Homeಮುಖಪುಟಆರ್‌ಎಸ್‌ಎಸ್ ಮುಖ್ಯಸ್ಥ ಭಾಗವತ್‌ ತೇಲಿಬಿಟ್ಟ ಜನಸಂಖ್ಯೆ ಹೆಚ್ಚಳ, ಮತಾಂತರ ಕತೆಯ ವಾಸ್ತವವೇನು?

ಆರ್‌ಎಸ್‌ಎಸ್ ಮುಖ್ಯಸ್ಥ ಭಾಗವತ್‌ ತೇಲಿಬಿಟ್ಟ ಜನಸಂಖ್ಯೆ ಹೆಚ್ಚಳ, ಮತಾಂತರ ಕತೆಯ ವಾಸ್ತವವೇನು?

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ವಾರ್ಷಿಕ ದಸರಾ ಸಮಾರಂಭದಲ್ಲಿ ಮಾಡಿದ ಭಾಷಣದಲ್ಲಿ, ‘ಎಲ್ಲರಿಗೂ ಸಮಾನವಾಗಿ ಅನ್ವಯಿಸುವ ಜನಸಂಖ್ಯೆ ನಿಯಂತ್ರಣ ಕಾನೂನು’ ಬಗ್ಗೆ ಪ್ರಸ್ತಾಪಿಸಿದ್ದಾರೆ. “ಧರ್ಮ ಆಧಾರಿತ ಅಸಮತೋಲನ ಮತ್ತು ಬಲವಂತದ ಮತಾಂತರ ದೇಶವನ್ನು ಒಡೆಯುತ್ತಿದೆ” ಎಂದು ವಿಷಾದಿಸಿರುವುದಾಗಿ ‘ಎನ್‌ಡಿಟಿವಿ’ ವರದಿ ಮಾಡಿದೆ.

ಧಾರ್ಮಿಕ ಸಮುದಾಯ ಆಧಾರಿತ ಅಸಮತೋಲನದ ಕಾರಣದಿಂದ ಹೊಸದಾಗಿ ಹುಟ್ಟಿಕೊಂಡ ಪೂರ್ವ ಟಿಮೋರ್, ಕೊಸೊವೊ ಮತ್ತು ದಕ್ಷಿಣ ಸುಡಾನ್ ದೇಶಗಳ ಉದಾಹರಣೆಗಳನ್ನು ಭಾಗವತ್‌ ಉಲ್ಲೇಖಿಸಿದ್ದಾರೆ.

“ಜನಸಂಖ್ಯೆಯ ನಿಯಂತ್ರಣದ ಜೊತೆಗೆ, ಧಾರ್ಮಿಕ ಆಧಾರದ ಮೇಲೆ ಜನಸಂಖ್ಯೆಯ ಸಮತೋಲನವು ಸಹ ಪ್ರಮುಖ ವಿಷಯವಾಗಿದೆ. ಅದನ್ನು ನಿರ್ಲಕ್ಷಿಸಲಾಗುವುದಿಲ್ಲ” ಎಂದು ಅವರು ಹಿಂದಿಯಲ್ಲಿ ಭಾಷಣ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜನಸಂಖ್ಯೆಗೆ ಸಂಪನ್ಮೂಲಗಳ ಅಗತ್ಯವಿದೆ ಅಥವಾ ಅದು ಹೊರೆಯಾಗುತ್ತದೆ. ಜನಸಂಖ್ಯೆಯು ಒಂದು ಆಸ್ತಿಯಾಗಿರಬಹುದು ಎಂಬ ದೃಷ್ಟಿಕೋನವಿದೆ. ಎರಡೂ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ನಾವು ನೀತಿಯನ್ನು ರೂಪಿಸಬೇಕಾಗಿದೆ” ಎಂದು ತಿಳಿಸಿದ್ದಾರೆ.

