Homeಅಂಕಣಗಳುಮೋದಿಗೂ ಅರ್ಜುನನಿಗೂ ಯಾವ ಸಂಬಂಧ!

ಮೋದಿಗೂ ಅರ್ಜುನನಿಗೂ ಯಾವ ಸಂಬಂಧ!

- Advertisement -
- Advertisement -

ಸಿದ್ದರಾಮಯ್ಯನವರ ಸರಕಾರ ರಚನೆಯಾಗಿ ತಿಂಗಳೊಪ್ಪತ್ತಾಗುವಷ್ಟರಲ್ಲಿ ಮುಖ್ಯಮಂತ್ರಿ ಕಾರ್ಯಾಲಯದಲ್ಲಿ ವರ್ಗಾವಣೆಗೆ 30 ಲಕ್ಷ ಲಂಚ ತೆಗೆದುಕೊಳ್ಳಲಾಗುತ್ತಿದೆಯೆಂದೂ ಕುಮಾರಸ್ವಾಮಿಯವರು ಬಾಂಬು ಸಿಡಿಸಿದ್ದಾರಲ್ಲಾ. ಈ ಬಗ್ಗೆ ಕಾಂಗೈ ಪಾಳಯದಲ್ಲಿ ದೊಡ್ಡ ಚರ್ಚೆಯೇ ನಡೆದು, ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗುವುದಕ್ಕೆ ಹಲವು ವರ್ಷಗಳ ಮೊದಲು ದೇವೇಗೌಡರ ಹದಿನೆಂಟು ತಿಂಗಳು ಮುಖ್ಯಮಂತ್ರಿಯಾಗಿದ್ದರು. ಆಗ ರೇವಣ್ಣನಿಗೆ ಮತ್ತು ಕುಮಾರಣ್ಣನಿಗೆ ದೇವೇಗೌಡರ ಸನಿಹದಲ್ಲಿ ಸುಳಿದಾಡುವ ವಿಷಯದಲ್ಲಿ ಜಗಳವೇ ಆಗಿತ್ತು. ಅದರಲ್ಲೂ ರೇವಣ್ಣ ಮುಖ್ಯಮಂತ್ರಿ ಇಲ್ಲದ ಸಮಯ ನೋಡಿ ಅವರ ಕುರ್ಚಿಯಲ್ಲಿ ಕುಳಿತು ಗೌಡರಂತೆ ಅತ್ತ ಇತ್ತ ನೋಡಿದ್ದು ಸದನದಲ್ಲಿ ಚರ್ಚೆಗೆ ಬಂದಿತ್ತು. ಮುಂದೆ ದೇವೇಗೌಡರು ಪ್ರಧಾನಿಯಾದಾಗಲೂ ಅವರ ಬೆಂಗಾವಲಿನಂತೆ ಕುಮಾರಣ್ಣ ಸುಳಿದಾಡುತ್ತಿದ್ದರು, ಆದ್ದರಿಂದ ಒಬ್ಬ ಮಾಜಿ ಮುಖ್ಯಮಂತ್ರಿ ಮಗನ ದೂರನ್ನು ಅಷ್ಟು ಸುಲಭವಾಗಿ ತೆಗೆದುಹಾಕಲಾಗುವುದಿಲ್ಲ. ಅವರ ಅನುಭವದ ಮಾತನ್ನು ಅಲ್ಲಗಳೆಯಲಾಗುವುದಿಲ್ಲ ಅದರಲ್ಲೂ ಕುಮಾರಣ್ಣ ತಮ್ಮ ಹುಡುಗರನ್ನು ಸಿದ್ದರಾಮಯ್ಯನವರ ಸುತ್ತ ಬಿಟ್ಟಿದ್ದಾರೆ. ಸದ್ಯಕ್ಕೆ ಆಡಳಿತಾತ್ಮಕವಾದ ದೂರು ಟೀಕೆಗಳಿಗಿಂತ ಕುಮಾರಣ್ಣ ಇಂತಹವುಗಳನ್ನ ಹುಡುಕಿ ಕಡ್ಡಿಗೀರುವುದರಿಂದ ತಾವೆಲ್ಲಾ ಹುಷಾರಾಗಿರಬೇಕೆಂದು ಕಾಂಗೈ ಶಾಸಕರು ಚರ್ಚಿಸಿದರಂತಲ್ಲಾ, ಥೂತ್ತೇರಿ.

