Homeಕರ್ನಾಟಕಹಠಾತ್ ಜನಸಂಖ್ಯೆ ಏರಲು ಕಾರಣವೇನು? - ಯಾಹೂ

ಹಠಾತ್ ಜನಸಂಖ್ಯೆ ಏರಲು ಕಾರಣವೇನು? – ಯಾಹೂ

- Advertisement -
- Advertisement -

ಭಾರತ ತನ್ನೆಲ್ಲಾ ಬಗೆಹರಿಸಲಾಗದ ಸಮಸ್ಯೆಗಳ ನಡುವೆ ತೊಳಲಾಡುತ್ತಲೇ ಜನಸಂಖ್ಯೆಯಲ್ಲಿ ಜಗತ್ತನ್ನೇ ಮೀರಿಸಿದೆಯಂತಲ್ಲಾ. ಇಷ್ಟೆಲ್ಲಾ ವಿಚ್ಛೇದನಗಳು, ಸಂತಾನಹರಣ ಸಾಮಗ್ರಿಗಳು, ಸಂತಾನ ನಿಯಂತ್ರಣ ನಿಯಮಗಳಿದ್ದರೂ, ಚೀನಾ ಎಂಬ ಜೀವ ಸೃಷ್ಟಿ ಕಾರ್ಖಾನೆಯನ್ನು ಮೀರಿಸಿ ಮುನ್ನಡೆದಿರುವುದು ಭಾರತದ ಬಡವರ ದಿಗ್ವಿಜಯವೇ ಸರಿ. ಇದ್ದಕ್ಕಿದ್ದಂತೆ ಆಕಾಶದಿಂದ ಉದುರಿದಂತೆ ಮಕ್ಕಳು ಹೆಚ್ಚಾಗಲು ಕಾರಣ ಕೊರೊನಾ ಸಮಯದಲ್ಲಿ ಹೊರಹೋಗದಂತೆ ತಿಂಗಳುಗಟ್ಟಲೆ ಸರಕಾರ ಜನರನ್ನ ಮನೆಯಲ್ಲಿ ಕೂಡಿಹಾಕಿದ್ದೇ ಕಾರಣವೆಂದು ಹಳ್ಳಿಗರ ವಾದವಾಗಿದೆಯಲ್ಲಾ. ಕೆಲಸ ಇರಲಿ ಇಲ್ಲದಿರಲಿ ದಿನವಿಡಿ ನಾಯಿಯಂತೆ ಅಲೆದು ಬರುತ್ತಿದ್ದ ಗಂಡಸರು ಏನೋ ಕಡಿದು ಕಟ್ಟೆಹಾಕಿ ಬಂದವರಂತೆ ಮಲಗಿಬಿಡುತ್ತಿದ್ದರು. ಆದರೆ ಕೊರೊನಾ ಕಾಲದಲ್ಲಿ ಮನೆಯಲ್ಲೇ ಬಂದಿಯಾದ ಅವರಿಗೆ ಹೆಂಡತಿ ಪ್ರೀತಿಯಿಂದ ಗರ್ಮಿ ಪದಾರ್ಥಗಳನ್ನ ಹುರಿದು ಕರಿದು ಕೊಟ್ಟ ಕಾರಣಕ್ಕೆ ಗರ್ಭ ಕುದುರಿತೆಂದು ಹಳ್ಳಿಗರು ಹಾಸ್ಯ ಮಾಡುತ್ತಿದ್ದಾರಲ್ಲಾ. ಈ ಸಮಯದಲ್ಲಿ ನಡೆದುಹೋದ ಇನ್ನೆಂದು ಅನಾಹುತ ಯಾರ ಗಮನಕ್ಕೆ ಬಂದಿಲ್ಲ. ಅದೇನೆಂದರೆ ಮನೆಯಲ್ಲಿದ್ದ ಗೃಹಿಣಿಯರು ಮೂರು ಹೊತ್ತು ಪ್ರಸಾರವಾಗುವ ಮಂಗಳಗೌರಿ ಮದುವೆ, ದೊರೆಸಾನಿ, ನಾಗಿಣಿ, ಕನ್ನಡತಿ, ಗೀತಾ, ಗಿಣಿರಾಮ ಧಾರಾವಾಹಿಗಳನ್ನ ಗಂಡಂದಿರೂ ನೋಡುವಂತೆ ಮಾಡಿದರಂತಲ್ಲಾ, ಥೂತ್ತೇರಿ.

