Homeಮುಖಪುಟರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ಸೋನಾ ಮಸೂರಿ ಭತ್ತಕ್ಕೆ ತೆಲಂಗಾಣ ರೈತರು ಕ್ವಿಂಟಾಲ್‌ಗೆ 2200 ರಿಂದ 2500 ರೂ ಪಡೆಯುತ್ತಿದ್ದಾರೆ.

- Advertisement -
- Advertisement -

ರಾಜ್ಯದಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದ ನಂತರ ಮೊದಲು ಬಾರಿಗೆ ರಾಯಚೂರು ಜಿಲ್ಲೆಯಲ್ಲಿ ರಿಲಾಯನ್ಸ್ ರಿಟೈಲ್ ಲಿಮಿಟೆಡ್ ವತಿಯಿಂದ MSP (ಕನಿಷ್ಟ ಬೆಂಬಲ ಬೆಲೆ) ಗಿಂತಲೂ ಅಧಿಕ ಬೆಲೆಗೆ 1000 ಕ್ವಿಂಟಾಲ್ ಭತ್ತ ಖರೀದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಪ್ರತಿ ಕ್ವಿಂಟಾಲ್ ಸಾಮಾನ್ಯ ಭತ್ತಕ್ಕೆ ಸರ್ಕಾರ 1868ರೂ ಕನಿಷ್ಟ ಬೆಂಬಲ ಬೆಲೆ ನಿಗದಿ ಮಾಡಿದೆ. ಆದರೆ ರಿಲಾಯನ್ಸ್ 1950ರೂಗೆ (82 ರೂ ಅಧಿಕ) ಸುಮಾರು 1100 ರೈತರಿಂದ ಭತ್ತ ಕೊಳ್ಳಲು ಮುಂದಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಆದರೆ ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಖರೀದಿಯನ್ನು ಸಂಪೂರ್ಣ ಸುಳ್ಳು ಎಂದು ರೈತ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. “ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಖರೀದಿ ಎಂಬುದು ದೊಡ್ಡ ಪ್ರಹಸನವಾಗಿದೆ. ಎಂಎಸ್‌ಪಿ ಇರುವುದು ಸಾಮಾನ್ಯ ಮತ್ತು ಗ್ರೇಡ್ ಎ ಭತ್ತಕ್ಕಾಗಿ ಮಾತ್ರ. ಸೋನಾ ಮಸೂರಿಗೆ ತೆಲಂಗಾಣ ರೈತರು ಕ್ವಿಂಟಾಲ್‌ಗೆ 2200 ರಿಂದ 2500 ರೂ ಪಡೆಯುತ್ತಿದ್ದಾರೆ. ಬಾಸ್ಮತಿ, ಗೋಬಿಂದಭಾಗ್ ಸೋನಾ ಮಸೂರಿಯಂತಹ ಸೂಪರ್ ಫೈನ್ ವೆರೈಟಿಗಳಿಗೆ ಎಂಎಸ್‌ಪಿ ಅರ್ಥಹೀನ” ಎಂದು ಆಲ್‌ ಇಂಡಿಯಾ ಕಿಸಾನ್ ಸಭಾ ಟ್ವೀಟ್ ಮಾಡಿದೆ.

ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್‍ ಮಾತನಾಡಿ “ಇದು ರೈತರನ್ನು ದಿಕ್ಕು ತಪ್ಪಿಸುವ ಹುನ್ನಾರವಾಗಿದೆ. ಸೋನಾ ಮಸೂರಿಗಾಗಲಿ ಅಥವಾ ಜ್ಯೋತಿ ಭತ್ತಕ್ಕಾಗಲಿ ಇದುವರೆಗೂ ಕೇಂದ್ರ ಸರ್ಕಾರ MSP ನಿಗಧಿ ಮಾಡಿಲ್ಲ. ಅದಕ್ಕಾಗಿ ನಾವು ಬಹಳ ವರ್ಷಗಳಿಂದ ಒತ್ತಾಯ ಮಾಡುತ್ತಿದ್ದೇವೆ. ಆ ಹಿನ್ನೆಲೆಯಲ್ಲಿ ಇದನ್ನು ಮರೆ ಮಾಚಿ ತಪ್ಪು ಸಂದೇಶಗಳನ್ನು ಕೊಡುತ್ತಿದ್ದಾರೆ. ಇದನ್ನು ರೈತರು ನಂಬಬಾರದು ಮತ್ತು ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಬೇಕು” ಎಂದಿದ್ದಾರೆ.