*****

ಕರ್ನಾಟಕದ ವಿಧಾನಸೌಧದ ಚರಿತ್ರೆಯಲ್ಲಿ ವಿರೋಧಪಕ್ಷದ ನಾಯಕನಿಲ್ಲದೆ ಸದನ ಆರಂಭಗೊಂಡು ರಾಜ್ಯಪಾಲರು ಭಾಷಣ ಮಾಡಿದ್ದು, ಸದನ ನಡೆದದ್ದು ಇದೇ ಮೊದಲಿರಬೇಕು. ಸಂವಿಧಾನ ವಿರೋಧಿಗಳಾದವರಿಗೆ ಇದೇನು ಅವಮಾನದ ಪ್ರಸಂಗವಲ್ಲ. ಹಾಗೆ ನೋಡಿದರೆ ಬಿಜೆಪಿಗಳ ಪರಿವಾರಕ್ಕೆ ಅವಮಾನವೇ ಆಗುವುದಿಲ್ಲ; ಬೇಕಾದರೆ ಕೇಳಿ ನೋಡಿ. ಇನ್ನು ಈ ಕುರಿತು ಮಾಧ್ಯಮದ ಮಂದಮತಿಗಳು ಹೇಗಿದ್ದಾರೆಂದರೆ, ಅವರಿಗೂ ಅದೊಂದು ಸುದ್ದಿಯಲ್ಲ. ಸಿದ್ದಾರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಮುಖ್ಯಮಂತ್ರಿ ಆಯ್ಕೆ ಸಮಯದಲ್ಲಿ ಜಟಾಪಟಿ ಇದ್ದಾಗ, ಕಡ್ಡಿ ರಂಗ ಹನುಮ ಜೊಷಿ ಪಾಸಿಗಳು ಟಿ.ವಿಯೊಳಗಿಂದ ಈಚೆಗೆ ನೆಗೆಯುವಂತಾಡಿದರು. ಇದೇ ಜನ ಎಡೂರಪ್ಪ ಸಂಪುಟ ರಚಿಸದೆ ಪ್ರವಾಹದ ಜಾಗಕ್ಕೆ ಒಬ್ಬರೇ ಹೋದಾಗ ಕಡುಬು ತುಂಬಿದ ಬಾಯಿ ಮಾಡಿಕೊಂಡಿದ್ದರು. ಇದಕ್ಕಿಂತ ಮುಖ್ಯವಾಗಿ ಆಕಸ್ಮಾತ್ ರೈತನಿಗೆ ಲಾಟರಿ ಹೊಡೆದಂತೆ ಟೊಮೊಟೊ ಕೆ.ಜಿ.ಗೆ ನೂರು ರೂಪಾಯಿ ಏರಿದ ಕೂಡಲೇ ರಕ್ತಕಾರುವುದಕ್ಕೆ ಶುರುಮಾಡಿದರು. ಆದರೆ ಇವರ ಕಣ್ಣೆದುರಿಗೆ ಡೀಸೆಲ್ ಪೆಟ್ರೋಲ್ ಬೆಲೆ ವಿಷದಂತೆ ಏರಿದ್ದು ಇವರಿಗೆ ದೊಡ್ಡ ಸುದ್ದಿಯೇ ಆಗಲಿಲ್ಲವಲ್ಲಾ. ಅಷ್ಟಕ್ಕೂ ಈ ಚಾನಲ್‌ಗಳು ಮನೆಯ ಹಟ್ಟಿ ಬಾಗಿಲಲ್ಲಿ ಕುಳಿತು ವದರುವ ವ್ಯಕ್ತಿಯಂತಾಗಿರುವುದು ಹಳೆಯ ಸುದ್ದಿಯಂತಲ್ಲಾ, ಥೂತ್ತೇರಿ.

