Homeಮುಖಪುಟಬೆಂಗಳೂರಿನಿಂದ ದೆಹಲಿಯವರೆಗೆ ಟೊಮೆಟೊ ಬೆಲೆ ಧಿಡೀರ್ ಏರಿಕೆಗೆ ಕಾರಣವೇನು?

ಬೆಂಗಳೂರಿನಿಂದ ದೆಹಲಿಯವರೆಗೆ ಟೊಮೆಟೊ ಬೆಲೆ ಧಿಡೀರ್ ಏರಿಕೆಗೆ ಕಾರಣವೇನು?

- Advertisement -
- Advertisement -

ಸಾಮಾನ್ಯವಾಗಿ ಪ್ರತಿನಿತ್ಯ ಬಳಸುವ ತರಕಾರಿಗಳಲ್ಲಿ ಒಂದಾದ ಟೊಮೆಟೊ ಬೆಲೆ ಧಿಡೀರ್ ಏರಿಕೆಯಾಗಿದೆ. ಕರ್ನಾಟಕದಲ್ಲಿ ಮಾತ್ರವಲ್ಲದೇ ಇಡೀ ದೇಶಾದ್ಯಂತ ಉತ್ತಮ ಗುಣಮಟ್ಟದ ಒಂದು ಕೆಜಿ ಟೊಮೆಟೊ ಬೆಲೆ 100 ರೂಗಳ ಆಸುಪಾಸಿನಲ್ಲಿದೆ. ಹಲವಾರು ಕಾರಣಗಳಿಂದ ಟೊಮೆಟೊ ಉತ್ಪಾನದೆ ಕುಸಿದ ಕಾರಣ, ಬೇಡಿಕೆ ಹೆಚ್ಚಾಗಿ ಈ ಮಟ್ಟದ ಬೆಲೆ ಏರಿಕೆ ಉದ್ಭವಿಸಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅತಿಯಾದ ಮಳೆ ಮತ್ತು ಅತಿಯಾದ ಬಿಸಿಲು

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್, ಒಡಿಶಾ, ಚತ್ತೀಸ್‌ಘಡ, ಪಶ್ಚಿಮ ಬಂಗಾಳ ರಾಜ್ಯಗಳು ಅತಿ ಹೆಚ್ಚು ಟೊಮೆಟೊ ಬೆಳೆಯುವ ರಾಜ್ಯಗಳಾಗಿವೆ. ಕೆಲ ರಾಜ್ಯಗಳಲ್ಲಿ ಏಪ್ರಿಲ್ ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಳೆಯಿಂದ ಟೊಮೆಟೊ ಬೆಳೆ ನಾಶವಾದರೆ ಕೆಲ ರಾಜ್ಯಗಳಲ್ಲಿ ತೀರಾ ಬಿಸಿಲು ಕಂಡುಬಂದು ಹಾಳಾಗಿದೆ. ಬಿಫರ್‌ಜಾಯ್ ಚಂಡಮಾರುತವೂ ಬೆಳೆ ನಾಶಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಇತ್ತೀಚೆಗೆ ಮುಂಗಾರು ಮಳೆ ಬಾರದೆ ಸಂಕಷ್ಟ ಎದುರಾಗಿದೆ. ಹಾಗಾಗಿ ಒಟ್ಟಾರೆ ಟೊಮೆಟೊ ಇಳುವರಿಯಲ್ಲಿ ಕುಸಿತ ಕಂಡಿದೆ.

ಮುಖ್ಯವಾಗಿ ಕರ್ನಾಟಕದಲ್ಲಿ ಬೆಂಗಳೂರು ಸುತ್ತಮುತ್ತಲಿನ 5 ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಟೊಮೆಟೊ ಬೆಳೆಯಲಾಗುತ್ತಿತ್ತು. ಆದರೆ ಈ ಬಾರಿ ಹಲವು ಕಾರಣಗಳಿಂದ ಉತ್ಪಾದನೆ ಅರ್ಧದಷ್ಟು ಕುಸಿತ ಕಂಡಿದೆ. ಈ ಜಿಲ್ಲೆಗಳಿಂದ ಕಳೆದ ವರ್ಷದ ಟೊಮೆಟೊ ಉತ್ಪಾದನೆ 5.45 ಲಕ್ಷ ಕ್ವಿಂಟಲ್‌ ಇದ್ದಿದ್ದು ಈ ವರ್ಷ 2.90 ಲಕ್ಷ ಕ್ವಿಂಟಲ್‌ಗೆ ಕುಸಿದಿದೆ ಎನ್ನಲಾಗಿದೆ.

ರೋಗಬಾಧೆ

ಬಿಳಿಸೊಳ್ಳೆ, ವೈರಸ್‌ ಬಾಧೆ, ಎಲೆ ರೋಗ ಟೊಮೆಟೊ ಬೆಳೆಗೆ ಬಾಧಿಸುತ್ತಿದೆ. ರೋಗಬಾಧೆ ಕಾರಣದಿಂದಾಗಿ ಕರ್ನಾಟಕ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಟೊಮೆಟೊ ಇಳುವರಿ ಕಡಿಮೆಯಾಗಿದೆ.