*****
ಆರೆಸ್ಸೆಸಿಗರು ಮೀಸಲಾತಿ ವಿರೋಧಿಗಳು. ಅವರ ಮನುಧರ್ಮಶಾಸ್ತ್ರದಲ್ಲಿ ಮೀಸಲಾತಿಯಿಲ್ಲವಂತಲ್ಲಾ. ಅವರ ಪ್ರಕಾರ ಶ್ರೇಣೀಕೃತ ಸಮಾಜದ ಜೀವಿಗಳು ತಮ್ಮತಮ್ಮ ಆವರಣದಲ್ಲಿ ನಿಂತು ಅಲ್ಲಿಯೇ ಅಭಿವೃದ್ಧಿ ಕಾಣಬೇಕು. ಅಂದರೆ ದೋಭಿ ತನಗೆ ಧರ್ಮ ನಿಗದಿಪಡಿಸಿದ ಕೆಲಸದಲ್ಲಿ ಭಗವಂತನನ್ನ ಕಾಣಬೇಕು. ಇನ್ನ ಜಲಗಾರ, ಮಡಿವಾಳ, ಕ್ಷೌರಿಕ, ಕುರಿಗಾಯಿ, ದನಗಾಯಿ ಹೀಗೆ ಸಕಲೆಂಟು ಜಾತಿಗಳು ತಮ್ಮತಮ್ಮ ಆವರಣದಲ್ಲಿ ಧೃಢವಾಗಿ ನಿಂತು ತಮ್ಮ ಕರ್ತವ್ಯ ಮಾಡಬೇಕು. ಇದು ನಮ್ಮ ಧರ್ಮದ ನಿಯಮ. ಇದನ್ನ ಒಪ್ಪಿದ ನಮ್ಮ ಕನ್ನಡದ ಶ್ರೇಷ್ಠ ಕತೆಗಾರ ಮಾಸ್ತಿಯವರೂ ಇದನ್ನು ಪ್ರತಿಪಾದಿಸಿದರು. ಇನ್ನು ಆ ತುದಿಯಲ್ಲಿ ನ್ಯಾಯಾಂಗದ ಉನ್ನತ ಸ್ಥಾನ ಅಲಂಕರಿಸಿ ಬಂದ ರಾಮಾಜೋಯಿಸರು ಕೂಡ ಇದನ್ನೇ ಪ್ರತಿವಾದಿಸಿದ್ದಲ್ಲದೆ, ಮೀಸಲಾತಿ ಕೊಡಕೂಡದೆಂಬ ಅರ್ಜಿಯನ್ನು ಸುಪ್ರೀಂಕೊರ್ಟಿಗೆ ಕೊಟ್ಟಿದ್ದರು. ಇವರೇ ಜಡ್ಜ್ ಆಗಿ ಅಂತಹ ಅರ್ಜಿ ಬಂದಿದ್ದರೆ, ಅನಾಮತ್ತು ಅಂಗೀಕರಿಸಿ ಆಜ್ಞೆ ಮಾಡುತ್ತಿದ್ದರೇನೋ! ಆದರೆ ಸಾಮಾಜಿಕ ನ್ಯಾಯದ ಪ್ರತಿಪಾದಕರಾಗಿದ್ದ ಜಡ್ಜ್ ಸಾಹೇಬರು ಈ ರಾಮಾಜೋಯಿಸರ ಅರ್ಜಿಯನ್ನ ನೋಡಿ ಹುಸಿನಕ್ಕು ತಿರಸ್ಕರಿಸಿದರು. ನಾನೂ ಒಬ್ಬ ಜಡ್ಜ್ ಆಗಿದ್ದು ನನ್ನ ಆರ್ಜಿಯನ್ನ ನನಗಿಂತ ಕಿರಿಯರಿಂದ ತಿರಸ್ಕರಿಸಲ್ಪಟ್ಟಿತಲ್ಲಾ ಎಂದು ನೊಂದುಕೊಂಡರಂತೆ ರಾಮಾಜೋಯಿಸರು. ಈಗ ಮೇಲ್ಜಾತಿಗಳಿಗೆ ಅದರಲ್ಲಿ ಬ್ರಾಹ್ಮಣರಿಗೆ ಉಪಯೋಗವಾಗುವ ಹತ್ತು ಪರಸೆಂಟ್ ಮೀಸಲಾತಿ ತಂದಿರುವುದು ಚಡ್ಡಿಗಳಿಗೆ ತಡೆಯಲಾರದ ಸಂತೋಷವಾಗಿದೆಯಂತಲ್ಲಾ, ಥೂತ್ತೇರಿ.
******

