Homeಮುಖಪುಟಬಿಜೆಪಿಗೂ ಚೀನಾ ಕಮ್ಯುನಿಸ್ಟ್ ಪಕ್ಷಕ್ಕೂ ಸಂಬಂಧವೇನು? : ಕಾಂಗ್ರೆಸ್‌ನಿಂದ ಹತ್ತು ಪ್ರಶ್ನೆಗಳು

ಬಿಜೆಪಿಗೂ ಚೀನಾ ಕಮ್ಯುನಿಸ್ಟ್ ಪಕ್ಷಕ್ಕೂ ಸಂಬಂಧವೇನು? : ಕಾಂಗ್ರೆಸ್‌ನಿಂದ ಹತ್ತು ಪ್ರಶ್ನೆಗಳು

- Advertisement -
- Advertisement -

ಲಡಾಖ್ ಗಡಿಯಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾದ ನಂತರ ಭುಗಿಲೆದ್ದಿರುವ ಚರ್ಚೆಗಳಲ್ಲಿ ಕಾಂಗ್ರೆಸ್‌ ಪಕ್ಷವೂ ಆಡಳಿತ ಪಕ್ಷ ಬಿಜೆಪಿ ವಿರುದ್ಧ 10 ಪ್ರಶ್ನೆಗಳನ್ನು ಕೇಳುವ ಮೂಲಕ ಟೀಕಾಪ್ರಹಾರ ನಡೆಸಿದೆ.

ಕಾಂಗ್ರೆಸ್ ವಕ್ತಾರ ರಣದೀಪ್‌ ಸಿಂಗ್ ಸುರ್ಜೆವಾಲಾ ಅವರು ಬಿಜೆಪಿಯು ಚೀನಾ ಕಮ್ಯುನಿಸ್ಟ್ ಪಾರ್ಟಿಯೊಂದಿಗೆ ಹೊಂದಿರುವ ನಿಗೂಢ ಸಂಬಂಧದ ಬಗ್ಗೆ ಪ್ರಶ್ನೆಯೆತ್ತಿದ್ದರೆ ಉತ್ತರಿಸುವ ಬದಲು ಹೆದರುತ್ತಿದೆ ಎಂದು ಆರೋಪಿಸಿದ್ದಾರೆ.

ಚೀನಾ ಅಸೋಸಿಯೇಷನ್ ​​ಫಾರ್ ಇಂಟರ್ನ್ಯಾಷನಲ್ ಫ್ರೆಂಡ್ಲಿ ಕಾಂಟ್ಯಾಕ್ಟ್ (ಸಿಎಐಎಫ್‌ಸಿ) ನೊಂದಿಗೆ ಬಿಜೆಪಿ ಸಂಬಂಧಗಳನ್ನು ಒಳಗೊಂಡ 10 ಪ್ರಶ್ನೆಗಳ ಪಟ್ಟಿಯನ್ನು ಅವರು ಬಿಡುಗಡೆ ಮಾಡಿದ್ದಾರೆ.

“ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ (ಸಿ.ಸಿ.ಪಿ) ಗೆ ಬಿಜೆಪಿಗೆ ಏನು ಸಂಬಂಧವಿದೆ? ಜನವರಿ 30, 2007 ರಂದು ಸಿ.ಸಿ.ಪಿ ನಿಯೋಗವೊಂದರ ಭೇಟಿಯ ಸಂದರ್ಭದಲ್ಲಿ ಅಂದಿನ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಮಾತನಾಡಿದ್ದಾರೆ. ಅಕ್ಟೋಬರ್ 17, 2008 ರಂದು CCP ಯ ಪಾಲಿಟ್‌ಬ್ಯುರೊ ಸದಸ್ಯರೊಂದಿಗಿನ ಸಭೆಯಲ್ಲಿ ಅವರು ಮಾತನಾಡಿದ್ದಾರೆ. ಹಾಗಾದರೆ ಬಿಜೆಪಿ ಮತ್ತು ಸಿ.ಸಿ.ಪಿ ನಡುವಿನ ಐತಿಹಾಸಿಕ ಸಂಬಂಧ ಏನು? ಎಂದು ಕಾಂಗ್ರೆಸ್ ಕೇಳಿದೆ

