Homeಅಂಕಣಗಳುಮೋದಿಗೂ ಅರ್ಜುನನಿಗೂ ಯಾವ ಸಂಬಂಧ!

ಮೋದಿಗೂ ಅರ್ಜುನನಿಗೂ ಯಾವ ಸಂಬಂಧ!

- Advertisement -
- Advertisement -

ಸಿದ್ದರಾಮಯ್ಯನವರ ಸರಕಾರ ರಚನೆಯಾಗಿ ತಿಂಗಳೊಪ್ಪತ್ತಾಗುವಷ್ಟರಲ್ಲಿ ಮುಖ್ಯಮಂತ್ರಿ ಕಾರ್ಯಾಲಯದಲ್ಲಿ ವರ್ಗಾವಣೆಗೆ 30 ಲಕ್ಷ ಲಂಚ ತೆಗೆದುಕೊಳ್ಳಲಾಗುತ್ತಿದೆಯೆಂದೂ ಕುಮಾರಸ್ವಾಮಿಯವರು ಬಾಂಬು ಸಿಡಿಸಿದ್ದಾರಲ್ಲಾ. ಈ ಬಗ್ಗೆ ಕಾಂಗೈ ಪಾಳಯದಲ್ಲಿ ದೊಡ್ಡ ಚರ್ಚೆಯೇ ನಡೆದು, ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗುವುದಕ್ಕೆ ಹಲವು ವರ್ಷಗಳ ಮೊದಲು ದೇವೇಗೌಡರ ಹದಿನೆಂಟು ತಿಂಗಳು ಮುಖ್ಯಮಂತ್ರಿಯಾಗಿದ್ದರು. ಆಗ ರೇವಣ್ಣನಿಗೆ ಮತ್ತು ಕುಮಾರಣ್ಣನಿಗೆ ದೇವೇಗೌಡರ ಸನಿಹದಲ್ಲಿ ಸುಳಿದಾಡುವ ವಿಷಯದಲ್ಲಿ ಜಗಳವೇ ಆಗಿತ್ತು. ಅದರಲ್ಲೂ ರೇವಣ್ಣ ಮುಖ್ಯಮಂತ್ರಿ ಇಲ್ಲದ ಸಮಯ ನೋಡಿ ಅವರ ಕುರ್ಚಿಯಲ್ಲಿ ಕುಳಿತು ಗೌಡರಂತೆ ಅತ್ತ ಇತ್ತ ನೋಡಿದ್ದು ಸದನದಲ್ಲಿ ಚರ್ಚೆಗೆ ಬಂದಿತ್ತು. ಮುಂದೆ ದೇವೇಗೌಡರು ಪ್ರಧಾನಿಯಾದಾಗಲೂ ಅವರ ಬೆಂಗಾವಲಿನಂತೆ ಕುಮಾರಣ್ಣ ಸುಳಿದಾಡುತ್ತಿದ್ದರು, ಆದ್ದರಿಂದ ಒಬ್ಬ ಮಾಜಿ ಮುಖ್ಯಮಂತ್ರಿ ಮಗನ ದೂರನ್ನು ಅಷ್ಟು ಸುಲಭವಾಗಿ ತೆಗೆದುಹಾಕಲಾಗುವುದಿಲ್ಲ. ಅವರ ಅನುಭವದ ಮಾತನ್ನು ಅಲ್ಲಗಳೆಯಲಾಗುವುದಿಲ್ಲ ಅದರಲ್ಲೂ ಕುಮಾರಣ್ಣ ತಮ್ಮ ಹುಡುಗರನ್ನು ಸಿದ್ದರಾಮಯ್ಯನವರ ಸುತ್ತ ಬಿಟ್ಟಿದ್ದಾರೆ. ಸದ್ಯಕ್ಕೆ ಆಡಳಿತಾತ್ಮಕವಾದ ದೂರು ಟೀಕೆಗಳಿಗಿಂತ ಕುಮಾರಣ್ಣ ಇಂತಹವುಗಳನ್ನ ಹುಡುಕಿ ಕಡ್ಡಿಗೀರುವುದರಿಂದ ತಾವೆಲ್ಲಾ ಹುಷಾರಾಗಿರಬೇಕೆಂದು ಕಾಂಗೈ ಶಾಸಕರು ಚರ್ಚಿಸಿದರಂತಲ್ಲಾ, ಥೂತ್ತೇರಿ.