ಜನಸಂಖ್ಯೆಯಲ್ಲಿನ ‘ಧರ್ಮ-ಆಧಾರಿತ ಅಸಮತೋಲನ’ದ ಕುರಿತು ಪ್ರಸ್ತಾಪಿಸುತ್ತಾ, “ಜನನ ಪ್ರಮಾಣವೂ ಒಂದು ಕಾರಣವಾಗಿದೆ. ಬಲವಂತದಿಂದ ಆಮಿಷ ಅಥವಾ ದುರಾಶೆಯಿಂದ ಮತಾಂತರ ಆಗುವುದು, ನುಸುಳುಕೋರರು ಬರುವುದು ಇದಕ್ಕೆ ಕಾರಣವಾಗಿದೆ” ಎಂದಿದ್ದಾರೆ.

“ಹೆರಿಗೆ ಮತ್ತು ಜನಸಂಖ್ಯಾ ನಿಯಂತ್ರಣದ ಬಗ್ಗೆ ಆರೆಸ್ಸೆಸ್ ಪ್ರಸ್ತಾಪಿಸುವ ಯಾವುದೇ ನೀತಿಯಲ್ಲಿ ಮಹಿಳೆಯರ ಆರೋಗ್ಯವನ್ನು ಖಂಡಿತವಾಗಿ ನೆನಪಿನಲ್ಲಿಟ್ಟುಕೊಳ್ಳಲಾಗುತ್ತದೆ” ಎಂದು ಆರೆಸ್ಸೆಸ್ ಮುಖ್ಯಸ್ಥರು ಹೇಳಿದ್ದಾರೆ.

ಮೋಹನ್‌ ಭಾಗವತ್‌ ಮಾತಿನ ಹಿಂದಿನ ಮರ್ಮ ಹಾಗೂ ವಾಸ್ತವ

ಬಹುದೊಡ್ಡ ಅಲ್ಪಸಂಖ್ಯಾತ ಸಮುದಾಯವಾದ ಮುಸ್ಲಿಮರ ಮೇಲೆ ಜನಸಂಖ್ಯಾ ಹೆಚ್ಚಳದ ಆರೋಪ ಹೊರಿಸುವ ಕೆಲಸವನ್ನು ಆರ್‌ಎಸ್‌ಎಸ್‌ ಮತ್ತು ಅದರ ರಾಜಕೀಯ ಮುಖವಾದ ಬಿಜೆಪಿ ಮೊದಲಿನಿಂದಲೂ ಮಾಡುತ್ತಿವೆ. ಅದರ ಮುಂದುವರಿದ ಭಾಗವಾಗಿ ಮೋಹನ್ ಭಾಗವತ್ ಹೇಳಿಕೆ ಹೊರಬಿದ್ದಿದೆ.

ಆದರೆ ವಾಸ್ತವಗಳು ಬೇರೆಯೇ ಕತೆಯನ್ನು ಹೇಳುತ್ತವೆ. ಅಪಾಯಕಾರಿ ಜನಸಂಖ್ಯೆಯ ಹೆಚ್ಚಳದ ಪ್ರತಿಪಾದನೆ ಮತ್ತು ಹಿಂದೂ-ಮುಸ್ಲಿಂ ಜನಸಂಖ್ಯೆಯ ಬೆಳವಣಿಗೆಯಲ್ಲಿ ಇರುವ ವಾಸ್ತವ ವ್ಯತ್ಯಾಸಗಳೇನು ಎಂಬುದನ್ನು ಸಾಕ್ಷಿಗಳು ಬಯಲಿಗೆಳೆದಿವೆ.

