Homeಕರ್ನಾಟಕಹಠಾತ್ ಜನಸಂಖ್ಯೆ ಏರಲು ಕಾರಣವೇನು? - ಯಾಹೂ

ಹಠಾತ್ ಜನಸಂಖ್ಯೆ ಏರಲು ಕಾರಣವೇನು? – ಯಾಹೂ

- Advertisement -
- Advertisement -

ಭಾರತ ತನ್ನೆಲ್ಲಾ ಬಗೆಹರಿಸಲಾಗದ ಸಮಸ್ಯೆಗಳ ನಡುವೆ ತೊಳಲಾಡುತ್ತಲೇ ಜನಸಂಖ್ಯೆಯಲ್ಲಿ ಜಗತ್ತನ್ನೇ ಮೀರಿಸಿದೆಯಂತಲ್ಲಾ. ಇಷ್ಟೆಲ್ಲಾ ವಿಚ್ಛೇದನಗಳು, ಸಂತಾನಹರಣ ಸಾಮಗ್ರಿಗಳು, ಸಂತಾನ ನಿಯಂತ್ರಣ ನಿಯಮಗಳಿದ್ದರೂ, ಚೀನಾ ಎಂಬ ಜೀವ ಸೃಷ್ಟಿ ಕಾರ್ಖಾನೆಯನ್ನು ಮೀರಿಸಿ ಮುನ್ನಡೆದಿರುವುದು ಭಾರತದ ಬಡವರ ದಿಗ್ವಿಜಯವೇ ಸರಿ. ಇದ್ದಕ್ಕಿದ್ದಂತೆ ಆಕಾಶದಿಂದ ಉದುರಿದಂತೆ ಮಕ್ಕಳು ಹೆಚ್ಚಾಗಲು ಕಾರಣ ಕೊರೊನಾ ಸಮಯದಲ್ಲಿ ಹೊರಹೋಗದಂತೆ ತಿಂಗಳುಗಟ್ಟಲೆ ಸರಕಾರ ಜನರನ್ನ ಮನೆಯಲ್ಲಿ ಕೂಡಿಹಾಕಿದ್ದೇ ಕಾರಣವೆಂದು ಹಳ್ಳಿಗರ ವಾದವಾಗಿದೆಯಲ್ಲಾ. ಕೆಲಸ ಇರಲಿ ಇಲ್ಲದಿರಲಿ ದಿನವಿಡಿ ನಾಯಿಯಂತೆ ಅಲೆದು ಬರುತ್ತಿದ್ದ ಗಂಡಸರು ಏನೋ ಕಡಿದು ಕಟ್ಟೆಹಾಕಿ ಬಂದವರಂತೆ ಮಲಗಿಬಿಡುತ್ತಿದ್ದರು. ಆದರೆ ಕೊರೊನಾ ಕಾಲದಲ್ಲಿ ಮನೆಯಲ್ಲೇ ಬಂದಿಯಾದ ಅವರಿಗೆ ಹೆಂಡತಿ ಪ್ರೀತಿಯಿಂದ ಗರ್ಮಿ ಪದಾರ್ಥಗಳನ್ನ ಹುರಿದು ಕರಿದು ಕೊಟ್ಟ ಕಾರಣಕ್ಕೆ ಗರ್ಭ ಕುದುರಿತೆಂದು ಹಳ್ಳಿಗರು ಹಾಸ್ಯ ಮಾಡುತ್ತಿದ್ದಾರಲ್ಲಾ. ಈ ಸಮಯದಲ್ಲಿ ನಡೆದುಹೋದ ಇನ್ನೆಂದು ಅನಾಹುತ ಯಾರ ಗಮನಕ್ಕೆ ಬಂದಿಲ್ಲ. ಅದೇನೆಂದರೆ ಮನೆಯಲ್ಲಿದ್ದ ಗೃಹಿಣಿಯರು ಮೂರು ಹೊತ್ತು ಪ್ರಸಾರವಾಗುವ ಮಂಗಳಗೌರಿ ಮದುವೆ, ದೊರೆಸಾನಿ, ನಾಗಿಣಿ, ಕನ್ನಡತಿ, ಗೀತಾ, ಗಿಣಿರಾಮ ಧಾರಾವಾಹಿಗಳನ್ನ ಗಂಡಂದಿರೂ ನೋಡುವಂತೆ ಮಾಡಿದರಂತಲ್ಲಾ, ಥೂತ್ತೇರಿ.