ಸಿ.ಸಿ.ಪಿ ಯ ಆಹ್ವಾನದ ಮೇರೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (‘ಆರ್‌ಎಸ್‌ಎಸ್’) 2009 ರ ಜನವರಿಯಲ್ಲಿ ಚೀನಾಕ್ಕೆ ಏಕೆ ಹೋಯಿತು? ರಾಜಕೀಯ ಪಕ್ಷವಾಗಿರದಿದ್ದರೂ ಆರ್‌‌ಎಸ್‌ಎಸ್ ನಿಯೋಗವನ್ನು ಸಿ.ಸಿ.ಪಿ ಏಕೆ ಆಹ್ವಾನಿಸಿತು? ನಮ್ಮ ಅರಿವಿಗೆ ಬಾರದೇ ಅರುಣಾಚಲ ಪ್ರದೇಶ ಮತ್ತು ಟಿಬೆಟ್‌ ಬಗ್ಗೆ ಯಾವ ಚರ್ಚೆಗಳು ನಡೆದವು?

ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ (‘ಸಿ.ಸಿ.ಪಿ’) ಯ ಆಹ್ವಾನದ ಮೇರೆಗೆ ಜನವರಿ 19, 2011 ರಂದು ಐದು ದಿನಗಳ ಭೇಟಿಗೆ ಆಗಿನ ಬಿಜೆಪಿ ಅಧ್ಯಕ್ಷರಾದ ನಿತಿನ್ ಗಡ್ಕರಿ ಅವರು  ಚೀನಾಕ್ಕೆ ಏಕೆ ಹೋದರು?”

ಪ್ರಧಾನಿ ನರೇಂದ್ರ ಮೋದಿಯವರ ಚೀನಾಕ್ಕೆ ಹಲವಾರು ಭೇಟಿಗಳು, ಚೀನಾದ ಅಧ್ಯಕ್ಷರಿಗಾಗಿ ಭಾರತದಲ್ಲಿ ಭವ್ಯವಾದ ಕಾರ್ಯಕ್ರಮಗಳನ್ನು ಆಯೋಜಿಸುವುದು, ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಜೊತೆಗೆ ಫೋಟೊಶೂಟ್‌ಗಳು ಯಾತಕ್ಕಾಗಿ?

“ಚೀನಾದ ಕಮ್ಯುನಿಸ್ಟ್ ಪಕ್ಷದ (‘ಸಿಸಿಪಿ’) “ದಿ ಪಾರ್ಟಿ ಸ್ಕೂಲ್” ನಲ್ಲಿ ಒಂದು ವಾರದ ಅಧ್ಯಯನಕ್ಕಾಗಿ ಅಂದಿನ ಬಿಜೆಪಿ ಅಧ್ಯಕ್ಷರಾದ ಅಮಿತ್ ಶಾ ಅವರು 2014ರ ನವೆಂಬರ್‌ನಲ್ಲಿ ಸಂಸದರ / ಶಾಸಕರ ನಿಯೋಗವನ್ನು ಚೀನಾಕ್ಕೆ ಏಕೆ ಕಳುಹಿಸಿದರು?” ಎಂದು ಕಾಂಗ್ರೆಸ್ ಕೇಳಿದೆ.

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ವಿದೇಶಿ ದೇಣಿಗೆ ಸೇರಿದಂತೆ ಯಾರಿಂದ ಹಣಕಾಸಿನ ನೆರವು ಪಡೆಯುತ್ತಿದೆ ಎಂದು ಘೋಷಿಸುವ ಧೈರ್‍ಯವಿದೆಯೆ?

“ಚುನಾವಣಾ ಬಾಂಡ್‌ಗಳ ಮೂಲಕ ಸಾವಿರಾರು ಕೋಟಿ ದೇಣಿಗೆ ಪಡೆದ ದಾನಿಗಳ ಹೆಸರನ್ನು ಬಿಜೆಪಿ ಘೋಷಿಸಲಿದೆಯೇ?” ಬಿಜೆಪಿ ಪಕ್ಷ, ಆರ್‌ಎಸ್‌ಎಸ್ ಮತ್ತು ಇತರ ಅಂಗಸಂಸ್ಥೆಗಳಿಗೆ ಹಣ ಎಲ್ಲಿಂದ ಬರುತ್ತದೆ ಎಂಬುದರ ಕುರಿತು ಮಾಹಿತಿ ನೀಡುವಿರಾ? ಇತ್ಯಾಧಿ ಪ್ರಶ್ನೆಗಳನ್ನು ಕಾಂಗ್ರೆಸ್‌ ಕೇಳಿದೆ.


ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್: ಪೊಲೀಸ್ ಹಾಗೂ ಮ್ಯಾಜಿಸ್ಟ್ರೇಟ್ ವಿರುದ್ದ ಹಲವಾರು ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...