ಹತ್ತು ಪರಸೆಂಟ್ ಮೀಸಲಾತಿ ಹೇಗೆ ಸಂವಿಧಾನದ ಆಶಯಕ್ಕೆ ಧಕ್ಕೆಯಾಗಿದೆ ಎಂಬ ದೇವನೂರರ ವಿವರಣೆಯಿಂದ ಆರೆಸ್ಸಿಸಿಗರ ಬಾಲಕ್ಕೆ ಬೆಂಕಿ ಬಿದ್ದಿದೆಯಂತಲ್ಲಾ. ಅವುಗಳು ಹತ್ತು ಪರಸೆಂಟಿನ ಫಲಾನುಭವಿಗಳು ಯಾರು ಎಂಬ ಬಗ್ಗೆ ವಿವರ ಕೊಡಲಾಗಿ ಈ ವಿವರವೂ ಸಮತೂಕದಲ್ಲಿ ಸಮಂಜಸವಾಗಿದೆ ಎಂದು ಕವಿ ಚಂದ್ರಶೇಖರ ತಾಳ್ಯ ವಕಾಲತ್ತು ವಹಿಸಿದ್ದಾರಲ್ಲಾ. ಕವಿ ಮನಸ್ಸು ಆರೋಗ್ಯವಾಗಿರಬೇಕು. ಯಾವುದೇ ಕೆಲಸ ಅಥವಾ ಮಾತುಕತೆಯಲ್ಲಿ ತಮ್ಮ ಅಜೆಂಡಾಗಳ ಸಂಚನ್ನೇ ಹೂಡುವ ಪುರೋಹಿತರನ್ನು ಸರಿಯಾಗಿ ಅರಿಯಬೇಕು. ಮೀಸಲಾತಿ ವಿರೋಧಿಗಳು ಹತ್ತು ಪರಸೆಂಟನ್ನ ಪ್ರತಿವಾದಿಸಿ ಸಂಭ್ರಮಿಸುವುದರ ಹಿಂದಿನ ಹಿಕಮತ್ತು ಅರಿವಾಗಬೇಕು. ಈ ನಮ್ಮ ದೇಶದಲ್ಲಿ ಅಸಾಧ್ಯವಾದ ಯಾವುದೇ ಅಕ್ರಮವಿಲ್ಲ. ಆದ್ದರಿಂದ ಹತ್ತು ಪರಸೆಂಟು ಯಾರ ಮೀಸಲಾಗುತ್ತದೆಂದು ಅರಿಯಬೇಕಿತ್ತು. ಇಲ್ಲಿ ಜಾತಿ ಕಾರಣಕ್ಕೆ ಬಡವರಾದವರು ದರಿದ್ರರಾದರು ಮತ್ತು ಇಂದು ಕೂಡ ಅಸ್ಪೃಶ್ಯತೆಗೆ ತುತ್ತಾದವರು. ಇದು ಕವಿಗೆ ಕಾಣಬೇಕಿತ್ತು. ಸಾಮಾಜಿಕವಾಗಿ ಮೇಲ್ವರ್ಗದಲ್ಲಿದ್ದು ಬಡವನಾದವನ ಬಡತನ ಎಂತಹದ್ದು ಎಂಬುದನ್ನ ಗ್ರಹಿಸಬೇಕಿತ್ತು. ಸಾವಿರಾರು ವರ್ಷದಿಂದ ಬಡ ಬ್ರಾಹ್ಮಣ ಎಂಬ ಹಣೆಪಟ್ಟಿ ಅಂಟಿಸಿಕೊಂಡು ನಿಜವಾದ ಬಡವವರಿಗೆ ಬಳಸಲು ಪದವೇ ಇಲ್ಲದಂತೆ ಮಾಡಿರುವವರ ಸಂಚು ತಾಳ್ಯರಿಗೆ ತಿಳಿಯಬೇಕಿತ್ತಲ್ಲಾ, ಥೂತ್ತೇರಿ.
*******

