Homeಮುಖಪುಟಬೆಂಗಳೂರಿನಿಂದ ದೆಹಲಿಯವರೆಗೆ ಟೊಮೆಟೊ ಬೆಲೆ ಧಿಡೀರ್ ಏರಿಕೆಗೆ ಕಾರಣವೇನು?

ಬೆಂಗಳೂರಿನಿಂದ ದೆಹಲಿಯವರೆಗೆ ಟೊಮೆಟೊ ಬೆಲೆ ಧಿಡೀರ್ ಏರಿಕೆಗೆ ಕಾರಣವೇನು?

- Advertisement -
- Advertisement -

ಸಾಮಾನ್ಯವಾಗಿ ಪ್ರತಿನಿತ್ಯ ಬಳಸುವ ತರಕಾರಿಗಳಲ್ಲಿ ಒಂದಾದ ಟೊಮೆಟೊ ಬೆಲೆ ಧಿಡೀರ್ ಏರಿಕೆಯಾಗಿದೆ. ಕರ್ನಾಟಕದಲ್ಲಿ ಮಾತ್ರವಲ್ಲದೇ ಇಡೀ ದೇಶಾದ್ಯಂತ ಉತ್ತಮ ಗುಣಮಟ್ಟದ ಒಂದು ಕೆಜಿ ಟೊಮೆಟೊ ಬೆಲೆ 100 ರೂಗಳ ಆಸುಪಾಸಿನಲ್ಲಿದೆ. ಹಲವಾರು ಕಾರಣಗಳಿಂದ ಟೊಮೆಟೊ ಉತ್ಪಾನದೆ ಕುಸಿದ ಕಾರಣ, ಬೇಡಿಕೆ ಹೆಚ್ಚಾಗಿ ಈ ಮಟ್ಟದ ಬೆಲೆ ಏರಿಕೆ ಉದ್ಭವಿಸಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅತಿಯಾದ ಮಳೆ ಮತ್ತು ಅತಿಯಾದ ಬಿಸಿಲು

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್, ಒಡಿಶಾ, ಚತ್ತೀಸ್‌ಘಡ, ಪಶ್ಚಿಮ ಬಂಗಾಳ ರಾಜ್ಯಗಳು ಅತಿ ಹೆಚ್ಚು ಟೊಮೆಟೊ ಬೆಳೆಯುವ ರಾಜ್ಯಗಳಾಗಿವೆ. ಕೆಲ ರಾಜ್ಯಗಳಲ್ಲಿ ಏಪ್ರಿಲ್ ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಳೆಯಿಂದ ಟೊಮೆಟೊ ಬೆಳೆ ನಾಶವಾದರೆ ಕೆಲ ರಾಜ್ಯಗಳಲ್ಲಿ ತೀರಾ ಬಿಸಿಲು ಕಂಡುಬಂದು ಹಾಳಾಗಿದೆ. ಬಿಫರ್‌ಜಾಯ್ ಚಂಡಮಾರುತವೂ ಬೆಳೆ ನಾಶಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಇತ್ತೀಚೆಗೆ ಮುಂಗಾರು ಮಳೆ ಬಾರದೆ ಸಂಕಷ್ಟ ಎದುರಾಗಿದೆ. ಹಾಗಾಗಿ ಒಟ್ಟಾರೆ ಟೊಮೆಟೊ ಇಳುವರಿಯಲ್ಲಿ ಕುಸಿತ ಕಂಡಿದೆ.

ಮುಖ್ಯವಾಗಿ ಕರ್ನಾಟಕದಲ್ಲಿ ಬೆಂಗಳೂರು ಸುತ್ತಮುತ್ತಲಿನ 5 ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಟೊಮೆಟೊ ಬೆಳೆಯಲಾಗುತ್ತಿತ್ತು. ಆದರೆ ಈ ಬಾರಿ ಹಲವು ಕಾರಣಗಳಿಂದ ಉತ್ಪಾದನೆ ಅರ್ಧದಷ್ಟು ಕುಸಿತ ಕಂಡಿದೆ. ಈ ಜಿಲ್ಲೆಗಳಿಂದ ಕಳೆದ ವರ್ಷದ ಟೊಮೆಟೊ ಉತ್ಪಾದನೆ 5.45 ಲಕ್ಷ ಕ್ವಿಂಟಲ್‌ ಇದ್ದಿದ್ದು ಈ ವರ್ಷ 2.90 ಲಕ್ಷ ಕ್ವಿಂಟಲ್‌ಗೆ ಕುಸಿದಿದೆ ಎನ್ನಲಾಗಿದೆ.

ರೋಗಬಾಧೆ

ಬಿಳಿಸೊಳ್ಳೆ, ವೈರಸ್‌ ಬಾಧೆ, ಎಲೆ ರೋಗ ಟೊಮೆಟೊ ಬೆಳೆಗೆ ಬಾಧಿಸುತ್ತಿದೆ. ರೋಗಬಾಧೆ ಕಾರಣದಿಂದಾಗಿ ಕರ್ನಾಟಕ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಟೊಮೆಟೊ ಇಳುವರಿ ಕಡಿಮೆಯಾಗಿದೆ.

