Homeಕರ್ನಾಟಕಹಠಾತ್ ಜನಸಂಖ್ಯೆ ಏರಲು ಕಾರಣವೇನು? - ಯಾಹೂ

ಹಠಾತ್ ಜನಸಂಖ್ಯೆ ಏರಲು ಕಾರಣವೇನು? – ಯಾಹೂ

- Advertisement -
- Advertisement -

ಭಾರತ ತನ್ನೆಲ್ಲಾ ಬಗೆಹರಿಸಲಾಗದ ಸಮಸ್ಯೆಗಳ ನಡುವೆ ತೊಳಲಾಡುತ್ತಲೇ ಜನಸಂಖ್ಯೆಯಲ್ಲಿ ಜಗತ್ತನ್ನೇ ಮೀರಿಸಿದೆಯಂತಲ್ಲಾ. ಇಷ್ಟೆಲ್ಲಾ ವಿಚ್ಛೇದನಗಳು, ಸಂತಾನಹರಣ ಸಾಮಗ್ರಿಗಳು, ಸಂತಾನ ನಿಯಂತ್ರಣ ನಿಯಮಗಳಿದ್ದರೂ, ಚೀನಾ ಎಂಬ ಜೀವ ಸೃಷ್ಟಿ ಕಾರ್ಖಾನೆಯನ್ನು ಮೀರಿಸಿ ಮುನ್ನಡೆದಿರುವುದು ಭಾರತದ ಬಡವರ ದಿಗ್ವಿಜಯವೇ ಸರಿ. ಇದ್ದಕ್ಕಿದ್ದಂತೆ ಆಕಾಶದಿಂದ ಉದುರಿದಂತೆ ಮಕ್ಕಳು ಹೆಚ್ಚಾಗಲು ಕಾರಣ ಕೊರೊನಾ ಸಮಯದಲ್ಲಿ ಹೊರಹೋಗದಂತೆ ತಿಂಗಳುಗಟ್ಟಲೆ ಸರಕಾರ ಜನರನ್ನ ಮನೆಯಲ್ಲಿ ಕೂಡಿಹಾಕಿದ್ದೇ ಕಾರಣವೆಂದು ಹಳ್ಳಿಗರ ವಾದವಾಗಿದೆಯಲ್ಲಾ. ಕೆಲಸ ಇರಲಿ ಇಲ್ಲದಿರಲಿ ದಿನವಿಡಿ ನಾಯಿಯಂತೆ ಅಲೆದು ಬರುತ್ತಿದ್ದ ಗಂಡಸರು ಏನೋ ಕಡಿದು ಕಟ್ಟೆಹಾಕಿ ಬಂದವರಂತೆ ಮಲಗಿಬಿಡುತ್ತಿದ್ದರು. ಆದರೆ ಕೊರೊನಾ ಕಾಲದಲ್ಲಿ ಮನೆಯಲ್ಲೇ ಬಂದಿಯಾದ ಅವರಿಗೆ ಹೆಂಡತಿ ಪ್ರೀತಿಯಿಂದ ಗರ್ಮಿ ಪದಾರ್ಥಗಳನ್ನ ಹುರಿದು ಕರಿದು ಕೊಟ್ಟ ಕಾರಣಕ್ಕೆ ಗರ್ಭ ಕುದುರಿತೆಂದು ಹಳ್ಳಿಗರು ಹಾಸ್ಯ ಮಾಡುತ್ತಿದ್ದಾರಲ್ಲಾ. ಈ ಸಮಯದಲ್ಲಿ ನಡೆದುಹೋದ ಇನ್ನೆಂದು ಅನಾಹುತ ಯಾರ ಗಮನಕ್ಕೆ ಬಂದಿಲ್ಲ. ಅದೇನೆಂದರೆ ಮನೆಯಲ್ಲಿದ್ದ ಗೃಹಿಣಿಯರು ಮೂರು ಹೊತ್ತು ಪ್ರಸಾರವಾಗುವ ಮಂಗಳಗೌರಿ ಮದುವೆ, ದೊರೆಸಾನಿ, ನಾಗಿಣಿ, ಕನ್ನಡತಿ, ಗೀತಾ, ಗಿಣಿರಾಮ ಧಾರಾವಾಹಿಗಳನ್ನ ಗಂಡಂದಿರೂ ನೋಡುವಂತೆ ಮಾಡಿದರಂತಲ್ಲಾ, ಥೂತ್ತೇರಿ.