*****

ಕರ್ನಾಟಕದ ವಿಧಾನಸೌಧದ ಚರಿತ್ರೆಯಲ್ಲಿ ವಿರೋಧಪಕ್ಷದ ನಾಯಕನಿಲ್ಲದೆ ಸದನ ಆರಂಭಗೊಂಡು ರಾಜ್ಯಪಾಲರು ಭಾಷಣ ಮಾಡಿದ್ದು, ಸದನ ನಡೆದದ್ದು ಇದೇ ಮೊದಲಿರಬೇಕು. ಸಂವಿಧಾನ ವಿರೋಧಿಗಳಾದವರಿಗೆ ಇದೇನು ಅವಮಾನದ ಪ್ರಸಂಗವಲ್ಲ. ಹಾಗೆ ನೋಡಿದರೆ ಬಿಜೆಪಿಗಳ ಪರಿವಾರಕ್ಕೆ ಅವಮಾನವೇ ಆಗುವುದಿಲ್ಲ; ಬೇಕಾದರೆ ಕೇಳಿ ನೋಡಿ. ಇನ್ನು ಈ ಕುರಿತು ಮಾಧ್ಯಮದ ಮಂದಮತಿಗಳು ಹೇಗಿದ್ದಾರೆಂದರೆ, ಅವರಿಗೂ ಅದೊಂದು ಸುದ್ದಿಯಲ್ಲ. ಸಿದ್ದಾರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಮುಖ್ಯಮಂತ್ರಿ ಆಯ್ಕೆ ಸಮಯದಲ್ಲಿ ಜಟಾಪಟಿ ಇದ್ದಾಗ, ಕಡ್ಡಿ ರಂಗ ಹನುಮ ಜೊಷಿ ಪಾಸಿಗಳು ಟಿ.ವಿಯೊಳಗಿಂದ ಈಚೆಗೆ ನೆಗೆಯುವಂತಾಡಿದರು. ಇದೇ ಜನ ಎಡೂರಪ್ಪ ಸಂಪುಟ ರಚಿಸದೆ ಪ್ರವಾಹದ ಜಾಗಕ್ಕೆ ಒಬ್ಬರೇ ಹೋದಾಗ ಕಡುಬು ತುಂಬಿದ ಬಾಯಿ ಮಾಡಿಕೊಂಡಿದ್ದರು. ಇದಕ್ಕಿಂತ ಮುಖ್ಯವಾಗಿ ಆಕಸ್ಮಾತ್ ರೈತನಿಗೆ ಲಾಟರಿ ಹೊಡೆದಂತೆ ಟೊಮೊಟೊ ಕೆ.ಜಿ.ಗೆ ನೂರು ರೂಪಾಯಿ ಏರಿದ ಕೂಡಲೇ ರಕ್ತಕಾರುವುದಕ್ಕೆ ಶುರುಮಾಡಿದರು. ಆದರೆ ಇವರ ಕಣ್ಣೆದುರಿಗೆ ಡೀಸೆಲ್ ಪೆಟ್ರೋಲ್ ಬೆಲೆ ವಿಷದಂತೆ ಏರಿದ್ದು ಇವರಿಗೆ ದೊಡ್ಡ ಸುದ್ದಿಯೇ ಆಗಲಿಲ್ಲವಲ್ಲಾ. ಅಷ್ಟಕ್ಕೂ ಈ ಚಾನಲ್‌ಗಳು ಮನೆಯ ಹಟ್ಟಿ ಬಾಗಿಲಲ್ಲಿ ಕುಳಿತು ವದರುವ ವ್ಯಕ್ತಿಯಂತಾಗಿರುವುದು ಹಳೆಯ ಸುದ್ದಿಯಂತಲ್ಲಾ, ಥೂತ್ತೇರಿ.