ಇದನ್ನೂ ಓದಿರಿ: ಕೋಲ್ಕತಾ: ದುರ್ಗಾಪೂಜೆಯಲ್ಲಿ ಮಹಾತ್ಮಾ ಗಾಂಧಿಯನ್ನು ರಾಕ್ಷಸನಂತೆ ಬಿಂಬಿಸಿದ ಹಿಂದೂ ಮಹಾಸಭಾ

ಈ ಕುರಿತು ‘ದಿ ವೈರ್‌’ ಹಿಂದೆಯೇ ವರದಿ ಮಾಡಿದೆ. ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ (2019-21) ಪ್ರಕಾರ ಹಿಂದೂ  ಮತ್ತು ಮುಸ್ಲಿಂ ಫಲವತ್ತತೆಯ ನಡುವಿನ ವ್ಯತ್ಯಾಸವು ಕೇವಲ 0.42ರಷ್ಟಿದೆ ಎಂದು ಹೇಳುತ್ತದೆ. ಪ್ರತಿ ಹಿಂದೂ ಮಹಿಳೆಗೆ 1.94 ಮಕ್ಕಳು, ಪ್ರತಿ ಮುಸ್ಲಿಂ ಮಹಿಳೆಗೆ 2.36 ಮಕ್ಕಳು ಇರುವುದಾಗಿ ಸಮೀಕ್ಷೆ ಉಲ್ಲೇಖಿಸಿದೆ.

ನಾವು ಪಾಯಿಂಟ್ ಅಂದಾಜಿನ ಬದಲಿಗೆ ‘ಟ್ರೆಂಡ್’ ಅನ್ನು ಗಣನೆಗೆ ತೆಗೆದುಕೊಂಡಾಗ ನಿಜವಾದ ಚಿತ್ರಣ ಸಿಗುತ್ತದೆ. ಕಳೆದ ಎರಡು ದಶಕಗಳಲ್ಲಿ ಹಿಂದೂಗಳ ಫಲವತ್ತತೆ 30%, ಮುಸ್ಲಿಮರಲ್ಲಿ 35% ಕುಸಿದಿದೆ ಎಂದು ಕಂಡುಬಂದಿದೆ. ವಾಸ್ತವವಾಗಿ, ಕಳೆದ 20 ವರ್ಷಗಳಲ್ಲಿ ಮುಸ್ಲಿಮರಲ್ಲಿ ಜನಸಂಖ್ಯೆಯ ಬೆಳವಣಿಗೆಯಲ್ಲಿನ ಕುಸಿತದ ಪ್ರಮಾಣವು ಹಿಂದೂಗಳಿಗಿಂತ ಹೆಚ್ಚಾಗಿದೆ. 2030ರ ವೇಳೆಗೆ ಹಿಂದೂ-ಮುಸ್ಲಿಂ ಫಲವತ್ತತೆ ದರಗಳು ಸಂಪೂರ್ಣ ಒಮ್ಮುಖದ ಹಾದಿಯಲ್ಲಿರುತ್ತವೆ ಎಂಬುದನ್ನು ಸಮೀಕ್ಷೆಗಳು ಕಂಡುಕೊಂಡಿವೆ.

ಪ್ಯೂ ರಿಸರ್ಚ್ ಸೆಂಟರ್‌ನ 2021ರ ವರದಿಯು ಸಹ ಈ ಸಂಶೋಧನೆಗಳನ್ನು ಸಮರ್ಥಿಸುತ್ತದೆ. ಮುಸ್ಲಿಮರಲ್ಲಿ ಫಲವತ್ತತೆ ಪ್ರಮಾಣವು ಈಗ ಬಹುತೇಕ ಹಿಂದೂಗಳಿಗೆ ಸಮಾನವಾಗಿದೆ. 1992 ಮತ್ತು 2015ರ ನಡುವೆ, ಮುಸ್ಲಿಂ ಫಲವತ್ತತೆ ದರವು 4.4 ರಿಂದ 2.6ಕ್ಕೆ ಕುಸಿದಿದ್ದರೆ, ಹಿಂದೂಗಳಲ್ಲಿ 3.3ರಿಂದ 2.1ಕ್ಕೆ ಇಳಿದಿದೆ ಎಂದು ವರದಿ ಹೇಳಿದೆ.

