Homeಕರ್ನಾಟಕಹಠಾತ್ ಜನಸಂಖ್ಯೆ ಏರಲು ಕಾರಣವೇನು? - ಯಾಹೂ

ಹಠಾತ್ ಜನಸಂಖ್ಯೆ ಏರಲು ಕಾರಣವೇನು? – ಯಾಹೂ

- Advertisement -
- Advertisement -

ಭಾರತ ತನ್ನೆಲ್ಲಾ ಬಗೆಹರಿಸಲಾಗದ ಸಮಸ್ಯೆಗಳ ನಡುವೆ ತೊಳಲಾಡುತ್ತಲೇ ಜನಸಂಖ್ಯೆಯಲ್ಲಿ ಜಗತ್ತನ್ನೇ ಮೀರಿಸಿದೆಯಂತಲ್ಲಾ. ಇಷ್ಟೆಲ್ಲಾ ವಿಚ್ಛೇದನಗಳು, ಸಂತಾನಹರಣ ಸಾಮಗ್ರಿಗಳು, ಸಂತಾನ ನಿಯಂತ್ರಣ ನಿಯಮಗಳಿದ್ದರೂ, ಚೀನಾ ಎಂಬ ಜೀವ ಸೃಷ್ಟಿ ಕಾರ್ಖಾನೆಯನ್ನು ಮೀರಿಸಿ ಮುನ್ನಡೆದಿರುವುದು ಭಾರತದ ಬಡವರ ದಿಗ್ವಿಜಯವೇ ಸರಿ. ಇದ್ದಕ್ಕಿದ್ದಂತೆ ಆಕಾಶದಿಂದ ಉದುರಿದಂತೆ ಮಕ್ಕಳು ಹೆಚ್ಚಾಗಲು ಕಾರಣ ಕೊರೊನಾ ಸಮಯದಲ್ಲಿ ಹೊರಹೋಗದಂತೆ ತಿಂಗಳುಗಟ್ಟಲೆ ಸರಕಾರ ಜನರನ್ನ ಮನೆಯಲ್ಲಿ ಕೂಡಿಹಾಕಿದ್ದೇ ಕಾರಣವೆಂದು ಹಳ್ಳಿಗರ ವಾದವಾಗಿದೆಯಲ್ಲಾ. ಕೆಲಸ ಇರಲಿ ಇಲ್ಲದಿರಲಿ ದಿನವಿಡಿ ನಾಯಿಯಂತೆ ಅಲೆದು ಬರುತ್ತಿದ್ದ ಗಂಡಸರು ಏನೋ ಕಡಿದು ಕಟ್ಟೆಹಾಕಿ ಬಂದವರಂತೆ ಮಲಗಿಬಿಡುತ್ತಿದ್ದರು. ಆದರೆ ಕೊರೊನಾ ಕಾಲದಲ್ಲಿ ಮನೆಯಲ್ಲೇ ಬಂದಿಯಾದ ಅವರಿಗೆ ಹೆಂಡತಿ ಪ್ರೀತಿಯಿಂದ ಗರ್ಮಿ ಪದಾರ್ಥಗಳನ್ನ ಹುರಿದು ಕರಿದು ಕೊಟ್ಟ ಕಾರಣಕ್ಕೆ ಗರ್ಭ ಕುದುರಿತೆಂದು ಹಳ್ಳಿಗರು ಹಾಸ್ಯ ಮಾಡುತ್ತಿದ್ದಾರಲ್ಲಾ. ಈ ಸಮಯದಲ್ಲಿ ನಡೆದುಹೋದ ಇನ್ನೆಂದು ಅನಾಹುತ ಯಾರ ಗಮನಕ್ಕೆ ಬಂದಿಲ್ಲ. ಅದೇನೆಂದರೆ ಮನೆಯಲ್ಲಿದ್ದ ಗೃಹಿಣಿಯರು ಮೂರು ಹೊತ್ತು ಪ್ರಸಾರವಾಗುವ ಮಂಗಳಗೌರಿ ಮದುವೆ, ದೊರೆಸಾನಿ, ನಾಗಿಣಿ, ಕನ್ನಡತಿ, ಗೀತಾ, ಗಿಣಿರಾಮ ಧಾರಾವಾಹಿಗಳನ್ನ ಗಂಡಂದಿರೂ ನೋಡುವಂತೆ ಮಾಡಿದರಂತಲ್ಲಾ, ಥೂತ್ತೇರಿ.

