಮಾಣಪತ್ರವನ್ನು 2012ರ ನ.17ರಂದು ಬೆಂಗಳೂರಿನ ಉತ್ತರ ತಾಲ್ಲೂಕು ತಹಸೀಲ್ದಾರ್‌ ಅವರಿಂದ ಪಡೆದಿದ್ದಾರೆ. ಅದನ್ನು ಜಿಲ್ಲಾ ಅಧಿಕಾರಿಗಳು ಸರಿ ಇದೆಯೇ ಎಂದು ಪರಿಶೀಲನೆಯನ್ನೂ ನಡೆಸಿಲ್ಲ ಎಂದು ‘ವಿಜಯ ಕರ್ನಾಟಕ’ ವರದಿ ಮಾಡಿದೆ.

ದಲಿತರ ಹೆಸರಲ್ಲಿ ಜಾತಿ ಪ್ರಮಾಣ ಪತ್ರಗಳನ್ನು ಸವರ್ಣಿಯರು ಪಡೆದು ಶೋಷಿತ ಸಮುದಾಯವನ್ನು ಅವಕಾಶಗಳಿಂದ ವಂಚಿಸುವುದು ಹೊಸ ಚರ್ಚೆಯೇನಲ್ಲ. ಆದರೆ ಜನಪ್ರತಿನಿಧಿಗಳಾದವರ ಹೆಸರುಗಳೇ ಇಂತಹ ಪ್ರಕರಣಗಳಲ್ಲಿ ಮತ್ತೆ ಮತ್ತೆ ಕೇಳಿಬರುತ್ತಿರುವುದು ಆಘಾತಕಾರಿ ಬೆಳವಣಿಗೆ.

ಪರಿಶಿಷ್ಟ ಕೋಟಾದಲ್ಲಿ ಇರಬಾರದ ಅವಕಾಶಗಳೇನೋ ಇವೆ ಎಂದು ಜನ ಭಾವಿಸುವುದು ಒಂದು ಕಡೆಯಾದರೆ, ದಿನದಿಂದ ದಿನಕ್ಕೆ ದಲಿತರ ಬಗೆಗಿನ ಕಾಳಜಿಯಿಂದ ಸರ್ಕಾರ ದೂರ ಸರಿಯುತ್ತಿರುವುದು ಮತ್ತೊಂದು ವಾಸ್ತವ. ಪರಿಸ್ಥಿತಿ ಹೀಗಿರುವ ದಲಿತರಿಗೆ ಇರುವ ಚಿಕ್ಕಪುಟ್ಟ ಅವಕಾಶಗಳನ್ನೂ ಕಿತ್ತುಕೊಂಡರೆ ಸಮುದಾಯದ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿ ಏನಾಗಬಹುದು? ಇಂತಹ ಪ್ರಕರಗಳಿಗೆ ಶಿಕ್ಷೆಯೇ ಇಲ್ಲವೇ? ಖಂಡಿತ ಇದೆ. ಆದರೆ ಕಾನೂನು ಜಾರಿಯಾಗಬೇಕಷ್ಟೇ.

ರಾಜ್ಯ ವಿಧಾನಸಭೆಗೆ 2013ರಲ್ಲಿ ಪರಿಶಿಷ್ಟ ಜಾತಿಗೆ ಮೀಸಲಿರುವ ಕೋಲಾರ ಜಿಲ್ಲೆ ಮುಳಬಾಗಿಲು ಕ್ಷೇತ್ರದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್‌ ಮೇಲೆ ಇಂಥದ್ದೇ ಆರೋಪ ಕೇಳಿಬಂದಿತ್ತು. ಜೆಡಿಎಸ್‌ನಿಂದ ಸ್ಪರ್ಧಿಸಿ ಎರಡನೇ ಸ್ಥಾನ ಪಡೆದಿದ್ದ ಎನ್‌.ಮುನಿಅಂಜಿನಪ್ಪ ಕೋರ್ಟ್ ಮೆಟ್ಟಿಲೇರಿದ್ದರು.