ನಮ್ಮ ದೇಶದ ಲಾಂಛನವಾದ ಚತುರ್ಮುಖ ಸಿಂಹ ಈವರೆಗೆ ಧೀರಗಂಭೀರವಾಗಿ ದೇಶದ ಬಗ್ಗೆ ಯೋಚಿಸುವಂತೆ ಕಾಣುತಿತ್ತು. ಇದನ್ನ ಸಹಿಸಲಾಗದ ಮೋದಿಪಡೆ ಸಿಂಹ ವೈರಿ ಕಂಡಂತೆ ಘರ್ಜಿಸುವ ಮುಖಭಾವ ತಯಾರಿಸಿ ಹೊಸ ಪಾರ್ಲಿಮೆಂಟಿನ ಮೇಲೆ ಪ್ರತಿಷ್ಠಾಪಿದವಂತಲ್ಲಾ. ಈ ಮಹಾಕಾರ್ಯಕ್ಕೆ ವಿರೋಧ ಪಕ್ಷದ ಯಾರನ್ನೂ ಕರೆಯದೆ ಪ್ರಧಾನಿ ಸ್ವತಃ ತಾವೆ ಉದ್ಘಾಟಿಸಿ, ಕೆಳಗಿಳಿದು ಯಾವುದೋ ಪುರೋಹಿತ ಕೊಟ್ಟ ಕಾರ್ಯಕ್ರಮ ಹುಡುಕುತ್ತ ಹೋದರಂತಲ್ಲಾ. ಬಿ.ಜೆ.ಪಿಗಳು ಸಿಂಹಕ್ಕೆ ಸಿಟ್ಟುಬರಿಸುವ ಮುಖ ಮಾಡಿದ್ದು ಹೊಸದೇನಲ್ಲ. ಲಕ್ಷ್ಮಣ ಸೀತೆ ಮತ್ತು ಆಂಜನೇಯರೊಡಗೂಡಿ ಪುರುಷೋತ್ತಮನಂತೆ ನಿಂತಿದ್ದ ರಾಮನನ್ನ ಆ ಪಟದಿಂದ ಬೇರ್ಪಡಿಸಿ ಬಿಲ್ಲು ಬಾಣಗಳೊಡನೆ ಯುದ್ಧಕ್ಕೆ ನಿಂತ ಭಂಗಿ ರೂಪಿಸಿ ಸರ್ಕಲ್ಲುಗಳಲ್ಲಿ ನಿಲ್ಲಿಸಿ ಆಗಲೇ ಎರಡು ದಶಕವಾಯಿತು. ಅದು ಅಡ್ವಾನಿಯ ಕಾಲ. ಈ ಮೋದಿ ಕಾಲದಲ್ಲಿ ಕರ್ತವ್ಯ ಪ್ರಜ್ಞೆ, ಭಕ್ತಿ ವಿಧೇಯತೆ ಮತ್ತು ಅಸಾಮಾನ್ಯ ಸಂಗೀತದ ಪ್ರತೀಕವಾಗಿದ್ದ ಆಂಜನೇಯನನ್ನ ಶ್ರೀರಾಮನ ಪದತಲದಿಂದೆಳೆದು ವಾಘಾ ಗಡಿಯ ಕೆರಳಿದ ಸೈನಿಕನನ್ನಾಗಿ ಮಾಡಿ ದಶಕವೇ ಆಯ್ತು. ಈಗ ಎಲ್ಲಿ ನೋಡಿದರೂ ಕೆರಳಿದ ಒಂದು ರೀತಿ ನರಸಿಂಹನಂತೆ ಕಾಣುವ ಆಂಜನೇಯನ ಚಿತ್ರವನ್ನ ನೋಡುತ್ತಿದ್ದೇವೆ. ಬರಲಿರುವ ದಿನಗಳಲ್ಲಿ ನಮ್ಮ ಪುರಾಣದ ವ್ಯಕ್ತಿಗಳು ಈ ಬಿ.ಜೆ.ಪಿಗಳ ಕೈಗೆ ಸಿಕ್ಕಿ ಇನ್ನ ಯಾವ್ಯಾವ ಆಯುಧ ಹಿಡಿದುಕೊಂಡು ಕೆಕ್ಕರಿಸಿ ನೋಡುತ್ತವೋ ಏನೋ ಎಂಬಂತಾಗಿದೆಯಲ್ಲಾ, ಥೂತ್ತೇರಿ.
*******

