Homeಮುಖಪುಟರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ಸೋನಾ ಮಸೂರಿ ಭತ್ತಕ್ಕೆ ತೆಲಂಗಾಣ ರೈತರು ಕ್ವಿಂಟಾಲ್‌ಗೆ 2200 ರಿಂದ 2500 ರೂ ಪಡೆಯುತ್ತಿದ್ದಾರೆ.

- Advertisement -
- Advertisement -

ರಾಜ್ಯದಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದ ನಂತರ ಮೊದಲು ಬಾರಿಗೆ ರಾಯಚೂರು ಜಿಲ್ಲೆಯಲ್ಲಿ ರಿಲಾಯನ್ಸ್ ರಿಟೈಲ್ ಲಿಮಿಟೆಡ್ ವತಿಯಿಂದ MSP (ಕನಿಷ್ಟ ಬೆಂಬಲ ಬೆಲೆ) ಗಿಂತಲೂ ಅಧಿಕ ಬೆಲೆಗೆ 1000 ಕ್ವಿಂಟಾಲ್ ಭತ್ತ ಖರೀದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಪ್ರತಿ ಕ್ವಿಂಟಾಲ್ ಸಾಮಾನ್ಯ ಭತ್ತಕ್ಕೆ ಸರ್ಕಾರ 1868ರೂ ಕನಿಷ್ಟ ಬೆಂಬಲ ಬೆಲೆ ನಿಗದಿ ಮಾಡಿದೆ. ಆದರೆ ರಿಲಾಯನ್ಸ್ 1950ರೂಗೆ (82 ರೂ ಅಧಿಕ) ಸುಮಾರು 1100 ರೈತರಿಂದ ಭತ್ತ ಕೊಳ್ಳಲು ಮುಂದಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಆದರೆ ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಖರೀದಿಯನ್ನು ಸಂಪೂರ್ಣ ಸುಳ್ಳು ಎಂದು ರೈತ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. “ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಖರೀದಿ ಎಂಬುದು ದೊಡ್ಡ ಪ್ರಹಸನವಾಗಿದೆ. ಎಂಎಸ್‌ಪಿ ಇರುವುದು ಸಾಮಾನ್ಯ ಮತ್ತು ಗ್ರೇಡ್ ಎ ಭತ್ತಕ್ಕಾಗಿ ಮಾತ್ರ. ಸೋನಾ ಮಸೂರಿಗೆ ತೆಲಂಗಾಣ ರೈತರು ಕ್ವಿಂಟಾಲ್‌ಗೆ 2200 ರಿಂದ 2500 ರೂ ಪಡೆಯುತ್ತಿದ್ದಾರೆ. ಬಾಸ್ಮತಿ, ಗೋಬಿಂದಭಾಗ್ ಸೋನಾ ಮಸೂರಿಯಂತಹ ಸೂಪರ್ ಫೈನ್ ವೆರೈಟಿಗಳಿಗೆ ಎಂಎಸ್‌ಪಿ ಅರ್ಥಹೀನ” ಎಂದು ಆಲ್‌ ಇಂಡಿಯಾ ಕಿಸಾನ್ ಸಭಾ ಟ್ವೀಟ್ ಮಾಡಿದೆ.

ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್‍ ಮಾತನಾಡಿ “ಇದು ರೈತರನ್ನು ದಿಕ್ಕು ತಪ್ಪಿಸುವ ಹುನ್ನಾರವಾಗಿದೆ. ಸೋನಾ ಮಸೂರಿಗಾಗಲಿ ಅಥವಾ ಜ್ಯೋತಿ ಭತ್ತಕ್ಕಾಗಲಿ ಇದುವರೆಗೂ ಕೇಂದ್ರ ಸರ್ಕಾರ MSP ನಿಗಧಿ ಮಾಡಿಲ್ಲ. ಅದಕ್ಕಾಗಿ ನಾವು ಬಹಳ ವರ್ಷಗಳಿಂದ ಒತ್ತಾಯ ಮಾಡುತ್ತಿದ್ದೇವೆ. ಆ ಹಿನ್ನೆಲೆಯಲ್ಲಿ ಇದನ್ನು ಮರೆ ಮಾಚಿ ತಪ್ಪು ಸಂದೇಶಗಳನ್ನು ಕೊಡುತ್ತಿದ್ದಾರೆ. ಇದನ್ನು ರೈತರು ನಂಬಬಾರದು ಮತ್ತು ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಬೇಕು” ಎಂದಿದ್ದಾರೆ.