*****

ಕೆ.ಎಸ್.ಆರ್.ಟಿ.ಸಿ ಆದಾಯ ಏರಿಕೆಯಾಗಿದೆ. ಮಹಿಳಾ ಪ್ರಯಾಣಿಕರ ಹಣವನ್ನು ತುಂಬಿಕೊಟ್ಟಿರುವ ಸರಕಾರದ ಬಗ್ಗೆ ಇಲಾಖೆ ಸಂತಸ ವ್ಯಕ್ತಪಡಿಸಿದೆ. ತಮ್ಮ ಜೀವಮಾನವಿಡೀ ಎಲ್ಲೂ ಹೋಗದೆ ಅಡುಗೆ ಮನೆ, ಕೊಟ್ಟಿಗೆ ಮತ್ತು ಹೊಲ, ತೋಟದ ದಾರಿ ಸವೆಸಿದ್ದ ಮಹಿಳೆಯರು ಮೊದಲಬಾರಿಗೆ ಕಳಸ, ಹೊರನಾಡು, ಸುಬ್ರಹ್ಮಣ್ಯ, ಧರ್ಮಸ್ಥಳ, ಮುರುಡೇಶ್ವರ, ಮಹದೇಶ್ವರಕ್ಕೆ ದಾಳಿಯಿಡುತ್ತಿದ್ದಾರೆ. ಸರಕಾರದ ಕಡೆಯಿಂದ ಅವರ ಕಡೆಗೆ ಒಳ್ಳೆ ಗಾಳಿ ಬೀಸಿದ್ದರಿಂದ ಕೆಲವರಿಗೆ ಸಹಜವಾಗಿ ಹೊಟ್ಟೆಗೆ ಸುಣ್ಣ ಹುಯ್ದಂತಾಗಿದೆ. ಮಹಿಳೆಗೆ ಸಿಗುವ ಒಂದು ಸಣ್ಣ ಸ್ವಾತಂತ್ರ್ಯ ಮತ್ತು ಸವಲತ್ತಿಗೆ ಕಂಗಾಲಾಗುವ ಕೆಲ ಪುರುಷ ಮೃಗಗಳು ಮಹಿಳೆಯರು ಬಸ್ಸತ್ತುವುದನ್ನು ಹತ್ತಲು ಹೋಗಿ ಬಾಗಿಲನ್ನೇ ಮುರಿದುದನ್ನು ದಿನವಿಡೀ ತೋರಿಸುತ್ತಿವೆ ಈ ಮಾಧ್ಯಮಗಳು. ಇತ್ತ ಕೆಲವು ಕಮಲ ಪಾರ್ಟಿಯರು ಹೆಂಗಳೆಯರನ್ನು ಹೀಗಳೆಯುತ್ತಿದ್ದಾರೆ. ಇಂತಹ ಮಹಿಳೆಯರು ಬಸ್ಸು ಹತ್ತಿದ ಕೂಡಲೆ ಟಿಕೆಟ್ ತೆಗೆದುಕೊಂಡರೆ ಎಷ್ಟು ಚಂದ ಅಲ್ಲವೆ ಎಂದು ತಮ್ಮ ಬಸ್ಸಿನಲ್ಲಿ ಫ್ರೀಯಾಗಿ ಓಡಾಡುವ ಮಹಿಳೆಯರು ಉತ್ತರವಾಗಿದೆಯಲ್ಲಾ, ಥೂತ್ತೇರಿ.

*****

ಇದನ್ನೂ ಓದಿ: ತುರ್ತುಪರಿಸ್ಥಿತಿಯ ಗರ್ಭದಲ್ಲೇ ಕಮಲ ಅರಳಿತಂತಲ್ಲಾ!

 

