Homeಮುಖಪುಟಬಿಜೆಪಿಗೂ ಚೀನಾ ಕಮ್ಯುನಿಸ್ಟ್ ಪಕ್ಷಕ್ಕೂ ಸಂಬಂಧವೇನು? : ಕಾಂಗ್ರೆಸ್‌ನಿಂದ ಹತ್ತು ಪ್ರಶ್ನೆಗಳು

ಬಿಜೆಪಿಗೂ ಚೀನಾ ಕಮ್ಯುನಿಸ್ಟ್ ಪಕ್ಷಕ್ಕೂ ಸಂಬಂಧವೇನು? : ಕಾಂಗ್ರೆಸ್‌ನಿಂದ ಹತ್ತು ಪ್ರಶ್ನೆಗಳು

- Advertisement -
- Advertisement -

ಲಡಾಖ್ ಗಡಿಯಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾದ ನಂತರ ಭುಗಿಲೆದ್ದಿರುವ ಚರ್ಚೆಗಳಲ್ಲಿ ಕಾಂಗ್ರೆಸ್‌ ಪಕ್ಷವೂ ಆಡಳಿತ ಪಕ್ಷ ಬಿಜೆಪಿ ವಿರುದ್ಧ 10 ಪ್ರಶ್ನೆಗಳನ್ನು ಕೇಳುವ ಮೂಲಕ ಟೀಕಾಪ್ರಹಾರ ನಡೆಸಿದೆ.

ಕಾಂಗ್ರೆಸ್ ವಕ್ತಾರ ರಣದೀಪ್‌ ಸಿಂಗ್ ಸುರ್ಜೆವಾಲಾ ಅವರು ಬಿಜೆಪಿಯು ಚೀನಾ ಕಮ್ಯುನಿಸ್ಟ್ ಪಾರ್ಟಿಯೊಂದಿಗೆ ಹೊಂದಿರುವ ನಿಗೂಢ ಸಂಬಂಧದ ಬಗ್ಗೆ ಪ್ರಶ್ನೆಯೆತ್ತಿದ್ದರೆ ಉತ್ತರಿಸುವ ಬದಲು ಹೆದರುತ್ತಿದೆ ಎಂದು ಆರೋಪಿಸಿದ್ದಾರೆ.

ಚೀನಾ ಅಸೋಸಿಯೇಷನ್ ​​ಫಾರ್ ಇಂಟರ್ನ್ಯಾಷನಲ್ ಫ್ರೆಂಡ್ಲಿ ಕಾಂಟ್ಯಾಕ್ಟ್ (ಸಿಎಐಎಫ್‌ಸಿ) ನೊಂದಿಗೆ ಬಿಜೆಪಿ ಸಂಬಂಧಗಳನ್ನು ಒಳಗೊಂಡ 10 ಪ್ರಶ್ನೆಗಳ ಪಟ್ಟಿಯನ್ನು ಅವರು ಬಿಡುಗಡೆ ಮಾಡಿದ್ದಾರೆ.

“ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ (ಸಿ.ಸಿ.ಪಿ) ಗೆ ಬಿಜೆಪಿಗೆ ಏನು ಸಂಬಂಧವಿದೆ? ಜನವರಿ 30, 2007 ರಂದು ಸಿ.ಸಿ.ಪಿ ನಿಯೋಗವೊಂದರ ಭೇಟಿಯ ಸಂದರ್ಭದಲ್ಲಿ ಅಂದಿನ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಮಾತನಾಡಿದ್ದಾರೆ. ಅಕ್ಟೋಬರ್ 17, 2008 ರಂದು CCP ಯ ಪಾಲಿಟ್‌ಬ್ಯುರೊ ಸದಸ್ಯರೊಂದಿಗಿನ ಸಭೆಯಲ್ಲಿ ಅವರು ಮಾತನಾಡಿದ್ದಾರೆ. ಹಾಗಾದರೆ ಬಿಜೆಪಿ ಮತ್ತು ಸಿ.ಸಿ.ಪಿ ನಡುವಿನ ಐತಿಹಾಸಿಕ ಸಂಬಂಧ ಏನು? ಎಂದು ಕಾಂಗ್ರೆಸ್ ಕೇಳಿದೆ