*****
ಆರೆಸ್ಸೆಸಿಗರು ಮೀಸಲಾತಿ ವಿರೋಧಿಗಳು. ಅವರ ಮನುಧರ್ಮಶಾಸ್ತ್ರದಲ್ಲಿ ಮೀಸಲಾತಿಯಿಲ್ಲವಂತಲ್ಲಾ. ಅವರ ಪ್ರಕಾರ ಶ್ರೇಣೀಕೃತ ಸಮಾಜದ ಜೀವಿಗಳು ತಮ್ಮತಮ್ಮ ಆವರಣದಲ್ಲಿ ನಿಂತು ಅಲ್ಲಿಯೇ ಅಭಿವೃದ್ಧಿ ಕಾಣಬೇಕು. ಅಂದರೆ ದೋಭಿ ತನಗೆ ಧರ್ಮ ನಿಗದಿಪಡಿಸಿದ ಕೆಲಸದಲ್ಲಿ ಭಗವಂತನನ್ನ ಕಾಣಬೇಕು. ಇನ್ನ ಜಲಗಾರ, ಮಡಿವಾಳ, ಕ್ಷೌರಿಕ, ಕುರಿಗಾಯಿ, ದನಗಾಯಿ ಹೀಗೆ ಸಕಲೆಂಟು ಜಾತಿಗಳು ತಮ್ಮತಮ್ಮ ಆವರಣದಲ್ಲಿ ಧೃಢವಾಗಿ ನಿಂತು ತಮ್ಮ ಕರ್ತವ್ಯ ಮಾಡಬೇಕು. ಇದು ನಮ್ಮ ಧರ್ಮದ ನಿಯಮ. ಇದನ್ನ ಒಪ್ಪಿದ ನಮ್ಮ ಕನ್ನಡದ ಶ್ರೇಷ್ಠ ಕತೆಗಾರ ಮಾಸ್ತಿಯವರೂ ಇದನ್ನು ಪ್ರತಿಪಾದಿಸಿದರು. ಇನ್ನು ಆ ತುದಿಯಲ್ಲಿ ನ್ಯಾಯಾಂಗದ ಉನ್ನತ ಸ್ಥಾನ ಅಲಂಕರಿಸಿ ಬಂದ ರಾಮಾಜೋಯಿಸರು ಕೂಡ ಇದನ್ನೇ ಪ್ರತಿವಾದಿಸಿದ್ದಲ್ಲದೆ, ಮೀಸಲಾತಿ ಕೊಡಕೂಡದೆಂಬ ಅರ್ಜಿಯನ್ನು ಸುಪ್ರೀಂಕೊರ್ಟಿಗೆ ಕೊಟ್ಟಿದ್ದರು. ಇವರೇ ಜಡ್ಜ್ ಆಗಿ ಅಂತಹ ಅರ್ಜಿ ಬಂದಿದ್ದರೆ, ಅನಾಮತ್ತು ಅಂಗೀಕರಿಸಿ ಆಜ್ಞೆ ಮಾಡುತ್ತಿದ್ದರೇನೋ! ಆದರೆ ಸಾಮಾಜಿಕ ನ್ಯಾಯದ ಪ್ರತಿಪಾದಕರಾಗಿದ್ದ ಜಡ್ಜ್ ಸಾಹೇಬರು ಈ ರಾಮಾಜೋಯಿಸರ ಅರ್ಜಿಯನ್ನ ನೋಡಿ ಹುಸಿನಕ್ಕು ತಿರಸ್ಕರಿಸಿದರು. ನಾನೂ ಒಬ್ಬ ಜಡ್ಜ್ ಆಗಿದ್ದು ನನ್ನ ಆರ್ಜಿಯನ್ನ ನನಗಿಂತ ಕಿರಿಯರಿಂದ ತಿರಸ್ಕರಿಸಲ್ಪಟ್ಟಿತಲ್ಲಾ ಎಂದು ನೊಂದುಕೊಂಡರಂತೆ ರಾಮಾಜೋಯಿಸರು. ಈಗ ಮೇಲ್ಜಾತಿಗಳಿಗೆ ಅದರಲ್ಲಿ ಬ್ರಾಹ್ಮಣರಿಗೆ ಉಪಯೋಗವಾಗುವ ಹತ್ತು ಪರಸೆಂಟ್ ಮೀಸಲಾತಿ ತಂದಿರುವುದು ಚಡ್ಡಿಗಳಿಗೆ ತಡೆಯಲಾರದ ಸಂತೋಷವಾಗಿದೆಯಂತಲ್ಲಾ, ಥೂತ್ತೇರಿ.
******

