Homeಕರ್ನಾಟಕಪರಿಶಿಷ್ಟರ ಹೆಸರಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದರೆ ಶಿಕ್ಷೆ ಏನು?

ಪರಿಶಿಷ್ಟರ ಹೆಸರಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದರೆ ಶಿಕ್ಷೆ ಏನು?

ರಾಜ್ಯ ಸರ್ಕಾರದ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಅವರ ಮೇಲೂ ನಕಲಿ ಜಾತಿ ಪ್ರಮಾಣ ಪತ್ರದ ಆರೋಪವಿದೆ.

- Advertisement -
- Advertisement -

ಮಾಜಿ ಸಚಿವ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ಪುತ್ರಿ ಎಂ.ಆರ್‌.ಚೇತನ ಅವರು ಬೇಡ ಜಂಗಮ ಹೆಸರಿನಲ್ಲಿ ಪರಿಶಿಷ್ಟ ಜಾತಿಯ ಪ್ರಮಾಣಪತ್ರವನ್ನು ಪಡೆದುಕೊಂಡಿರುವ ಆರೋಪ ಕೇಳಿಬಂದಿದೆ.

ಎಂ.ಪಿ.ರೇಣುಕಾಚಾರ್ಯ ಲಿಂಗಾಯತರು. ದಾವಣಗೆರೆ ಜಿಲ್ಲೆ ಹೊನ್ನಾಳಿಯ ಕುಂದೂರು ಶಾಲೆಯಲ್ಲಿ ಅವರು ಓದುತ್ತಿದ್ದಾಗ ಪಡೆದಿರುವ ಶಾಲಾ ದಾಖಲೆಗಳಲ್ಲೂ ಜಾತಿ ಕಲಂನಲ್ಲಿ ‘ಲಿಂಗಾಯತ’ ಎಂದು ಸ್ಪಷ್ಟವಾಗಿ ಉಲ್ಲೇಖವಾಗಿದೆ. ಆದರೆ ಅವರ ಪುತ್ರಿ ಎಂ.ಆರ್‌.ಚೇತನ ಬೇಡ ಜಂಗಮ ಜಾತಿ ಎಂದು ಪರಿಶಿಷ್ಟ ಜಾತಿಯ ಪ್ರಮಾಣಪತ್ರವನ್ನು 2012ರ ನ.17ರಂದು ಬೆಂಗಳೂರಿನ ಉತ್ತರ ತಾಲ್ಲೂಕು ತಹಸೀಲ್ದಾರ್‌ ಅವರಿಂದ ಪಡೆದಿದ್ದಾರೆ. ಅದನ್ನು ಜಿಲ್ಲಾ ಅಧಿಕಾರಿಗಳು ಸರಿ ಇದೆಯೇ ಎಂದು ಪರಿಶೀಲನೆಯನ್ನೂ ನಡೆಸಿಲ್ಲ ಎಂದು ‘ವಿಜಯ ಕರ್ನಾಟಕ’ ವರದಿ ಮಾಡಿದೆ.

ದಲಿತರ ಹೆಸರಲ್ಲಿ ಜಾತಿ ಪ್ರಮಾಣ ಪತ್ರಗಳನ್ನು ಸವರ್ಣಿಯರು ಪಡೆದು ಶೋಷಿತ ಸಮುದಾಯವನ್ನು ಅವಕಾಶಗಳಿಂದ ವಂಚಿಸುವುದು ಹೊಸ ಚರ್ಚೆಯೇನಲ್ಲ. ಆದರೆ ಜನಪ್ರತಿನಿಧಿಗಳಾದವರ ಹೆಸರುಗಳೇ ಇಂತಹ ಪ್ರಕರಣಗಳಲ್ಲಿ ಮತ್ತೆ ಮತ್ತೆ ಕೇಳಿಬರುತ್ತಿರುವುದು ಆಘಾತಕಾರಿ ಬೆಳವಣಿಗೆ.

ಪರಿಶಿಷ್ಟ ಕೋಟಾದಲ್ಲಿ ಇರಬಾರದ ಅವಕಾಶಗಳೇನೋ ಇವೆ ಎಂದು ಜನ ಭಾವಿಸುವುದು ಒಂದು ಕಡೆಯಾದರೆ, ದಿನದಿಂದ ದಿನಕ್ಕೆ ದಲಿತರ ಬಗೆಗಿನ ಕಾಳಜಿಯಿಂದ ಸರ್ಕಾರ ದೂರ ಸರಿಯುತ್ತಿರುವುದು ಮತ್ತೊಂದು ವಾಸ್ತವ. ಪರಿಸ್ಥಿತಿ ಹೀಗಿರುವ ದಲಿತರಿಗೆ ಇರುವ ಚಿಕ್ಕಪುಟ್ಟ ಅವಕಾಶಗಳನ್ನೂ ಕಿತ್ತುಕೊಂಡರೆ ಸಮುದಾಯದ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿ ಏನಾಗಬಹುದು? ಇಂತಹ ಪ್ರಕರಗಳಿಗೆ ಶಿಕ್ಷೆಯೇ ಇಲ್ಲವೇ? ಖಂಡಿತ ಇದೆ. ಆದರೆ ಕಾನೂನು ಜಾರಿಯಾಗಬೇಕಷ್ಟೇ.