ಈ ಹಿಂದೆ ‘ದಿ ವೈರ್’ ನಡೆಸಿದ ವೀಡಿಯೊ ಸಂದರ್ಶನದಲ್ಲಿ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ. ಖುರೈಶಿ ಅವರು ಆರ್‌ಎಸ್‌ಎಸ್ ಮುಖ್ಯಸ್ಥ ಭಾಗವತ್ ಅವರನ್ನು ಭೇಟಿಯಾಗಿದ್ದನ್ನು ನೆನಪಿಸಿಕೊಂಡಿದ್ದರು. “ದಿ ಪಾಪ್ಯುಲೇಶನ್ ಮಿಥ್: ಇಸ್ಲಾಂ, ಫ್ಯಾಮಿಲಿ ಪ್ಲಾನಿಂಗ್ ಮತ್ತು ಪಾಲಿಟಿಕ್ಸ್ ಇನ್ ಇಂಡಿಯಾ” ಪುಸ್ತಕವನ್ನು ನೀಡಲು ಭೇಟಿಯಾಗಿದ್ದಾಗಿ ಖುರೈಶಿ ಹೇಳುತ್ತಾರೆ. “ಮುಸ್ಲಿಮರು ಹಿಂದೂಗಳನ್ನು ಸಂಖ್ಯಾಬಲದಲ್ಲಿ ಹಿಂದಿಕ್ಕುತ್ತಾರೆ ಎಂಬುದು ಹಿಂದುತ್ವ ಗುಂಪುಗಳ ಕಡೆಯಿಂದ ಬಂದ ಶುದ್ಧ ಪ್ರೊಪಗಾಂಡ ಎಂದು ನಾನು ಆರ್‌ಎಸ್‌ಎಸ್ ಮುಖ್ಯಸ್ಥರಿಗೆ ಹೇಳಿದೆ” ಎಂದು ಖುರೇಷಿ ಹೇಳಿಕೊಳ್ಳುತ್ತಾರೆ. (‘ದಿ ವೈರ್‌’ ನಡೆಸಿದ ವಿಡಿಯೊ ಸಂದರ್ಶನದಲ್ಲಿ 8 ನಿಮಿಷ 20 ಸೆಕೆಂಡ್‌ ವೇಳೆಗೆ ಈ ಚರ್ಚೆ ನಡೆಯುವುದನ್ನು ಗಮನಿಸಬಹುದು.)

“ಇನ್ನು 1,000 ವರ್ಷಗಳಾದರೂ ಇದು (ಹಿಂದೂಗಳಿಗಿಂತ ಮುಸ್ಲಿಮರು ಹೆಚ್ಚಾಗುತ್ತಾರೆಂಬುದು) ಸಂಭವಿಸುವುದಿಲ್ಲ. ಬಹುಪತ್ನಿತ್ವದ ಪ್ರಶ್ನೆಯು (ಹಿಂದೂಗಳಿಗಿಂತ ಮುಸ್ಲಿಮರು ಹೆಚ್ಚಾಗುತ್ತಿದ್ದಾರೆ ಎಂದು ವಾದಿಸಲು ಬಳಸುವ ವಾದ) ಭಾರತದಲ್ಲಿ ಬರುವುದೇ ಇಲ್ಲ. ಭಾರತದಲ್ಲಿ ಲಿಂಗಾನುಪಾತವು 1,000 ಪುರುಷರಿಗೆ 940 ಮಹಿಳೆಯರು ಎಂಬ ಲೆಕ್ಕದಲ್ಲಿದೆ. ಸಾವಿರದಲ್ಲಿ 60 ಬ್ಯಾಚುಲರ್‌ಗಳು ತಮ್ಮ ಮೊದಲ ಮದುವೆಯಾಗಲೂ ಹೆಣಗಾಡುತ್ತಿದ್ದಾರೆ ಎಂದು ನಾನು ಅವರಿಗೆ ಹೇಳಿದೆ. ಬಹುಪತ್ನಿತ್ವದ ಪ್ರಶ್ನೆ ಎಲ್ಲಿದೆ ಎಂದು ನಾನು ಕೇಳಿದೆ. ಇದಕ್ಕೆ ಅವರು ಆತ್ಮೀಯ ನಗುವಿನೊಂದಿಗೆ ಪ್ರತಿಕ್ರಿಯಿಸಿದರು. ಅರ್ಥಾತ್, ನಾನು ಏನು ಹೇಳಿದರೂ ಅದನ್ನು ಅವರು ದಾಖಲು ಮಾಡಿಕೊಂಡರು” ಎಂದು ಸಂದರ್ಶನದಲ್ಲಿ ಖುರೇಷಿ ವಿವರಿಸಿದ್ದಾರೆ.

