Homeಮುಖಪುಟಬೆಂಗಳೂರಿನಿಂದ ದೆಹಲಿಯವರೆಗೆ ಟೊಮೆಟೊ ಬೆಲೆ ಧಿಡೀರ್ ಏರಿಕೆಗೆ ಕಾರಣವೇನು?

ಬೆಂಗಳೂರಿನಿಂದ ದೆಹಲಿಯವರೆಗೆ ಟೊಮೆಟೊ ಬೆಲೆ ಧಿಡೀರ್ ಏರಿಕೆಗೆ ಕಾರಣವೇನು?

- Advertisement -
- Advertisement -

ಸಾಮಾನ್ಯವಾಗಿ ಪ್ರತಿನಿತ್ಯ ಬಳಸುವ ತರಕಾರಿಗಳಲ್ಲಿ ಒಂದಾದ ಟೊಮೆಟೊ ಬೆಲೆ ಧಿಡೀರ್ ಏರಿಕೆಯಾಗಿದೆ. ಕರ್ನಾಟಕದಲ್ಲಿ ಮಾತ್ರವಲ್ಲದೇ ಇಡೀ ದೇಶಾದ್ಯಂತ ಉತ್ತಮ ಗುಣಮಟ್ಟದ ಒಂದು ಕೆಜಿ ಟೊಮೆಟೊ ಬೆಲೆ 100 ರೂಗಳ ಆಸುಪಾಸಿನಲ್ಲಿದೆ. ಹಲವಾರು ಕಾರಣಗಳಿಂದ ಟೊಮೆಟೊ ಉತ್ಪಾನದೆ ಕುಸಿದ ಕಾರಣ, ಬೇಡಿಕೆ ಹೆಚ್ಚಾಗಿ ಈ ಮಟ್ಟದ ಬೆಲೆ ಏರಿಕೆ ಉದ್ಭವಿಸಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅತಿಯಾದ ಮಳೆ ಮತ್ತು ಅತಿಯಾದ ಬಿಸಿಲು

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್, ಒಡಿಶಾ, ಚತ್ತೀಸ್‌ಘಡ, ಪಶ್ಚಿಮ ಬಂಗಾಳ ರಾಜ್ಯಗಳು ಅತಿ ಹೆಚ್ಚು ಟೊಮೆಟೊ ಬೆಳೆಯುವ ರಾಜ್ಯಗಳಾಗಿವೆ. ಕೆಲ ರಾಜ್ಯಗಳಲ್ಲಿ ಏಪ್ರಿಲ್ ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಳೆಯಿಂದ ಟೊಮೆಟೊ ಬೆಳೆ ನಾಶವಾದರೆ ಕೆಲ ರಾಜ್ಯಗಳಲ್ಲಿ ತೀರಾ ಬಿಸಿಲು ಕಂಡುಬಂದು ಹಾಳಾಗಿದೆ. ಬಿಫರ್‌ಜಾಯ್ ಚಂಡಮಾರುತವೂ ಬೆಳೆ ನಾಶಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಇತ್ತೀಚೆಗೆ ಮುಂಗಾರು ಮಳೆ ಬಾರದೆ ಸಂಕಷ್ಟ ಎದುರಾಗಿದೆ. ಹಾಗಾಗಿ ಒಟ್ಟಾರೆ ಟೊಮೆಟೊ ಇಳುವರಿಯಲ್ಲಿ ಕುಸಿತ ಕಂಡಿದೆ.

ಮುಖ್ಯವಾಗಿ ಕರ್ನಾಟಕದಲ್ಲಿ ಬೆಂಗಳೂರು ಸುತ್ತಮುತ್ತಲಿನ 5 ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಟೊಮೆಟೊ ಬೆಳೆಯಲಾಗುತ್ತಿತ್ತು. ಆದರೆ ಈ ಬಾರಿ ಹಲವು ಕಾರಣಗಳಿಂದ ಉತ್ಪಾದನೆ ಅರ್ಧದಷ್ಟು ಕುಸಿತ ಕಂಡಿದೆ. ಈ ಜಿಲ್ಲೆಗಳಿಂದ ಕಳೆದ ವರ್ಷದ ಟೊಮೆಟೊ ಉತ್ಪಾದನೆ 5.45 ಲಕ್ಷ ಕ್ವಿಂಟಲ್‌ ಇದ್ದಿದ್ದು ಈ ವರ್ಷ 2.90 ಲಕ್ಷ ಕ್ವಿಂಟಲ್‌ಗೆ ಕುಸಿದಿದೆ ಎನ್ನಲಾಗಿದೆ.

ರೋಗಬಾಧೆ

ಬಿಳಿಸೊಳ್ಳೆ, ವೈರಸ್‌ ಬಾಧೆ, ಎಲೆ ರೋಗ ಟೊಮೆಟೊ ಬೆಳೆಗೆ ಬಾಧಿಸುತ್ತಿದೆ. ರೋಗಬಾಧೆ ಕಾರಣದಿಂದಾಗಿ ಕರ್ನಾಟಕ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಟೊಮೆಟೊ ಇಳುವರಿ ಕಡಿಮೆಯಾಗಿದೆ.

