Homeಮುಖಪುಟಬೆಂಗಳೂರಿನಿಂದ ದೆಹಲಿಯವರೆಗೆ ಟೊಮೆಟೊ ಬೆಲೆ ಧಿಡೀರ್ ಏರಿಕೆಗೆ ಕಾರಣವೇನು?

ಬೆಂಗಳೂರಿನಿಂದ ದೆಹಲಿಯವರೆಗೆ ಟೊಮೆಟೊ ಬೆಲೆ ಧಿಡೀರ್ ಏರಿಕೆಗೆ ಕಾರಣವೇನು?

- Advertisement -
- Advertisement -

ಸಾಮಾನ್ಯವಾಗಿ ಪ್ರತಿನಿತ್ಯ ಬಳಸುವ ತರಕಾರಿಗಳಲ್ಲಿ ಒಂದಾದ ಟೊಮೆಟೊ ಬೆಲೆ ಧಿಡೀರ್ ಏರಿಕೆಯಾಗಿದೆ. ಕರ್ನಾಟಕದಲ್ಲಿ ಮಾತ್ರವಲ್ಲದೇ ಇಡೀ ದೇಶಾದ್ಯಂತ ಉತ್ತಮ ಗುಣಮಟ್ಟದ ಒಂದು ಕೆಜಿ ಟೊಮೆಟೊ ಬೆಲೆ 100 ರೂಗಳ ಆಸುಪಾಸಿನಲ್ಲಿದೆ. ಹಲವಾರು ಕಾರಣಗಳಿಂದ ಟೊಮೆಟೊ ಉತ್ಪಾನದೆ ಕುಸಿದ ಕಾರಣ, ಬೇಡಿಕೆ ಹೆಚ್ಚಾಗಿ ಈ ಮಟ್ಟದ ಬೆಲೆ ಏರಿಕೆ ಉದ್ಭವಿಸಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅತಿಯಾದ ಮಳೆ ಮತ್ತು ಅತಿಯಾದ ಬಿಸಿಲು

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್, ಒಡಿಶಾ, ಚತ್ತೀಸ್‌ಘಡ, ಪಶ್ಚಿಮ ಬಂಗಾಳ ರಾಜ್ಯಗಳು ಅತಿ ಹೆಚ್ಚು ಟೊಮೆಟೊ ಬೆಳೆಯುವ ರಾಜ್ಯಗಳಾಗಿವೆ. ಕೆಲ ರಾಜ್ಯಗಳಲ್ಲಿ ಏಪ್ರಿಲ್ ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಳೆಯಿಂದ ಟೊಮೆಟೊ ಬೆಳೆ ನಾಶವಾದರೆ ಕೆಲ ರಾಜ್ಯಗಳಲ್ಲಿ ತೀರಾ ಬಿಸಿಲು ಕಂಡುಬಂದು ಹಾಳಾಗಿದೆ. ಬಿಫರ್‌ಜಾಯ್ ಚಂಡಮಾರುತವೂ ಬೆಳೆ ನಾಶಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಇತ್ತೀಚೆಗೆ ಮುಂಗಾರು ಮಳೆ ಬಾರದೆ ಸಂಕಷ್ಟ ಎದುರಾಗಿದೆ. ಹಾಗಾಗಿ ಒಟ್ಟಾರೆ ಟೊಮೆಟೊ ಇಳುವರಿಯಲ್ಲಿ ಕುಸಿತ ಕಂಡಿದೆ.

ಮುಖ್ಯವಾಗಿ ಕರ್ನಾಟಕದಲ್ಲಿ ಬೆಂಗಳೂರು ಸುತ್ತಮುತ್ತಲಿನ 5 ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಟೊಮೆಟೊ ಬೆಳೆಯಲಾಗುತ್ತಿತ್ತು. ಆದರೆ ಈ ಬಾರಿ ಹಲವು ಕಾರಣಗಳಿಂದ ಉತ್ಪಾದನೆ ಅರ್ಧದಷ್ಟು ಕುಸಿತ ಕಂಡಿದೆ. ಈ ಜಿಲ್ಲೆಗಳಿಂದ ಕಳೆದ ವರ್ಷದ ಟೊಮೆಟೊ ಉತ್ಪಾದನೆ 5.45 ಲಕ್ಷ ಕ್ವಿಂಟಲ್‌ ಇದ್ದಿದ್ದು ಈ ವರ್ಷ 2.90 ಲಕ್ಷ ಕ್ವಿಂಟಲ್‌ಗೆ ಕುಸಿದಿದೆ ಎನ್ನಲಾಗಿದೆ.

ರೋಗಬಾಧೆ

ಬಿಳಿಸೊಳ್ಳೆ, ವೈರಸ್‌ ಬಾಧೆ, ಎಲೆ ರೋಗ ಟೊಮೆಟೊ ಬೆಳೆಗೆ ಬಾಧಿಸುತ್ತಿದೆ. ರೋಗಬಾಧೆ ಕಾರಣದಿಂದಾಗಿ ಕರ್ನಾಟಕ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಟೊಮೆಟೊ ಇಳುವರಿ ಕಡಿಮೆಯಾಗಿದೆ.

