Homeಮುಖಪುಟಬೆಂಗಳೂರಿನಿಂದ ದೆಹಲಿಯವರೆಗೆ ಟೊಮೆಟೊ ಬೆಲೆ ಧಿಡೀರ್ ಏರಿಕೆಗೆ ಕಾರಣವೇನು?

ಬೆಂಗಳೂರಿನಿಂದ ದೆಹಲಿಯವರೆಗೆ ಟೊಮೆಟೊ ಬೆಲೆ ಧಿಡೀರ್ ಏರಿಕೆಗೆ ಕಾರಣವೇನು?

- Advertisement -
- Advertisement -

ಸಾಮಾನ್ಯವಾಗಿ ಪ್ರತಿನಿತ್ಯ ಬಳಸುವ ತರಕಾರಿಗಳಲ್ಲಿ ಒಂದಾದ ಟೊಮೆಟೊ ಬೆಲೆ ಧಿಡೀರ್ ಏರಿಕೆಯಾಗಿದೆ. ಕರ್ನಾಟಕದಲ್ಲಿ ಮಾತ್ರವಲ್ಲದೇ ಇಡೀ ದೇಶಾದ್ಯಂತ ಉತ್ತಮ ಗುಣಮಟ್ಟದ ಒಂದು ಕೆಜಿ ಟೊಮೆಟೊ ಬೆಲೆ 100 ರೂಗಳ ಆಸುಪಾಸಿನಲ್ಲಿದೆ. ಹಲವಾರು ಕಾರಣಗಳಿಂದ ಟೊಮೆಟೊ ಉತ್ಪಾನದೆ ಕುಸಿದ ಕಾರಣ, ಬೇಡಿಕೆ ಹೆಚ್ಚಾಗಿ ಈ ಮಟ್ಟದ ಬೆಲೆ ಏರಿಕೆ ಉದ್ಭವಿಸಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅತಿಯಾದ ಮಳೆ ಮತ್ತು ಅತಿಯಾದ ಬಿಸಿಲು

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್, ಒಡಿಶಾ, ಚತ್ತೀಸ್‌ಘಡ, ಪಶ್ಚಿಮ ಬಂಗಾಳ ರಾಜ್ಯಗಳು ಅತಿ ಹೆಚ್ಚು ಟೊಮೆಟೊ ಬೆಳೆಯುವ ರಾಜ್ಯಗಳಾಗಿವೆ. ಕೆಲ ರಾಜ್ಯಗಳಲ್ಲಿ ಏಪ್ರಿಲ್ ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಳೆಯಿಂದ ಟೊಮೆಟೊ ಬೆಳೆ ನಾಶವಾದರೆ ಕೆಲ ರಾಜ್ಯಗಳಲ್ಲಿ ತೀರಾ ಬಿಸಿಲು ಕಂಡುಬಂದು ಹಾಳಾಗಿದೆ. ಬಿಫರ್‌ಜಾಯ್ ಚಂಡಮಾರುತವೂ ಬೆಳೆ ನಾಶಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಇತ್ತೀಚೆಗೆ ಮುಂಗಾರು ಮಳೆ ಬಾರದೆ ಸಂಕಷ್ಟ ಎದುರಾಗಿದೆ. ಹಾಗಾಗಿ ಒಟ್ಟಾರೆ ಟೊಮೆಟೊ ಇಳುವರಿಯಲ್ಲಿ ಕುಸಿತ ಕಂಡಿದೆ.

ಮುಖ್ಯವಾಗಿ ಕರ್ನಾಟಕದಲ್ಲಿ ಬೆಂಗಳೂರು ಸುತ್ತಮುತ್ತಲಿನ 5 ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಟೊಮೆಟೊ ಬೆಳೆಯಲಾಗುತ್ತಿತ್ತು. ಆದರೆ ಈ ಬಾರಿ ಹಲವು ಕಾರಣಗಳಿಂದ ಉತ್ಪಾದನೆ ಅರ್ಧದಷ್ಟು ಕುಸಿತ ಕಂಡಿದೆ. ಈ ಜಿಲ್ಲೆಗಳಿಂದ ಕಳೆದ ವರ್ಷದ ಟೊಮೆಟೊ ಉತ್ಪಾದನೆ 5.45 ಲಕ್ಷ ಕ್ವಿಂಟಲ್‌ ಇದ್ದಿದ್ದು ಈ ವರ್ಷ 2.90 ಲಕ್ಷ ಕ್ವಿಂಟಲ್‌ಗೆ ಕುಸಿದಿದೆ ಎನ್ನಲಾಗಿದೆ.

ರೋಗಬಾಧೆ

ಬಿಳಿಸೊಳ್ಳೆ, ವೈರಸ್‌ ಬಾಧೆ, ಎಲೆ ರೋಗ ಟೊಮೆಟೊ ಬೆಳೆಗೆ ಬಾಧಿಸುತ್ತಿದೆ. ರೋಗಬಾಧೆ ಕಾರಣದಿಂದಾಗಿ ಕರ್ನಾಟಕ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಟೊಮೆಟೊ ಇಳುವರಿ ಕಡಿಮೆಯಾಗಿದೆ.