ಚಿಂತಕರಾದ ಸುರೇಶ್ ಕಂಜರ್ಪಣೆಯವರು ಈ ಕುರಿತು ವಿವರವಾಗಿ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ. “ಇದೊಂದು ಡೋಲು ಹೊಡೆಯುವ ಖದೀಮ ಸುದ್ದಿ ನೋಡಿ! ರಿಲಯನ್ಸ್ ಕರ್ನಾಟಕದ ರೈತರಿಂದ ಎಂಎಸ್ ಪಿಗಿಂತ ಹೆಚ್ಚಿನ ಬೆಲೆಗೆ ರೈತರ ಉತ್ಪಾದಕ ಸಂಘದಿಂದ ನೇರವಾಗಿ ಕೊಳ್ಳಲಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ವಾಸ್ತವವಾಗಿ ನೋಡುವುದಾದರೆ ರಿಲಾಯನ್ಸ್ ರೈತರಿಂದ ಕೊಳ್ಳುತ್ತಿರುವುದು ಕೇವಲ ನೂರು ಟನ್ ಮಾತ್ರ. ಇನ್ನು ಸೋನಾ ಮುಸ್ಸೋರಿತಳಿ, ಸೂಪರ್ ಫೈನ್ ವೆರೈಟಿ, ಇದನ್ನು ಸರಕಾರ ಕೊಳ್ಳುವುದಿಲ್ಲ! ಮಾಮೂಲಿಯಾಗಿ ಇದಕ್ಕೆ ಎಂಎಸ್ ಪಿಗಿಂತ ಹೆಚ್ಚಿನ ಬೆಲೆ ದೊರಕುತ್ತಿದೆ” ಎಂದಿದ್ದಾರೆ.

ಕರ್ನಾಟಕದ ಭತ್ತದ ಉತ್ಪಾದನೆ 30 ಲಕ್ಷ ಟನ್. ಇದರಲ್ಲಿ ರಾಯಚೂರಿನ ಪಾಲು ಐದು ಲಕ್ಷ ಟನ್. ಅಂದರೆ ಈ ರಿಲಯನ್ಸ್ ಕೊಳ್ಳುತ್ತಿರುವ ಪ್ರಮಾಣ ಒಂದು ಕೂದಲ ತೂಕ!!! ಈ ಪುಟಗೋಸಿ ಪ್ರಮಾಣವನ್ನು ಸಾವಿರ ರೈತರಿಂದ ಕೊಳ್ಳುತ್ತಿದೆ ಅಂದರೆ ತಲಾವಾರು ಎಷ್ಟು ಕ್ವಿಂಟಾಲ್ ಆಯಿತು? ಎಂದು ಅವರು ಪ್ರಶ್ನಿಸಿದ್ದಾರೆ.

ಈ ಚೌಕಿದಾರನ ಕಾಯಿದೆ ವಿರೋದಿಸುವುದಕ್ಕೆ ಕಾರಣ ಇಲ್ಲೇ ಇದೆ. ರೈತರು ಸಾಗಣೆ, ಲೋಡಿಂಗ್ ಅನ್ ಲೋಡಿಂಗ್ ವೆಚ್ಚ ಭರಿಸಬೇಕು. ತೇವಾಂಶ 16%ಕ್ಕಿಂತ ಕಡಿಮೆ ಇದ್ದರೆ ಮಾತ್ರ ಖರೀದಿ. ಉಳಿದ ಸಾವಿರಾರು ಟನ್ ಭತ್ತವನ್ನು ಏನು ಮಾಡಬೇಕು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಿಂಧನೂರು ಎಪಿಎಂಸಿ ವ್ಯವಸ್ಥಾಪಕರನ್ನು ಮಾತನಾಡಿಸಿದಾಗ, “ನಮ್ಮಲ್ಲಿ ಸಾಮಾನ್ಯ ಭತ್ತ ಮತ್ತು ಎ ಗ್ರೇಡ್ ಭತ್ತ ಎಂಬ ಎರಡು ವಿಭಾಗಗಳನ್ನು ಮಾಡುತ್ತೇವೆ. ಸೋನಾ ಮಸೂರಿ ಸಾಮಾನ್ಯ ಭತ್ತದಲ್ಲಿ ಬರುತ್ತದೆ. ಅದಕ್ಕೆ ಕೇಂದ್ರ ಸರ್ಕಾರ 1868ರೂ ನಿಗಧಿ ಮಾಡಿದೆ. ಅದರ ತೇವಾಂಶ 17% ಗಿಂತ ಕಡಿಮೆ ಇರಬೇಕು” ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಕೃಷಿ ಕಾಯ್ದೆಗಳು ಜಾರಿಯಾದಾಗಿನಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದಿವೆ. ಈ ನಡುವೆ ಅಂಬಾನಿ-ಅದಾನಿಯಂತಹ ಕಾರ್ಪೊರೇಟ್‌ಗಳ ಹಿತಕ್ಕಾಗಿ ಈ ಕಾಯ್ದೆಗಳನ್ನು ತರಲಾಗಿದೆ ಎಂದು ರೈತರು ಆರೋಪಿಸಿದ್ದಾರೆ.

(ಈ ಲೇಖನವನ್ನು ಸೋನಾ ಮಸೂರಿ ಭತ್ತಕ್ಕೆ ಬೆಂಬಲ ಬೆಲೆ ಇದೆಯೇ ಇಲ್ಲವೇ ಎಂಬುದರ ಕುರಿತು ರೈತ ಮುಖಂಡರ ನಡುವೆ ಉಂಟಾದ ಗೊಂದಲದಿಂದಾಗಿ ನಂತರ ಪರಿಷ್ಕರಣೆ ಮಾಡಲಾಗಿದೆ)


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...