ಬೀನ್ಸ್‌ನತ್ತ ಮುಖ ಮಾಡಿದ ಕೆಲ ರೈತರು

ಕಳೆದ ವರ್ಷ ಬೀನ್ಸ್ ಬೆಳೆಗೆ ಉತ್ತಮ ಬೆಲೆ ಸಿಕ್ಕಿತ್ತು. ಅದೇ ಸಂದರ್ಭದಲ್ಲಿ ಟೊಮೆಟೊ ಬೆಳೆದವರು ನಷ್ಟಕ್ಕೆ ತುತ್ತಾಗಿದ್ದರು. ಹಾಗಾಗಿ ಈ ಬಾರಿ ಬಹುತೇಕರು ಟಮೊಟೊ ಬಿಟ್ಟು ಬೀನ್ಸ್‌ ಬೆಳೆಯತ್ತ ಮುಖ ಮಾಡಿದ್ದಾರೆ. ಹಾಗಾಗಿ ಸಹಜವಾಗಿ ಉತ್ಪಾದನೆ ಕಡಿಮೆಯಾಗಿದೆ.

ಸಾಗಾಣಿಕೆ ಸಮಸ್ಯೆ

ಟೊಮೆಟೊ ಬೇಗ ಹಾಳಾಗುವ ತರಕಾರಿಯಾಗಿದ್ದು, ಮಳೆಗೆ ಸಿಕ್ಕರಂತೂ ಇನ್ನೂ ಬೇಗ ಹಾಳಾಗುತ್ತದೆ. ಕೆಲ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾದ ಕಾರಣ ಸಾಗಾಣಿಕೆ ಸಮಸ್ಯೆಯಿಂದಲೂ ಸಹ ಬೆಲೆ ಏರಿಕೆ ಆಗಿದೆ.

ಸಾಕಷ್ಟು ಸಂಖ್ಯೆಯಲ್ಲಿ ಕೋಲ್ಡ್ ಸ್ಟೋರೇಜ್‌ಗಳು ಇಲ್ಲದಿರುವುದು

ಟೊಮೆಟೊ ಸೇರಿದಂತೆ ಹಲವು ತರಕಾರಿಗಳನ್ನು ಸಂಗ್ರಹಿಸಿಡುವ ದೊಡ್ಡ ದೊಡ್ಡ ಕೋಲ್ಡ್ ಸ್ಟೋರೇಜ್‌ಗಳು ಸಾಕಷ್ಟು ಸಂಖ್ಯೆಯಲ್ಲಿ ಇಲ್ಲದಿರುವುದರಿಂದ ಸಂಗ್ರಹಿಸಿ ಬೇಡಿಕೆಗೆ ತಕ್ಕಂತೆ ಪೂರೈಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಬೇಡಿಕೆ ಹೆಚ್ಚಿದಂತೆ ಬೆಲೆ ಏರಿಕೆ ಆಗಿದೆ.

ಪ್ರತಿವರ್ಷದ ವಿದ್ಯಮಾನ

ಇನ್ನು ಈ ಸಮಸ್ಯೆ ಪ್ರತಿವರ್ಷದ ವಿದ್ಯಾಮಾನವಾಗಿದ್ದು ಈ ಸಮಯದಲ್ಲಿ ಬೆಲೆ ಏರಿಕೆಯಾಗುವುದು ಸಹಜ. ಆದರೆ ಕೆಲವೇ ದಿನಗಳಲ್ಲಿ ಬೆಲೆ ಇಳಿಯಲಿದ್ದು ಸಹಜ ಸ್ಥಿತಿಗೆ ಮರಳಲಿದೆ ಎಂದು ಗ್ರಾಹರ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಬೆಲೆ ಏರಿಕೆ ತಡೆಯಲು ತಮಿಳುನಾಡು ಸರ್ಕಾರದ ಯತ್ನ

ಬಡವರು ಮತ್ತು ಮಧ್ಯಮ ವರ್ಗದ ಸಮುದಾಯಗಳ ಮೇಲಿನ ಬೆಲೆ ಏರಿಕೆ ಹೊರೆಯನ್ನು ತಗ್ಗಿಸುವ ಪ್ರಯತ್ನದಲ್ಲಿ ತಮಿಳುನಾಡು ಸರ್ಕಾರವು ರಾಜ್ಯದಾದ್ಯಂತ ಫಾರ್ಮ್ ಫ್ರೆಶ್ ಔಟ್ಲೆಟ್‌ಗಳಲ್ಲಿ (FFOs) ಟೊಮೆಟೊ ಮಾರಾಟ ಮಾಡಲು ಪ್ರಾರಂಭಿಸಿದೆ. ಟೊಮೆಟೊ ಬೆಲೆಯನ್ನು ನಿಯಂತ್ರಿಸುವುದು ಮತ್ತು ಈ ಅಗತ್ಯ ತರಕಾರಿಯನ್ನು ಸಾರ್ವಜನಿಕರಿಗೆ ಹೆಚ್ಚು ಸುಲಭವಾಗಿ ತಲುಪಿಸುವುದು ಇದರ ಉದ್ದೇಶವಾಗಿದೆ. ಎಫ್‌ಎಫ್‌ಒಗಳಲ್ಲಿ ಪ್ರತಿ ಕೆಜಿ ಟೊಮೆಟೊಗೆ 68 ರೂ.ಗೆ ಬೆಲೆ ನಿಗಧಿಪಡಿಸಲಾಗಿದೆ. 60 ರೂಗಿಂತ ಬೆಲೆ ಕಡಿಮೆ ಮಾಡಲು ಚಿಂತಸಲಾಗುತ್ತಿದೆ ಎಂದು ತಮಿಳುನಾಡಿನ ಸಹಕಾರ, ಆಹಾರ ಮತ್ತು ಗ್ರಾಹಕ ಸಂರಕ್ಷಣಾ ಇಲಾಖೆಯ ಸಚಿವ ಪೆರಿಯಕರುಪ್ಪನ್ ತಿಳಿಸಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಜಾತಿಯವನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ; ಯುವಕ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...