Homeಮುಖಪುಟಬೆಂಗಳೂರಿನಿಂದ ದೆಹಲಿಯವರೆಗೆ ಟೊಮೆಟೊ ಬೆಲೆ ಧಿಡೀರ್ ಏರಿಕೆಗೆ ಕಾರಣವೇನು?

ಬೆಂಗಳೂರಿನಿಂದ ದೆಹಲಿಯವರೆಗೆ ಟೊಮೆಟೊ ಬೆಲೆ ಧಿಡೀರ್ ಏರಿಕೆಗೆ ಕಾರಣವೇನು?

- Advertisement -
- Advertisement -

ಸಾಮಾನ್ಯವಾಗಿ ಪ್ರತಿನಿತ್ಯ ಬಳಸುವ ತರಕಾರಿಗಳಲ್ಲಿ ಒಂದಾದ ಟೊಮೆಟೊ ಬೆಲೆ ಧಿಡೀರ್ ಏರಿಕೆಯಾಗಿದೆ. ಕರ್ನಾಟಕದಲ್ಲಿ ಮಾತ್ರವಲ್ಲದೇ ಇಡೀ ದೇಶಾದ್ಯಂತ ಉತ್ತಮ ಗುಣಮಟ್ಟದ ಒಂದು ಕೆಜಿ ಟೊಮೆಟೊ ಬೆಲೆ 100 ರೂಗಳ ಆಸುಪಾಸಿನಲ್ಲಿದೆ. ಹಲವಾರು ಕಾರಣಗಳಿಂದ ಟೊಮೆಟೊ ಉತ್ಪಾನದೆ ಕುಸಿದ ಕಾರಣ, ಬೇಡಿಕೆ ಹೆಚ್ಚಾಗಿ ಈ ಮಟ್ಟದ ಬೆಲೆ ಏರಿಕೆ ಉದ್ಭವಿಸಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅತಿಯಾದ ಮಳೆ ಮತ್ತು ಅತಿಯಾದ ಬಿಸಿಲು

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್, ಒಡಿಶಾ, ಚತ್ತೀಸ್‌ಘಡ, ಪಶ್ಚಿಮ ಬಂಗಾಳ ರಾಜ್ಯಗಳು ಅತಿ ಹೆಚ್ಚು ಟೊಮೆಟೊ ಬೆಳೆಯುವ ರಾಜ್ಯಗಳಾಗಿವೆ. ಕೆಲ ರಾಜ್ಯಗಳಲ್ಲಿ ಏಪ್ರಿಲ್ ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಳೆಯಿಂದ ಟೊಮೆಟೊ ಬೆಳೆ ನಾಶವಾದರೆ ಕೆಲ ರಾಜ್ಯಗಳಲ್ಲಿ ತೀರಾ ಬಿಸಿಲು ಕಂಡುಬಂದು ಹಾಳಾಗಿದೆ. ಬಿಫರ್‌ಜಾಯ್ ಚಂಡಮಾರುತವೂ ಬೆಳೆ ನಾಶಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಇತ್ತೀಚೆಗೆ ಮುಂಗಾರು ಮಳೆ ಬಾರದೆ ಸಂಕಷ್ಟ ಎದುರಾಗಿದೆ. ಹಾಗಾಗಿ ಒಟ್ಟಾರೆ ಟೊಮೆಟೊ ಇಳುವರಿಯಲ್ಲಿ ಕುಸಿತ ಕಂಡಿದೆ.

ಮುಖ್ಯವಾಗಿ ಕರ್ನಾಟಕದಲ್ಲಿ ಬೆಂಗಳೂರು ಸುತ್ತಮುತ್ತಲಿನ 5 ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಟೊಮೆಟೊ ಬೆಳೆಯಲಾಗುತ್ತಿತ್ತು. ಆದರೆ ಈ ಬಾರಿ ಹಲವು ಕಾರಣಗಳಿಂದ ಉತ್ಪಾದನೆ ಅರ್ಧದಷ್ಟು ಕುಸಿತ ಕಂಡಿದೆ. ಈ ಜಿಲ್ಲೆಗಳಿಂದ ಕಳೆದ ವರ್ಷದ ಟೊಮೆಟೊ ಉತ್ಪಾದನೆ 5.45 ಲಕ್ಷ ಕ್ವಿಂಟಲ್‌ ಇದ್ದಿದ್ದು ಈ ವರ್ಷ 2.90 ಲಕ್ಷ ಕ್ವಿಂಟಲ್‌ಗೆ ಕುಸಿದಿದೆ ಎನ್ನಲಾಗಿದೆ.

ರೋಗಬಾಧೆ

ಬಿಳಿಸೊಳ್ಳೆ, ವೈರಸ್‌ ಬಾಧೆ, ಎಲೆ ರೋಗ ಟೊಮೆಟೊ ಬೆಳೆಗೆ ಬಾಧಿಸುತ್ತಿದೆ. ರೋಗಬಾಧೆ ಕಾರಣದಿಂದಾಗಿ ಕರ್ನಾಟಕ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಟೊಮೆಟೊ ಇಳುವರಿ ಕಡಿಮೆಯಾಗಿದೆ.

