Homeಮುಖಪುಟರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ಸೋನಾ ಮಸೂರಿ ಭತ್ತಕ್ಕೆ ತೆಲಂಗಾಣ ರೈತರು ಕ್ವಿಂಟಾಲ್‌ಗೆ 2200 ರಿಂದ 2500 ರೂ ಪಡೆಯುತ್ತಿದ್ದಾರೆ.

- Advertisement -
- Advertisement -

ರಾಜ್ಯದಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದ ನಂತರ ಮೊದಲು ಬಾರಿಗೆ ರಾಯಚೂರು ಜಿಲ್ಲೆಯಲ್ಲಿ ರಿಲಾಯನ್ಸ್ ರಿಟೈಲ್ ಲಿಮಿಟೆಡ್ ವತಿಯಿಂದ MSP (ಕನಿಷ್ಟ ಬೆಂಬಲ ಬೆಲೆ) ಗಿಂತಲೂ ಅಧಿಕ ಬೆಲೆಗೆ 1000 ಕ್ವಿಂಟಾಲ್ ಭತ್ತ ಖರೀದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಪ್ರತಿ ಕ್ವಿಂಟಾಲ್ ಸಾಮಾನ್ಯ ಭತ್ತಕ್ಕೆ ಸರ್ಕಾರ 1868ರೂ ಕನಿಷ್ಟ ಬೆಂಬಲ ಬೆಲೆ ನಿಗದಿ ಮಾಡಿದೆ. ಆದರೆ ರಿಲಾಯನ್ಸ್ 1950ರೂಗೆ (82 ರೂ ಅಧಿಕ) ಸುಮಾರು 1100 ರೈತರಿಂದ ಭತ್ತ ಕೊಳ್ಳಲು ಮುಂದಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಆದರೆ ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಖರೀದಿಯನ್ನು ಸಂಪೂರ್ಣ ಸುಳ್ಳು ಎಂದು ರೈತ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. “ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಖರೀದಿ ಎಂಬುದು ದೊಡ್ಡ ಪ್ರಹಸನವಾಗಿದೆ. ಎಂಎಸ್‌ಪಿ ಇರುವುದು ಸಾಮಾನ್ಯ ಮತ್ತು ಗ್ರೇಡ್ ಎ ಭತ್ತಕ್ಕಾಗಿ ಮಾತ್ರ. ಸೋನಾ ಮಸೂರಿಗೆ ತೆಲಂಗಾಣ ರೈತರು ಕ್ವಿಂಟಾಲ್‌ಗೆ 2200 ರಿಂದ 2500 ರೂ ಪಡೆಯುತ್ತಿದ್ದಾರೆ. ಬಾಸ್ಮತಿ, ಗೋಬಿಂದಭಾಗ್ ಸೋನಾ ಮಸೂರಿಯಂತಹ ಸೂಪರ್ ಫೈನ್ ವೆರೈಟಿಗಳಿಗೆ ಎಂಎಸ್‌ಪಿ ಅರ್ಥಹೀನ” ಎಂದು ಆಲ್‌ ಇಂಡಿಯಾ ಕಿಸಾನ್ ಸಭಾ ಟ್ವೀಟ್ ಮಾಡಿದೆ.

ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್‍ ಮಾತನಾಡಿ “ಇದು ರೈತರನ್ನು ದಿಕ್ಕು ತಪ್ಪಿಸುವ ಹುನ್ನಾರವಾಗಿದೆ. ಸೋನಾ ಮಸೂರಿಗಾಗಲಿ ಅಥವಾ ಜ್ಯೋತಿ ಭತ್ತಕ್ಕಾಗಲಿ ಇದುವರೆಗೂ ಕೇಂದ್ರ ಸರ್ಕಾರ MSP ನಿಗಧಿ ಮಾಡಿಲ್ಲ. ಅದಕ್ಕಾಗಿ ನಾವು ಬಹಳ ವರ್ಷಗಳಿಂದ ಒತ್ತಾಯ ಮಾಡುತ್ತಿದ್ದೇವೆ. ಆ ಹಿನ್ನೆಲೆಯಲ್ಲಿ ಇದನ್ನು ಮರೆ ಮಾಚಿ ತಪ್ಪು ಸಂದೇಶಗಳನ್ನು ಕೊಡುತ್ತಿದ್ದಾರೆ. ಇದನ್ನು ರೈತರು ನಂಬಬಾರದು ಮತ್ತು ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಬೇಕು” ಎಂದಿದ್ದಾರೆ.