ಬಿ.ಜೆ.ಪಿಗಳು ಆಂಜನೇಯನಿಗೇ ಅಂಟಿಕೊಳ್ಳಲು ಪ್ರಬಲ ಕಾರಣವಿದೆ. ಲಂಕಾಪಟ್ಟಣದ ಅಶೋಕವನದಲ್ಲಿ ಶೋಕಸಾಗರದಲ್ಲಿ ಕುಳಿತಿರುವ ಸೀತಾದೇವಿಯನ್ನ ಕಂಡು ’ರಾಮ ಬಂದು ಕರೆದುಕೊಂಡು ಹೋಗುತ್ತಾನೆಂದು ಧೈರ್ಯ ಹೇಳಿ ಬಾ’ ಎಂದು ಶ್ರೀರಾಮಚಂದ್ರ ಆಂಜನೇಯನನ್ನು ಕಳಿಸಿದನಂತೆ. ಆಗ ಆಂಜನೇಯ ಸೀತೆ ನನ್ನನ್ನು ನೋಡಿ ನಂಬದೇಹೋದರೆ ಏನುಮಾಡಬೇಕೆಂದು ಕೇಳಿದಾಗ ರಾಮ ಮುದ್ರೆಯುಂಗುರ ಕೊಟ್ಟು ಕಳಿಸಿದನಂತೆ. ಅದನ್ನು ತೆಗೆದುಕೊಂಡು ಹಾರಿಹೋದ ಹನುಮ ರಾಮ ಹೇಳಿದ ಕೆಲಸ ಮಾಡುವುದರ ಜೊತೆಗೆ ಲಂಕೆಗೆ ಬೆಂಕಿಯಿಟ್ಟು ಬಂದನಂತೆ. ರಾವಣನ ಕಡೆಯವರೇನೋ ಆಂಜನೇಯನ ಬಾಲಕ್ಕೆ ಬೆಂಕಿಹಚ್ಚಿದರು ಸರಿ. ಆದರೆ ಆಂಜನೇಯ ಜವಾಬ್ದಾರಿಯುತನಾಗಿದ್ದರೆ ಬೆಂಕಿ ನಂದಿಸಿಕೊಂಡು ಬರಬೇಕಿತ್ತು. ಅದು ಬಿಟ್ಟು ಲಂಕೆಗೇ ಬೇಂಕಿ ಹಚ್ಚಿದ. ಅಲ್ಲಿ ಮಕ್ಕಳಿದ್ದರು, ಮುದುಕರಿದ್ದರು, ಗರ್ಭಿಣಿಯರಿದ್ದರು. ಊರುಬಿಟ್ಟು ಓಡಲಾರದ ಅಶಕ್ತ ಅಸಹಾಯಕರಿದ್ದರು. ಇವರಿಗೂ ರಾವಣ ಹೊತ್ತು ತಂದ ಸೀತೆಗೂ ಯಾವ ಸಂಬಂಧವೂ ಇರಲಿಲ್ಲ. ಅದೇನಾದರಾಗಲಿ ಯಾವುದೇ ವಿವೇಚನೆಯಿಲ್ಲದೆ ತಾವು ಹೇಳಿದ ಕೇರಿಗೆ ಬೆಂಕಿ ಹಚ್ಚುವ ವ್ಯಕ್ತಿಗಳು ಬಿ.ಜೆ.ಪಿಗಳಿಗೆ ಸಿಕ್ಕಿವೆ. ಈ ವಾನರ ಸೇನೆಗೆ ಒಬ್ಬ ದೈವ ಬೇಕಿತ್ತು. ಅದಕ್ಕಾಗಿ ಆಂಜನೇಯನೇ ಸೂಕ್ತವೆಂದು ಮುಗ್ಧ ಆಂಜನೇಯನಿಗೆ ವ್ಯಗ್ರರೂಪಕೊಟ್ಟು ಮೆರೆಸುತ್ತಿದ್ದಾರಂತಲ್ಲಾ, ಥೂತ್ತೇರಿ.