ಬುಡಗ ಜಂಗಮ ಜಾತಿಗೆ ಸೇರಿದವರೆಂದು ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದರು. ಸುಳ್ಳು ಪ್ರಮಾಣ ಪತ್ರ ಸಲ್ಲಿಸಿ ಆಯ್ಕೆಯಾಗಿರುವುದು ಹೈಕೋರ್ಟ್‌ನಲ್ಲಿ ಸಾಬೀತಾಗಿತ್ತು. ಮಂಜುನಾಥ್‌ ಹಿಂದುಳಿದ ವರ್ಗ-1ಕ್ಕೆ ಸೇರುವ ‘ಭೈರಾಗಿ’ ಸಮುದಾಯದವರಾಗಿದ್ದರು. ಸುಳ್ಳು ಜಾತಿಪ್ರಮಾಣ ಪತ್ರ ಸಲ್ಲಿಸಿದ್ದಕ್ಕೆ  ಪ್ರಜಾಪ್ರತಿನಿಧಿ ಕಾಯದೆ ನಿಯಮ 125-ಎ ಅನ್ವಯ ಮಂಜುನಾಥ್‌ಗೆ 25 ಸಾವಿರ ದಂಡ ವಿಧಿಸಲಾಗಿತ್ತು. ಜೊತೆಗೆ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಲಾಗಿತ್ತು.

ಇದನ್ನೂ ಓದಿರಿ: ದಲಿತ್‌ ಫೈಲ್ಸ್‌: ತಮಿಳುನಾಡಿನ ಬ್ರಾಹ್ಮಣೇತರ ಅರ್ಚಕರ ನೋವಿನ ಕಥನ (ಭಾಗ 2)

ಈಗಿನ ರಾಜ್ಯ ಸರ್ಕಾರದ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಅವರ ಮೇಲೂ ನಕಲಿ ಜಾತಿ ಪ್ರಮಾಣ ಪತ್ರದ ಆರೋಪವಿದೆ. ಚೌವ್ಹಾಣ್‌ ಲಂಬಾಣಿಯವರಾಗಿದ್ದರೂ ಅವರು ಕರ್ನಾಟಕದ ಲಂಬಾಣಿ ಜಾತಿಯವರಲ್ಲ. ಅವರು ಮಹಾರಾಷ್ಟ್ರದ ಲಂಬಾಣಿ ಜಾತಿಗೆ ಸೇರಿದ್ದಾರೆ. ಮಹಾರಾಷ್ಟ್ರದಲ್ಲಿ ಲಂಬಾಣಿ ಜಾತಿಯು ಹಿಂದುಳಿದ ವರ್ಗಕ್ಕೆ ಸೇರಿದ್ದರೆ, ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗೆ ಸೇರಿದೆ.

ಕಾನೂನು ತಜ್ಞರು ಏನು ಹೇಳುತ್ತಾರೆ?

ನಕಲಿ ಜಾತಿ ಪ್ರಮಾಣ ಪತ್ರ ಪಡೆಯುವವರ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪರ್ಯಾಯ ಕಾನೂನು ವೇದಿಕೆಯ ಸಲಹೆಗಾರರಾದ ಶಿವಮಣಿ, “ನಕಲಿ ಜಾತಿ ಪ್ರಮಾಣ ಪತ್ರ ಪಡೆದರೆ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಬಹುದು. ನಕಲಿ ಪ್ರಮಾಣ ಪತ್ರ ಬರೆದು ಮೀಸಲಾಯಿಯನ್ನು ಪಡೆದರೆ ನಿಜವಾದ ಫಲಾನುಭವಿಗೆ ತೊಂದರೆ ನೀಡಿದಂತಾಗುತ್ತದೆ. ಮೀಸಲಾತಿಯ ಅವಕಾಶ ಪಡೆದು ಸರ್ಕಾರಿ ಸೇವೆಯಲ್ಲಿದ್ದರೆ ಕೆಲಸದಿಂದ ವಜಾಗೊಳಿಸಬಹುದು. ಜನಪ್ರತಿನಿಧಿಯಾಗಿದ್ದರೆ ಸ್ಥಾನವನ್ನು ಅಸಿಂಧುಗೊಳಿಸಬಹುದು” ಎಂದರು.

ಪ್ರಭು ಚೌವ್ಹಾಣ್‌ ಪ್ರಕರಣದ ಕುರಿತು ಮಾತನಾಡಿದ ಅವರು, “ಚೌವ್ಹಾಣ್‌ ಅವರು ಎಸ್‌ಸಿ ಪ್ರಮಾಣಪತ್ರ ಬರೆದು ಎರಡು ಸಲ ಗೆದ್ದಿದ್ದಾರೆ. ಇವರ ವಿರುದ್ಧ ಪ್ರಕರಣ ನಡೆಯುತ್ತಿದೆ. ಅಂತಾರಾಜ್ಯ ಜಾತಿ ಪ್ರಮಾಣ ಪತ್ರ ಪಡೆದಿರುವುದು ಶಿಕ್ಷಾರ್ಹ ಅಪರಾಧ” ಎಂದು ತಿಳಿಸಿದರು.