ಜನಸಂಖ್ಯೆ ಸ್ಫೋಟದ ಭೀತಿಯು ಕೂಡ ತಾರ್ಕಿಕವಾಗಿಲ್ಲ. ದತ್ತಾಂಶಗಳು ಬೇರೆಯ ಕತೆಯನ್ನು ಹೇಳುತ್ತವೆ. ಪ್ರಧಾನಿ ನರೇಂದ್ರ ಮೋದಿ ಅವರು 2019ರ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಜನಸಂಖ್ಯಾ ಹೆಚ್ಚಳದ ಕುರಿತು ಮಾತನಾಡಿದ್ದರು. “ಜನಸಂಖ್ಯಾ ಸ್ಫೋಟದ ಬಗ್ಗೆ ನಾವು ಚಿಂತಿಸಬೇಕಾಗಿದೆ. ಇದು ಭಾರತದ ಅಭಿವೃದ್ಧಿಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ” ಎಂದು ಪ್ರಸ್ತಾಪಿಸಿದ್ದರು.

2019-21ರ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS) ಪ್ರಕಾರ, ಒಟ್ಟು ಫಲವತ್ತತೆ ದರ (ಟಿಎಫ್‌ಆರ್‌) 2016ರಲ್ಲಿ 2.2ರಿಂದ 2ಕ್ಕೆ ಇಳಿದಿದೆ. ಟಿಎಫ್‌ಆರ್‌ ಮತ್ತು ವಾರ್ಷಿಕ ಜನಸಂಖ್ಯೆಯ ಬೆಳವಣಿಗೆ ದರವನ್ನು ಜನಸಂಖ್ಯೆಯ ಬೆಳವಣಿಗೆಯನ್ನು ಪ್ರಮಾಣೀಕರಿಸಲು ವಿಶ್ವಾದ್ಯಂತ ಬಳಸಲಾಗುತ್ತದೆ. ಅಲ್ಲದೆ, ವಿಶ್ವಬ್ಯಾಂಕ್ ಅಂಕಿಅಂಶಗಳ ಪ್ರಕಾರ ಭಾರತದ ಜನಸಂಖ್ಯೆಯ ಬೆಳವಣಿಗೆ ದರವು 2001ರಲ್ಲಿ 1.73%ರಷ್ಟಿದ್ದು 2018ರಲ್ಲಿ 1.04%ಕ್ಕೆ ಕುಸಿದಿದೆ. 12 ರಾಜ್ಯಗಳಲ್ಲಿ ಜನಸಂಖ್ಯೆಯ ಬೆಳವಣಿಗೆ ದರವು 1%ಕ್ಕಿಂತ ಕಡಿಮೆಯಿತ್ತು. ಬಿಹಾರ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಹರಿಯಾಣದಂತಹ ರಾಜ್ಯಗಳು ಹೆಚ್ಚಿನ ಫಲವತ್ತತೆಯ ರಾಜ್ಯಗಳಾಗಿ ಹೊಮ್ಮಿವೆ. ಕಾಲಾನಂತರದಲ್ಲಿ ತಮ್ಮ ಬೆಳವಣಿಗೆಯ ದರದಲ್ಲಿ ಗಮನಾರ್ಹ ಕುಸಿತವನ್ನು ತೋರಿಸಿದೆ.