ಹತ್ತು ಪರಸೆಂಟ್ ಮೀಸಲಾತಿ ಹೇಗೆ ಸಂವಿಧಾನದ ಆಶಯಕ್ಕೆ ಧಕ್ಕೆಯಾಗಿದೆ ಎಂಬ ದೇವನೂರರ ವಿವರಣೆಯಿಂದ ಆರೆಸ್ಸಿಸಿಗರ ಬಾಲಕ್ಕೆ ಬೆಂಕಿ ಬಿದ್ದಿದೆಯಂತಲ್ಲಾ. ಅವುಗಳು ಹತ್ತು ಪರಸೆಂಟಿನ ಫಲಾನುಭವಿಗಳು ಯಾರು ಎಂಬ ಬಗ್ಗೆ ವಿವರ ಕೊಡಲಾಗಿ ಈ ವಿವರವೂ ಸಮತೂಕದಲ್ಲಿ ಸಮಂಜಸವಾಗಿದೆ ಎಂದು ಕವಿ ಚಂದ್ರಶೇಖರ ತಾಳ್ಯ ವಕಾಲತ್ತು ವಹಿಸಿದ್ದಾರಲ್ಲಾ. ಕವಿ ಮನಸ್ಸು ಆರೋಗ್ಯವಾಗಿರಬೇಕು. ಯಾವುದೇ ಕೆಲಸ ಅಥವಾ ಮಾತುಕತೆಯಲ್ಲಿ ತಮ್ಮ ಅಜೆಂಡಾಗಳ ಸಂಚನ್ನೇ ಹೂಡುವ ಪುರೋಹಿತರನ್ನು ಸರಿಯಾಗಿ ಅರಿಯಬೇಕು. ಮೀಸಲಾತಿ ವಿರೋಧಿಗಳು ಹತ್ತು ಪರಸೆಂಟನ್ನ ಪ್ರತಿವಾದಿಸಿ ಸಂಭ್ರಮಿಸುವುದರ ಹಿಂದಿನ ಹಿಕಮತ್ತು ಅರಿವಾಗಬೇಕು. ಈ ನಮ್ಮ ದೇಶದಲ್ಲಿ ಅಸಾಧ್ಯವಾದ ಯಾವುದೇ ಅಕ್ರಮವಿಲ್ಲ. ಆದ್ದರಿಂದ ಹತ್ತು ಪರಸೆಂಟು ಯಾರ ಮೀಸಲಾಗುತ್ತದೆಂದು ಅರಿಯಬೇಕಿತ್ತು. ಇಲ್ಲಿ ಜಾತಿ ಕಾರಣಕ್ಕೆ ಬಡವರಾದವರು ದರಿದ್ರರಾದರು ಮತ್ತು ಇಂದು ಕೂಡ ಅಸ್ಪೃಶ್ಯತೆಗೆ ತುತ್ತಾದವರು. ಇದು ಕವಿಗೆ ಕಾಣಬೇಕಿತ್ತು. ಸಾಮಾಜಿಕವಾಗಿ ಮೇಲ್ವರ್ಗದಲ್ಲಿದ್ದು ಬಡವನಾದವನ ಬಡತನ ಎಂತಹದ್ದು ಎಂಬುದನ್ನ ಗ್ರಹಿಸಬೇಕಿತ್ತು. ಸಾವಿರಾರು ವರ್ಷದಿಂದ ಬಡ ಬ್ರಾಹ್ಮಣ ಎಂಬ ಹಣೆಪಟ್ಟಿ ಅಂಟಿಸಿಕೊಂಡು ನಿಜವಾದ ಬಡವವರಿಗೆ ಬಳಸಲು ಪದವೇ ಇಲ್ಲದಂತೆ ಮಾಡಿರುವವರ ಸಂಚು ತಾಳ್ಯರಿಗೆ ತಿಳಿಯಬೇಕಿತ್ತಲ್ಲಾ, ಥೂತ್ತೇರಿ.
*******