ರಾಜ್ಯ ವಿಧಾನಸಭೆಗೆ 2013ರಲ್ಲಿ ಪರಿಶಿಷ್ಟ ಜಾತಿಗೆ ಮೀಸಲಿರುವ ಕೋಲಾರ ಜಿಲ್ಲೆ ಮುಳಬಾಗಿಲು ಕ್ಷೇತ್ರದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್‌ ಮೇಲೆ ಇಂಥದ್ದೇ ಆರೋಪ ಕೇಳಿಬಂದಿತ್ತು. ಜೆಡಿಎಸ್‌ನಿಂದ ಸ್ಪರ್ಧಿಸಿ ಎರಡನೇ ಸ್ಥಾನ ಪಡೆದಿದ್ದ ಎನ್‌.ಮುನಿಅಂಜಿನಪ್ಪ ಕೋರ್ಟ್ ಮೆಟ್ಟಿಲೇರಿದ್ದರು.

ಬುಡಗ ಜಂಗಮ ಜಾತಿಗೆ ಸೇರಿದವರೆಂದು ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದರು. ಸುಳ್ಳು ಪ್ರಮಾಣ ಪತ್ರ ಸಲ್ಲಿಸಿ ಆಯ್ಕೆಯಾಗಿರುವುದು ಹೈಕೋರ್ಟ್‌ನಲ್ಲಿ ಸಾಬೀತಾಗಿತ್ತು. ಮಂಜುನಾಥ್‌ ಹಿಂದುಳಿದ ವರ್ಗ-1ಕ್ಕೆ ಸೇರುವ ‘ಭೈರಾಗಿ’ ಸಮುದಾಯದವರಾಗಿದ್ದರು. ಸುಳ್ಳು ಜಾತಿಪ್ರಮಾಣ ಪತ್ರ ಸಲ್ಲಿಸಿದ್ದಕ್ಕೆ  ಪ್ರಜಾಪ್ರತಿನಿಧಿ ಕಾಯದೆ ನಿಯಮ 125-ಎ ಅನ್ವಯ ಮಂಜುನಾಥ್‌ಗೆ 25 ಸಾವಿರ ದಂಡ ವಿಧಿಸಲಾಗಿತ್ತು. ಜೊತೆಗೆ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಲಾಗಿತ್ತು.

ಇದನ್ನೂ ಓದಿರಿ: ದಲಿತ್‌ ಫೈಲ್ಸ್‌: ತಮಿಳುನಾಡಿನ ಬ್ರಾಹ್ಮಣೇತರ ಅರ್ಚಕರ ನೋವಿನ ಕಥನ (ಭಾಗ 2)

ಈಗಿನ ರಾಜ್ಯ ಸರ್ಕಾರದ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಅವರ ಮೇಲೂ ನಕಲಿ ಜಾತಿ ಪ್ರಮಾಣ ಪತ್ರದ ಆರೋಪವಿದೆ. ಚೌವ್ಹಾಣ್‌ ಲಂಬಾಣಿಯವರಾಗಿದ್ದರೂ ಅವರು ಕರ್ನಾಟಕದ ಲಂಬಾಣಿ ಜಾತಿಯವರಲ್ಲ. ಅವರು ಮಹಾರಾಷ್ಟ್ರದ ಲಂಬಾಣಿ ಜಾತಿಗೆ ಸೇರಿದ್ದಾರೆ. ಮಹಾರಾಷ್ಟ್ರದಲ್ಲಿ ಲಂಬಾಣಿ ಜಾತಿಯು ಹಿಂದುಳಿದ ವರ್ಗಕ್ಕೆ ಸೇರಿದ್ದರೆ, ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗೆ ಸೇರಿದೆ.

ಕಾನೂನು ತಜ್ಞರು ಏನು ಹೇಳುತ್ತಾರೆ?

ನಕಲಿ ಜಾತಿ ಪ್ರಮಾಣ ಪತ್ರ ಪಡೆಯುವವರ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪರ್ಯಾಯ ಕಾನೂನು ವೇದಿಕೆಯ ಸಲಹೆಗಾರರಾದ ಶಿವಮಣಿ, “ನಕಲಿ ಜಾತಿ ಪ್ರಮಾಣ ಪತ್ರ ಪಡೆದರೆ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಬಹುದು. ನಕಲಿ ಪ್ರಮಾಣ ಪತ್ರ ಬರೆದು ಮೀಸಲಾಯಿಯನ್ನು ಪಡೆದರೆ ನಿಜವಾದ ಫಲಾನುಭವಿಗೆ ತೊಂದರೆ ನೀಡಿದಂತಾಗುತ್ತದೆ. ಮೀಸಲಾತಿಯ ಅವಕಾಶ ಪಡೆದು ಸರ್ಕಾರಿ ಸೇವೆಯಲ್ಲಿದ್ದರೆ ಕೆಲಸದಿಂದ ವಜಾಗೊಳಿಸಬಹುದು. ಜನಪ್ರತಿನಿಧಿಯಾಗಿದ್ದರೆ ಸ್ಥಾನವನ್ನು ಅಸಿಂಧುಗೊಳಿಸಬಹುದು” ಎಂದರು.