*****
ಆರೆಸ್ಸೆಸಿಗರು ಮೀಸಲಾತಿ ವಿರೋಧಿಗಳು. ಅವರ ಮನುಧರ್ಮಶಾಸ್ತ್ರದಲ್ಲಿ ಮೀಸಲಾತಿಯಿಲ್ಲವಂತಲ್ಲಾ. ಅವರ ಪ್ರಕಾರ ಶ್ರೇಣೀಕೃತ ಸಮಾಜದ ಜೀವಿಗಳು ತಮ್ಮತಮ್ಮ ಆವರಣದಲ್ಲಿ ನಿಂತು ಅಲ್ಲಿಯೇ ಅಭಿವೃದ್ಧಿ ಕಾಣಬೇಕು. ಅಂದರೆ ದೋಭಿ ತನಗೆ ಧರ್ಮ ನಿಗದಿಪಡಿಸಿದ ಕೆಲಸದಲ್ಲಿ ಭಗವಂತನನ್ನ ಕಾಣಬೇಕು. ಇನ್ನ ಜಲಗಾರ, ಮಡಿವಾಳ, ಕ್ಷೌರಿಕ, ಕುರಿಗಾಯಿ, ದನಗಾಯಿ ಹೀಗೆ ಸಕಲೆಂಟು ಜಾತಿಗಳು ತಮ್ಮತಮ್ಮ ಆವರಣದಲ್ಲಿ ಧೃಢವಾಗಿ ನಿಂತು ತಮ್ಮ ಕರ್ತವ್ಯ ಮಾಡಬೇಕು. ಇದು ನಮ್ಮ ಧರ್ಮದ ನಿಯಮ. ಇದನ್ನ ಒಪ್ಪಿದ ನಮ್ಮ ಕನ್ನಡದ ಶ್ರೇಷ್ಠ ಕತೆಗಾರ ಮಾಸ್ತಿಯವರೂ ಇದನ್ನು ಪ್ರತಿಪಾದಿಸಿದರು. ಇನ್ನು ಆ ತುದಿಯಲ್ಲಿ ನ್ಯಾಯಾಂಗದ ಉನ್ನತ ಸ್ಥಾನ ಅಲಂಕರಿಸಿ ಬಂದ ರಾಮಾಜೋಯಿಸರು ಕೂಡ ಇದನ್ನೇ ಪ್ರತಿವಾದಿಸಿದ್ದಲ್ಲದೆ, ಮೀಸಲಾತಿ ಕೊಡಕೂಡದೆಂಬ ಅರ್ಜಿಯನ್ನು ಸುಪ್ರೀಂಕೊರ್ಟಿಗೆ ಕೊಟ್ಟಿದ್ದರು. ಇವರೇ ಜಡ್ಜ್ ಆಗಿ ಅಂತಹ ಅರ್ಜಿ ಬಂದಿದ್ದರೆ, ಅನಾಮತ್ತು ಅಂಗೀಕರಿಸಿ ಆಜ್ಞೆ ಮಾಡುತ್ತಿದ್ದರೇನೋ! ಆದರೆ ಸಾಮಾಜಿಕ ನ್ಯಾಯದ ಪ್ರತಿಪಾದಕರಾಗಿದ್ದ ಜಡ್ಜ್ ಸಾಹೇಬರು ಈ ರಾಮಾಜೋಯಿಸರ ಅರ್ಜಿಯನ್ನ ನೋಡಿ ಹುಸಿನಕ್ಕು ತಿರಸ್ಕರಿಸಿದರು. ನಾನೂ ಒಬ್ಬ ಜಡ್ಜ್ ಆಗಿದ್ದು ನನ್ನ ಆರ್ಜಿಯನ್ನ ನನಗಿಂತ ಕಿರಿಯರಿಂದ ತಿರಸ್ಕರಿಸಲ್ಪಟ್ಟಿತಲ್ಲಾ ಎಂದು ನೊಂದುಕೊಂಡರಂತೆ ರಾಮಾಜೋಯಿಸರು. ಈಗ ಮೇಲ್ಜಾತಿಗಳಿಗೆ ಅದರಲ್ಲಿ ಬ್ರಾಹ್ಮಣರಿಗೆ ಉಪಯೋಗವಾಗುವ ಹತ್ತು ಪರಸೆಂಟ್ ಮೀಸಲಾತಿ ತಂದಿರುವುದು ಚಡ್ಡಿಗಳಿಗೆ ತಡೆಯಲಾರದ ಸಂತೋಷವಾಗಿದೆಯಂತಲ್ಲಾ, ಥೂತ್ತೇರಿ.
******

