Homeಮುಖಪುಟರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ಸೋನಾ ಮಸೂರಿ ಭತ್ತಕ್ಕೆ ತೆಲಂಗಾಣ ರೈತರು ಕ್ವಿಂಟಾಲ್‌ಗೆ 2200 ರಿಂದ 2500 ರೂ ಪಡೆಯುತ್ತಿದ್ದಾರೆ.

- Advertisement -
- Advertisement -

ರಾಜ್ಯದಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದ ನಂತರ ಮೊದಲು ಬಾರಿಗೆ ರಾಯಚೂರು ಜಿಲ್ಲೆಯಲ್ಲಿ ರಿಲಾಯನ್ಸ್ ರಿಟೈಲ್ ಲಿಮಿಟೆಡ್ ವತಿಯಿಂದ MSP (ಕನಿಷ್ಟ ಬೆಂಬಲ ಬೆಲೆ) ಗಿಂತಲೂ ಅಧಿಕ ಬೆಲೆಗೆ 1000 ಕ್ವಿಂಟಾಲ್ ಭತ್ತ ಖರೀದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಪ್ರತಿ ಕ್ವಿಂಟಾಲ್ ಸಾಮಾನ್ಯ ಭತ್ತಕ್ಕೆ ಸರ್ಕಾರ 1868ರೂ ಕನಿಷ್ಟ ಬೆಂಬಲ ಬೆಲೆ ನಿಗದಿ ಮಾಡಿದೆ. ಆದರೆ ರಿಲಾಯನ್ಸ್ 1950ರೂಗೆ (82 ರೂ ಅಧಿಕ) ಸುಮಾರು 1100 ರೈತರಿಂದ ಭತ್ತ ಕೊಳ್ಳಲು ಮುಂದಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಆದರೆ ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಖರೀದಿಯನ್ನು ಸಂಪೂರ್ಣ ಸುಳ್ಳು ಎಂದು ರೈತ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. “ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಖರೀದಿ ಎಂಬುದು ದೊಡ್ಡ ಪ್ರಹಸನವಾಗಿದೆ. ಎಂಎಸ್‌ಪಿ ಇರುವುದು ಸಾಮಾನ್ಯ ಮತ್ತು ಗ್ರೇಡ್ ಎ ಭತ್ತಕ್ಕಾಗಿ ಮಾತ್ರ. ಸೋನಾ ಮಸೂರಿಗೆ ತೆಲಂಗಾಣ ರೈತರು ಕ್ವಿಂಟಾಲ್‌ಗೆ 2200 ರಿಂದ 2500 ರೂ ಪಡೆಯುತ್ತಿದ್ದಾರೆ. ಬಾಸ್ಮತಿ, ಗೋಬಿಂದಭಾಗ್ ಸೋನಾ ಮಸೂರಿಯಂತಹ ಸೂಪರ್ ಫೈನ್ ವೆರೈಟಿಗಳಿಗೆ ಎಂಎಸ್‌ಪಿ ಅರ್ಥಹೀನ” ಎಂದು ಆಲ್‌ ಇಂಡಿಯಾ ಕಿಸಾನ್ ಸಭಾ ಟ್ವೀಟ್ ಮಾಡಿದೆ.

ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್‍ ಮಾತನಾಡಿ “ಇದು ರೈತರನ್ನು ದಿಕ್ಕು ತಪ್ಪಿಸುವ ಹುನ್ನಾರವಾಗಿದೆ. ಸೋನಾ ಮಸೂರಿಗಾಗಲಿ ಅಥವಾ ಜ್ಯೋತಿ ಭತ್ತಕ್ಕಾಗಲಿ ಇದುವರೆಗೂ ಕೇಂದ್ರ ಸರ್ಕಾರ MSP ನಿಗಧಿ ಮಾಡಿಲ್ಲ. ಅದಕ್ಕಾಗಿ ನಾವು ಬಹಳ ವರ್ಷಗಳಿಂದ ಒತ್ತಾಯ ಮಾಡುತ್ತಿದ್ದೇವೆ. ಆ ಹಿನ್ನೆಲೆಯಲ್ಲಿ ಇದನ್ನು ಮರೆ ಮಾಚಿ ತಪ್ಪು ಸಂದೇಶಗಳನ್ನು ಕೊಡುತ್ತಿದ್ದಾರೆ. ಇದನ್ನು ರೈತರು ನಂಬಬಾರದು ಮತ್ತು ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಬೇಕು” ಎಂದಿದ್ದಾರೆ.