ಪ್ರಭು ಚೌವ್ಹಾಣ್‌ ಪ್ರಕರಣದ ಕುರಿತು ಮಾತನಾಡಿದ ಅವರು, “ಚೌವ್ಹಾಣ್‌ ಅವರು ಎಸ್‌ಸಿ ಪ್ರಮಾಣಪತ್ರ ಬರೆದು ಎರಡು ಸಲ ಗೆದ್ದಿದ್ದಾರೆ. ಇವರ ವಿರುದ್ಧ ಪ್ರಕರಣ ನಡೆಯುತ್ತಿದೆ. ಅಂತಾರಾಜ್ಯ ಜಾತಿ ಪ್ರಮಾಣ ಪತ್ರ ಪಡೆದಿರುವುದು ಶಿಕ್ಷಾರ್ಹ ಅಪರಾಧ” ಎಂದು ತಿಳಿಸಿದರು.

“ಕರ್ನಾಟಕದಲ್ಲಿ ಸಿವಿಲ್ ರೈಟ್ಸ್‌ ಎನ್‌ಫೋರ್ಸ್‌ಮೆಂಟ್ ಏಜೆನ್ಸಿ ಎಂದಿದೆ. ಯಾರ್‍ಯಾರು ಸರ್ಕಾರಿ ಅಧಿಕಾರಿಗಳು ನಕಲಿ ಜಾತಿ ಪ್ರಮಾಣಪತ್ರ ಪಡೆದಿದ್ದಾರೆ ಎಂಬುದನ್ನು ಪರಿಶೀಲಿಸುವುದೇ ಅದರ ಕೆಲಸ. ಪ್ರಭು ಚೌವ್ಹಾಣ್ ನಕಲಿ ಪ್ರಮಾಣ ಪತ್ರ ಪಡೆದಿದ್ದಾರೆಂದು ಸದರಿ ಸಂಸ್ಥೆ ಹೇಳಿದೆ. ಆದರೆ ಜಿ‌ಲ್ಲಾಧಿಕಾರಿಯವರು ಜಾತಿ ಪ್ರಮಾಣ ಪತ್ರವನ್ನು ರದ್ದು ಮಾಡಿಲ್ಲ. ಚೌವ್ಹಾಣ್ ಸಚಿವರಾಗಿ ಮುಂದುವರಿಯುತ್ತಲೇ ಇದ್ದಾರೆ” ಎಂದು ವಿಷಾದಿಸಿದರು.

“ಇತ್ತೀಚಿನ ದಿನಗಳಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕಾಗಿ ಗಂಭೀರವಾಗಿ ತನಿಖೆಗಳೂ ನಡೆಯಬೇಕಿದೆ. ಬೆಂಗಳೂರಿನ ಡಿಆರ್‌ಡಿಒನಲ್ಲಿ ಏಳುನೂರು ಜನರು ನಕಲಿ ಜಾತಿ ಪ್ರಮಾಣಪತ್ರ ಬರೆದಿದ್ದಾರೆಂಬ ವರದಿಯಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ವಲಸಮ್ಮ ವರ್ಸಸ್ ಸ್ಟೇಟ್ ಆಫ್ ಕೇರಳ ಪ್ರಕರಣವನ್ನು ಉಲ್ಲೇಖಿಸಿದ ಅವರು, “ಗಂಡ ಪರಿಶಿಷ್ಟ ಜಾತಿಯಾಗಿದ್ದಾರೆಂದು ಹೆಂಡತಿ ಪರಿಶಿಷ್ಟ ಜಾತಿಯ ಪ್ರಮಾಣಪತ್ರ ಪಡೆದು ಕೆಲಸ ಪಡೆದಿರುತ್ತಾರೆ. ಆದರೆ ಹೆಂಡತಿ ಸವರ್ಣೀಯ ಜಾತಿಗೆ ಸೇರಿರುತ್ತಾರೆ. ಸುಪ್ರೀಂ ಈ ಕುರಿತು ವಿಚಾರಣೆ ನಡೆಸಿ, ಜಾತಿ ಎಂಬುದು ಹುಟ್ಟಿನಿಂದ ಬರುತ್ತದೆ. ಮದುವೆಯಾಗುವುದರಿಂದ ಬದಲಾಗುವುದಿಲ್ಲ ಎಂದಿದೆ” ಎಂದು ವಿವರಿಸಿದರು.


ಇದನ್ನೂ ಓದಿರಿ: ದಲಿತ್‌ ಫೈಲ್ಸ್‌: ತಮಿಳುನಾಡಿನಲ್ಲಿ ಅರ್ಚಕರಾಗಿ ನೇಮಕವಾದ ಅಬ್ರಾಹ್ಮಣರಿಗೆ ಬ್ರಾಹ್ಮಣರಿಂದ ಕಿರುಕುಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಟ್ವೀಟ್‌...

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ. ಸರ್ಕಾರ...

ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌)...