ಹತ್ತು ಪರಸೆಂಟ್ ಮೀಸಲಾತಿ ಹೇಗೆ ಸಂವಿಧಾನದ ಆಶಯಕ್ಕೆ ಧಕ್ಕೆಯಾಗಿದೆ ಎಂಬ ದೇವನೂರರ ವಿವರಣೆಯಿಂದ ಆರೆಸ್ಸಿಸಿಗರ ಬಾಲಕ್ಕೆ ಬೆಂಕಿ ಬಿದ್ದಿದೆಯಂತಲ್ಲಾ. ಅವುಗಳು ಹತ್ತು ಪರಸೆಂಟಿನ ಫಲಾನುಭವಿಗಳು ಯಾರು ಎಂಬ ಬಗ್ಗೆ ವಿವರ ಕೊಡಲಾಗಿ ಈ ವಿವರವೂ ಸಮತೂಕದಲ್ಲಿ ಸಮಂಜಸವಾಗಿದೆ ಎಂದು ಕವಿ ಚಂದ್ರಶೇಖರ ತಾಳ್ಯ ವಕಾಲತ್ತು ವಹಿಸಿದ್ದಾರಲ್ಲಾ. ಕವಿ ಮನಸ್ಸು ಆರೋಗ್ಯವಾಗಿರಬೇಕು. ಯಾವುದೇ ಕೆಲಸ ಅಥವಾ ಮಾತುಕತೆಯಲ್ಲಿ ತಮ್ಮ ಅಜೆಂಡಾಗಳ ಸಂಚನ್ನೇ ಹೂಡುವ ಪುರೋಹಿತರನ್ನು ಸರಿಯಾಗಿ ಅರಿಯಬೇಕು. ಮೀಸಲಾತಿ ವಿರೋಧಿಗಳು ಹತ್ತು ಪರಸೆಂಟನ್ನ ಪ್ರತಿವಾದಿಸಿ ಸಂಭ್ರಮಿಸುವುದರ ಹಿಂದಿನ ಹಿಕಮತ್ತು ಅರಿವಾಗಬೇಕು. ಈ ನಮ್ಮ ದೇಶದಲ್ಲಿ ಅಸಾಧ್ಯವಾದ ಯಾವುದೇ ಅಕ್ರಮವಿಲ್ಲ. ಆದ್ದರಿಂದ ಹತ್ತು ಪರಸೆಂಟು ಯಾರ ಮೀಸಲಾಗುತ್ತದೆಂದು ಅರಿಯಬೇಕಿತ್ತು. ಇಲ್ಲಿ ಜಾತಿ ಕಾರಣಕ್ಕೆ ಬಡವರಾದವರು ದರಿದ್ರರಾದರು ಮತ್ತು ಇಂದು ಕೂಡ ಅಸ್ಪೃಶ್ಯತೆಗೆ ತುತ್ತಾದವರು. ಇದು ಕವಿಗೆ ಕಾಣಬೇಕಿತ್ತು. ಸಾಮಾಜಿಕವಾಗಿ ಮೇಲ್ವರ್ಗದಲ್ಲಿದ್ದು ಬಡವನಾದವನ ಬಡತನ ಎಂತಹದ್ದು ಎಂಬುದನ್ನ ಗ್ರಹಿಸಬೇಕಿತ್ತು. ಸಾವಿರಾರು ವರ್ಷದಿಂದ ಬಡ ಬ್ರಾಹ್ಮಣ ಎಂಬ ಹಣೆಪಟ್ಟಿ ಅಂಟಿಸಿಕೊಂಡು ನಿಜವಾದ ಬಡವವರಿಗೆ ಬಳಸಲು ಪದವೇ ಇಲ್ಲದಂತೆ ಮಾಡಿರುವವರ ಸಂಚು ತಾಳ್ಯರಿಗೆ ತಿಳಿಯಬೇಕಿತ್ತಲ್ಲಾ, ಥೂತ್ತೇರಿ.
*******