ಆಳುವ ಸರಕಾರವನ್ನು ಟೀಕಿಸುವುದು ವಿರೋಧ ಪಕ್ಷದ ಕೆಲಸ. ವಿರೋಧಿಗಳ ಮಾತುಗಳನ್ನ ಕೇಳಿಸಿಕೊಳ್ಳಬೇಕಾದರೆ ಅವರು ಘನತೆಯಿಂದಲೇ ಆರೋಪಿಸಬೇಕು. ಆದರೀಗ ವಿರೋಧಿಗಳು ಆಡುವ ಮಾತಿಗೆ ಜನಗಳು ಕನಿಕರದಿಂದ ಲೊಚಗರಿಯುತ್ತಿದ್ದಾರಲ್ಲಾ. ಉದಾಹರಣೆಗೆ ಅಕ್ಕಿ ಕೊಡಿ ಇಲ್ಲ ಹಣ ಕೊಡಿ ಎಂದು ಕೂಗುತ್ತಿದ್ದ ಬಿಜೆಪಿಗಳ ಬಾಯಿ ಬಂದ್ ಆಗುವಂತೆ ಸರಕಾರ ಐದು ಕೆ.ಜಿ ಬದಲು ಹಣಕೊಡಲು ಹೊರಟಿದೆ. ತಮ್ಮ ಮಾತು ತಮಗೇ ತಿರುಗುಬಾಣವಾದುದರಿಂದ ಗಲಿಬಿಲಿಯಾದ ಬಿಜೆಪಿಗಳು, ಮತ್ತೆ ಹಣ ಬೇಡ ಅಕ್ಕಿ ಕೊಡಿ ಎನ್ನುತ್ತಿವೆ. ಇವರ ಮಾತಿಗೆ ದನಿಗೂಡಿಸಿದ ಮತ್ತು ಒಂದು ಹೆಜ್ಜೆ ಮುಂದೆ ಹೋಗಿ, ಹಣ ಕೊಟ್ಟರೆ ಜನ ಕುಡಿದು ಇಸ್ಪೀಟ್ ಆಡುತ್ತಾರೆ ಎಂದುಬಿಟ್ಟಿದ್ದಾರಂತಲ್ಲಾ ಬಿಜೆಪಿ ಜತೆಗೆ ಮೈತ್ರಿಗೆ ಹವಣಿಸುತ್ತಿರುವ ಮುಖಂಡರು. ಇದಕ್ಕೆ ಕಾಂಗೈಗಳ ಕುಹಕವೇನೆಂದರೆ ಕುಮಾರಣ್ಣನ ಕಡೆಯ ಸೈನ್ಯದಲ್ಲಿ ಎಪ್ಪತ್ತು ಭಾಗ ಕುಡಿದು ಇಸ್ಪೀಟ್ ಆಡುವಂತವರೆ; ಬೇಕಿದ್ದರೆ ಚನ್ನಪಟ್ಟಣ ರಾಮನಗರದ ಕಡೆ ಹೋದರೆ ಗೊತ್ತಾಗುತ್ತದೆ; ತಮ್ಮವರು ಕುಡಿದು ಕಾರ್ಡ್ ಆಡಿಕೊಂಡು ಹಾಳಾಗುವುದನ್ನು ನೋಡಲಾಗುವುದಲ್ಲ, ಅದಕ್ಕೆ ಅವರು ಹಣ ಬೇಡ ಎನ್ನುತ್ತಿದ್ದಾರೆ. ಇದು ಒಂದೆಡೆಯಾದರೆ ಅವರ ಮಗ ನಿಖಿಲ್ ಮಂಡ್ಯದಲ್ಲಿ ಸಂಯುಕ್ತ ಆಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸೋತು, ತಮ್ಮದೇ ಪಕ್ಷದ ಅಭ್ಯರ್ಥಿಯಾಗಿ ವಿಧಾನಸಭೆಯ ಚುನಾವಣೆಯಲ್ಲಿ ರಾಮನಗರದಲ್ಲೂ ಸೋತರು. ಮುಂದೆ ಆತನ ಭವಿಷ್ಯ ಇರುವುದು ಕಾಂಗ್ರೆಸ್‌ನಲ್ಲಿ ಮಾತ್ರ ಎಂದು ರಾಮನಗರದ ಜೆ.ಡಿ.ಎಸ್‌ನ ನಿಷ್ಠಾವಂತ ಜನ ಮಾತನಾಡುತ್ತಿದ್ದಾರಂತಲ್ಲಾ, ಥೂತ್ತೇರಿ.

*****

ಫ್ರಾನ್ಸ್ ಹತ್ತಿ ಉರಿಯುತ್ತಿದೆ. ಪೊಲೀಸರು ಹುಡುಗನೊಬ್ಬನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾಂಗಿಯ ಗಲಭೆ ಸ್ಫೋಟಗೊಂಡು ಇಡೀ ದೇಶವೇ ಹತ್ತಿ ಉರಿದ ಉದಾಹರಣೆಯಿಲ್ಲ. ಇಂತಹ ಸ್ಫೋಟ ಸಂಭವಿಸಬೇಕಾದರೆ, ಹಲವು ಕಿಡಿಗಳು ಸೇರಿ ಸಿಡಿಮದ್ದಾಗಿರಬೇಕು. ಸಿಡಿಯಲು ಒಂದು ಕಾರಣ ಬೇಕಾಗಿತ್ತಷ್ಟೆ. ಜಗತ್ತಿನ ರಾಷ್ಟ್ರಗಳು ಎಚ್ಚೆತ್ತುಕೊಳ್ಳಬೇಕಾದ ಘಟನೆಯಿದು. ಹಾಗೆ ನೋಡಿದರೆ ಆ ದೇಶದ ಅಧ್ಯಕ್ಷ ಯಾಕೋ ನಮ್ಮ ಪ್ರಧಾನಿಯವರಂತೆ ಗೋಚರಿಸುತ್ತಿದ್ದಾನೆ. ಬೆಂಕಿ ಕಿಡಿಯನ್ನು ಆರಂಭದಲ್ಲೇ ಆರಿಸುವುದನ್ನು ಬಿಟ್ಟು ಮಹಡಿಮೇಲೆ ನಿಂತು ನೋಡುತ್ತಿರುವಂತೆ ಕಾಣುತ್ತಿದ್ದಾನೆ. ನಮ್ಮಲ್ಲೂ ಅಷ್ಟೇ ಅಲ್ಲವೆ? ನಮ್ಮ ಮಣಿಪುರ ಹೊತ್ತಿ ಉರಿಯುತ್ತಿದೆ. ಪ್ರಧಾನಿ ಆ ಬಗ್ಗೆ ಈವರೆಗೂ ಸಕಾರಾತ್ಮಕ ಕ್ರಮಕ್ಕೆ ಮುಂದಾಗಿಲ್ಲ. ಈ ವಿಷಯವಾಗಿ ನಮ್ಮ ಕಿಡಿಗೇಡಿ ಮನಸ್ಸು ಏನು ಹೇಳುತ್ತಿದೆಯೆಂದರೆ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದವರು. ಪ್ರಧಾನಿಯಾದ ಅವರಿಗೆ ಭಾರತದ ಎಲ್ಲ ರಾಜ್ಯಗಳು ಗುಜರಾತಿನಂತೆಯೆ. ನಾನೀಗ ರಾಜ್ಯದ ಮುಖ್ಯಮಂತ್ರಿಯಲ್ಲ, ದೇಶದ ಪ್ರಧಾನಿ ಎಂಬ ಭಾವ ಬಂದಿದ್ದರೆ, ವಿದೇಶಕ್ಕೆ ಹೋಗಿ ಯೋಗ ಮಾಡುವುದರ ಬದಲು ಮಣಿಪುರಕ್ಕೆ ಹೋಗಿ ಜನರ ಮನಗೆಲ್ಲುತ್ತಿದ್ದರಂತಲ್ಲಾ, ಥೂತ್ತೇರಿ.