ಇದನ್ನೂ ಓದಿರಿ: ಮಹಿಳೆಯರಿಗೆ ಸ್ವಾತಂತ್ರ್ಯ, ಸಮಾನ ಅವಕಾಶ ನೀಡುವುದು ಅಗತ್ಯ: ಮೋಹನ್ ಭಾಗವತ್‌

ತಮ್ಮ ಭಾಷಣದಲ್ಲಿ ಭಾಗವತ್ ‘ಬಲದಿಂದ ಮತಾಂತರ’ ವಿಚಾರವನ್ನೂ ಉಲ್ಲೇಖಿಸಿದ್ದಾರೆ. ಹಿಂದುತ್ವ ಗುಂಪುಗಳು ‘ಬಲವಂತದ ಮತಾಂತರಗಳ ಹುನ್ನಾರ’ವನ್ನು ಪ್ರಸ್ತಾಪಿಸುತ್ತಿರುತ್ತವೆ. ವಿಶೇಷವಾಗಿ ಕ್ರಿಶ್ಚಿಯನ್ ಧರ್ಮವು ಹಿಂದೂಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತಿದೆ ಎಂದು ವಾದಿಸುತ್ತಾರೆ. ಈ ಹಿಂದೆ ‘ದಿ ವೈರ್’ ನಡೆಸಿದ ವರದಿಯ ಪ್ರಕಾರ, “ಹಿಂದುತ್ವ ಗುಂಪುಗಳು ಈ ಪ್ರತಿಪಾದನೆಗೂ ಯಾವುದೇ ಪುರಾವೆ ಇಲ್ಲ.”

ಜನಗಣತಿಯಿಂದ ಲಭ್ಯವಿರುವ ಮಾಹಿತಿಯನ್ನು ಅವಲೋಕಿಸಿದರೆ ದೇಶದ ಜನಸಂಖ್ಯೆಯಲ್ಲಿ ಕ್ರಿಶ್ಚಿಯನ್ ಸಮುದಾಯದ ಪ್ರಮಾಣ ಸ್ಥಿರವಾಗಿದೆ ಅಥವಾ 1971ರಿಂದ ಇಳಿಮುಖವಾಗಿದೆ. 1971ರ ಜನಗಣತಿಯು ಭಾರತದ ಜನಸಂಖ್ಯೆಯಲ್ಲಿ 2.6%ರಷ್ಟು ಕ್ರಿಶ್ಚಿಯನ್ನರಿದ್ದಾರೆಂದು ಅಂದಾಜಿಸಿದೆ. 2001ರ ಹೊತ್ತಿಗೆ, ಈ ಅಂಕಿ ಅಂಶವು 2.3% ಕ್ಕೆ ಇಳಿಯಿತು. 2011ರ ಜನಗಣತಿಯ ಅಂಕಿಅಂಶಗಳ ಧಾರ್ಮಿಕ ಸಂಗತಿಗಳು ಎಂದಿಗೂ ಬಿಡುಗಡೆಯಾಗಿಲ್ಲ. ಸೋರಿಕೆಯಾದ ಮಾಹಿತಿಯ ಪ್ರಕಾರ ಸಮುದಾಯದ ಪ್ರಮಾಣದಲ್ಲಿ ಮತ್ತಷ್ಟು ಕುಸಿತ ಕಂಡುಬಂದಿದೆ.

ಧಾರ್ಮಿಕ ಮತಾಂತರದ ವಿವಾದಾತ್ಮಕ ವಿಷಯದ ಕುರಿತು ಜೂನ್ 2021ರಲ್ಲಿ ಪ್ಯೂ ಸಂಶೋಧನಾ ವರದಿಯು ಮತ್ತಷ್ಟು ಬೆಳಕು ಚೆಲ್ಲಿತ್ತು. ಭಾರತದಲ್ಲಿ ಯಾರಾದರೂ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಬದಲಾಯಿಸುವುದು ‘ಅಪರೂಪ’ ಎಂದು ವರದಿ ಗಮನ ಸೆಳೆದಿತ್ತು.

ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...