Homeಮುಖಪುಟಬಿಜೆಪಿಗೂ ಚೀನಾ ಕಮ್ಯುನಿಸ್ಟ್ ಪಕ್ಷಕ್ಕೂ ಸಂಬಂಧವೇನು? : ಕಾಂಗ್ರೆಸ್‌ನಿಂದ ಹತ್ತು ಪ್ರಶ್ನೆಗಳು

ಬಿಜೆಪಿಗೂ ಚೀನಾ ಕಮ್ಯುನಿಸ್ಟ್ ಪಕ್ಷಕ್ಕೂ ಸಂಬಂಧವೇನು? : ಕಾಂಗ್ರೆಸ್‌ನಿಂದ ಹತ್ತು ಪ್ರಶ್ನೆಗಳು

- Advertisement -
- Advertisement -

ಲಡಾಖ್ ಗಡಿಯಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾದ ನಂತರ ಭುಗಿಲೆದ್ದಿರುವ ಚರ್ಚೆಗಳಲ್ಲಿ ಕಾಂಗ್ರೆಸ್‌ ಪಕ್ಷವೂ ಆಡಳಿತ ಪಕ್ಷ ಬಿಜೆಪಿ ವಿರುದ್ಧ 10 ಪ್ರಶ್ನೆಗಳನ್ನು ಕೇಳುವ ಮೂಲಕ ಟೀಕಾಪ್ರಹಾರ ನಡೆಸಿದೆ.

ಕಾಂಗ್ರೆಸ್ ವಕ್ತಾರ ರಣದೀಪ್‌ ಸಿಂಗ್ ಸುರ್ಜೆವಾಲಾ ಅವರು ಬಿಜೆಪಿಯು ಚೀನಾ ಕಮ್ಯುನಿಸ್ಟ್ ಪಾರ್ಟಿಯೊಂದಿಗೆ ಹೊಂದಿರುವ ನಿಗೂಢ ಸಂಬಂಧದ ಬಗ್ಗೆ ಪ್ರಶ್ನೆಯೆತ್ತಿದ್ದರೆ ಉತ್ತರಿಸುವ ಬದಲು ಹೆದರುತ್ತಿದೆ ಎಂದು ಆರೋಪಿಸಿದ್ದಾರೆ.

ಚೀನಾ ಅಸೋಸಿಯೇಷನ್ ​​ಫಾರ್ ಇಂಟರ್ನ್ಯಾಷನಲ್ ಫ್ರೆಂಡ್ಲಿ ಕಾಂಟ್ಯಾಕ್ಟ್ (ಸಿಎಐಎಫ್‌ಸಿ) ನೊಂದಿಗೆ ಬಿಜೆಪಿ ಸಂಬಂಧಗಳನ್ನು ಒಳಗೊಂಡ 10 ಪ್ರಶ್ನೆಗಳ ಪಟ್ಟಿಯನ್ನು ಅವರು ಬಿಡುಗಡೆ ಮಾಡಿದ್ದಾರೆ.

“ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ (ಸಿ.ಸಿ.ಪಿ) ಗೆ ಬಿಜೆಪಿಗೆ ಏನು ಸಂಬಂಧವಿದೆ? ಜನವರಿ 30, 2007 ರಂದು ಸಿ.ಸಿ.ಪಿ ನಿಯೋಗವೊಂದರ ಭೇಟಿಯ ಸಂದರ್ಭದಲ್ಲಿ ಅಂದಿನ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಮಾತನಾಡಿದ್ದಾರೆ. ಅಕ್ಟೋಬರ್ 17, 2008 ರಂದು CCP ಯ ಪಾಲಿಟ್‌ಬ್ಯುರೊ ಸದಸ್ಯರೊಂದಿಗಿನ ಸಭೆಯಲ್ಲಿ ಅವರು ಮಾತನಾಡಿದ್ದಾರೆ. ಹಾಗಾದರೆ ಬಿಜೆಪಿ ಮತ್ತು ಸಿ.ಸಿ.ಪಿ ನಡುವಿನ ಐತಿಹಾಸಿಕ ಸಂಬಂಧ ಏನು? ಎಂದು ಕಾಂಗ್ರೆಸ್ ಕೇಳಿದೆ