ಚಿಂತಕರಾದ ಸುರೇಶ್ ಕಂಜರ್ಪಣೆಯವರು ಈ ಕುರಿತು ವಿವರವಾಗಿ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ. “ಇದೊಂದು ಡೋಲು ಹೊಡೆಯುವ ಖದೀಮ ಸುದ್ದಿ ನೋಡಿ! ರಿಲಯನ್ಸ್ ಕರ್ನಾಟಕದ ರೈತರಿಂದ ಎಂಎಸ್ ಪಿಗಿಂತ ಹೆಚ್ಚಿನ ಬೆಲೆಗೆ ರೈತರ ಉತ್ಪಾದಕ ಸಂಘದಿಂದ ನೇರವಾಗಿ ಕೊಳ್ಳಲಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ವಾಸ್ತವವಾಗಿ ನೋಡುವುದಾದರೆ ರಿಲಾಯನ್ಸ್ ರೈತರಿಂದ ಕೊಳ್ಳುತ್ತಿರುವುದು ಕೇವಲ ನೂರು ಟನ್ ಮಾತ್ರ. ಇನ್ನು ಸೋನಾ ಮುಸ್ಸೋರಿತಳಿ, ಸೂಪರ್ ಫೈನ್ ವೆರೈಟಿ, ಇದನ್ನು ಸರಕಾರ ಕೊಳ್ಳುವುದಿಲ್ಲ! ಮಾಮೂಲಿಯಾಗಿ ಇದಕ್ಕೆ ಎಂಎಸ್ ಪಿಗಿಂತ ಹೆಚ್ಚಿನ ಬೆಲೆ ದೊರಕುತ್ತಿದೆ” ಎಂದಿದ್ದಾರೆ.

ಕರ್ನಾಟಕದ ಭತ್ತದ ಉತ್ಪಾದನೆ 30 ಲಕ್ಷ ಟನ್. ಇದರಲ್ಲಿ ರಾಯಚೂರಿನ ಪಾಲು ಐದು ಲಕ್ಷ ಟನ್. ಅಂದರೆ ಈ ರಿಲಯನ್ಸ್ ಕೊಳ್ಳುತ್ತಿರುವ ಪ್ರಮಾಣ ಒಂದು ಕೂದಲ ತೂಕ!!! ಈ ಪುಟಗೋಸಿ ಪ್ರಮಾಣವನ್ನು ಸಾವಿರ ರೈತರಿಂದ ಕೊಳ್ಳುತ್ತಿದೆ ಅಂದರೆ ತಲಾವಾರು ಎಷ್ಟು ಕ್ವಿಂಟಾಲ್ ಆಯಿತು? ಎಂದು ಅವರು ಪ್ರಶ್ನಿಸಿದ್ದಾರೆ.

ಈ ಚೌಕಿದಾರನ ಕಾಯಿದೆ ವಿರೋದಿಸುವುದಕ್ಕೆ ಕಾರಣ ಇಲ್ಲೇ ಇದೆ. ರೈತರು ಸಾಗಣೆ, ಲೋಡಿಂಗ್ ಅನ್ ಲೋಡಿಂಗ್ ವೆಚ್ಚ ಭರಿಸಬೇಕು. ತೇವಾಂಶ 16%ಕ್ಕಿಂತ ಕಡಿಮೆ ಇದ್ದರೆ ಮಾತ್ರ ಖರೀದಿ. ಉಳಿದ ಸಾವಿರಾರು ಟನ್ ಭತ್ತವನ್ನು ಏನು ಮಾಡಬೇಕು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಿಂಧನೂರು ಎಪಿಎಂಸಿ ವ್ಯವಸ್ಥಾಪಕರನ್ನು ಮಾತನಾಡಿಸಿದಾಗ, “ನಮ್ಮಲ್ಲಿ ಸಾಮಾನ್ಯ ಭತ್ತ ಮತ್ತು ಎ ಗ್ರೇಡ್ ಭತ್ತ ಎಂಬ ಎರಡು ವಿಭಾಗಗಳನ್ನು ಮಾಡುತ್ತೇವೆ. ಸೋನಾ ಮಸೂರಿ ಸಾಮಾನ್ಯ ಭತ್ತದಲ್ಲಿ ಬರುತ್ತದೆ. ಅದಕ್ಕೆ ಕೇಂದ್ರ ಸರ್ಕಾರ 1868ರೂ ನಿಗಧಿ ಮಾಡಿದೆ. ಅದರ ತೇವಾಂಶ 17% ಗಿಂತ ಕಡಿಮೆ ಇರಬೇಕು” ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಕೃಷಿ ಕಾಯ್ದೆಗಳು ಜಾರಿಯಾದಾಗಿನಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದಿವೆ. ಈ ನಡುವೆ ಅಂಬಾನಿ-ಅದಾನಿಯಂತಹ ಕಾರ್ಪೊರೇಟ್‌ಗಳ ಹಿತಕ್ಕಾಗಿ ಈ ಕಾಯ್ದೆಗಳನ್ನು ತರಲಾಗಿದೆ ಎಂದು ರೈತರು ಆರೋಪಿಸಿದ್ದಾರೆ.

(ಈ ಲೇಖನವನ್ನು ಸೋನಾ ಮಸೂರಿ ಭತ್ತಕ್ಕೆ ಬೆಂಬಲ ಬೆಲೆ ಇದೆಯೇ ಇಲ್ಲವೇ ಎಂಬುದರ ಕುರಿತು ರೈತ ಮುಖಂಡರ ನಡುವೆ ಉಂಟಾದ ಗೊಂದಲದಿಂದಾಗಿ ನಂತರ ಪರಿಷ್ಕರಣೆ ಮಾಡಲಾಗಿದೆ)


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...