ಬೀನ್ಸ್‌ನತ್ತ ಮುಖ ಮಾಡಿದ ಕೆಲ ರೈತರು

ಕಳೆದ ವರ್ಷ ಬೀನ್ಸ್ ಬೆಳೆಗೆ ಉತ್ತಮ ಬೆಲೆ ಸಿಕ್ಕಿತ್ತು. ಅದೇ ಸಂದರ್ಭದಲ್ಲಿ ಟೊಮೆಟೊ ಬೆಳೆದವರು ನಷ್ಟಕ್ಕೆ ತುತ್ತಾಗಿದ್ದರು. ಹಾಗಾಗಿ ಈ ಬಾರಿ ಬಹುತೇಕರು ಟಮೊಟೊ ಬಿಟ್ಟು ಬೀನ್ಸ್‌ ಬೆಳೆಯತ್ತ ಮುಖ ಮಾಡಿದ್ದಾರೆ. ಹಾಗಾಗಿ ಸಹಜವಾಗಿ ಉತ್ಪಾದನೆ ಕಡಿಮೆಯಾಗಿದೆ.

ಸಾಗಾಣಿಕೆ ಸಮಸ್ಯೆ

ಟೊಮೆಟೊ ಬೇಗ ಹಾಳಾಗುವ ತರಕಾರಿಯಾಗಿದ್ದು, ಮಳೆಗೆ ಸಿಕ್ಕರಂತೂ ಇನ್ನೂ ಬೇಗ ಹಾಳಾಗುತ್ತದೆ. ಕೆಲ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾದ ಕಾರಣ ಸಾಗಾಣಿಕೆ ಸಮಸ್ಯೆಯಿಂದಲೂ ಸಹ ಬೆಲೆ ಏರಿಕೆ ಆಗಿದೆ.

ಸಾಕಷ್ಟು ಸಂಖ್ಯೆಯಲ್ಲಿ ಕೋಲ್ಡ್ ಸ್ಟೋರೇಜ್‌ಗಳು ಇಲ್ಲದಿರುವುದು

ಟೊಮೆಟೊ ಸೇರಿದಂತೆ ಹಲವು ತರಕಾರಿಗಳನ್ನು ಸಂಗ್ರಹಿಸಿಡುವ ದೊಡ್ಡ ದೊಡ್ಡ ಕೋಲ್ಡ್ ಸ್ಟೋರೇಜ್‌ಗಳು ಸಾಕಷ್ಟು ಸಂಖ್ಯೆಯಲ್ಲಿ ಇಲ್ಲದಿರುವುದರಿಂದ ಸಂಗ್ರಹಿಸಿ ಬೇಡಿಕೆಗೆ ತಕ್ಕಂತೆ ಪೂರೈಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಬೇಡಿಕೆ ಹೆಚ್ಚಿದಂತೆ ಬೆಲೆ ಏರಿಕೆ ಆಗಿದೆ.

ಪ್ರತಿವರ್ಷದ ವಿದ್ಯಮಾನ

ಇನ್ನು ಈ ಸಮಸ್ಯೆ ಪ್ರತಿವರ್ಷದ ವಿದ್ಯಾಮಾನವಾಗಿದ್ದು ಈ ಸಮಯದಲ್ಲಿ ಬೆಲೆ ಏರಿಕೆಯಾಗುವುದು ಸಹಜ. ಆದರೆ ಕೆಲವೇ ದಿನಗಳಲ್ಲಿ ಬೆಲೆ ಇಳಿಯಲಿದ್ದು ಸಹಜ ಸ್ಥಿತಿಗೆ ಮರಳಲಿದೆ ಎಂದು ಗ್ರಾಹರ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಬೆಲೆ ಏರಿಕೆ ತಡೆಯಲು ತಮಿಳುನಾಡು ಸರ್ಕಾರದ ಯತ್ನ

ಬಡವರು ಮತ್ತು ಮಧ್ಯಮ ವರ್ಗದ ಸಮುದಾಯಗಳ ಮೇಲಿನ ಬೆಲೆ ಏರಿಕೆ ಹೊರೆಯನ್ನು ತಗ್ಗಿಸುವ ಪ್ರಯತ್ನದಲ್ಲಿ ತಮಿಳುನಾಡು ಸರ್ಕಾರವು ರಾಜ್ಯದಾದ್ಯಂತ ಫಾರ್ಮ್ ಫ್ರೆಶ್ ಔಟ್ಲೆಟ್‌ಗಳಲ್ಲಿ (FFOs) ಟೊಮೆಟೊ ಮಾರಾಟ ಮಾಡಲು ಪ್ರಾರಂಭಿಸಿದೆ. ಟೊಮೆಟೊ ಬೆಲೆಯನ್ನು ನಿಯಂತ್ರಿಸುವುದು ಮತ್ತು ಈ ಅಗತ್ಯ ತರಕಾರಿಯನ್ನು ಸಾರ್ವಜನಿಕರಿಗೆ ಹೆಚ್ಚು ಸುಲಭವಾಗಿ ತಲುಪಿಸುವುದು ಇದರ ಉದ್ದೇಶವಾಗಿದೆ. ಎಫ್‌ಎಫ್‌ಒಗಳಲ್ಲಿ ಪ್ರತಿ ಕೆಜಿ ಟೊಮೆಟೊಗೆ 68 ರೂ.ಗೆ ಬೆಲೆ ನಿಗಧಿಪಡಿಸಲಾಗಿದೆ. 60 ರೂಗಿಂತ ಬೆಲೆ ಕಡಿಮೆ ಮಾಡಲು ಚಿಂತಸಲಾಗುತ್ತಿದೆ ಎಂದು ತಮಿಳುನಾಡಿನ ಸಹಕಾರ, ಆಹಾರ ಮತ್ತು ಗ್ರಾಹಕ ಸಂರಕ್ಷಣಾ ಇಲಾಖೆಯ ಸಚಿವ ಪೆರಿಯಕರುಪ್ಪನ್ ತಿಳಿಸಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಜಾತಿಯವನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ; ಯುವಕ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...