ಬೀನ್ಸ್‌ನತ್ತ ಮುಖ ಮಾಡಿದ ಕೆಲ ರೈತರು

ಕಳೆದ ವರ್ಷ ಬೀನ್ಸ್ ಬೆಳೆಗೆ ಉತ್ತಮ ಬೆಲೆ ಸಿಕ್ಕಿತ್ತು. ಅದೇ ಸಂದರ್ಭದಲ್ಲಿ ಟೊಮೆಟೊ ಬೆಳೆದವರು ನಷ್ಟಕ್ಕೆ ತುತ್ತಾಗಿದ್ದರು. ಹಾಗಾಗಿ ಈ ಬಾರಿ ಬಹುತೇಕರು ಟಮೊಟೊ ಬಿಟ್ಟು ಬೀನ್ಸ್‌ ಬೆಳೆಯತ್ತ ಮುಖ ಮಾಡಿದ್ದಾರೆ. ಹಾಗಾಗಿ ಸಹಜವಾಗಿ ಉತ್ಪಾದನೆ ಕಡಿಮೆಯಾಗಿದೆ.

ಸಾಗಾಣಿಕೆ ಸಮಸ್ಯೆ

ಟೊಮೆಟೊ ಬೇಗ ಹಾಳಾಗುವ ತರಕಾರಿಯಾಗಿದ್ದು, ಮಳೆಗೆ ಸಿಕ್ಕರಂತೂ ಇನ್ನೂ ಬೇಗ ಹಾಳಾಗುತ್ತದೆ. ಕೆಲ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾದ ಕಾರಣ ಸಾಗಾಣಿಕೆ ಸಮಸ್ಯೆಯಿಂದಲೂ ಸಹ ಬೆಲೆ ಏರಿಕೆ ಆಗಿದೆ.

ಸಾಕಷ್ಟು ಸಂಖ್ಯೆಯಲ್ಲಿ ಕೋಲ್ಡ್ ಸ್ಟೋರೇಜ್‌ಗಳು ಇಲ್ಲದಿರುವುದು

ಟೊಮೆಟೊ ಸೇರಿದಂತೆ ಹಲವು ತರಕಾರಿಗಳನ್ನು ಸಂಗ್ರಹಿಸಿಡುವ ದೊಡ್ಡ ದೊಡ್ಡ ಕೋಲ್ಡ್ ಸ್ಟೋರೇಜ್‌ಗಳು ಸಾಕಷ್ಟು ಸಂಖ್ಯೆಯಲ್ಲಿ ಇಲ್ಲದಿರುವುದರಿಂದ ಸಂಗ್ರಹಿಸಿ ಬೇಡಿಕೆಗೆ ತಕ್ಕಂತೆ ಪೂರೈಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಬೇಡಿಕೆ ಹೆಚ್ಚಿದಂತೆ ಬೆಲೆ ಏರಿಕೆ ಆಗಿದೆ.

ಪ್ರತಿವರ್ಷದ ವಿದ್ಯಮಾನ

ಇನ್ನು ಈ ಸಮಸ್ಯೆ ಪ್ರತಿವರ್ಷದ ವಿದ್ಯಾಮಾನವಾಗಿದ್ದು ಈ ಸಮಯದಲ್ಲಿ ಬೆಲೆ ಏರಿಕೆಯಾಗುವುದು ಸಹಜ. ಆದರೆ ಕೆಲವೇ ದಿನಗಳಲ್ಲಿ ಬೆಲೆ ಇಳಿಯಲಿದ್ದು ಸಹಜ ಸ್ಥಿತಿಗೆ ಮರಳಲಿದೆ ಎಂದು ಗ್ರಾಹರ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಬೆಲೆ ಏರಿಕೆ ತಡೆಯಲು ತಮಿಳುನಾಡು ಸರ್ಕಾರದ ಯತ್ನ

ಬಡವರು ಮತ್ತು ಮಧ್ಯಮ ವರ್ಗದ ಸಮುದಾಯಗಳ ಮೇಲಿನ ಬೆಲೆ ಏರಿಕೆ ಹೊರೆಯನ್ನು ತಗ್ಗಿಸುವ ಪ್ರಯತ್ನದಲ್ಲಿ ತಮಿಳುನಾಡು ಸರ್ಕಾರವು ರಾಜ್ಯದಾದ್ಯಂತ ಫಾರ್ಮ್ ಫ್ರೆಶ್ ಔಟ್ಲೆಟ್‌ಗಳಲ್ಲಿ (FFOs) ಟೊಮೆಟೊ ಮಾರಾಟ ಮಾಡಲು ಪ್ರಾರಂಭಿಸಿದೆ. ಟೊಮೆಟೊ ಬೆಲೆಯನ್ನು ನಿಯಂತ್ರಿಸುವುದು ಮತ್ತು ಈ ಅಗತ್ಯ ತರಕಾರಿಯನ್ನು ಸಾರ್ವಜನಿಕರಿಗೆ ಹೆಚ್ಚು ಸುಲಭವಾಗಿ ತಲುಪಿಸುವುದು ಇದರ ಉದ್ದೇಶವಾಗಿದೆ. ಎಫ್‌ಎಫ್‌ಒಗಳಲ್ಲಿ ಪ್ರತಿ ಕೆಜಿ ಟೊಮೆಟೊಗೆ 68 ರೂ.ಗೆ ಬೆಲೆ ನಿಗಧಿಪಡಿಸಲಾಗಿದೆ. 60 ರೂಗಿಂತ ಬೆಲೆ ಕಡಿಮೆ ಮಾಡಲು ಚಿಂತಸಲಾಗುತ್ತಿದೆ ಎಂದು ತಮಿಳುನಾಡಿನ ಸಹಕಾರ, ಆಹಾರ ಮತ್ತು ಗ್ರಾಹಕ ಸಂರಕ್ಷಣಾ ಇಲಾಖೆಯ ಸಚಿವ ಪೆರಿಯಕರುಪ್ಪನ್ ತಿಳಿಸಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಜಾತಿಯವನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ; ಯುವಕ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...