Homeಮುಖಪುಟಬಿಜೆಪಿಗೂ ಚೀನಾ ಕಮ್ಯುನಿಸ್ಟ್ ಪಕ್ಷಕ್ಕೂ ಸಂಬಂಧವೇನು? : ಕಾಂಗ್ರೆಸ್‌ನಿಂದ ಹತ್ತು ಪ್ರಶ್ನೆಗಳು

ಬಿಜೆಪಿಗೂ ಚೀನಾ ಕಮ್ಯುನಿಸ್ಟ್ ಪಕ್ಷಕ್ಕೂ ಸಂಬಂಧವೇನು? : ಕಾಂಗ್ರೆಸ್‌ನಿಂದ ಹತ್ತು ಪ್ರಶ್ನೆಗಳು

- Advertisement -
- Advertisement -

ಲಡಾಖ್ ಗಡಿಯಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾದ ನಂತರ ಭುಗಿಲೆದ್ದಿರುವ ಚರ್ಚೆಗಳಲ್ಲಿ ಕಾಂಗ್ರೆಸ್‌ ಪಕ್ಷವೂ ಆಡಳಿತ ಪಕ್ಷ ಬಿಜೆಪಿ ವಿರುದ್ಧ 10 ಪ್ರಶ್ನೆಗಳನ್ನು ಕೇಳುವ ಮೂಲಕ ಟೀಕಾಪ್ರಹಾರ ನಡೆಸಿದೆ.

ಕಾಂಗ್ರೆಸ್ ವಕ್ತಾರ ರಣದೀಪ್‌ ಸಿಂಗ್ ಸುರ್ಜೆವಾಲಾ ಅವರು ಬಿಜೆಪಿಯು ಚೀನಾ ಕಮ್ಯುನಿಸ್ಟ್ ಪಾರ್ಟಿಯೊಂದಿಗೆ ಹೊಂದಿರುವ ನಿಗೂಢ ಸಂಬಂಧದ ಬಗ್ಗೆ ಪ್ರಶ್ನೆಯೆತ್ತಿದ್ದರೆ ಉತ್ತರಿಸುವ ಬದಲು ಹೆದರುತ್ತಿದೆ ಎಂದು ಆರೋಪಿಸಿದ್ದಾರೆ.

ಚೀನಾ ಅಸೋಸಿಯೇಷನ್ ​​ಫಾರ್ ಇಂಟರ್ನ್ಯಾಷನಲ್ ಫ್ರೆಂಡ್ಲಿ ಕಾಂಟ್ಯಾಕ್ಟ್ (ಸಿಎಐಎಫ್‌ಸಿ) ನೊಂದಿಗೆ ಬಿಜೆಪಿ ಸಂಬಂಧಗಳನ್ನು ಒಳಗೊಂಡ 10 ಪ್ರಶ್ನೆಗಳ ಪಟ್ಟಿಯನ್ನು ಅವರು ಬಿಡುಗಡೆ ಮಾಡಿದ್ದಾರೆ.

“ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ (ಸಿ.ಸಿ.ಪಿ) ಗೆ ಬಿಜೆಪಿಗೆ ಏನು ಸಂಬಂಧವಿದೆ? ಜನವರಿ 30, 2007 ರಂದು ಸಿ.ಸಿ.ಪಿ ನಿಯೋಗವೊಂದರ ಭೇಟಿಯ ಸಂದರ್ಭದಲ್ಲಿ ಅಂದಿನ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಮಾತನಾಡಿದ್ದಾರೆ. ಅಕ್ಟೋಬರ್ 17, 2008 ರಂದು CCP ಯ ಪಾಲಿಟ್‌ಬ್ಯುರೊ ಸದಸ್ಯರೊಂದಿಗಿನ ಸಭೆಯಲ್ಲಿ ಅವರು ಮಾತನಾಡಿದ್ದಾರೆ. ಹಾಗಾದರೆ ಬಿಜೆಪಿ ಮತ್ತು ಸಿ.ಸಿ.ಪಿ ನಡುವಿನ ಐತಿಹಾಸಿಕ ಸಂಬಂಧ ಏನು? ಎಂದು ಕಾಂಗ್ರೆಸ್ ಕೇಳಿದೆ