ಚಿಂತಕರಾದ ಸುರೇಶ್ ಕಂಜರ್ಪಣೆಯವರು ಈ ಕುರಿತು ವಿವರವಾಗಿ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ. “ಇದೊಂದು ಡೋಲು ಹೊಡೆಯುವ ಖದೀಮ ಸುದ್ದಿ ನೋಡಿ! ರಿಲಯನ್ಸ್ ಕರ್ನಾಟಕದ ರೈತರಿಂದ ಎಂಎಸ್ ಪಿಗಿಂತ ಹೆಚ್ಚಿನ ಬೆಲೆಗೆ ರೈತರ ಉತ್ಪಾದಕ ಸಂಘದಿಂದ ನೇರವಾಗಿ ಕೊಳ್ಳಲಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ವಾಸ್ತವವಾಗಿ ನೋಡುವುದಾದರೆ ರಿಲಾಯನ್ಸ್ ರೈತರಿಂದ ಕೊಳ್ಳುತ್ತಿರುವುದು ಕೇವಲ ನೂರು ಟನ್ ಮಾತ್ರ. ಇನ್ನು ಸೋನಾ ಮುಸ್ಸೋರಿತಳಿ, ಸೂಪರ್ ಫೈನ್ ವೆರೈಟಿ, ಇದನ್ನು ಸರಕಾರ ಕೊಳ್ಳುವುದಿಲ್ಲ! ಮಾಮೂಲಿಯಾಗಿ ಇದಕ್ಕೆ ಎಂಎಸ್ ಪಿಗಿಂತ ಹೆಚ್ಚಿನ ಬೆಲೆ ದೊರಕುತ್ತಿದೆ” ಎಂದಿದ್ದಾರೆ.

ಕರ್ನಾಟಕದ ಭತ್ತದ ಉತ್ಪಾದನೆ 30 ಲಕ್ಷ ಟನ್. ಇದರಲ್ಲಿ ರಾಯಚೂರಿನ ಪಾಲು ಐದು ಲಕ್ಷ ಟನ್. ಅಂದರೆ ಈ ರಿಲಯನ್ಸ್ ಕೊಳ್ಳುತ್ತಿರುವ ಪ್ರಮಾಣ ಒಂದು ಕೂದಲ ತೂಕ!!! ಈ ಪುಟಗೋಸಿ ಪ್ರಮಾಣವನ್ನು ಸಾವಿರ ರೈತರಿಂದ ಕೊಳ್ಳುತ್ತಿದೆ ಅಂದರೆ ತಲಾವಾರು ಎಷ್ಟು ಕ್ವಿಂಟಾಲ್ ಆಯಿತು? ಎಂದು ಅವರು ಪ್ರಶ್ನಿಸಿದ್ದಾರೆ.

ಈ ಚೌಕಿದಾರನ ಕಾಯಿದೆ ವಿರೋದಿಸುವುದಕ್ಕೆ ಕಾರಣ ಇಲ್ಲೇ ಇದೆ. ರೈತರು ಸಾಗಣೆ, ಲೋಡಿಂಗ್ ಅನ್ ಲೋಡಿಂಗ್ ವೆಚ್ಚ ಭರಿಸಬೇಕು. ತೇವಾಂಶ 16%ಕ್ಕಿಂತ ಕಡಿಮೆ ಇದ್ದರೆ ಮಾತ್ರ ಖರೀದಿ. ಉಳಿದ ಸಾವಿರಾರು ಟನ್ ಭತ್ತವನ್ನು ಏನು ಮಾಡಬೇಕು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಿಂಧನೂರು ಎಪಿಎಂಸಿ ವ್ಯವಸ್ಥಾಪಕರನ್ನು ಮಾತನಾಡಿಸಿದಾಗ, “ನಮ್ಮಲ್ಲಿ ಸಾಮಾನ್ಯ ಭತ್ತ ಮತ್ತು ಎ ಗ್ರೇಡ್ ಭತ್ತ ಎಂಬ ಎರಡು ವಿಭಾಗಗಳನ್ನು ಮಾಡುತ್ತೇವೆ. ಸೋನಾ ಮಸೂರಿ ಸಾಮಾನ್ಯ ಭತ್ತದಲ್ಲಿ ಬರುತ್ತದೆ. ಅದಕ್ಕೆ ಕೇಂದ್ರ ಸರ್ಕಾರ 1868ರೂ ನಿಗಧಿ ಮಾಡಿದೆ. ಅದರ ತೇವಾಂಶ 17% ಗಿಂತ ಕಡಿಮೆ ಇರಬೇಕು” ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಕೃಷಿ ಕಾಯ್ದೆಗಳು ಜಾರಿಯಾದಾಗಿನಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದಿವೆ. ಈ ನಡುವೆ ಅಂಬಾನಿ-ಅದಾನಿಯಂತಹ ಕಾರ್ಪೊರೇಟ್‌ಗಳ ಹಿತಕ್ಕಾಗಿ ಈ ಕಾಯ್ದೆಗಳನ್ನು ತರಲಾಗಿದೆ ಎಂದು ರೈತರು ಆರೋಪಿಸಿದ್ದಾರೆ.

(ಈ ಲೇಖನವನ್ನು ಸೋನಾ ಮಸೂರಿ ಭತ್ತಕ್ಕೆ ಬೆಂಬಲ ಬೆಲೆ ಇದೆಯೇ ಇಲ್ಲವೇ ಎಂಬುದರ ಕುರಿತು ರೈತ ಮುಖಂಡರ ನಡುವೆ ಉಂಟಾದ ಗೊಂದಲದಿಂದಾಗಿ ನಂತರ ಪರಿಷ್ಕರಣೆ ಮಾಡಲಾಗಿದೆ)


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...