*****
ಆರೆಸ್ಸೆಸಿಗರು ಮೀಸಲಾತಿ ವಿರೋಧಿಗಳು. ಅವರ ಮನುಧರ್ಮಶಾಸ್ತ್ರದಲ್ಲಿ ಮೀಸಲಾತಿಯಿಲ್ಲವಂತಲ್ಲಾ. ಅವರ ಪ್ರಕಾರ ಶ್ರೇಣೀಕೃತ ಸಮಾಜದ ಜೀವಿಗಳು ತಮ್ಮತಮ್ಮ ಆವರಣದಲ್ಲಿ ನಿಂತು ಅಲ್ಲಿಯೇ ಅಭಿವೃದ್ಧಿ ಕಾಣಬೇಕು. ಅಂದರೆ ದೋಭಿ ತನಗೆ ಧರ್ಮ ನಿಗದಿಪಡಿಸಿದ ಕೆಲಸದಲ್ಲಿ ಭಗವಂತನನ್ನ ಕಾಣಬೇಕು. ಇನ್ನ ಜಲಗಾರ, ಮಡಿವಾಳ, ಕ್ಷೌರಿಕ, ಕುರಿಗಾಯಿ, ದನಗಾಯಿ ಹೀಗೆ ಸಕಲೆಂಟು ಜಾತಿಗಳು ತಮ್ಮತಮ್ಮ ಆವರಣದಲ್ಲಿ ಧೃಢವಾಗಿ ನಿಂತು ತಮ್ಮ ಕರ್ತವ್ಯ ಮಾಡಬೇಕು. ಇದು ನಮ್ಮ ಧರ್ಮದ ನಿಯಮ. ಇದನ್ನ ಒಪ್ಪಿದ ನಮ್ಮ ಕನ್ನಡದ ಶ್ರೇಷ್ಠ ಕತೆಗಾರ ಮಾಸ್ತಿಯವರೂ ಇದನ್ನು ಪ್ರತಿಪಾದಿಸಿದರು. ಇನ್ನು ಆ ತುದಿಯಲ್ಲಿ ನ್ಯಾಯಾಂಗದ ಉನ್ನತ ಸ್ಥಾನ ಅಲಂಕರಿಸಿ ಬಂದ ರಾಮಾಜೋಯಿಸರು ಕೂಡ ಇದನ್ನೇ ಪ್ರತಿವಾದಿಸಿದ್ದಲ್ಲದೆ, ಮೀಸಲಾತಿ ಕೊಡಕೂಡದೆಂಬ ಅರ್ಜಿಯನ್ನು ಸುಪ್ರೀಂಕೊರ್ಟಿಗೆ ಕೊಟ್ಟಿದ್ದರು. ಇವರೇ ಜಡ್ಜ್ ಆಗಿ ಅಂತಹ ಅರ್ಜಿ ಬಂದಿದ್ದರೆ, ಅನಾಮತ್ತು ಅಂಗೀಕರಿಸಿ ಆಜ್ಞೆ ಮಾಡುತ್ತಿದ್ದರೇನೋ! ಆದರೆ ಸಾಮಾಜಿಕ ನ್ಯಾಯದ ಪ್ರತಿಪಾದಕರಾಗಿದ್ದ ಜಡ್ಜ್ ಸಾಹೇಬರು ಈ ರಾಮಾಜೋಯಿಸರ ಅರ್ಜಿಯನ್ನ ನೋಡಿ ಹುಸಿನಕ್ಕು ತಿರಸ್ಕರಿಸಿದರು. ನಾನೂ ಒಬ್ಬ ಜಡ್ಜ್ ಆಗಿದ್ದು ನನ್ನ ಆರ್ಜಿಯನ್ನ ನನಗಿಂತ ಕಿರಿಯರಿಂದ ತಿರಸ್ಕರಿಸಲ್ಪಟ್ಟಿತಲ್ಲಾ ಎಂದು ನೊಂದುಕೊಂಡರಂತೆ ರಾಮಾಜೋಯಿಸರು. ಈಗ ಮೇಲ್ಜಾತಿಗಳಿಗೆ ಅದರಲ್ಲಿ ಬ್ರಾಹ್ಮಣರಿಗೆ ಉಪಯೋಗವಾಗುವ ಹತ್ತು ಪರಸೆಂಟ್ ಮೀಸಲಾತಿ ತಂದಿರುವುದು ಚಡ್ಡಿಗಳಿಗೆ ತಡೆಯಲಾರದ ಸಂತೋಷವಾಗಿದೆಯಂತಲ್ಲಾ, ಥೂತ್ತೇರಿ.
******