ನಮ್ಮ ದೇಶದ ಲಾಂಛನವಾದ ಚತುರ್ಮುಖ ಸಿಂಹ ಈವರೆಗೆ ಧೀರಗಂಭೀರವಾಗಿ ದೇಶದ ಬಗ್ಗೆ ಯೋಚಿಸುವಂತೆ ಕಾಣುತಿತ್ತು. ಇದನ್ನ ಸಹಿಸಲಾಗದ ಮೋದಿಪಡೆ ಸಿಂಹ ವೈರಿ ಕಂಡಂತೆ ಘರ್ಜಿಸುವ ಮುಖಭಾವ ತಯಾರಿಸಿ ಹೊಸ ಪಾರ್ಲಿಮೆಂಟಿನ ಮೇಲೆ ಪ್ರತಿಷ್ಠಾಪಿದವಂತಲ್ಲಾ. ಈ ಮಹಾಕಾರ್ಯಕ್ಕೆ ವಿರೋಧ ಪಕ್ಷದ ಯಾರನ್ನೂ ಕರೆಯದೆ ಪ್ರಧಾನಿ ಸ್ವತಃ ತಾವೆ ಉದ್ಘಾಟಿಸಿ, ಕೆಳಗಿಳಿದು ಯಾವುದೋ ಪುರೋಹಿತ ಕೊಟ್ಟ ಕಾರ್ಯಕ್ರಮ ಹುಡುಕುತ್ತ ಹೋದರಂತಲ್ಲಾ. ಬಿ.ಜೆ.ಪಿಗಳು ಸಿಂಹಕ್ಕೆ ಸಿಟ್ಟುಬರಿಸುವ ಮುಖ ಮಾಡಿದ್ದು ಹೊಸದೇನಲ್ಲ. ಲಕ್ಷ್ಮಣ ಸೀತೆ ಮತ್ತು ಆಂಜನೇಯರೊಡಗೂಡಿ ಪುರುಷೋತ್ತಮನಂತೆ ನಿಂತಿದ್ದ ರಾಮನನ್ನ ಆ ಪಟದಿಂದ ಬೇರ್ಪಡಿಸಿ ಬಿಲ್ಲು ಬಾಣಗಳೊಡನೆ ಯುದ್ಧಕ್ಕೆ ನಿಂತ ಭಂಗಿ ರೂಪಿಸಿ ಸರ್ಕಲ್ಲುಗಳಲ್ಲಿ ನಿಲ್ಲಿಸಿ ಆಗಲೇ ಎರಡು ದಶಕವಾಯಿತು. ಅದು ಅಡ್ವಾನಿಯ ಕಾಲ. ಈ ಮೋದಿ ಕಾಲದಲ್ಲಿ ಕರ್ತವ್ಯ ಪ್ರಜ್ಞೆ, ಭಕ್ತಿ ವಿಧೇಯತೆ ಮತ್ತು ಅಸಾಮಾನ್ಯ ಸಂಗೀತದ ಪ್ರತೀಕವಾಗಿದ್ದ ಆಂಜನೇಯನನ್ನ ಶ್ರೀರಾಮನ ಪದತಲದಿಂದೆಳೆದು ವಾಘಾ ಗಡಿಯ ಕೆರಳಿದ ಸೈನಿಕನನ್ನಾಗಿ ಮಾಡಿ ದಶಕವೇ ಆಯ್ತು. ಈಗ ಎಲ್ಲಿ ನೋಡಿದರೂ ಕೆರಳಿದ ಒಂದು ರೀತಿ ನರಸಿಂಹನಂತೆ ಕಾಣುವ ಆಂಜನೇಯನ ಚಿತ್ರವನ್ನ ನೋಡುತ್ತಿದ್ದೇವೆ. ಬರಲಿರುವ ದಿನಗಳಲ್ಲಿ ನಮ್ಮ ಪುರಾಣದ ವ್ಯಕ್ತಿಗಳು ಈ ಬಿ.ಜೆ.ಪಿಗಳ ಕೈಗೆ ಸಿಕ್ಕಿ ಇನ್ನ ಯಾವ್ಯಾವ ಆಯುಧ ಹಿಡಿದುಕೊಂಡು ಕೆಕ್ಕರಿಸಿ ನೋಡುತ್ತವೋ ಏನೋ ಎಂಬಂತಾಗಿದೆಯಲ್ಲಾ, ಥೂತ್ತೇರಿ.
*******

