Homeಮುಖಪುಟಬೆಂಗಳೂರಿನಿಂದ ದೆಹಲಿಯವರೆಗೆ ಟೊಮೆಟೊ ಬೆಲೆ ಧಿಡೀರ್ ಏರಿಕೆಗೆ ಕಾರಣವೇನು?

ಬೆಂಗಳೂರಿನಿಂದ ದೆಹಲಿಯವರೆಗೆ ಟೊಮೆಟೊ ಬೆಲೆ ಧಿಡೀರ್ ಏರಿಕೆಗೆ ಕಾರಣವೇನು?

- Advertisement -
- Advertisement -

ಸಾಮಾನ್ಯವಾಗಿ ಪ್ರತಿನಿತ್ಯ ಬಳಸುವ ತರಕಾರಿಗಳಲ್ಲಿ ಒಂದಾದ ಟೊಮೆಟೊ ಬೆಲೆ ಧಿಡೀರ್ ಏರಿಕೆಯಾಗಿದೆ. ಕರ್ನಾಟಕದಲ್ಲಿ ಮಾತ್ರವಲ್ಲದೇ ಇಡೀ ದೇಶಾದ್ಯಂತ ಉತ್ತಮ ಗುಣಮಟ್ಟದ ಒಂದು ಕೆಜಿ ಟೊಮೆಟೊ ಬೆಲೆ 100 ರೂಗಳ ಆಸುಪಾಸಿನಲ್ಲಿದೆ. ಹಲವಾರು ಕಾರಣಗಳಿಂದ ಟೊಮೆಟೊ ಉತ್ಪಾನದೆ ಕುಸಿದ ಕಾರಣ, ಬೇಡಿಕೆ ಹೆಚ್ಚಾಗಿ ಈ ಮಟ್ಟದ ಬೆಲೆ ಏರಿಕೆ ಉದ್ಭವಿಸಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅತಿಯಾದ ಮಳೆ ಮತ್ತು ಅತಿಯಾದ ಬಿಸಿಲು

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್, ಒಡಿಶಾ, ಚತ್ತೀಸ್‌ಘಡ, ಪಶ್ಚಿಮ ಬಂಗಾಳ ರಾಜ್ಯಗಳು ಅತಿ ಹೆಚ್ಚು ಟೊಮೆಟೊ ಬೆಳೆಯುವ ರಾಜ್ಯಗಳಾಗಿವೆ. ಕೆಲ ರಾಜ್ಯಗಳಲ್ಲಿ ಏಪ್ರಿಲ್ ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಳೆಯಿಂದ ಟೊಮೆಟೊ ಬೆಳೆ ನಾಶವಾದರೆ ಕೆಲ ರಾಜ್ಯಗಳಲ್ಲಿ ತೀರಾ ಬಿಸಿಲು ಕಂಡುಬಂದು ಹಾಳಾಗಿದೆ. ಬಿಫರ್‌ಜಾಯ್ ಚಂಡಮಾರುತವೂ ಬೆಳೆ ನಾಶಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಇತ್ತೀಚೆಗೆ ಮುಂಗಾರು ಮಳೆ ಬಾರದೆ ಸಂಕಷ್ಟ ಎದುರಾಗಿದೆ. ಹಾಗಾಗಿ ಒಟ್ಟಾರೆ ಟೊಮೆಟೊ ಇಳುವರಿಯಲ್ಲಿ ಕುಸಿತ ಕಂಡಿದೆ.

ಮುಖ್ಯವಾಗಿ ಕರ್ನಾಟಕದಲ್ಲಿ ಬೆಂಗಳೂರು ಸುತ್ತಮುತ್ತಲಿನ 5 ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಟೊಮೆಟೊ ಬೆಳೆಯಲಾಗುತ್ತಿತ್ತು. ಆದರೆ ಈ ಬಾರಿ ಹಲವು ಕಾರಣಗಳಿಂದ ಉತ್ಪಾದನೆ ಅರ್ಧದಷ್ಟು ಕುಸಿತ ಕಂಡಿದೆ. ಈ ಜಿಲ್ಲೆಗಳಿಂದ ಕಳೆದ ವರ್ಷದ ಟೊಮೆಟೊ ಉತ್ಪಾದನೆ 5.45 ಲಕ್ಷ ಕ್ವಿಂಟಲ್‌ ಇದ್ದಿದ್ದು ಈ ವರ್ಷ 2.90 ಲಕ್ಷ ಕ್ವಿಂಟಲ್‌ಗೆ ಕುಸಿದಿದೆ ಎನ್ನಲಾಗಿದೆ.

ರೋಗಬಾಧೆ

ಬಿಳಿಸೊಳ್ಳೆ, ವೈರಸ್‌ ಬಾಧೆ, ಎಲೆ ರೋಗ ಟೊಮೆಟೊ ಬೆಳೆಗೆ ಬಾಧಿಸುತ್ತಿದೆ. ರೋಗಬಾಧೆ ಕಾರಣದಿಂದಾಗಿ ಕರ್ನಾಟಕ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಟೊಮೆಟೊ ಇಳುವರಿ ಕಡಿಮೆಯಾಗಿದೆ.