ಸಿ.ಸಿ.ಪಿ ಯ ಆಹ್ವಾನದ ಮೇರೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (‘ಆರ್‌ಎಸ್‌ಎಸ್’) 2009 ರ ಜನವರಿಯಲ್ಲಿ ಚೀನಾಕ್ಕೆ ಏಕೆ ಹೋಯಿತು? ರಾಜಕೀಯ ಪಕ್ಷವಾಗಿರದಿದ್ದರೂ ಆರ್‌‌ಎಸ್‌ಎಸ್ ನಿಯೋಗವನ್ನು ಸಿ.ಸಿ.ಪಿ ಏಕೆ ಆಹ್ವಾನಿಸಿತು? ನಮ್ಮ ಅರಿವಿಗೆ ಬಾರದೇ ಅರುಣಾಚಲ ಪ್ರದೇಶ ಮತ್ತು ಟಿಬೆಟ್‌ ಬಗ್ಗೆ ಯಾವ ಚರ್ಚೆಗಳು ನಡೆದವು?

ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ (‘ಸಿ.ಸಿ.ಪಿ’) ಯ ಆಹ್ವಾನದ ಮೇರೆಗೆ ಜನವರಿ 19, 2011 ರಂದು ಐದು ದಿನಗಳ ಭೇಟಿಗೆ ಆಗಿನ ಬಿಜೆಪಿ ಅಧ್ಯಕ್ಷರಾದ ನಿತಿನ್ ಗಡ್ಕರಿ ಅವರು  ಚೀನಾಕ್ಕೆ ಏಕೆ ಹೋದರು?”

ಪ್ರಧಾನಿ ನರೇಂದ್ರ ಮೋದಿಯವರ ಚೀನಾಕ್ಕೆ ಹಲವಾರು ಭೇಟಿಗಳು, ಚೀನಾದ ಅಧ್ಯಕ್ಷರಿಗಾಗಿ ಭಾರತದಲ್ಲಿ ಭವ್ಯವಾದ ಕಾರ್ಯಕ್ರಮಗಳನ್ನು ಆಯೋಜಿಸುವುದು, ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಜೊತೆಗೆ ಫೋಟೊಶೂಟ್‌ಗಳು ಯಾತಕ್ಕಾಗಿ?

“ಚೀನಾದ ಕಮ್ಯುನಿಸ್ಟ್ ಪಕ್ಷದ (‘ಸಿಸಿಪಿ’) “ದಿ ಪಾರ್ಟಿ ಸ್ಕೂಲ್” ನಲ್ಲಿ ಒಂದು ವಾರದ ಅಧ್ಯಯನಕ್ಕಾಗಿ ಅಂದಿನ ಬಿಜೆಪಿ ಅಧ್ಯಕ್ಷರಾದ ಅಮಿತ್ ಶಾ ಅವರು 2014ರ ನವೆಂಬರ್‌ನಲ್ಲಿ ಸಂಸದರ / ಶಾಸಕರ ನಿಯೋಗವನ್ನು ಚೀನಾಕ್ಕೆ ಏಕೆ ಕಳುಹಿಸಿದರು?” ಎಂದು ಕಾಂಗ್ರೆಸ್ ಕೇಳಿದೆ.

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ವಿದೇಶಿ ದೇಣಿಗೆ ಸೇರಿದಂತೆ ಯಾರಿಂದ ಹಣಕಾಸಿನ ನೆರವು ಪಡೆಯುತ್ತಿದೆ ಎಂದು ಘೋಷಿಸುವ ಧೈರ್‍ಯವಿದೆಯೆ?

“ಚುನಾವಣಾ ಬಾಂಡ್‌ಗಳ ಮೂಲಕ ಸಾವಿರಾರು ಕೋಟಿ ದೇಣಿಗೆ ಪಡೆದ ದಾನಿಗಳ ಹೆಸರನ್ನು ಬಿಜೆಪಿ ಘೋಷಿಸಲಿದೆಯೇ?” ಬಿಜೆಪಿ ಪಕ್ಷ, ಆರ್‌ಎಸ್‌ಎಸ್ ಮತ್ತು ಇತರ ಅಂಗಸಂಸ್ಥೆಗಳಿಗೆ ಹಣ ಎಲ್ಲಿಂದ ಬರುತ್ತದೆ ಎಂಬುದರ ಕುರಿತು ಮಾಹಿತಿ ನೀಡುವಿರಾ? ಇತ್ಯಾಧಿ ಪ್ರಶ್ನೆಗಳನ್ನು ಕಾಂಗ್ರೆಸ್‌ ಕೇಳಿದೆ.


ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್: ಪೊಲೀಸ್ ಹಾಗೂ ಮ್ಯಾಜಿಸ್ಟ್ರೇಟ್ ವಿರುದ್ದ ಹಲವಾರು ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...