Homeಮುಖಪುಟರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ಸೋನಾ ಮಸೂರಿ ಭತ್ತಕ್ಕೆ ತೆಲಂಗಾಣ ರೈತರು ಕ್ವಿಂಟಾಲ್‌ಗೆ 2200 ರಿಂದ 2500 ರೂ ಪಡೆಯುತ್ತಿದ್ದಾರೆ.

- Advertisement -
- Advertisement -

ರಾಜ್ಯದಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದ ನಂತರ ಮೊದಲು ಬಾರಿಗೆ ರಾಯಚೂರು ಜಿಲ್ಲೆಯಲ್ಲಿ ರಿಲಾಯನ್ಸ್ ರಿಟೈಲ್ ಲಿಮಿಟೆಡ್ ವತಿಯಿಂದ MSP (ಕನಿಷ್ಟ ಬೆಂಬಲ ಬೆಲೆ) ಗಿಂತಲೂ ಅಧಿಕ ಬೆಲೆಗೆ 1000 ಕ್ವಿಂಟಾಲ್ ಭತ್ತ ಖರೀದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಪ್ರತಿ ಕ್ವಿಂಟಾಲ್ ಸಾಮಾನ್ಯ ಭತ್ತಕ್ಕೆ ಸರ್ಕಾರ 1868ರೂ ಕನಿಷ್ಟ ಬೆಂಬಲ ಬೆಲೆ ನಿಗದಿ ಮಾಡಿದೆ. ಆದರೆ ರಿಲಾಯನ್ಸ್ 1950ರೂಗೆ (82 ರೂ ಅಧಿಕ) ಸುಮಾರು 1100 ರೈತರಿಂದ ಭತ್ತ ಕೊಳ್ಳಲು ಮುಂದಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಆದರೆ ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಖರೀದಿಯನ್ನು ಸಂಪೂರ್ಣ ಸುಳ್ಳು ಎಂದು ರೈತ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. “ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಖರೀದಿ ಎಂಬುದು ದೊಡ್ಡ ಪ್ರಹಸನವಾಗಿದೆ. ಎಂಎಸ್‌ಪಿ ಇರುವುದು ಸಾಮಾನ್ಯ ಮತ್ತು ಗ್ರೇಡ್ ಎ ಭತ್ತಕ್ಕಾಗಿ ಮಾತ್ರ. ಸೋನಾ ಮಸೂರಿಗೆ ತೆಲಂಗಾಣ ರೈತರು ಕ್ವಿಂಟಾಲ್‌ಗೆ 2200 ರಿಂದ 2500 ರೂ ಪಡೆಯುತ್ತಿದ್ದಾರೆ. ಬಾಸ್ಮತಿ, ಗೋಬಿಂದಭಾಗ್ ಸೋನಾ ಮಸೂರಿಯಂತಹ ಸೂಪರ್ ಫೈನ್ ವೆರೈಟಿಗಳಿಗೆ ಎಂಎಸ್‌ಪಿ ಅರ್ಥಹೀನ” ಎಂದು ಆಲ್‌ ಇಂಡಿಯಾ ಕಿಸಾನ್ ಸಭಾ ಟ್ವೀಟ್ ಮಾಡಿದೆ.

ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್‍ ಮಾತನಾಡಿ “ಇದು ರೈತರನ್ನು ದಿಕ್ಕು ತಪ್ಪಿಸುವ ಹುನ್ನಾರವಾಗಿದೆ. ಸೋನಾ ಮಸೂರಿಗಾಗಲಿ ಅಥವಾ ಜ್ಯೋತಿ ಭತ್ತಕ್ಕಾಗಲಿ ಇದುವರೆಗೂ ಕೇಂದ್ರ ಸರ್ಕಾರ MSP ನಿಗಧಿ ಮಾಡಿಲ್ಲ. ಅದಕ್ಕಾಗಿ ನಾವು ಬಹಳ ವರ್ಷಗಳಿಂದ ಒತ್ತಾಯ ಮಾಡುತ್ತಿದ್ದೇವೆ. ಆ ಹಿನ್ನೆಲೆಯಲ್ಲಿ ಇದನ್ನು ಮರೆ ಮಾಚಿ ತಪ್ಪು ಸಂದೇಶಗಳನ್ನು ಕೊಡುತ್ತಿದ್ದಾರೆ. ಇದನ್ನು ರೈತರು ನಂಬಬಾರದು ಮತ್ತು ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಬೇಕು” ಎಂದಿದ್ದಾರೆ.