ಸಿ.ಸಿ.ಪಿ ಯ ಆಹ್ವಾನದ ಮೇರೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (‘ಆರ್‌ಎಸ್‌ಎಸ್’) 2009 ರ ಜನವರಿಯಲ್ಲಿ ಚೀನಾಕ್ಕೆ ಏಕೆ ಹೋಯಿತು? ರಾಜಕೀಯ ಪಕ್ಷವಾಗಿರದಿದ್ದರೂ ಆರ್‌‌ಎಸ್‌ಎಸ್ ನಿಯೋಗವನ್ನು ಸಿ.ಸಿ.ಪಿ ಏಕೆ ಆಹ್ವಾನಿಸಿತು? ನಮ್ಮ ಅರಿವಿಗೆ ಬಾರದೇ ಅರುಣಾಚಲ ಪ್ರದೇಶ ಮತ್ತು ಟಿಬೆಟ್‌ ಬಗ್ಗೆ ಯಾವ ಚರ್ಚೆಗಳು ನಡೆದವು?

ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ (‘ಸಿ.ಸಿ.ಪಿ’) ಯ ಆಹ್ವಾನದ ಮೇರೆಗೆ ಜನವರಿ 19, 2011 ರಂದು ಐದು ದಿನಗಳ ಭೇಟಿಗೆ ಆಗಿನ ಬಿಜೆಪಿ ಅಧ್ಯಕ್ಷರಾದ ನಿತಿನ್ ಗಡ್ಕರಿ ಅವರು  ಚೀನಾಕ್ಕೆ ಏಕೆ ಹೋದರು?”

ಪ್ರಧಾನಿ ನರೇಂದ್ರ ಮೋದಿಯವರ ಚೀನಾಕ್ಕೆ ಹಲವಾರು ಭೇಟಿಗಳು, ಚೀನಾದ ಅಧ್ಯಕ್ಷರಿಗಾಗಿ ಭಾರತದಲ್ಲಿ ಭವ್ಯವಾದ ಕಾರ್ಯಕ್ರಮಗಳನ್ನು ಆಯೋಜಿಸುವುದು, ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಜೊತೆಗೆ ಫೋಟೊಶೂಟ್‌ಗಳು ಯಾತಕ್ಕಾಗಿ?

“ಚೀನಾದ ಕಮ್ಯುನಿಸ್ಟ್ ಪಕ್ಷದ (‘ಸಿಸಿಪಿ’) “ದಿ ಪಾರ್ಟಿ ಸ್ಕೂಲ್” ನಲ್ಲಿ ಒಂದು ವಾರದ ಅಧ್ಯಯನಕ್ಕಾಗಿ ಅಂದಿನ ಬಿಜೆಪಿ ಅಧ್ಯಕ್ಷರಾದ ಅಮಿತ್ ಶಾ ಅವರು 2014ರ ನವೆಂಬರ್‌ನಲ್ಲಿ ಸಂಸದರ / ಶಾಸಕರ ನಿಯೋಗವನ್ನು ಚೀನಾಕ್ಕೆ ಏಕೆ ಕಳುಹಿಸಿದರು?” ಎಂದು ಕಾಂಗ್ರೆಸ್ ಕೇಳಿದೆ.

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ವಿದೇಶಿ ದೇಣಿಗೆ ಸೇರಿದಂತೆ ಯಾರಿಂದ ಹಣಕಾಸಿನ ನೆರವು ಪಡೆಯುತ್ತಿದೆ ಎಂದು ಘೋಷಿಸುವ ಧೈರ್‍ಯವಿದೆಯೆ?

“ಚುನಾವಣಾ ಬಾಂಡ್‌ಗಳ ಮೂಲಕ ಸಾವಿರಾರು ಕೋಟಿ ದೇಣಿಗೆ ಪಡೆದ ದಾನಿಗಳ ಹೆಸರನ್ನು ಬಿಜೆಪಿ ಘೋಷಿಸಲಿದೆಯೇ?” ಬಿಜೆಪಿ ಪಕ್ಷ, ಆರ್‌ಎಸ್‌ಎಸ್ ಮತ್ತು ಇತರ ಅಂಗಸಂಸ್ಥೆಗಳಿಗೆ ಹಣ ಎಲ್ಲಿಂದ ಬರುತ್ತದೆ ಎಂಬುದರ ಕುರಿತು ಮಾಹಿತಿ ನೀಡುವಿರಾ? ಇತ್ಯಾಧಿ ಪ್ರಶ್ನೆಗಳನ್ನು ಕಾಂಗ್ರೆಸ್‌ ಕೇಳಿದೆ.


ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್: ಪೊಲೀಸ್ ಹಾಗೂ ಮ್ಯಾಜಿಸ್ಟ್ರೇಟ್ ವಿರುದ್ದ ಹಲವಾರು ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...