ಬೀನ್ಸ್‌ನತ್ತ ಮುಖ ಮಾಡಿದ ಕೆಲ ರೈತರು

ಕಳೆದ ವರ್ಷ ಬೀನ್ಸ್ ಬೆಳೆಗೆ ಉತ್ತಮ ಬೆಲೆ ಸಿಕ್ಕಿತ್ತು. ಅದೇ ಸಂದರ್ಭದಲ್ಲಿ ಟೊಮೆಟೊ ಬೆಳೆದವರು ನಷ್ಟಕ್ಕೆ ತುತ್ತಾಗಿದ್ದರು. ಹಾಗಾಗಿ ಈ ಬಾರಿ ಬಹುತೇಕರು ಟಮೊಟೊ ಬಿಟ್ಟು ಬೀನ್ಸ್‌ ಬೆಳೆಯತ್ತ ಮುಖ ಮಾಡಿದ್ದಾರೆ. ಹಾಗಾಗಿ ಸಹಜವಾಗಿ ಉತ್ಪಾದನೆ ಕಡಿಮೆಯಾಗಿದೆ.

ಸಾಗಾಣಿಕೆ ಸಮಸ್ಯೆ

ಟೊಮೆಟೊ ಬೇಗ ಹಾಳಾಗುವ ತರಕಾರಿಯಾಗಿದ್ದು, ಮಳೆಗೆ ಸಿಕ್ಕರಂತೂ ಇನ್ನೂ ಬೇಗ ಹಾಳಾಗುತ್ತದೆ. ಕೆಲ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾದ ಕಾರಣ ಸಾಗಾಣಿಕೆ ಸಮಸ್ಯೆಯಿಂದಲೂ ಸಹ ಬೆಲೆ ಏರಿಕೆ ಆಗಿದೆ.

ಸಾಕಷ್ಟು ಸಂಖ್ಯೆಯಲ್ಲಿ ಕೋಲ್ಡ್ ಸ್ಟೋರೇಜ್‌ಗಳು ಇಲ್ಲದಿರುವುದು

ಟೊಮೆಟೊ ಸೇರಿದಂತೆ ಹಲವು ತರಕಾರಿಗಳನ್ನು ಸಂಗ್ರಹಿಸಿಡುವ ದೊಡ್ಡ ದೊಡ್ಡ ಕೋಲ್ಡ್ ಸ್ಟೋರೇಜ್‌ಗಳು ಸಾಕಷ್ಟು ಸಂಖ್ಯೆಯಲ್ಲಿ ಇಲ್ಲದಿರುವುದರಿಂದ ಸಂಗ್ರಹಿಸಿ ಬೇಡಿಕೆಗೆ ತಕ್ಕಂತೆ ಪೂರೈಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಬೇಡಿಕೆ ಹೆಚ್ಚಿದಂತೆ ಬೆಲೆ ಏರಿಕೆ ಆಗಿದೆ.

ಪ್ರತಿವರ್ಷದ ವಿದ್ಯಮಾನ

ಇನ್ನು ಈ ಸಮಸ್ಯೆ ಪ್ರತಿವರ್ಷದ ವಿದ್ಯಾಮಾನವಾಗಿದ್ದು ಈ ಸಮಯದಲ್ಲಿ ಬೆಲೆ ಏರಿಕೆಯಾಗುವುದು ಸಹಜ. ಆದರೆ ಕೆಲವೇ ದಿನಗಳಲ್ಲಿ ಬೆಲೆ ಇಳಿಯಲಿದ್ದು ಸಹಜ ಸ್ಥಿತಿಗೆ ಮರಳಲಿದೆ ಎಂದು ಗ್ರಾಹರ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಬೆಲೆ ಏರಿಕೆ ತಡೆಯಲು ತಮಿಳುನಾಡು ಸರ್ಕಾರದ ಯತ್ನ

ಬಡವರು ಮತ್ತು ಮಧ್ಯಮ ವರ್ಗದ ಸಮುದಾಯಗಳ ಮೇಲಿನ ಬೆಲೆ ಏರಿಕೆ ಹೊರೆಯನ್ನು ತಗ್ಗಿಸುವ ಪ್ರಯತ್ನದಲ್ಲಿ ತಮಿಳುನಾಡು ಸರ್ಕಾರವು ರಾಜ್ಯದಾದ್ಯಂತ ಫಾರ್ಮ್ ಫ್ರೆಶ್ ಔಟ್ಲೆಟ್‌ಗಳಲ್ಲಿ (FFOs) ಟೊಮೆಟೊ ಮಾರಾಟ ಮಾಡಲು ಪ್ರಾರಂಭಿಸಿದೆ. ಟೊಮೆಟೊ ಬೆಲೆಯನ್ನು ನಿಯಂತ್ರಿಸುವುದು ಮತ್ತು ಈ ಅಗತ್ಯ ತರಕಾರಿಯನ್ನು ಸಾರ್ವಜನಿಕರಿಗೆ ಹೆಚ್ಚು ಸುಲಭವಾಗಿ ತಲುಪಿಸುವುದು ಇದರ ಉದ್ದೇಶವಾಗಿದೆ. ಎಫ್‌ಎಫ್‌ಒಗಳಲ್ಲಿ ಪ್ರತಿ ಕೆಜಿ ಟೊಮೆಟೊಗೆ 68 ರೂ.ಗೆ ಬೆಲೆ ನಿಗಧಿಪಡಿಸಲಾಗಿದೆ. 60 ರೂಗಿಂತ ಬೆಲೆ ಕಡಿಮೆ ಮಾಡಲು ಚಿಂತಸಲಾಗುತ್ತಿದೆ ಎಂದು ತಮಿಳುನಾಡಿನ ಸಹಕಾರ, ಆಹಾರ ಮತ್ತು ಗ್ರಾಹಕ ಸಂರಕ್ಷಣಾ ಇಲಾಖೆಯ ಸಚಿವ ಪೆರಿಯಕರುಪ್ಪನ್ ತಿಳಿಸಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಜಾತಿಯವನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ; ಯುವಕ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...