ಚಿಂತಕರಾದ ಸುರೇಶ್ ಕಂಜರ್ಪಣೆಯವರು ಈ ಕುರಿತು ವಿವರವಾಗಿ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ. “ಇದೊಂದು ಡೋಲು ಹೊಡೆಯುವ ಖದೀಮ ಸುದ್ದಿ ನೋಡಿ! ರಿಲಯನ್ಸ್ ಕರ್ನಾಟಕದ ರೈತರಿಂದ ಎಂಎಸ್ ಪಿಗಿಂತ ಹೆಚ್ಚಿನ ಬೆಲೆಗೆ ರೈತರ ಉತ್ಪಾದಕ ಸಂಘದಿಂದ ನೇರವಾಗಿ ಕೊಳ್ಳಲಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ವಾಸ್ತವವಾಗಿ ನೋಡುವುದಾದರೆ ರಿಲಾಯನ್ಸ್ ರೈತರಿಂದ ಕೊಳ್ಳುತ್ತಿರುವುದು ಕೇವಲ ನೂರು ಟನ್ ಮಾತ್ರ. ಇನ್ನು ಸೋನಾ ಮುಸ್ಸೋರಿತಳಿ, ಸೂಪರ್ ಫೈನ್ ವೆರೈಟಿ, ಇದನ್ನು ಸರಕಾರ ಕೊಳ್ಳುವುದಿಲ್ಲ! ಮಾಮೂಲಿಯಾಗಿ ಇದಕ್ಕೆ ಎಂಎಸ್ ಪಿಗಿಂತ ಹೆಚ್ಚಿನ ಬೆಲೆ ದೊರಕುತ್ತಿದೆ” ಎಂದಿದ್ದಾರೆ.

ಕರ್ನಾಟಕದ ಭತ್ತದ ಉತ್ಪಾದನೆ 30 ಲಕ್ಷ ಟನ್. ಇದರಲ್ಲಿ ರಾಯಚೂರಿನ ಪಾಲು ಐದು ಲಕ್ಷ ಟನ್. ಅಂದರೆ ಈ ರಿಲಯನ್ಸ್ ಕೊಳ್ಳುತ್ತಿರುವ ಪ್ರಮಾಣ ಒಂದು ಕೂದಲ ತೂಕ!!! ಈ ಪುಟಗೋಸಿ ಪ್ರಮಾಣವನ್ನು ಸಾವಿರ ರೈತರಿಂದ ಕೊಳ್ಳುತ್ತಿದೆ ಅಂದರೆ ತಲಾವಾರು ಎಷ್ಟು ಕ್ವಿಂಟಾಲ್ ಆಯಿತು? ಎಂದು ಅವರು ಪ್ರಶ್ನಿಸಿದ್ದಾರೆ.

ಈ ಚೌಕಿದಾರನ ಕಾಯಿದೆ ವಿರೋದಿಸುವುದಕ್ಕೆ ಕಾರಣ ಇಲ್ಲೇ ಇದೆ. ರೈತರು ಸಾಗಣೆ, ಲೋಡಿಂಗ್ ಅನ್ ಲೋಡಿಂಗ್ ವೆಚ್ಚ ಭರಿಸಬೇಕು. ತೇವಾಂಶ 16%ಕ್ಕಿಂತ ಕಡಿಮೆ ಇದ್ದರೆ ಮಾತ್ರ ಖರೀದಿ. ಉಳಿದ ಸಾವಿರಾರು ಟನ್ ಭತ್ತವನ್ನು ಏನು ಮಾಡಬೇಕು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಿಂಧನೂರು ಎಪಿಎಂಸಿ ವ್ಯವಸ್ಥಾಪಕರನ್ನು ಮಾತನಾಡಿಸಿದಾಗ, “ನಮ್ಮಲ್ಲಿ ಸಾಮಾನ್ಯ ಭತ್ತ ಮತ್ತು ಎ ಗ್ರೇಡ್ ಭತ್ತ ಎಂಬ ಎರಡು ವಿಭಾಗಗಳನ್ನು ಮಾಡುತ್ತೇವೆ. ಸೋನಾ ಮಸೂರಿ ಸಾಮಾನ್ಯ ಭತ್ತದಲ್ಲಿ ಬರುತ್ತದೆ. ಅದಕ್ಕೆ ಕೇಂದ್ರ ಸರ್ಕಾರ 1868ರೂ ನಿಗಧಿ ಮಾಡಿದೆ. ಅದರ ತೇವಾಂಶ 17% ಗಿಂತ ಕಡಿಮೆ ಇರಬೇಕು” ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಕೃಷಿ ಕಾಯ್ದೆಗಳು ಜಾರಿಯಾದಾಗಿನಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದಿವೆ. ಈ ನಡುವೆ ಅಂಬಾನಿ-ಅದಾನಿಯಂತಹ ಕಾರ್ಪೊರೇಟ್‌ಗಳ ಹಿತಕ್ಕಾಗಿ ಈ ಕಾಯ್ದೆಗಳನ್ನು ತರಲಾಗಿದೆ ಎಂದು ರೈತರು ಆರೋಪಿಸಿದ್ದಾರೆ.

(ಈ ಲೇಖನವನ್ನು ಸೋನಾ ಮಸೂರಿ ಭತ್ತಕ್ಕೆ ಬೆಂಬಲ ಬೆಲೆ ಇದೆಯೇ ಇಲ್ಲವೇ ಎಂಬುದರ ಕುರಿತು ರೈತ ಮುಖಂಡರ ನಡುವೆ ಉಂಟಾದ ಗೊಂದಲದಿಂದಾಗಿ ನಂತರ ಪರಿಷ್ಕರಣೆ ಮಾಡಲಾಗಿದೆ)


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...