ನಮ್ಮ ದೇಶದ ಲಾಂಛನವಾದ ಚತುರ್ಮುಖ ಸಿಂಹ ಈವರೆಗೆ ಧೀರಗಂಭೀರವಾಗಿ ದೇಶದ ಬಗ್ಗೆ ಯೋಚಿಸುವಂತೆ ಕಾಣುತಿತ್ತು. ಇದನ್ನ ಸಹಿಸಲಾಗದ ಮೋದಿಪಡೆ ಸಿಂಹ ವೈರಿ ಕಂಡಂತೆ ಘರ್ಜಿಸುವ ಮುಖಭಾವ ತಯಾರಿಸಿ ಹೊಸ ಪಾರ್ಲಿಮೆಂಟಿನ ಮೇಲೆ ಪ್ರತಿಷ್ಠಾಪಿದವಂತಲ್ಲಾ. ಈ ಮಹಾಕಾರ್ಯಕ್ಕೆ ವಿರೋಧ ಪಕ್ಷದ ಯಾರನ್ನೂ ಕರೆಯದೆ ಪ್ರಧಾನಿ ಸ್ವತಃ ತಾವೆ ಉದ್ಘಾಟಿಸಿ, ಕೆಳಗಿಳಿದು ಯಾವುದೋ ಪುರೋಹಿತ ಕೊಟ್ಟ ಕಾರ್ಯಕ್ರಮ ಹುಡುಕುತ್ತ ಹೋದರಂತಲ್ಲಾ. ಬಿ.ಜೆ.ಪಿಗಳು ಸಿಂಹಕ್ಕೆ ಸಿಟ್ಟುಬರಿಸುವ ಮುಖ ಮಾಡಿದ್ದು ಹೊಸದೇನಲ್ಲ. ಲಕ್ಷ್ಮಣ ಸೀತೆ ಮತ್ತು ಆಂಜನೇಯರೊಡಗೂಡಿ ಪುರುಷೋತ್ತಮನಂತೆ ನಿಂತಿದ್ದ ರಾಮನನ್ನ ಆ ಪಟದಿಂದ ಬೇರ್ಪಡಿಸಿ ಬಿಲ್ಲು ಬಾಣಗಳೊಡನೆ ಯುದ್ಧಕ್ಕೆ ನಿಂತ ಭಂಗಿ ರೂಪಿಸಿ ಸರ್ಕಲ್ಲುಗಳಲ್ಲಿ ನಿಲ್ಲಿಸಿ ಆಗಲೇ ಎರಡು ದಶಕವಾಯಿತು. ಅದು ಅಡ್ವಾನಿಯ ಕಾಲ. ಈ ಮೋದಿ ಕಾಲದಲ್ಲಿ ಕರ್ತವ್ಯ ಪ್ರಜ್ಞೆ, ಭಕ್ತಿ ವಿಧೇಯತೆ ಮತ್ತು ಅಸಾಮಾನ್ಯ ಸಂಗೀತದ ಪ್ರತೀಕವಾಗಿದ್ದ ಆಂಜನೇಯನನ್ನ ಶ್ರೀರಾಮನ ಪದತಲದಿಂದೆಳೆದು ವಾಘಾ ಗಡಿಯ ಕೆರಳಿದ ಸೈನಿಕನನ್ನಾಗಿ ಮಾಡಿ ದಶಕವೇ ಆಯ್ತು. ಈಗ ಎಲ್ಲಿ ನೋಡಿದರೂ ಕೆರಳಿದ ಒಂದು ರೀತಿ ನರಸಿಂಹನಂತೆ ಕಾಣುವ ಆಂಜನೇಯನ ಚಿತ್ರವನ್ನ ನೋಡುತ್ತಿದ್ದೇವೆ. ಬರಲಿರುವ ದಿನಗಳಲ್ಲಿ ನಮ್ಮ ಪುರಾಣದ ವ್ಯಕ್ತಿಗಳು ಈ ಬಿ.ಜೆ.ಪಿಗಳ ಕೈಗೆ ಸಿಕ್ಕಿ ಇನ್ನ ಯಾವ್ಯಾವ ಆಯುಧ ಹಿಡಿದುಕೊಂಡು ಕೆಕ್ಕರಿಸಿ ನೋಡುತ್ತವೋ ಏನೋ ಎಂಬಂತಾಗಿದೆಯಲ್ಲಾ, ಥೂತ್ತೇರಿ.
*******