*****

ಎಲ್ಲಿ ಗಲಭೆಯಾಗುತ್ತದೋ ಅಲ್ಲಿ ಜನರನ್ನು ಸಂತೈಸಲು ಕಾಣಿಸಿಕೊಳ್ಳುವಂತಹ ರಾಹುಲ್ ಗಾಂಧಿ ಮಣಿಪುರಕ್ಕೆ ಹೋದರಂತಲ್ಲಾ. ಮಣಿಪುರದ ಹೆಸರು ನಮ್ಮ ಕರ್ನಾಟಕಕ್ಕೂ ಪರಿಚಿತ. ಡಾ.ರಾಜಕುಮಾರ್ ನಟಿಸಿದ ಬಬ್ರುವಾಹನ ಚಿತ್ರದಲ್ಲಿ, ತನ್ನ ತಂದೆಯಾದ ಅರ್ಜುನನನ್ನು ಕಾಣಲು ಬಂದ ಬಬ್ರುವಾಹನನನ್ನ ಕುರಿತು ಅಣ್ಣನವರು, ’ನೀನೆಯೋ ಮಣಿಪುರದ ಅರಸು ವೀರ ಬಬ್ರುವಾಹನ? ಅಂತಹ ಹೆಸರಿನ ಮಕ್ಕಳು ನನಗಿಲ್ಲ. ಹೋಗಿ ನಿಮ್ಮಮ್ಮನನ್ನು ಕೇಳು, ನನಗೆ ಜನ್ಮ ಕೊಟ್ಟ ತಂದೆ ಯಾರು ಅಂತ’ ಎಂದು ಮೂದಲಿಸುತ್ತಾರೆ. ಹಾಗಾಗಿ ಕರ್ನಾಟಕಕ್ಕೆ ಮಣಿಪುರ ಹೀಗೆ ಪರಿಚಯ, ಉಲೂಚಿ ಚಿತ್ರಾಂಗದೆಯರೂ ಪರಿಚಯ. ಈಗಲೂ ಮಣಿಪುರದಲ್ಲಿ ಸ್ತ್ರೀ ಶಕ್ತಿಯೇ ಮುಂದೆ; ಯಾರೋ ಮೂರ್ಖ, ಅರ್ಜುನ ಮತ್ತು ನಮ್ಮ ಮೋದಿಯವರನ್ನು ಹೋಲಿಕೆ ಮಾಡಿ ವಾಟ್ಸಾಪ್ ಮಾಡಿದ್ದಾನೆ. ಏನಾದರಾಗಲಿ, ಅರ್ಜುನ ತನ್ನ ಮಗನ ಬಗ್ಗೆಯೇ ಸಂಶಯಿಸಿದಂತೆ, ಮಣಿಪುರ ನಮ್ಮ ದೇಶದ ರಾಜ್ಯವೋ ಅಲ್ಲವೋ ಎಂದು ಸಂಶಯಿಸುವ ಹಾಗೆ ಪ್ರಧಾನಿ ನಡೆದುಕೊಂಡಿರುವುದು ಇಡೀ ದೇಶವೇ ಮುಜುಗರ ಪಡುವ ಸಂಗತಿಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...