ಹತ್ತು ಪರಸೆಂಟ್ ಮೀಸಲಾತಿ ಹೇಗೆ ಸಂವಿಧಾನದ ಆಶಯಕ್ಕೆ ಧಕ್ಕೆಯಾಗಿದೆ ಎಂಬ ದೇವನೂರರ ವಿವರಣೆಯಿಂದ ಆರೆಸ್ಸಿಸಿಗರ ಬಾಲಕ್ಕೆ ಬೆಂಕಿ ಬಿದ್ದಿದೆಯಂತಲ್ಲಾ. ಅವುಗಳು ಹತ್ತು ಪರಸೆಂಟಿನ ಫಲಾನುಭವಿಗಳು ಯಾರು ಎಂಬ ಬಗ್ಗೆ ವಿವರ ಕೊಡಲಾಗಿ ಈ ವಿವರವೂ ಸಮತೂಕದಲ್ಲಿ ಸಮಂಜಸವಾಗಿದೆ ಎಂದು ಕವಿ ಚಂದ್ರಶೇಖರ ತಾಳ್ಯ ವಕಾಲತ್ತು ವಹಿಸಿದ್ದಾರಲ್ಲಾ. ಕವಿ ಮನಸ್ಸು ಆರೋಗ್ಯವಾಗಿರಬೇಕು. ಯಾವುದೇ ಕೆಲಸ ಅಥವಾ ಮಾತುಕತೆಯಲ್ಲಿ ತಮ್ಮ ಅಜೆಂಡಾಗಳ ಸಂಚನ್ನೇ ಹೂಡುವ ಪುರೋಹಿತರನ್ನು ಸರಿಯಾಗಿ ಅರಿಯಬೇಕು. ಮೀಸಲಾತಿ ವಿರೋಧಿಗಳು ಹತ್ತು ಪರಸೆಂಟನ್ನ ಪ್ರತಿವಾದಿಸಿ ಸಂಭ್ರಮಿಸುವುದರ ಹಿಂದಿನ ಹಿಕಮತ್ತು ಅರಿವಾಗಬೇಕು. ಈ ನಮ್ಮ ದೇಶದಲ್ಲಿ ಅಸಾಧ್ಯವಾದ ಯಾವುದೇ ಅಕ್ರಮವಿಲ್ಲ. ಆದ್ದರಿಂದ ಹತ್ತು ಪರಸೆಂಟು ಯಾರ ಮೀಸಲಾಗುತ್ತದೆಂದು ಅರಿಯಬೇಕಿತ್ತು. ಇಲ್ಲಿ ಜಾತಿ ಕಾರಣಕ್ಕೆ ಬಡವರಾದವರು ದರಿದ್ರರಾದರು ಮತ್ತು ಇಂದು ಕೂಡ ಅಸ್ಪೃಶ್ಯತೆಗೆ ತುತ್ತಾದವರು. ಇದು ಕವಿಗೆ ಕಾಣಬೇಕಿತ್ತು. ಸಾಮಾಜಿಕವಾಗಿ ಮೇಲ್ವರ್ಗದಲ್ಲಿದ್ದು ಬಡವನಾದವನ ಬಡತನ ಎಂತಹದ್ದು ಎಂಬುದನ್ನ ಗ್ರಹಿಸಬೇಕಿತ್ತು. ಸಾವಿರಾರು ವರ್ಷದಿಂದ ಬಡ ಬ್ರಾಹ್ಮಣ ಎಂಬ ಹಣೆಪಟ್ಟಿ ಅಂಟಿಸಿಕೊಂಡು ನಿಜವಾದ ಬಡವವರಿಗೆ ಬಳಸಲು ಪದವೇ ಇಲ್ಲದಂತೆ ಮಾಡಿರುವವರ ಸಂಚು ತಾಳ್ಯರಿಗೆ ತಿಳಿಯಬೇಕಿತ್ತಲ್ಲಾ, ಥೂತ್ತೇರಿ.
*******