ಸಿ.ಸಿ.ಪಿ ಯ ಆಹ್ವಾನದ ಮೇರೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (‘ಆರ್‌ಎಸ್‌ಎಸ್’) 2009 ರ ಜನವರಿಯಲ್ಲಿ ಚೀನಾಕ್ಕೆ ಏಕೆ ಹೋಯಿತು? ರಾಜಕೀಯ ಪಕ್ಷವಾಗಿರದಿದ್ದರೂ ಆರ್‌‌ಎಸ್‌ಎಸ್ ನಿಯೋಗವನ್ನು ಸಿ.ಸಿ.ಪಿ ಏಕೆ ಆಹ್ವಾನಿಸಿತು? ನಮ್ಮ ಅರಿವಿಗೆ ಬಾರದೇ ಅರುಣಾಚಲ ಪ್ರದೇಶ ಮತ್ತು ಟಿಬೆಟ್‌ ಬಗ್ಗೆ ಯಾವ ಚರ್ಚೆಗಳು ನಡೆದವು?

ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ (‘ಸಿ.ಸಿ.ಪಿ’) ಯ ಆಹ್ವಾನದ ಮೇರೆಗೆ ಜನವರಿ 19, 2011 ರಂದು ಐದು ದಿನಗಳ ಭೇಟಿಗೆ ಆಗಿನ ಬಿಜೆಪಿ ಅಧ್ಯಕ್ಷರಾದ ನಿತಿನ್ ಗಡ್ಕರಿ ಅವರು  ಚೀನಾಕ್ಕೆ ಏಕೆ ಹೋದರು?”

ಪ್ರಧಾನಿ ನರೇಂದ್ರ ಮೋದಿಯವರ ಚೀನಾಕ್ಕೆ ಹಲವಾರು ಭೇಟಿಗಳು, ಚೀನಾದ ಅಧ್ಯಕ್ಷರಿಗಾಗಿ ಭಾರತದಲ್ಲಿ ಭವ್ಯವಾದ ಕಾರ್ಯಕ್ರಮಗಳನ್ನು ಆಯೋಜಿಸುವುದು, ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಜೊತೆಗೆ ಫೋಟೊಶೂಟ್‌ಗಳು ಯಾತಕ್ಕಾಗಿ?

“ಚೀನಾದ ಕಮ್ಯುನಿಸ್ಟ್ ಪಕ್ಷದ (‘ಸಿಸಿಪಿ’) “ದಿ ಪಾರ್ಟಿ ಸ್ಕೂಲ್” ನಲ್ಲಿ ಒಂದು ವಾರದ ಅಧ್ಯಯನಕ್ಕಾಗಿ ಅಂದಿನ ಬಿಜೆಪಿ ಅಧ್ಯಕ್ಷರಾದ ಅಮಿತ್ ಶಾ ಅವರು 2014ರ ನವೆಂಬರ್‌ನಲ್ಲಿ ಸಂಸದರ / ಶಾಸಕರ ನಿಯೋಗವನ್ನು ಚೀನಾಕ್ಕೆ ಏಕೆ ಕಳುಹಿಸಿದರು?” ಎಂದು ಕಾಂಗ್ರೆಸ್ ಕೇಳಿದೆ.

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ವಿದೇಶಿ ದೇಣಿಗೆ ಸೇರಿದಂತೆ ಯಾರಿಂದ ಹಣಕಾಸಿನ ನೆರವು ಪಡೆಯುತ್ತಿದೆ ಎಂದು ಘೋಷಿಸುವ ಧೈರ್‍ಯವಿದೆಯೆ?

“ಚುನಾವಣಾ ಬಾಂಡ್‌ಗಳ ಮೂಲಕ ಸಾವಿರಾರು ಕೋಟಿ ದೇಣಿಗೆ ಪಡೆದ ದಾನಿಗಳ ಹೆಸರನ್ನು ಬಿಜೆಪಿ ಘೋಷಿಸಲಿದೆಯೇ?” ಬಿಜೆಪಿ ಪಕ್ಷ, ಆರ್‌ಎಸ್‌ಎಸ್ ಮತ್ತು ಇತರ ಅಂಗಸಂಸ್ಥೆಗಳಿಗೆ ಹಣ ಎಲ್ಲಿಂದ ಬರುತ್ತದೆ ಎಂಬುದರ ಕುರಿತು ಮಾಹಿತಿ ನೀಡುವಿರಾ? ಇತ್ಯಾಧಿ ಪ್ರಶ್ನೆಗಳನ್ನು ಕಾಂಗ್ರೆಸ್‌ ಕೇಳಿದೆ.


ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್: ಪೊಲೀಸ್ ಹಾಗೂ ಮ್ಯಾಜಿಸ್ಟ್ರೇಟ್ ವಿರುದ್ದ ಹಲವಾರು ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...