ಬಿ.ಜೆ.ಪಿಗಳು ಆಂಜನೇಯನಿಗೇ ಅಂಟಿಕೊಳ್ಳಲು ಪ್ರಬಲ ಕಾರಣವಿದೆ. ಲಂಕಾಪಟ್ಟಣದ ಅಶೋಕವನದಲ್ಲಿ ಶೋಕಸಾಗರದಲ್ಲಿ ಕುಳಿತಿರುವ ಸೀತಾದೇವಿಯನ್ನ ಕಂಡು ’ರಾಮ ಬಂದು ಕರೆದುಕೊಂಡು ಹೋಗುತ್ತಾನೆಂದು ಧೈರ್ಯ ಹೇಳಿ ಬಾ’ ಎಂದು ಶ್ರೀರಾಮಚಂದ್ರ ಆಂಜನೇಯನನ್ನು ಕಳಿಸಿದನಂತೆ. ಆಗ ಆಂಜನೇಯ ಸೀತೆ ನನ್ನನ್ನು ನೋಡಿ ನಂಬದೇಹೋದರೆ ಏನುಮಾಡಬೇಕೆಂದು ಕೇಳಿದಾಗ ರಾಮ ಮುದ್ರೆಯುಂಗುರ ಕೊಟ್ಟು ಕಳಿಸಿದನಂತೆ. ಅದನ್ನು ತೆಗೆದುಕೊಂಡು ಹಾರಿಹೋದ ಹನುಮ ರಾಮ ಹೇಳಿದ ಕೆಲಸ ಮಾಡುವುದರ ಜೊತೆಗೆ ಲಂಕೆಗೆ ಬೆಂಕಿಯಿಟ್ಟು ಬಂದನಂತೆ. ರಾವಣನ ಕಡೆಯವರೇನೋ ಆಂಜನೇಯನ ಬಾಲಕ್ಕೆ ಬೆಂಕಿಹಚ್ಚಿದರು ಸರಿ. ಆದರೆ ಆಂಜನೇಯ ಜವಾಬ್ದಾರಿಯುತನಾಗಿದ್ದರೆ ಬೆಂಕಿ ನಂದಿಸಿಕೊಂಡು ಬರಬೇಕಿತ್ತು. ಅದು ಬಿಟ್ಟು ಲಂಕೆಗೇ ಬೇಂಕಿ ಹಚ್ಚಿದ. ಅಲ್ಲಿ ಮಕ್ಕಳಿದ್ದರು, ಮುದುಕರಿದ್ದರು, ಗರ್ಭಿಣಿಯರಿದ್ದರು. ಊರುಬಿಟ್ಟು ಓಡಲಾರದ ಅಶಕ್ತ ಅಸಹಾಯಕರಿದ್ದರು. ಇವರಿಗೂ ರಾವಣ ಹೊತ್ತು ತಂದ ಸೀತೆಗೂ ಯಾವ ಸಂಬಂಧವೂ ಇರಲಿಲ್ಲ. ಅದೇನಾದರಾಗಲಿ ಯಾವುದೇ ವಿವೇಚನೆಯಿಲ್ಲದೆ ತಾವು ಹೇಳಿದ ಕೇರಿಗೆ ಬೆಂಕಿ ಹಚ್ಚುವ ವ್ಯಕ್ತಿಗಳು ಬಿ.ಜೆ.ಪಿಗಳಿಗೆ ಸಿಕ್ಕಿವೆ. ಈ ವಾನರ ಸೇನೆಗೆ ಒಬ್ಬ ದೈವ ಬೇಕಿತ್ತು. ಅದಕ್ಕಾಗಿ ಆಂಜನೇಯನೇ ಸೂಕ್ತವೆಂದು ಮುಗ್ಧ ಆಂಜನೇಯನಿಗೆ ವ್ಯಗ್ರರೂಪಕೊಟ್ಟು ಮೆರೆಸುತ್ತಿದ್ದಾರಂತಲ್ಲಾ, ಥೂತ್ತೇರಿ.

