Homeಮುಖಪುಟಬೆಂಗಳೂರಿನಿಂದ ದೆಹಲಿಯವರೆಗೆ ಟೊಮೆಟೊ ಬೆಲೆ ಧಿಡೀರ್ ಏರಿಕೆಗೆ ಕಾರಣವೇನು?

ಬೆಂಗಳೂರಿನಿಂದ ದೆಹಲಿಯವರೆಗೆ ಟೊಮೆಟೊ ಬೆಲೆ ಧಿಡೀರ್ ಏರಿಕೆಗೆ ಕಾರಣವೇನು?

- Advertisement -
- Advertisement -

ಸಾಮಾನ್ಯವಾಗಿ ಪ್ರತಿನಿತ್ಯ ಬಳಸುವ ತರಕಾರಿಗಳಲ್ಲಿ ಒಂದಾದ ಟೊಮೆಟೊ ಬೆಲೆ ಧಿಡೀರ್ ಏರಿಕೆಯಾಗಿದೆ. ಕರ್ನಾಟಕದಲ್ಲಿ ಮಾತ್ರವಲ್ಲದೇ ಇಡೀ ದೇಶಾದ್ಯಂತ ಉತ್ತಮ ಗುಣಮಟ್ಟದ ಒಂದು ಕೆಜಿ ಟೊಮೆಟೊ ಬೆಲೆ 100 ರೂಗಳ ಆಸುಪಾಸಿನಲ್ಲಿದೆ. ಹಲವಾರು ಕಾರಣಗಳಿಂದ ಟೊಮೆಟೊ ಉತ್ಪಾನದೆ ಕುಸಿದ ಕಾರಣ, ಬೇಡಿಕೆ ಹೆಚ್ಚಾಗಿ ಈ ಮಟ್ಟದ ಬೆಲೆ ಏರಿಕೆ ಉದ್ಭವಿಸಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅತಿಯಾದ ಮಳೆ ಮತ್ತು ಅತಿಯಾದ ಬಿಸಿಲು

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್, ಒಡಿಶಾ, ಚತ್ತೀಸ್‌ಘಡ, ಪಶ್ಚಿಮ ಬಂಗಾಳ ರಾಜ್ಯಗಳು ಅತಿ ಹೆಚ್ಚು ಟೊಮೆಟೊ ಬೆಳೆಯುವ ರಾಜ್ಯಗಳಾಗಿವೆ. ಕೆಲ ರಾಜ್ಯಗಳಲ್ಲಿ ಏಪ್ರಿಲ್ ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಳೆಯಿಂದ ಟೊಮೆಟೊ ಬೆಳೆ ನಾಶವಾದರೆ ಕೆಲ ರಾಜ್ಯಗಳಲ್ಲಿ ತೀರಾ ಬಿಸಿಲು ಕಂಡುಬಂದು ಹಾಳಾಗಿದೆ. ಬಿಫರ್‌ಜಾಯ್ ಚಂಡಮಾರುತವೂ ಬೆಳೆ ನಾಶಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಇತ್ತೀಚೆಗೆ ಮುಂಗಾರು ಮಳೆ ಬಾರದೆ ಸಂಕಷ್ಟ ಎದುರಾಗಿದೆ. ಹಾಗಾಗಿ ಒಟ್ಟಾರೆ ಟೊಮೆಟೊ ಇಳುವರಿಯಲ್ಲಿ ಕುಸಿತ ಕಂಡಿದೆ.

ಮುಖ್ಯವಾಗಿ ಕರ್ನಾಟಕದಲ್ಲಿ ಬೆಂಗಳೂರು ಸುತ್ತಮುತ್ತಲಿನ 5 ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಟೊಮೆಟೊ ಬೆಳೆಯಲಾಗುತ್ತಿತ್ತು. ಆದರೆ ಈ ಬಾರಿ ಹಲವು ಕಾರಣಗಳಿಂದ ಉತ್ಪಾದನೆ ಅರ್ಧದಷ್ಟು ಕುಸಿತ ಕಂಡಿದೆ. ಈ ಜಿಲ್ಲೆಗಳಿಂದ ಕಳೆದ ವರ್ಷದ ಟೊಮೆಟೊ ಉತ್ಪಾದನೆ 5.45 ಲಕ್ಷ ಕ್ವಿಂಟಲ್‌ ಇದ್ದಿದ್ದು ಈ ವರ್ಷ 2.90 ಲಕ್ಷ ಕ್ವಿಂಟಲ್‌ಗೆ ಕುಸಿದಿದೆ ಎನ್ನಲಾಗಿದೆ.

ರೋಗಬಾಧೆ

ಬಿಳಿಸೊಳ್ಳೆ, ವೈರಸ್‌ ಬಾಧೆ, ಎಲೆ ರೋಗ ಟೊಮೆಟೊ ಬೆಳೆಗೆ ಬಾಧಿಸುತ್ತಿದೆ. ರೋಗಬಾಧೆ ಕಾರಣದಿಂದಾಗಿ ಕರ್ನಾಟಕ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಟೊಮೆಟೊ ಇಳುವರಿ ಕಡಿಮೆಯಾಗಿದೆ.