ಬೀನ್ಸ್‌ನತ್ತ ಮುಖ ಮಾಡಿದ ಕೆಲ ರೈತರು

ಕಳೆದ ವರ್ಷ ಬೀನ್ಸ್ ಬೆಳೆಗೆ ಉತ್ತಮ ಬೆಲೆ ಸಿಕ್ಕಿತ್ತು. ಅದೇ ಸಂದರ್ಭದಲ್ಲಿ ಟೊಮೆಟೊ ಬೆಳೆದವರು ನಷ್ಟಕ್ಕೆ ತುತ್ತಾಗಿದ್ದರು. ಹಾಗಾಗಿ ಈ ಬಾರಿ ಬಹುತೇಕರು ಟಮೊಟೊ ಬಿಟ್ಟು ಬೀನ್ಸ್‌ ಬೆಳೆಯತ್ತ ಮುಖ ಮಾಡಿದ್ದಾರೆ. ಹಾಗಾಗಿ ಸಹಜವಾಗಿ ಉತ್ಪಾದನೆ ಕಡಿಮೆಯಾಗಿದೆ.

ಸಾಗಾಣಿಕೆ ಸಮಸ್ಯೆ

ಟೊಮೆಟೊ ಬೇಗ ಹಾಳಾಗುವ ತರಕಾರಿಯಾಗಿದ್ದು, ಮಳೆಗೆ ಸಿಕ್ಕರಂತೂ ಇನ್ನೂ ಬೇಗ ಹಾಳಾಗುತ್ತದೆ. ಕೆಲ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾದ ಕಾರಣ ಸಾಗಾಣಿಕೆ ಸಮಸ್ಯೆಯಿಂದಲೂ ಸಹ ಬೆಲೆ ಏರಿಕೆ ಆಗಿದೆ.

ಸಾಕಷ್ಟು ಸಂಖ್ಯೆಯಲ್ಲಿ ಕೋಲ್ಡ್ ಸ್ಟೋರೇಜ್‌ಗಳು ಇಲ್ಲದಿರುವುದು

ಟೊಮೆಟೊ ಸೇರಿದಂತೆ ಹಲವು ತರಕಾರಿಗಳನ್ನು ಸಂಗ್ರಹಿಸಿಡುವ ದೊಡ್ಡ ದೊಡ್ಡ ಕೋಲ್ಡ್ ಸ್ಟೋರೇಜ್‌ಗಳು ಸಾಕಷ್ಟು ಸಂಖ್ಯೆಯಲ್ಲಿ ಇಲ್ಲದಿರುವುದರಿಂದ ಸಂಗ್ರಹಿಸಿ ಬೇಡಿಕೆಗೆ ತಕ್ಕಂತೆ ಪೂರೈಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಬೇಡಿಕೆ ಹೆಚ್ಚಿದಂತೆ ಬೆಲೆ ಏರಿಕೆ ಆಗಿದೆ.

ಪ್ರತಿವರ್ಷದ ವಿದ್ಯಮಾನ

ಇನ್ನು ಈ ಸಮಸ್ಯೆ ಪ್ರತಿವರ್ಷದ ವಿದ್ಯಾಮಾನವಾಗಿದ್ದು ಈ ಸಮಯದಲ್ಲಿ ಬೆಲೆ ಏರಿಕೆಯಾಗುವುದು ಸಹಜ. ಆದರೆ ಕೆಲವೇ ದಿನಗಳಲ್ಲಿ ಬೆಲೆ ಇಳಿಯಲಿದ್ದು ಸಹಜ ಸ್ಥಿತಿಗೆ ಮರಳಲಿದೆ ಎಂದು ಗ್ರಾಹರ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಬೆಲೆ ಏರಿಕೆ ತಡೆಯಲು ತಮಿಳುನಾಡು ಸರ್ಕಾರದ ಯತ್ನ

ಬಡವರು ಮತ್ತು ಮಧ್ಯಮ ವರ್ಗದ ಸಮುದಾಯಗಳ ಮೇಲಿನ ಬೆಲೆ ಏರಿಕೆ ಹೊರೆಯನ್ನು ತಗ್ಗಿಸುವ ಪ್ರಯತ್ನದಲ್ಲಿ ತಮಿಳುನಾಡು ಸರ್ಕಾರವು ರಾಜ್ಯದಾದ್ಯಂತ ಫಾರ್ಮ್ ಫ್ರೆಶ್ ಔಟ್ಲೆಟ್‌ಗಳಲ್ಲಿ (FFOs) ಟೊಮೆಟೊ ಮಾರಾಟ ಮಾಡಲು ಪ್ರಾರಂಭಿಸಿದೆ. ಟೊಮೆಟೊ ಬೆಲೆಯನ್ನು ನಿಯಂತ್ರಿಸುವುದು ಮತ್ತು ಈ ಅಗತ್ಯ ತರಕಾರಿಯನ್ನು ಸಾರ್ವಜನಿಕರಿಗೆ ಹೆಚ್ಚು ಸುಲಭವಾಗಿ ತಲುಪಿಸುವುದು ಇದರ ಉದ್ದೇಶವಾಗಿದೆ. ಎಫ್‌ಎಫ್‌ಒಗಳಲ್ಲಿ ಪ್ರತಿ ಕೆಜಿ ಟೊಮೆಟೊಗೆ 68 ರೂ.ಗೆ ಬೆಲೆ ನಿಗಧಿಪಡಿಸಲಾಗಿದೆ. 60 ರೂಗಿಂತ ಬೆಲೆ ಕಡಿಮೆ ಮಾಡಲು ಚಿಂತಸಲಾಗುತ್ತಿದೆ ಎಂದು ತಮಿಳುನಾಡಿನ ಸಹಕಾರ, ಆಹಾರ ಮತ್ತು ಗ್ರಾಹಕ ಸಂರಕ್ಷಣಾ ಇಲಾಖೆಯ ಸಚಿವ ಪೆರಿಯಕರುಪ್ಪನ್ ತಿಳಿಸಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಜಾತಿಯವನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ; ಯುವಕ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...