ಚಿಂತಕರಾದ ಸುರೇಶ್ ಕಂಜರ್ಪಣೆಯವರು ಈ ಕುರಿತು ವಿವರವಾಗಿ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ. “ಇದೊಂದು ಡೋಲು ಹೊಡೆಯುವ ಖದೀಮ ಸುದ್ದಿ ನೋಡಿ! ರಿಲಯನ್ಸ್ ಕರ್ನಾಟಕದ ರೈತರಿಂದ ಎಂಎಸ್ ಪಿಗಿಂತ ಹೆಚ್ಚಿನ ಬೆಲೆಗೆ ರೈತರ ಉತ್ಪಾದಕ ಸಂಘದಿಂದ ನೇರವಾಗಿ ಕೊಳ್ಳಲಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ವಾಸ್ತವವಾಗಿ ನೋಡುವುದಾದರೆ ರಿಲಾಯನ್ಸ್ ರೈತರಿಂದ ಕೊಳ್ಳುತ್ತಿರುವುದು ಕೇವಲ ನೂರು ಟನ್ ಮಾತ್ರ. ಇನ್ನು ಸೋನಾ ಮುಸ್ಸೋರಿತಳಿ, ಸೂಪರ್ ಫೈನ್ ವೆರೈಟಿ, ಇದನ್ನು ಸರಕಾರ ಕೊಳ್ಳುವುದಿಲ್ಲ! ಮಾಮೂಲಿಯಾಗಿ ಇದಕ್ಕೆ ಎಂಎಸ್ ಪಿಗಿಂತ ಹೆಚ್ಚಿನ ಬೆಲೆ ದೊರಕುತ್ತಿದೆ” ಎಂದಿದ್ದಾರೆ.

ಕರ್ನಾಟಕದ ಭತ್ತದ ಉತ್ಪಾದನೆ 30 ಲಕ್ಷ ಟನ್. ಇದರಲ್ಲಿ ರಾಯಚೂರಿನ ಪಾಲು ಐದು ಲಕ್ಷ ಟನ್. ಅಂದರೆ ಈ ರಿಲಯನ್ಸ್ ಕೊಳ್ಳುತ್ತಿರುವ ಪ್ರಮಾಣ ಒಂದು ಕೂದಲ ತೂಕ!!! ಈ ಪುಟಗೋಸಿ ಪ್ರಮಾಣವನ್ನು ಸಾವಿರ ರೈತರಿಂದ ಕೊಳ್ಳುತ್ತಿದೆ ಅಂದರೆ ತಲಾವಾರು ಎಷ್ಟು ಕ್ವಿಂಟಾಲ್ ಆಯಿತು? ಎಂದು ಅವರು ಪ್ರಶ್ನಿಸಿದ್ದಾರೆ.

ಈ ಚೌಕಿದಾರನ ಕಾಯಿದೆ ವಿರೋದಿಸುವುದಕ್ಕೆ ಕಾರಣ ಇಲ್ಲೇ ಇದೆ. ರೈತರು ಸಾಗಣೆ, ಲೋಡಿಂಗ್ ಅನ್ ಲೋಡಿಂಗ್ ವೆಚ್ಚ ಭರಿಸಬೇಕು. ತೇವಾಂಶ 16%ಕ್ಕಿಂತ ಕಡಿಮೆ ಇದ್ದರೆ ಮಾತ್ರ ಖರೀದಿ. ಉಳಿದ ಸಾವಿರಾರು ಟನ್ ಭತ್ತವನ್ನು ಏನು ಮಾಡಬೇಕು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಿಂಧನೂರು ಎಪಿಎಂಸಿ ವ್ಯವಸ್ಥಾಪಕರನ್ನು ಮಾತನಾಡಿಸಿದಾಗ, “ನಮ್ಮಲ್ಲಿ ಸಾಮಾನ್ಯ ಭತ್ತ ಮತ್ತು ಎ ಗ್ರೇಡ್ ಭತ್ತ ಎಂಬ ಎರಡು ವಿಭಾಗಗಳನ್ನು ಮಾಡುತ್ತೇವೆ. ಸೋನಾ ಮಸೂರಿ ಸಾಮಾನ್ಯ ಭತ್ತದಲ್ಲಿ ಬರುತ್ತದೆ. ಅದಕ್ಕೆ ಕೇಂದ್ರ ಸರ್ಕಾರ 1868ರೂ ನಿಗಧಿ ಮಾಡಿದೆ. ಅದರ ತೇವಾಂಶ 17% ಗಿಂತ ಕಡಿಮೆ ಇರಬೇಕು” ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಕೃಷಿ ಕಾಯ್ದೆಗಳು ಜಾರಿಯಾದಾಗಿನಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದಿವೆ. ಈ ನಡುವೆ ಅಂಬಾನಿ-ಅದಾನಿಯಂತಹ ಕಾರ್ಪೊರೇಟ್‌ಗಳ ಹಿತಕ್ಕಾಗಿ ಈ ಕಾಯ್ದೆಗಳನ್ನು ತರಲಾಗಿದೆ ಎಂದು ರೈತರು ಆರೋಪಿಸಿದ್ದಾರೆ.

(ಈ ಲೇಖನವನ್ನು ಸೋನಾ ಮಸೂರಿ ಭತ್ತಕ್ಕೆ ಬೆಂಬಲ ಬೆಲೆ ಇದೆಯೇ ಇಲ್ಲವೇ ಎಂಬುದರ ಕುರಿತು ರೈತ ಮುಖಂಡರ ನಡುವೆ ಉಂಟಾದ ಗೊಂದಲದಿಂದಾಗಿ ನಂತರ ಪರಿಷ್ಕರಣೆ ಮಾಡಲಾಗಿದೆ)


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...