ಬೀನ್ಸ್‌ನತ್ತ ಮುಖ ಮಾಡಿದ ಕೆಲ ರೈತರು

ಕಳೆದ ವರ್ಷ ಬೀನ್ಸ್ ಬೆಳೆಗೆ ಉತ್ತಮ ಬೆಲೆ ಸಿಕ್ಕಿತ್ತು. ಅದೇ ಸಂದರ್ಭದಲ್ಲಿ ಟೊಮೆಟೊ ಬೆಳೆದವರು ನಷ್ಟಕ್ಕೆ ತುತ್ತಾಗಿದ್ದರು. ಹಾಗಾಗಿ ಈ ಬಾರಿ ಬಹುತೇಕರು ಟಮೊಟೊ ಬಿಟ್ಟು ಬೀನ್ಸ್‌ ಬೆಳೆಯತ್ತ ಮುಖ ಮಾಡಿದ್ದಾರೆ. ಹಾಗಾಗಿ ಸಹಜವಾಗಿ ಉತ್ಪಾದನೆ ಕಡಿಮೆಯಾಗಿದೆ.

ಸಾಗಾಣಿಕೆ ಸಮಸ್ಯೆ

ಟೊಮೆಟೊ ಬೇಗ ಹಾಳಾಗುವ ತರಕಾರಿಯಾಗಿದ್ದು, ಮಳೆಗೆ ಸಿಕ್ಕರಂತೂ ಇನ್ನೂ ಬೇಗ ಹಾಳಾಗುತ್ತದೆ. ಕೆಲ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾದ ಕಾರಣ ಸಾಗಾಣಿಕೆ ಸಮಸ್ಯೆಯಿಂದಲೂ ಸಹ ಬೆಲೆ ಏರಿಕೆ ಆಗಿದೆ.

ಸಾಕಷ್ಟು ಸಂಖ್ಯೆಯಲ್ಲಿ ಕೋಲ್ಡ್ ಸ್ಟೋರೇಜ್‌ಗಳು ಇಲ್ಲದಿರುವುದು

ಟೊಮೆಟೊ ಸೇರಿದಂತೆ ಹಲವು ತರಕಾರಿಗಳನ್ನು ಸಂಗ್ರಹಿಸಿಡುವ ದೊಡ್ಡ ದೊಡ್ಡ ಕೋಲ್ಡ್ ಸ್ಟೋರೇಜ್‌ಗಳು ಸಾಕಷ್ಟು ಸಂಖ್ಯೆಯಲ್ಲಿ ಇಲ್ಲದಿರುವುದರಿಂದ ಸಂಗ್ರಹಿಸಿ ಬೇಡಿಕೆಗೆ ತಕ್ಕಂತೆ ಪೂರೈಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಬೇಡಿಕೆ ಹೆಚ್ಚಿದಂತೆ ಬೆಲೆ ಏರಿಕೆ ಆಗಿದೆ.

ಪ್ರತಿವರ್ಷದ ವಿದ್ಯಮಾನ

ಇನ್ನು ಈ ಸಮಸ್ಯೆ ಪ್ರತಿವರ್ಷದ ವಿದ್ಯಾಮಾನವಾಗಿದ್ದು ಈ ಸಮಯದಲ್ಲಿ ಬೆಲೆ ಏರಿಕೆಯಾಗುವುದು ಸಹಜ. ಆದರೆ ಕೆಲವೇ ದಿನಗಳಲ್ಲಿ ಬೆಲೆ ಇಳಿಯಲಿದ್ದು ಸಹಜ ಸ್ಥಿತಿಗೆ ಮರಳಲಿದೆ ಎಂದು ಗ್ರಾಹರ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಬೆಲೆ ಏರಿಕೆ ತಡೆಯಲು ತಮಿಳುನಾಡು ಸರ್ಕಾರದ ಯತ್ನ

ಬಡವರು ಮತ್ತು ಮಧ್ಯಮ ವರ್ಗದ ಸಮುದಾಯಗಳ ಮೇಲಿನ ಬೆಲೆ ಏರಿಕೆ ಹೊರೆಯನ್ನು ತಗ್ಗಿಸುವ ಪ್ರಯತ್ನದಲ್ಲಿ ತಮಿಳುನಾಡು ಸರ್ಕಾರವು ರಾಜ್ಯದಾದ್ಯಂತ ಫಾರ್ಮ್ ಫ್ರೆಶ್ ಔಟ್ಲೆಟ್‌ಗಳಲ್ಲಿ (FFOs) ಟೊಮೆಟೊ ಮಾರಾಟ ಮಾಡಲು ಪ್ರಾರಂಭಿಸಿದೆ. ಟೊಮೆಟೊ ಬೆಲೆಯನ್ನು ನಿಯಂತ್ರಿಸುವುದು ಮತ್ತು ಈ ಅಗತ್ಯ ತರಕಾರಿಯನ್ನು ಸಾರ್ವಜನಿಕರಿಗೆ ಹೆಚ್ಚು ಸುಲಭವಾಗಿ ತಲುಪಿಸುವುದು ಇದರ ಉದ್ದೇಶವಾಗಿದೆ. ಎಫ್‌ಎಫ್‌ಒಗಳಲ್ಲಿ ಪ್ರತಿ ಕೆಜಿ ಟೊಮೆಟೊಗೆ 68 ರೂ.ಗೆ ಬೆಲೆ ನಿಗಧಿಪಡಿಸಲಾಗಿದೆ. 60 ರೂಗಿಂತ ಬೆಲೆ ಕಡಿಮೆ ಮಾಡಲು ಚಿಂತಸಲಾಗುತ್ತಿದೆ ಎಂದು ತಮಿಳುನಾಡಿನ ಸಹಕಾರ, ಆಹಾರ ಮತ್ತು ಗ್ರಾಹಕ ಸಂರಕ್ಷಣಾ ಇಲಾಖೆಯ ಸಚಿವ ಪೆರಿಯಕರುಪ್ಪನ್ ತಿಳಿಸಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಜಾತಿಯವನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ; ಯುವಕ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...