ನಮ್ಮ ದೇಶದ ಲಾಂಛನವಾದ ಚತುರ್ಮುಖ ಸಿಂಹ ಈವರೆಗೆ ಧೀರಗಂಭೀರವಾಗಿ ದೇಶದ ಬಗ್ಗೆ ಯೋಚಿಸುವಂತೆ ಕಾಣುತಿತ್ತು. ಇದನ್ನ ಸಹಿಸಲಾಗದ ಮೋದಿಪಡೆ ಸಿಂಹ ವೈರಿ ಕಂಡಂತೆ ಘರ್ಜಿಸುವ ಮುಖಭಾವ ತಯಾರಿಸಿ ಹೊಸ ಪಾರ್ಲಿಮೆಂಟಿನ ಮೇಲೆ ಪ್ರತಿಷ್ಠಾಪಿದವಂತಲ್ಲಾ. ಈ ಮಹಾಕಾರ್ಯಕ್ಕೆ ವಿರೋಧ ಪಕ್ಷದ ಯಾರನ್ನೂ ಕರೆಯದೆ ಪ್ರಧಾನಿ ಸ್ವತಃ ತಾವೆ ಉದ್ಘಾಟಿಸಿ, ಕೆಳಗಿಳಿದು ಯಾವುದೋ ಪುರೋಹಿತ ಕೊಟ್ಟ ಕಾರ್ಯಕ್ರಮ ಹುಡುಕುತ್ತ ಹೋದರಂತಲ್ಲಾ. ಬಿ.ಜೆ.ಪಿಗಳು ಸಿಂಹಕ್ಕೆ ಸಿಟ್ಟುಬರಿಸುವ ಮುಖ ಮಾಡಿದ್ದು ಹೊಸದೇನಲ್ಲ. ಲಕ್ಷ್ಮಣ ಸೀತೆ ಮತ್ತು ಆಂಜನೇಯರೊಡಗೂಡಿ ಪುರುಷೋತ್ತಮನಂತೆ ನಿಂತಿದ್ದ ರಾಮನನ್ನ ಆ ಪಟದಿಂದ ಬೇರ್ಪಡಿಸಿ ಬಿಲ್ಲು ಬಾಣಗಳೊಡನೆ ಯುದ್ಧಕ್ಕೆ ನಿಂತ ಭಂಗಿ ರೂಪಿಸಿ ಸರ್ಕಲ್ಲುಗಳಲ್ಲಿ ನಿಲ್ಲಿಸಿ ಆಗಲೇ ಎರಡು ದಶಕವಾಯಿತು. ಅದು ಅಡ್ವಾನಿಯ ಕಾಲ. ಈ ಮೋದಿ ಕಾಲದಲ್ಲಿ ಕರ್ತವ್ಯ ಪ್ರಜ್ಞೆ, ಭಕ್ತಿ ವಿಧೇಯತೆ ಮತ್ತು ಅಸಾಮಾನ್ಯ ಸಂಗೀತದ ಪ್ರತೀಕವಾಗಿದ್ದ ಆಂಜನೇಯನನ್ನ ಶ್ರೀರಾಮನ ಪದತಲದಿಂದೆಳೆದು ವಾಘಾ ಗಡಿಯ ಕೆರಳಿದ ಸೈನಿಕನನ್ನಾಗಿ ಮಾಡಿ ದಶಕವೇ ಆಯ್ತು. ಈಗ ಎಲ್ಲಿ ನೋಡಿದರೂ ಕೆರಳಿದ ಒಂದು ರೀತಿ ನರಸಿಂಹನಂತೆ ಕಾಣುವ ಆಂಜನೇಯನ ಚಿತ್ರವನ್ನ ನೋಡುತ್ತಿದ್ದೇವೆ. ಬರಲಿರುವ ದಿನಗಳಲ್ಲಿ ನಮ್ಮ ಪುರಾಣದ ವ್ಯಕ್ತಿಗಳು ಈ ಬಿ.ಜೆ.ಪಿಗಳ ಕೈಗೆ ಸಿಕ್ಕಿ ಇನ್ನ ಯಾವ್ಯಾವ ಆಯುಧ ಹಿಡಿದುಕೊಂಡು ಕೆಕ್ಕರಿಸಿ ನೋಡುತ್ತವೋ ಏನೋ ಎಂಬಂತಾಗಿದೆಯಲ್ಲಾ, ಥೂತ್ತೇರಿ.
*******