– ಯಾಹೂ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೊಲೆ ಮಾಡ್ತಿರೋದು SDPI,PFI . ಬಲಿ ಆಗ್ತಿರೋದು ಹಿಂದೂಗಳು ,ಆದರೂ ಇದಕ್ಕೆ ಹೊಣೆ ಹಿಂದೂ ಸಂಘಟನೆ , ಈ ಪತ್ರಿಕೆ ಸಂಪಾದಕ ಹೊಟ್ಟೆಗೆ ಎಂದೂ ಊಟ ತಿನ್ನಲ್ಲಾ ಅನಿಸುತ್ತೇ ಹಂದಿಗಳ ಲದ್ದಿ ಬಿಟ್ಟು ,ತೂ …..

LEAVE A REPLY

Please enter your comment!
Please enter your name here

- Advertisment -

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ...

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು...

ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ...

‘ಆಕೆಯ ಜೀವ ಮುಖ್ಯ’: ಅಮೆರಿಕದ ಪೊಲೀಸ್ ಅಧಿಕಾರಿ ವೇಗದ ಚಾಲನೆಯಿಂದ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿಯ ಕುಟುಂಬಕ್ಕೆ 260 ಕೋಟಿ ಪರಿಹಾರ

2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಚಾಲನೆ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಡಿಕ್ಕಿ ಹೊಡೆದ ಕಾರಣ ಸಾವನ್ನಪ್ಪಿದ ಭಾರತದ 23 ವರ್ಷದ ಪದವೀಧರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಸಿಯಾಟಲ್ ನಗರವು...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ; ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ

ಲೋಕಸಭೆ ಅಧಿವೇಶನದಲ್ಲಿ ಗುರುವಾರ (ಫೆ.12) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಲುವಳಿ ಸೂಚನೆ ಸಲ್ಲಿಸಿದ್ದು, ಅವರ ಸಂಸತ್ತಿನ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿದೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್...

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಪುತ್ರ ಶಿವಂ ಮಿಶ್ರಾ ಬಂಧನ

2026 ಫೆಬ್ರವರಿ 8, ಭಾನುವಾರದಂದು ವಿಐಪಿ ರಸ್ತೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದ ಹೈ ಪ್ರೊಫೈಲ್ ಲ್ಯಾಂಬೋರ್ಗಿನಿ ಅಪಘಾತಕ್ಕೆ ಸಂಬಂಧಿಸಿದಂತೆ ಸ್ಥಳೀಯ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು...

ಫೆಬ್ರವರಿ 12 ರಂದು ಭಾರತ್ ಬಂದ್| ಹಲವು ರಾಜ್ಯಗಳಲ್ಲಿ ಬಂದ್ ಗೆ ಪೂರ್ಣ ಬೆಂಬಲ: ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಫೆಬ್ರವರಿ 12, ಗುರುವಾರ ಸಾರ್ವತ್ರಿಕ ಮುಷ್ಕರಕ್ಕೆ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಕರೆ ನೀಡಿದೆ. ಕರ್ನಾಟಕದಲ್ಲಿಯೂ ಕಾರ್ಮಿಕ ಸಂಘಟನೆಗಳು ಮುಷ್ಕರವನ್ನು ನಡೆಸುತ್ತಿವೆ. ಕೇಂದ್ರ ಸರ್ಕಾರದ 4...

ವಿದ್ಯಾರ್ಥಿ ದಂಗೆ ಬಳಿಕ ಬಾಂಗ್ಲಾದಲ್ಲಿ ಇಂದು ಮೊದಲ ಮತದಾನ

ಬಾಂಗ್ಲಾದೇಶದಲ್ಲಿ ಇಂದು (ಫೆ. 12, 2026) ಸಾರ್ವತ್ರಿಕ ಚುನಾವಣೆಯ ಮತದಾನ ನಡೆಯುತ್ತಿದೆ. ಶೇಖ್ ಹಸೀನಾ ಅವರ ಪದಚ್ಯುತಿಯ ನಂತರ ನಡೆಯುತ್ತಿರುವ ಮೊದಲ ಪ್ರಮುಖ ಚುನಾವಣೆ ಇದಾಗಿದೆ. ಸ್ಥಳೀಯ ಕಾಲಮಾನ ಬೆಳಿಗ್ಗೆ 7:30ಕ್ಕೆ ಆರಂಭವಾದ ಮತದಾನವು...

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...