*****

ಕೆ.ಎಸ್.ಆರ್.ಟಿ.ಸಿ ಆದಾಯ ಏರಿಕೆಯಾಗಿದೆ. ಮಹಿಳಾ ಪ್ರಯಾಣಿಕರ ಹಣವನ್ನು ತುಂಬಿಕೊಟ್ಟಿರುವ ಸರಕಾರದ ಬಗ್ಗೆ ಇಲಾಖೆ ಸಂತಸ ವ್ಯಕ್ತಪಡಿಸಿದೆ. ತಮ್ಮ ಜೀವಮಾನವಿಡೀ ಎಲ್ಲೂ ಹೋಗದೆ ಅಡುಗೆ ಮನೆ, ಕೊಟ್ಟಿಗೆ ಮತ್ತು ಹೊಲ, ತೋಟದ ದಾರಿ ಸವೆಸಿದ್ದ ಮಹಿಳೆಯರು ಮೊದಲಬಾರಿಗೆ ಕಳಸ, ಹೊರನಾಡು, ಸುಬ್ರಹ್ಮಣ್ಯ, ಧರ್ಮಸ್ಥಳ, ಮುರುಡೇಶ್ವರ, ಮಹದೇಶ್ವರಕ್ಕೆ ದಾಳಿಯಿಡುತ್ತಿದ್ದಾರೆ. ಸರಕಾರದ ಕಡೆಯಿಂದ ಅವರ ಕಡೆಗೆ ಒಳ್ಳೆ ಗಾಳಿ ಬೀಸಿದ್ದರಿಂದ ಕೆಲವರಿಗೆ ಸಹಜವಾಗಿ ಹೊಟ್ಟೆಗೆ ಸುಣ್ಣ ಹುಯ್ದಂತಾಗಿದೆ. ಮಹಿಳೆಗೆ ಸಿಗುವ ಒಂದು ಸಣ್ಣ ಸ್ವಾತಂತ್ರ್ಯ ಮತ್ತು ಸವಲತ್ತಿಗೆ ಕಂಗಾಲಾಗುವ ಕೆಲ ಪುರುಷ ಮೃಗಗಳು ಮಹಿಳೆಯರು ಬಸ್ಸತ್ತುವುದನ್ನು ಹತ್ತಲು ಹೋಗಿ ಬಾಗಿಲನ್ನೇ ಮುರಿದುದನ್ನು ದಿನವಿಡೀ ತೋರಿಸುತ್ತಿವೆ ಈ ಮಾಧ್ಯಮಗಳು. ಇತ್ತ ಕೆಲವು ಕಮಲ ಪಾರ್ಟಿಯರು ಹೆಂಗಳೆಯರನ್ನು ಹೀಗಳೆಯುತ್ತಿದ್ದಾರೆ. ಇಂತಹ ಮಹಿಳೆಯರು ಬಸ್ಸು ಹತ್ತಿದ ಕೂಡಲೆ ಟಿಕೆಟ್ ತೆಗೆದುಕೊಂಡರೆ ಎಷ್ಟು ಚಂದ ಅಲ್ಲವೆ ಎಂದು ತಮ್ಮ ಬಸ್ಸಿನಲ್ಲಿ ಫ್ರೀಯಾಗಿ ಓಡಾಡುವ ಮಹಿಳೆಯರು ಉತ್ತರವಾಗಿದೆಯಲ್ಲಾ, ಥೂತ್ತೇರಿ.

*****

ಇದನ್ನೂ ಓದಿ: ತುರ್ತುಪರಿಸ್ಥಿತಿಯ ಗರ್ಭದಲ್ಲೇ ಕಮಲ ಅರಳಿತಂತಲ್ಲಾ!

 