ಬಿ.ಜೆ.ಪಿಗಳು ಆಂಜನೇಯನಿಗೇ ಅಂಟಿಕೊಳ್ಳಲು ಪ್ರಬಲ ಕಾರಣವಿದೆ. ಲಂಕಾಪಟ್ಟಣದ ಅಶೋಕವನದಲ್ಲಿ ಶೋಕಸಾಗರದಲ್ಲಿ ಕುಳಿತಿರುವ ಸೀತಾದೇವಿಯನ್ನ ಕಂಡು ’ರಾಮ ಬಂದು ಕರೆದುಕೊಂಡು ಹೋಗುತ್ತಾನೆಂದು ಧೈರ್ಯ ಹೇಳಿ ಬಾ’ ಎಂದು ಶ್ರೀರಾಮಚಂದ್ರ ಆಂಜನೇಯನನ್ನು ಕಳಿಸಿದನಂತೆ. ಆಗ ಆಂಜನೇಯ ಸೀತೆ ನನ್ನನ್ನು ನೋಡಿ ನಂಬದೇಹೋದರೆ ಏನುಮಾಡಬೇಕೆಂದು ಕೇಳಿದಾಗ ರಾಮ ಮುದ್ರೆಯುಂಗುರ ಕೊಟ್ಟು ಕಳಿಸಿದನಂತೆ. ಅದನ್ನು ತೆಗೆದುಕೊಂಡು ಹಾರಿಹೋದ ಹನುಮ ರಾಮ ಹೇಳಿದ ಕೆಲಸ ಮಾಡುವುದರ ಜೊತೆಗೆ ಲಂಕೆಗೆ ಬೆಂಕಿಯಿಟ್ಟು ಬಂದನಂತೆ. ರಾವಣನ ಕಡೆಯವರೇನೋ ಆಂಜನೇಯನ ಬಾಲಕ್ಕೆ ಬೆಂಕಿಹಚ್ಚಿದರು ಸರಿ. ಆದರೆ ಆಂಜನೇಯ ಜವಾಬ್ದಾರಿಯುತನಾಗಿದ್ದರೆ ಬೆಂಕಿ ನಂದಿಸಿಕೊಂಡು ಬರಬೇಕಿತ್ತು. ಅದು ಬಿಟ್ಟು ಲಂಕೆಗೇ ಬೇಂಕಿ ಹಚ್ಚಿದ. ಅಲ್ಲಿ ಮಕ್ಕಳಿದ್ದರು, ಮುದುಕರಿದ್ದರು, ಗರ್ಭಿಣಿಯರಿದ್ದರು. ಊರುಬಿಟ್ಟು ಓಡಲಾರದ ಅಶಕ್ತ ಅಸಹಾಯಕರಿದ್ದರು. ಇವರಿಗೂ ರಾವಣ ಹೊತ್ತು ತಂದ ಸೀತೆಗೂ ಯಾವ ಸಂಬಂಧವೂ ಇರಲಿಲ್ಲ. ಅದೇನಾದರಾಗಲಿ ಯಾವುದೇ ವಿವೇಚನೆಯಿಲ್ಲದೆ ತಾವು ಹೇಳಿದ ಕೇರಿಗೆ ಬೆಂಕಿ ಹಚ್ಚುವ ವ್ಯಕ್ತಿಗಳು ಬಿ.ಜೆ.ಪಿಗಳಿಗೆ ಸಿಕ್ಕಿವೆ. ಈ ವಾನರ ಸೇನೆಗೆ ಒಬ್ಬ ದೈವ ಬೇಕಿತ್ತು. ಅದಕ್ಕಾಗಿ ಆಂಜನೇಯನೇ ಸೂಕ್ತವೆಂದು ಮುಗ್ಧ ಆಂಜನೇಯನಿಗೆ ವ್ಯಗ್ರರೂಪಕೊಟ್ಟು ಮೆರೆಸುತ್ತಿದ್ದಾರಂತಲ್ಲಾ, ಥೂತ್ತೇರಿ.

– ಯಾಹೂ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೊಲೆ ಮಾಡ್ತಿರೋದು SDPI,PFI . ಬಲಿ ಆಗ್ತಿರೋದು ಹಿಂದೂಗಳು ,ಆದರೂ ಇದಕ್ಕೆ ಹೊಣೆ ಹಿಂದೂ ಸಂಘಟನೆ , ಈ ಪತ್ರಿಕೆ ಸಂಪಾದಕ ಹೊಟ್ಟೆಗೆ ಎಂದೂ ಊಟ ತಿನ್ನಲ್ಲಾ ಅನಿಸುತ್ತೇ ಹಂದಿಗಳ ಲದ್ದಿ ಬಿಟ್ಟು ,ತೂ …..

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...