– ಯಾಹೂ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೊಲೆ ಮಾಡ್ತಿರೋದು SDPI,PFI . ಬಲಿ ಆಗ್ತಿರೋದು ಹಿಂದೂಗಳು ,ಆದರೂ ಇದಕ್ಕೆ ಹೊಣೆ ಹಿಂದೂ ಸಂಘಟನೆ , ಈ ಪತ್ರಿಕೆ ಸಂಪಾದಕ ಹೊಟ್ಟೆಗೆ ಎಂದೂ ಊಟ ತಿನ್ನಲ್ಲಾ ಅನಿಸುತ್ತೇ ಹಂದಿಗಳ ಲದ್ದಿ ಬಿಟ್ಟು ,ತೂ …..

LEAVE A REPLY

Please enter your comment!
Please enter your name here

- Advertisment -

ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ‘ನಾವು ಮರೆತಿಲ್ಲ..’; ಎಂದ ಜಾಮಿಯಾ ವಿದ್ಯಾರ್ಥಿಗಳು

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದರು....

ವಿಬಿ-ಜಿ ರಾಮ್ ಜಿ ಬಿಲ್ ಕುರಿತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ‘ರಾಮ್ ಕಾ ನಾಮ್ ಬದ್ನಾಮ್ ನ ಕರೋ’ ಎಂದು ಟೀಕಿಸಿದ ಶಶಿ ತರೂರ್ 

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಲೋಕಸಭೆಯಲ್ಲಿ ವಿಬಿ-ಜಿ ರಾಮ್ ಜಿ ಮಸೂದೆಯನ್ನು ವಿರೋಧಿಸುವ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ, 1971 ರ ಜನಪ್ರಿಯ ಬಾಲಿವುಡ್...

ಸ್ಪೀಕರ್ ತನಿಖಾ ಸಮಿತಿ ರಚಿಸಿರುವುದನ್ನು ಪ್ರಶ್ನಿಸಿ ನ್ಯಾ. ಯಶವಂತ್ ವರ್ಮಾ ಅರ್ಜಿ : ಲೋಕಸಭೆ, ರಾಜ್ಯಸಭೆಗೆ ಸುಪ್ರೀಂ ಕೋರ್ಟ್ ನೋಟಿಸ್

ತನ್ನ ವಿರುದ್ಧ ವಾಗ್ದಂಡನೆ (ಮಹಾಭಿಯೋಗ) ವಿಧಿಸುವುದಕ್ಕಾಗಿ ನ್ಯಾಯಾಧೀಶರ (ವಿಚಾರಣಾ) ಕಾಯ್ದೆಯಡಿ ತ್ರಿಸದಸ್ಯ ಸಮಿತಿ ರಚಿಸಿರುವ ಲೋಕಸಭಾ ಸ್ಪೀಕರ್‌ ನಿರ್ಧಾರ ರದ್ದುಗೊಳಿಸುವಂತೆ ಕೋರಿ ಅಲಾಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್‌ ವರ್ಮಾ ಅವರು ಸುಪ್ರೀಂ ಕೋರ್ಟ್‌ಗೆ...