“ಕರ್ನಾಟಕದಲ್ಲಿ ಸಿವಿಲ್ ರೈಟ್ಸ್‌ ಎನ್‌ಫೋರ್ಸ್‌ಮೆಂಟ್ ಏಜೆನ್ಸಿ ಎಂದಿದೆ. ಯಾರ್‍ಯಾರು ಸರ್ಕಾರಿ ಅಧಿಕಾರಿಗಳು ನಕಲಿ ಜಾತಿ ಪ್ರಮಾಣಪತ್ರ ಪಡೆದಿದ್ದಾರೆ ಎಂಬುದನ್ನು ಪರಿಶೀಲಿಸುವುದೇ ಅದರ ಕೆಲಸ. ಪ್ರಭು ಚೌವ್ಹಾಣ್ ನಕಲಿ ಪ್ರಮಾಣ ಪತ್ರ ಪಡೆದಿದ್ದಾರೆಂದು ಸದರಿ ಸಂಸ್ಥೆ ಹೇಳಿದೆ. ಆದರೆ ಜಿ‌ಲ್ಲಾಧಿಕಾರಿಯವರು ಜಾತಿ ಪ್ರಮಾಣ ಪತ್ರವನ್ನು ರದ್ದು ಮಾಡಿಲ್ಲ. ಚೌವ್ಹಾಣ್ ಸಚಿವರಾಗಿ ಮುಂದುವರಿಯುತ್ತಲೇ ಇದ್ದಾರೆ” ಎಂದು ವಿಷಾದಿಸಿದರು.

“ಇತ್ತೀಚಿನ ದಿನಗಳಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕಾಗಿ ಗಂಭೀರವಾಗಿ ತನಿಖೆಗಳೂ ನಡೆಯಬೇಕಿದೆ. ಬೆಂಗಳೂರಿನ ಡಿಆರ್‌ಡಿಒನಲ್ಲಿ ಏಳುನೂರು ಜನರು ನಕಲಿ ಜಾತಿ ಪ್ರಮಾಣಪತ್ರ ಬರೆದಿದ್ದಾರೆಂಬ ವರದಿಯಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ವಲಸಮ್ಮ ವರ್ಸಸ್ ಸ್ಟೇಟ್ ಆಫ್ ಕೇರಳ ಪ್ರಕರಣವನ್ನು ಉಲ್ಲೇಖಿಸಿದ ಅವರು, “ಗಂಡ ಪರಿಶಿಷ್ಟ ಜಾತಿಯಾಗಿದ್ದಾರೆಂದು ಹೆಂಡತಿ ಪರಿಶಿಷ್ಟ ಜಾತಿಯ ಪ್ರಮಾಣಪತ್ರ ಪಡೆದು ಕೆಲಸ ಪಡೆದಿರುತ್ತಾರೆ. ಆದರೆ ಹೆಂಡತಿ ಸವರ್ಣೀಯ ಜಾತಿಗೆ ಸೇರಿರುತ್ತಾರೆ. ಸುಪ್ರೀಂ ಈ ಕುರಿತು ವಿಚಾರಣೆ ನಡೆಸಿ, ಜಾತಿ ಎಂಬುದು ಹುಟ್ಟಿನಿಂದ ಬರುತ್ತದೆ. ಮದುವೆಯಾಗುವುದರಿಂದ ಬದಲಾಗುವುದಿಲ್ಲ ಎಂದಿದೆ” ಎಂದು ವಿವರಿಸಿದರು.


ಇದನ್ನೂ ಓದಿರಿ: ದಲಿತ್‌ ಫೈಲ್ಸ್‌: ತಮಿಳುನಾಡಿನಲ್ಲಿ ಅರ್ಚಕರಾಗಿ ನೇಮಕವಾದ ಅಬ್ರಾಹ್ಮಣರಿಗೆ ಬ್ರಾಹ್ಮಣರಿಂದ ಕಿರುಕುಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....