ಬಿ.ಜೆ.ಪಿಗಳು ಆಂಜನೇಯನಿಗೇ ಅಂಟಿಕೊಳ್ಳಲು ಪ್ರಬಲ ಕಾರಣವಿದೆ. ಲಂಕಾಪಟ್ಟಣದ ಅಶೋಕವನದಲ್ಲಿ ಶೋಕಸಾಗರದಲ್ಲಿ ಕುಳಿತಿರುವ ಸೀತಾದೇವಿಯನ್ನ ಕಂಡು ’ರಾಮ ಬಂದು ಕರೆದುಕೊಂಡು ಹೋಗುತ್ತಾನೆಂದು ಧೈರ್ಯ ಹೇಳಿ ಬಾ’ ಎಂದು ಶ್ರೀರಾಮಚಂದ್ರ ಆಂಜನೇಯನನ್ನು ಕಳಿಸಿದನಂತೆ. ಆಗ ಆಂಜನೇಯ ಸೀತೆ ನನ್ನನ್ನು ನೋಡಿ ನಂಬದೇಹೋದರೆ ಏನುಮಾಡಬೇಕೆಂದು ಕೇಳಿದಾಗ ರಾಮ ಮುದ್ರೆಯುಂಗುರ ಕೊಟ್ಟು ಕಳಿಸಿದನಂತೆ. ಅದನ್ನು ತೆಗೆದುಕೊಂಡು ಹಾರಿಹೋದ ಹನುಮ ರಾಮ ಹೇಳಿದ ಕೆಲಸ ಮಾಡುವುದರ ಜೊತೆಗೆ ಲಂಕೆಗೆ ಬೆಂಕಿಯಿಟ್ಟು ಬಂದನಂತೆ. ರಾವಣನ ಕಡೆಯವರೇನೋ ಆಂಜನೇಯನ ಬಾಲಕ್ಕೆ ಬೆಂಕಿಹಚ್ಚಿದರು ಸರಿ. ಆದರೆ ಆಂಜನೇಯ ಜವಾಬ್ದಾರಿಯುತನಾಗಿದ್ದರೆ ಬೆಂಕಿ ನಂದಿಸಿಕೊಂಡು ಬರಬೇಕಿತ್ತು. ಅದು ಬಿಟ್ಟು ಲಂಕೆಗೇ ಬೇಂಕಿ ಹಚ್ಚಿದ. ಅಲ್ಲಿ ಮಕ್ಕಳಿದ್ದರು, ಮುದುಕರಿದ್ದರು, ಗರ್ಭಿಣಿಯರಿದ್ದರು. ಊರುಬಿಟ್ಟು ಓಡಲಾರದ ಅಶಕ್ತ ಅಸಹಾಯಕರಿದ್ದರು. ಇವರಿಗೂ ರಾವಣ ಹೊತ್ತು ತಂದ ಸೀತೆಗೂ ಯಾವ ಸಂಬಂಧವೂ ಇರಲಿಲ್ಲ. ಅದೇನಾದರಾಗಲಿ ಯಾವುದೇ ವಿವೇಚನೆಯಿಲ್ಲದೆ ತಾವು ಹೇಳಿದ ಕೇರಿಗೆ ಬೆಂಕಿ ಹಚ್ಚುವ ವ್ಯಕ್ತಿಗಳು ಬಿ.ಜೆ.ಪಿಗಳಿಗೆ ಸಿಕ್ಕಿವೆ. ಈ ವಾನರ ಸೇನೆಗೆ ಒಬ್ಬ ದೈವ ಬೇಕಿತ್ತು. ಅದಕ್ಕಾಗಿ ಆಂಜನೇಯನೇ ಸೂಕ್ತವೆಂದು ಮುಗ್ಧ ಆಂಜನೇಯನಿಗೆ ವ್ಯಗ್ರರೂಪಕೊಟ್ಟು ಮೆರೆಸುತ್ತಿದ್ದಾರಂತಲ್ಲಾ, ಥೂತ್ತೇರಿ.

– ಯಾಹೂ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೊಲೆ ಮಾಡ್ತಿರೋದು SDPI,PFI . ಬಲಿ ಆಗ್ತಿರೋದು ಹಿಂದೂಗಳು ,ಆದರೂ ಇದಕ್ಕೆ ಹೊಣೆ ಹಿಂದೂ ಸಂಘಟನೆ , ಈ ಪತ್ರಿಕೆ ಸಂಪಾದಕ ಹೊಟ್ಟೆಗೆ ಎಂದೂ ಊಟ ತಿನ್ನಲ್ಲಾ ಅನಿಸುತ್ತೇ ಹಂದಿಗಳ ಲದ್ದಿ ಬಿಟ್ಟು ,ತೂ …..

LEAVE A REPLY

Please enter your comment!
Please enter your name here

- Advertisment -

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...