ಪ್ರಯಾಣಿಕರಿಗೆ 200, 500 ರೂಪಾಯಿ ಮುಖಬೆಲೆಯ ಭಾರತೀಯ ನೋಟು ಕೊಂಡೊಯ್ಯಲು ಅನುಮತಿಸಿದ ನೇಪಾಳ

ಗಡಿಯಾಚೆಗಿನ ಪ್ರಯಾಣ ಮತ್ತು ವ್ಯಾಪಾರವನ್ನು ಸರಾಗಗೊಳಿಸುವ ಸಲುವಾಗಿ, ನೇಪಾಳ ಸರ್ಕಾರವು ರೂ.200 ಮತ್ತು ರೂ.500 ಮೌಲ್ಯದ ಭಾರತೀಯ ಕರೆನ್ಸಿ ನೋಟುಗಳನ್ನು ಹೊಂದುವ ಮೇಲಿದ್ದ ನಿರ್ಬಂಧಗಳನ್ನು ತೆಗೆದುಹಾಕಿದೆ. ಸೋಮವಾರ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರವು,...

ಮತದಾರರ ತೀರ್ಪಿನೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ಬರಲು ಬಿಡುತ್ತೇವೆ; ಕಾಂಗ್ರೆಸ್‌ ಜೊತೆಗೆ ಮೈತ್ರಿ ಇಲ್ಲ: ಕೇರಳ ಸಿಪಿಐ(ಎಂ) ಮುಖ್ಯಸ್ಥ

ಕೇರಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಂದು ಕಾರ್ಪೊರೇಷನ್ ಮತ್ತು ಪುರಸಭೆಯಲ್ಲಿ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ, ಎರಡು ಪ್ರತಿಸ್ಪರ್ಧಿ ರಂಗಗಳಾದ ಯುಡಿಎಫ್ ಮತ್ತು ಎಲ್‌ಡಿಎಫ್ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು...

ಕೊಂದವರು ಯಾರು: ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು: ಮಲ್ಲಿಗೆ ಸಿರಿಮನೆ

“ನಾವು ಕೊಂದವರು ಯಾರು’ ಆಂದೋಲನದಿಂದ ‘ಮಹಿಳಾ ನ್ಯಾಯ ಸಮಾವೇಶ’ವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಬೇಕು ಎಂದುಕೊಂಡಾಗ ನೂರಾರು ಪ್ರಶ್ನೆಗಳು, ನೂರಾರು ಆಪಾದನೆಗಳು, ಆರೋಪಗಳು ಬಂದವು. ಯಾಕೆ ಇಲ್ಲಿಗೆ ಬರುತ್ತಿದ್ದಾರೆ, ಇಲ್ಲಿಗೇ ಬಂದು ಏನು ಮಾಡುತ್ತಾರೆ ಅನ್ನುವ...

ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸೋಮವಾರ (ಡಿ.15) ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇಮಕಾತಿ ಪತ್ರಗಳನ್ನು ಹಸ್ತಾಂತರಿದ್ದು, ಇದೇ ಸಂದರ್ಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆದಿರುವ ವಿಡಿಯೋವೊಂದು ವೈರಲ್...

ಎಸ್‌ಐಆರ್ ಬಳಿಕ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟ : 58 ಲಕ್ಷ ಹೆಸರು ಡಿಲೀಟ್!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ಮಂಗಳವಾರ (ಡಿಸೆಂಬರ್ 16) ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಸಾವು, ವಲಸೆ ಮತ್ತು ಎಣಿಕೆ ನಮೂನೆಗಳನ್ನು ಸಲ್ಲಿಸದಿರುವುದು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ಇಡಿ ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಹಣ ಅಕ್ರಮ ವರ್ಗಾವಣೆ ದೂರನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

ಕಾನೂನುಗಳಿಗೆ ಹಿಂದಿ ಬಳಸುವುದರಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ಪಿ.ಚಿದಂಬರಂ

ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಗಳ ಶೀರ್ಷಿಕೆಗಳಲ್ಲಿ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಅಭ್ಯಾಸ ಹೆಚ್ಚುತ್ತಿದೆ. ಈ ಪ್ರವೃತ್ತಿಯಿಂದ ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯವಾಗಿದೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದರು. ಈ...