ಆಳುವ ಸರಕಾರವನ್ನು ಟೀಕಿಸುವುದು ವಿರೋಧ ಪಕ್ಷದ ಕೆಲಸ. ವಿರೋಧಿಗಳ ಮಾತುಗಳನ್ನ ಕೇಳಿಸಿಕೊಳ್ಳಬೇಕಾದರೆ ಅವರು ಘನತೆಯಿಂದಲೇ ಆರೋಪಿಸಬೇಕು. ಆದರೀಗ ವಿರೋಧಿಗಳು ಆಡುವ ಮಾತಿಗೆ ಜನಗಳು ಕನಿಕರದಿಂದ ಲೊಚಗರಿಯುತ್ತಿದ್ದಾರಲ್ಲಾ. ಉದಾಹರಣೆಗೆ ಅಕ್ಕಿ ಕೊಡಿ ಇಲ್ಲ ಹಣ ಕೊಡಿ ಎಂದು ಕೂಗುತ್ತಿದ್ದ ಬಿಜೆಪಿಗಳ ಬಾಯಿ ಬಂದ್ ಆಗುವಂತೆ ಸರಕಾರ ಐದು ಕೆ.ಜಿ ಬದಲು ಹಣಕೊಡಲು ಹೊರಟಿದೆ. ತಮ್ಮ ಮಾತು ತಮಗೇ ತಿರುಗುಬಾಣವಾದುದರಿಂದ ಗಲಿಬಿಲಿಯಾದ ಬಿಜೆಪಿಗಳು, ಮತ್ತೆ ಹಣ ಬೇಡ ಅಕ್ಕಿ ಕೊಡಿ ಎನ್ನುತ್ತಿವೆ. ಇವರ ಮಾತಿಗೆ ದನಿಗೂಡಿಸಿದ ಮತ್ತು ಒಂದು ಹೆಜ್ಜೆ ಮುಂದೆ ಹೋಗಿ, ಹಣ ಕೊಟ್ಟರೆ ಜನ ಕುಡಿದು ಇಸ್ಪೀಟ್ ಆಡುತ್ತಾರೆ ಎಂದುಬಿಟ್ಟಿದ್ದಾರಂತಲ್ಲಾ ಬಿಜೆಪಿ ಜತೆಗೆ ಮೈತ್ರಿಗೆ ಹವಣಿಸುತ್ತಿರುವ ಮುಖಂಡರು. ಇದಕ್ಕೆ ಕಾಂಗೈಗಳ ಕುಹಕವೇನೆಂದರೆ ಕುಮಾರಣ್ಣನ ಕಡೆಯ ಸೈನ್ಯದಲ್ಲಿ ಎಪ್ಪತ್ತು ಭಾಗ ಕುಡಿದು ಇಸ್ಪೀಟ್ ಆಡುವಂತವರೆ; ಬೇಕಿದ್ದರೆ ಚನ್ನಪಟ್ಟಣ ರಾಮನಗರದ ಕಡೆ ಹೋದರೆ ಗೊತ್ತಾಗುತ್ತದೆ; ತಮ್ಮವರು ಕುಡಿದು ಕಾರ್ಡ್ ಆಡಿಕೊಂಡು ಹಾಳಾಗುವುದನ್ನು ನೋಡಲಾಗುವುದಲ್ಲ, ಅದಕ್ಕೆ ಅವರು ಹಣ ಬೇಡ ಎನ್ನುತ್ತಿದ್ದಾರೆ. ಇದು ಒಂದೆಡೆಯಾದರೆ ಅವರ ಮಗ ನಿಖಿಲ್ ಮಂಡ್ಯದಲ್ಲಿ ಸಂಯುಕ್ತ ಆಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸೋತು, ತಮ್ಮದೇ ಪಕ್ಷದ ಅಭ್ಯರ್ಥಿಯಾಗಿ ವಿಧಾನಸಭೆಯ ಚುನಾವಣೆಯಲ್ಲಿ ರಾಮನಗರದಲ್ಲೂ ಸೋತರು. ಮುಂದೆ ಆತನ ಭವಿಷ್ಯ ಇರುವುದು ಕಾಂಗ್ರೆಸ್‌ನಲ್ಲಿ ಮಾತ್ರ ಎಂದು ರಾಮನಗರದ ಜೆ.ಡಿ.ಎಸ್‌ನ ನಿಷ್ಠಾವಂತ ಜನ ಮಾತನಾಡುತ್ತಿದ್ದಾರಂತಲ್ಲಾ, ಥೂತ್ತೇರಿ.

*****

ಫ್ರಾನ್ಸ್ ಹತ್ತಿ ಉರಿಯುತ್ತಿದೆ. ಪೊಲೀಸರು ಹುಡುಗನೊಬ್ಬನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾಂಗಿಯ ಗಲಭೆ ಸ್ಫೋಟಗೊಂಡು ಇಡೀ ದೇಶವೇ ಹತ್ತಿ ಉರಿದ ಉದಾಹರಣೆಯಿಲ್ಲ. ಇಂತಹ ಸ್ಫೋಟ ಸಂಭವಿಸಬೇಕಾದರೆ, ಹಲವು ಕಿಡಿಗಳು ಸೇರಿ ಸಿಡಿಮದ್ದಾಗಿರಬೇಕು. ಸಿಡಿಯಲು ಒಂದು ಕಾರಣ ಬೇಕಾಗಿತ್ತಷ್ಟೆ. ಜಗತ್ತಿನ ರಾಷ್ಟ್ರಗಳು ಎಚ್ಚೆತ್ತುಕೊಳ್ಳಬೇಕಾದ ಘಟನೆಯಿದು. ಹಾಗೆ ನೋಡಿದರೆ ಆ ದೇಶದ ಅಧ್ಯಕ್ಷ ಯಾಕೋ ನಮ್ಮ ಪ್ರಧಾನಿಯವರಂತೆ ಗೋಚರಿಸುತ್ತಿದ್ದಾನೆ. ಬೆಂಕಿ ಕಿಡಿಯನ್ನು ಆರಂಭದಲ್ಲೇ ಆರಿಸುವುದನ್ನು ಬಿಟ್ಟು ಮಹಡಿಮೇಲೆ ನಿಂತು ನೋಡುತ್ತಿರುವಂತೆ ಕಾಣುತ್ತಿದ್ದಾನೆ. ನಮ್ಮಲ್ಲೂ ಅಷ್ಟೇ ಅಲ್ಲವೆ? ನಮ್ಮ ಮಣಿಪುರ ಹೊತ್ತಿ ಉರಿಯುತ್ತಿದೆ. ಪ್ರಧಾನಿ ಆ ಬಗ್ಗೆ ಈವರೆಗೂ ಸಕಾರಾತ್ಮಕ ಕ್ರಮಕ್ಕೆ ಮುಂದಾಗಿಲ್ಲ. ಈ ವಿಷಯವಾಗಿ ನಮ್ಮ ಕಿಡಿಗೇಡಿ ಮನಸ್ಸು ಏನು ಹೇಳುತ್ತಿದೆಯೆಂದರೆ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದವರು. ಪ್ರಧಾನಿಯಾದ ಅವರಿಗೆ ಭಾರತದ ಎಲ್ಲ ರಾಜ್ಯಗಳು ಗುಜರಾತಿನಂತೆಯೆ. ನಾನೀಗ ರಾಜ್ಯದ ಮುಖ್ಯಮಂತ್ರಿಯಲ್ಲ, ದೇಶದ ಪ್ರಧಾನಿ ಎಂಬ ಭಾವ ಬಂದಿದ್ದರೆ, ವಿದೇಶಕ್ಕೆ ಹೋಗಿ ಯೋಗ ಮಾಡುವುದರ ಬದಲು ಮಣಿಪುರಕ್ಕೆ ಹೋಗಿ ಜನರ ಮನಗೆಲ್ಲುತ್ತಿದ್ದರಂತಲ್ಲಾ, ಥೂತ್ತೇರಿ.