ಬೀನ್ಸ್‌ನತ್ತ ಮುಖ ಮಾಡಿದ ಕೆಲ ರೈತರು

ಕಳೆದ ವರ್ಷ ಬೀನ್ಸ್ ಬೆಳೆಗೆ ಉತ್ತಮ ಬೆಲೆ ಸಿಕ್ಕಿತ್ತು. ಅದೇ ಸಂದರ್ಭದಲ್ಲಿ ಟೊಮೆಟೊ ಬೆಳೆದವರು ನಷ್ಟಕ್ಕೆ ತುತ್ತಾಗಿದ್ದರು. ಹಾಗಾಗಿ ಈ ಬಾರಿ ಬಹುತೇಕರು ಟಮೊಟೊ ಬಿಟ್ಟು ಬೀನ್ಸ್‌ ಬೆಳೆಯತ್ತ ಮುಖ ಮಾಡಿದ್ದಾರೆ. ಹಾಗಾಗಿ ಸಹಜವಾಗಿ ಉತ್ಪಾದನೆ ಕಡಿಮೆಯಾಗಿದೆ.

ಸಾಗಾಣಿಕೆ ಸಮಸ್ಯೆ

ಟೊಮೆಟೊ ಬೇಗ ಹಾಳಾಗುವ ತರಕಾರಿಯಾಗಿದ್ದು, ಮಳೆಗೆ ಸಿಕ್ಕರಂತೂ ಇನ್ನೂ ಬೇಗ ಹಾಳಾಗುತ್ತದೆ. ಕೆಲ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾದ ಕಾರಣ ಸಾಗಾಣಿಕೆ ಸಮಸ್ಯೆಯಿಂದಲೂ ಸಹ ಬೆಲೆ ಏರಿಕೆ ಆಗಿದೆ.

ಸಾಕಷ್ಟು ಸಂಖ್ಯೆಯಲ್ಲಿ ಕೋಲ್ಡ್ ಸ್ಟೋರೇಜ್‌ಗಳು ಇಲ್ಲದಿರುವುದು

ಟೊಮೆಟೊ ಸೇರಿದಂತೆ ಹಲವು ತರಕಾರಿಗಳನ್ನು ಸಂಗ್ರಹಿಸಿಡುವ ದೊಡ್ಡ ದೊಡ್ಡ ಕೋಲ್ಡ್ ಸ್ಟೋರೇಜ್‌ಗಳು ಸಾಕಷ್ಟು ಸಂಖ್ಯೆಯಲ್ಲಿ ಇಲ್ಲದಿರುವುದರಿಂದ ಸಂಗ್ರಹಿಸಿ ಬೇಡಿಕೆಗೆ ತಕ್ಕಂತೆ ಪೂರೈಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಬೇಡಿಕೆ ಹೆಚ್ಚಿದಂತೆ ಬೆಲೆ ಏರಿಕೆ ಆಗಿದೆ.

ಪ್ರತಿವರ್ಷದ ವಿದ್ಯಮಾನ

ಇನ್ನು ಈ ಸಮಸ್ಯೆ ಪ್ರತಿವರ್ಷದ ವಿದ್ಯಾಮಾನವಾಗಿದ್ದು ಈ ಸಮಯದಲ್ಲಿ ಬೆಲೆ ಏರಿಕೆಯಾಗುವುದು ಸಹಜ. ಆದರೆ ಕೆಲವೇ ದಿನಗಳಲ್ಲಿ ಬೆಲೆ ಇಳಿಯಲಿದ್ದು ಸಹಜ ಸ್ಥಿತಿಗೆ ಮರಳಲಿದೆ ಎಂದು ಗ್ರಾಹರ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಬೆಲೆ ಏರಿಕೆ ತಡೆಯಲು ತಮಿಳುನಾಡು ಸರ್ಕಾರದ ಯತ್ನ

ಬಡವರು ಮತ್ತು ಮಧ್ಯಮ ವರ್ಗದ ಸಮುದಾಯಗಳ ಮೇಲಿನ ಬೆಲೆ ಏರಿಕೆ ಹೊರೆಯನ್ನು ತಗ್ಗಿಸುವ ಪ್ರಯತ್ನದಲ್ಲಿ ತಮಿಳುನಾಡು ಸರ್ಕಾರವು ರಾಜ್ಯದಾದ್ಯಂತ ಫಾರ್ಮ್ ಫ್ರೆಶ್ ಔಟ್ಲೆಟ್‌ಗಳಲ್ಲಿ (FFOs) ಟೊಮೆಟೊ ಮಾರಾಟ ಮಾಡಲು ಪ್ರಾರಂಭಿಸಿದೆ. ಟೊಮೆಟೊ ಬೆಲೆಯನ್ನು ನಿಯಂತ್ರಿಸುವುದು ಮತ್ತು ಈ ಅಗತ್ಯ ತರಕಾರಿಯನ್ನು ಸಾರ್ವಜನಿಕರಿಗೆ ಹೆಚ್ಚು ಸುಲಭವಾಗಿ ತಲುಪಿಸುವುದು ಇದರ ಉದ್ದೇಶವಾಗಿದೆ. ಎಫ್‌ಎಫ್‌ಒಗಳಲ್ಲಿ ಪ್ರತಿ ಕೆಜಿ ಟೊಮೆಟೊಗೆ 68 ರೂ.ಗೆ ಬೆಲೆ ನಿಗಧಿಪಡಿಸಲಾಗಿದೆ. 60 ರೂಗಿಂತ ಬೆಲೆ ಕಡಿಮೆ ಮಾಡಲು ಚಿಂತಸಲಾಗುತ್ತಿದೆ ಎಂದು ತಮಿಳುನಾಡಿನ ಸಹಕಾರ, ಆಹಾರ ಮತ್ತು ಗ್ರಾಹಕ ಸಂರಕ್ಷಣಾ ಇಲಾಖೆಯ ಸಚಿವ ಪೆರಿಯಕರುಪ್ಪನ್ ತಿಳಿಸಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಜಾತಿಯವನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ; ಯುವಕ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...