ಬೀನ್ಸ್‌ನತ್ತ ಮುಖ ಮಾಡಿದ ಕೆಲ ರೈತರು

ಕಳೆದ ವರ್ಷ ಬೀನ್ಸ್ ಬೆಳೆಗೆ ಉತ್ತಮ ಬೆಲೆ ಸಿಕ್ಕಿತ್ತು. ಅದೇ ಸಂದರ್ಭದಲ್ಲಿ ಟೊಮೆಟೊ ಬೆಳೆದವರು ನಷ್ಟಕ್ಕೆ ತುತ್ತಾಗಿದ್ದರು. ಹಾಗಾಗಿ ಈ ಬಾರಿ ಬಹುತೇಕರು ಟಮೊಟೊ ಬಿಟ್ಟು ಬೀನ್ಸ್‌ ಬೆಳೆಯತ್ತ ಮುಖ ಮಾಡಿದ್ದಾರೆ. ಹಾಗಾಗಿ ಸಹಜವಾಗಿ ಉತ್ಪಾದನೆ ಕಡಿಮೆಯಾಗಿದೆ.

ಸಾಗಾಣಿಕೆ ಸಮಸ್ಯೆ

ಟೊಮೆಟೊ ಬೇಗ ಹಾಳಾಗುವ ತರಕಾರಿಯಾಗಿದ್ದು, ಮಳೆಗೆ ಸಿಕ್ಕರಂತೂ ಇನ್ನೂ ಬೇಗ ಹಾಳಾಗುತ್ತದೆ. ಕೆಲ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾದ ಕಾರಣ ಸಾಗಾಣಿಕೆ ಸಮಸ್ಯೆಯಿಂದಲೂ ಸಹ ಬೆಲೆ ಏರಿಕೆ ಆಗಿದೆ.

ಸಾಕಷ್ಟು ಸಂಖ್ಯೆಯಲ್ಲಿ ಕೋಲ್ಡ್ ಸ್ಟೋರೇಜ್‌ಗಳು ಇಲ್ಲದಿರುವುದು

ಟೊಮೆಟೊ ಸೇರಿದಂತೆ ಹಲವು ತರಕಾರಿಗಳನ್ನು ಸಂಗ್ರಹಿಸಿಡುವ ದೊಡ್ಡ ದೊಡ್ಡ ಕೋಲ್ಡ್ ಸ್ಟೋರೇಜ್‌ಗಳು ಸಾಕಷ್ಟು ಸಂಖ್ಯೆಯಲ್ಲಿ ಇಲ್ಲದಿರುವುದರಿಂದ ಸಂಗ್ರಹಿಸಿ ಬೇಡಿಕೆಗೆ ತಕ್ಕಂತೆ ಪೂರೈಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಬೇಡಿಕೆ ಹೆಚ್ಚಿದಂತೆ ಬೆಲೆ ಏರಿಕೆ ಆಗಿದೆ.

ಪ್ರತಿವರ್ಷದ ವಿದ್ಯಮಾನ

ಇನ್ನು ಈ ಸಮಸ್ಯೆ ಪ್ರತಿವರ್ಷದ ವಿದ್ಯಾಮಾನವಾಗಿದ್ದು ಈ ಸಮಯದಲ್ಲಿ ಬೆಲೆ ಏರಿಕೆಯಾಗುವುದು ಸಹಜ. ಆದರೆ ಕೆಲವೇ ದಿನಗಳಲ್ಲಿ ಬೆಲೆ ಇಳಿಯಲಿದ್ದು ಸಹಜ ಸ್ಥಿತಿಗೆ ಮರಳಲಿದೆ ಎಂದು ಗ್ರಾಹರ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಬೆಲೆ ಏರಿಕೆ ತಡೆಯಲು ತಮಿಳುನಾಡು ಸರ್ಕಾರದ ಯತ್ನ

ಬಡವರು ಮತ್ತು ಮಧ್ಯಮ ವರ್ಗದ ಸಮುದಾಯಗಳ ಮೇಲಿನ ಬೆಲೆ ಏರಿಕೆ ಹೊರೆಯನ್ನು ತಗ್ಗಿಸುವ ಪ್ರಯತ್ನದಲ್ಲಿ ತಮಿಳುನಾಡು ಸರ್ಕಾರವು ರಾಜ್ಯದಾದ್ಯಂತ ಫಾರ್ಮ್ ಫ್ರೆಶ್ ಔಟ್ಲೆಟ್‌ಗಳಲ್ಲಿ (FFOs) ಟೊಮೆಟೊ ಮಾರಾಟ ಮಾಡಲು ಪ್ರಾರಂಭಿಸಿದೆ. ಟೊಮೆಟೊ ಬೆಲೆಯನ್ನು ನಿಯಂತ್ರಿಸುವುದು ಮತ್ತು ಈ ಅಗತ್ಯ ತರಕಾರಿಯನ್ನು ಸಾರ್ವಜನಿಕರಿಗೆ ಹೆಚ್ಚು ಸುಲಭವಾಗಿ ತಲುಪಿಸುವುದು ಇದರ ಉದ್ದೇಶವಾಗಿದೆ. ಎಫ್‌ಎಫ್‌ಒಗಳಲ್ಲಿ ಪ್ರತಿ ಕೆಜಿ ಟೊಮೆಟೊಗೆ 68 ರೂ.ಗೆ ಬೆಲೆ ನಿಗಧಿಪಡಿಸಲಾಗಿದೆ. 60 ರೂಗಿಂತ ಬೆಲೆ ಕಡಿಮೆ ಮಾಡಲು ಚಿಂತಸಲಾಗುತ್ತಿದೆ ಎಂದು ತಮಿಳುನಾಡಿನ ಸಹಕಾರ, ಆಹಾರ ಮತ್ತು ಗ್ರಾಹಕ ಸಂರಕ್ಷಣಾ ಇಲಾಖೆಯ ಸಚಿವ ಪೆರಿಯಕರುಪ್ಪನ್ ತಿಳಿಸಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಜಾತಿಯವನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ; ಯುವಕ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...