*****

ಎಲ್ಲಿ ಗಲಭೆಯಾಗುತ್ತದೋ ಅಲ್ಲಿ ಜನರನ್ನು ಸಂತೈಸಲು ಕಾಣಿಸಿಕೊಳ್ಳುವಂತಹ ರಾಹುಲ್ ಗಾಂಧಿ ಮಣಿಪುರಕ್ಕೆ ಹೋದರಂತಲ್ಲಾ. ಮಣಿಪುರದ ಹೆಸರು ನಮ್ಮ ಕರ್ನಾಟಕಕ್ಕೂ ಪರಿಚಿತ. ಡಾ.ರಾಜಕುಮಾರ್ ನಟಿಸಿದ ಬಬ್ರುವಾಹನ ಚಿತ್ರದಲ್ಲಿ, ತನ್ನ ತಂದೆಯಾದ ಅರ್ಜುನನನ್ನು ಕಾಣಲು ಬಂದ ಬಬ್ರುವಾಹನನನ್ನ ಕುರಿತು ಅಣ್ಣನವರು, ’ನೀನೆಯೋ ಮಣಿಪುರದ ಅರಸು ವೀರ ಬಬ್ರುವಾಹನ? ಅಂತಹ ಹೆಸರಿನ ಮಕ್ಕಳು ನನಗಿಲ್ಲ. ಹೋಗಿ ನಿಮ್ಮಮ್ಮನನ್ನು ಕೇಳು, ನನಗೆ ಜನ್ಮ ಕೊಟ್ಟ ತಂದೆ ಯಾರು ಅಂತ’ ಎಂದು ಮೂದಲಿಸುತ್ತಾರೆ. ಹಾಗಾಗಿ ಕರ್ನಾಟಕಕ್ಕೆ ಮಣಿಪುರ ಹೀಗೆ ಪರಿಚಯ, ಉಲೂಚಿ ಚಿತ್ರಾಂಗದೆಯರೂ ಪರಿಚಯ. ಈಗಲೂ ಮಣಿಪುರದಲ್ಲಿ ಸ್ತ್ರೀ ಶಕ್ತಿಯೇ ಮುಂದೆ; ಯಾರೋ ಮೂರ್ಖ, ಅರ್ಜುನ ಮತ್ತು ನಮ್ಮ ಮೋದಿಯವರನ್ನು ಹೋಲಿಕೆ ಮಾಡಿ ವಾಟ್ಸಾಪ್ ಮಾಡಿದ್ದಾನೆ. ಏನಾದರಾಗಲಿ, ಅರ್ಜುನ ತನ್ನ ಮಗನ ಬಗ್ಗೆಯೇ ಸಂಶಯಿಸಿದಂತೆ, ಮಣಿಪುರ ನಮ್ಮ ದೇಶದ ರಾಜ್ಯವೋ ಅಲ್ಲವೋ ಎಂದು ಸಂಶಯಿಸುವ ಹಾಗೆ ಪ್ರಧಾನಿ ನಡೆದುಕೊಂಡಿರುವುದು ಇಡೀ ದೇಶವೇ ಮುಜುಗರ ಪಡುವ ಸಂಗತಿಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...